Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:13 - ಕನ್ನಡ ಸತ್ಯವೇದವು C.L. Bible (BSI)

13 ಅದಕ್ಕೆ ಅವರು, “ತಮ್ಮ ಸೇವಕರಾದ ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರು; ಕಾನಾನ್ ನಾಡಿನವರು, ಒಬ್ಬ ತಂದೆಯ ಮಕ್ಕಳು; ನಮ್ಮಲ್ಲಿ ಚಿಕ್ಕವನು ತಂದೆಯ ಬಳಿಯಲ್ಲೇ ಇದ್ದಾನೆ; ಒಬ್ಬನು ಇಲ್ಲವಾದನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದಕ್ಕೆ ಅವರು, “ತಮ್ಮ ಸೇವಕರಾದ ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರು, ನಾವು ಕಾನಾನ್ ದೇಶದವರು, ಒಬ್ಬ ತಂದೆಯ ಮಕ್ಕಳು. ನಮ್ಮಲ್ಲಿ ಚಿಕ್ಕವನು ತಂದೆಯ ಬಳಿಯಲ್ಲಿದ್ದಾನೆ. ಮತ್ತೊಬ್ಬನು ಇಲ್ಲ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವರು - ತಮ್ಮ ಸೇವಕರಾದ ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರು; ನಾವು ಕಾನಾನ್ ದೇಶದವರು, ಒಬ್ಬ ತಂದೆಯ ಮಕ್ಕಳು; ನಮ್ಮಲ್ಲಿ ಚಿಕ್ಕವನು ತಂದೆಯ ಬಳಿಯಲ್ಲಿದ್ದಾನೆ; ಒಬ್ಬನಿಲ್ಲ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅದಕ್ಕೆ ಅವರು, “ಇಲ್ಲ, ನಾವೆಲ್ಲಾ ಸಹೋದರರು. ನಮ್ಮ ಕುಟುಂಬದಲ್ಲಿ ಹನ್ನೆರಡು ಮಂದಿ ಅಣ್ಣತಮ್ಮಂದಿರು. ನಮ್ಮೆಲ್ಲರಿಗೂ ಒಬ್ಬನೇ ತಂದೆ. ನಮ್ಮ ಕಿರಿಯ ತಮ್ಮನು ನಮ್ಮ ತಂದೆಯೊಂದಿಗೆ ಮನೆಯಲ್ಲಿದ್ದಾನೆ; ಇನ್ನೊಬ್ಬ ತಮ್ಮನು ಹೊರಟುಹೋದನು. ತಮ್ಮ ಸೇವಕರಾದ ನಾವು ಕಾನಾನ್ ದೇಶದಿಂದ ಬಂದವರು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅದಕ್ಕವರು, “ನಿನ್ನ ದಾಸರಾದ ನಾವು ಹನ್ನೆರಡು ಸಹೋದರರು. ನಾವು ಕಾನಾನ್ ದೇಶದಲ್ಲಿರುವ ಒಬ್ಬ ಮನುಷ್ಯನ ಮಕ್ಕಳು. ಈಗ ಚಿಕ್ಕವನು ನನ್ನ ತಂದೆಯೊಂದಿಗೆ ಇದ್ದಾನೆ, ಮತ್ತೊಬ್ಬನು ಇಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:13
26 ತಿಳಿವುಗಳ ಹೋಲಿಕೆ  

ದುಃಖವನ್ನು ತಾಳಲಾರದೆ ತನ್ನ ಬಟ್ಟೆಯನ್ನು ಹರಿದುಕೊಂಡನು; ತಮ್ಮಂದಿರ ಬಳಿಗೆ ಬಂದು, “ಆ ಹುಡುಗ ಇಲ್ಲವಲ್ಲಾ! ಅಯ್ಯೋ, ನಾನೇನು ಮಾಡಲಿ?” ಎಂದು ಗೋಳಾಡಿದ.


ನಾವು ‘ತಂದೆ ಇದ್ದಾರೆ, ಅವರು ಮುದುಕ; ಮುಪ್ಪಿನಲ್ಲಿ ಅವರಿಗೆ ಹುಟ್ಟಿದ ಒಬ್ಬ ಚಿಕ್ಕ ಹುಡುಗ ಇದ್ದಾನೆ. ಅವನ ಒಡಹುಟ್ಟಿದವನು ಸತ್ತುಹೋದ. ಅವನ ತಾಯಿಯ ಹೊಟ್ಟೆಯಲ್ಲಿ ಹುಟ್ಟಿದವರಲ್ಲಿ ಅವನೊಬ್ಬನೇ ಉಳಿದಿದ್ದಾನೆ. ಅವನ ಮೇಲೆ ತಂದೆಗೆ ಅಪಾರ ಪ್ರೀತಿ,’ ಎಂದು ಹೇಳಿದೆವು.


ನಾವು ಒಬ್ಬ ತಂದೆಗೆ ಹುಟ್ಟಿದ ಹನ್ನೆರಡು ಮಂದಿ ಅಣ್ಣತಮ್ಮಂದಿರು; ನಮ್ಮಲ್ಲಿ ಒಬ್ಬನು ಇಲ್ಲವಾದ. ಚಿಕ್ಕವನೋ ಈಗ ಕಾನಾನ್ ನಾಡಿನಲ್ಲಿ ನಮ್ಮ ತಂದೆಯ ಬಳಿಯಲ್ಲಿದ್ದಾನೆ’ ಎಂದು ಹೇಳಿದೆವು.


ಆಗ ಅವರು, ”ಆ ಮನುಷ್ಯ ನಿಮ್ಮ ವಿಷಯದಲ್ಲೂ ನಮ್ಮ ಮನೆಯವರ ವಿಷಯದಲ್ಲೂ ಸೂಕ್ಷ್ಮವಾಗಿ ವಿಚಾರಿಸಿದ; ನಿಮ್ಮ ತಂದೆ ಇನ್ನು ಜೀವದಿಂದ ಇದ್ದಾನೋ? ನಿಮಗೆ ತಮ್ಮನಿದ್ದಾನೋ? ಎಂದೆಲ್ಲ ಅವನೇ ಕೇಳಿದ. ಆ ಪ್ರಶ್ನೆಗಳಿಗೆ ನಾವು ತಕ್ಕ ಉತ್ತರ ಕೊಡಬೇಕಾಯಿತು. ಅಲ್ಲದೆ, ಅವನು ‘ನಿಮ್ಮ ತಮ್ಮನನ್ನು ಕರೆದುಕೊಂಡು ಬನ್ನಿ', ಎಂದು ಕೇಳುತ್ತಾನೆಂದು ತಿಳಿಯಲು ನಮಗೆ ಹೇಗೆ ಸಾಧ್ಯವಿತ್ತು?” ಎಂದರು.


ಪ್ರವಾದಿ ಯೆರೆಮೀಯನ ಈ ಪ್ರವಚನ ಅಂದು ಸತ್ಯವಾಯಿತು.


ಜ್ಯೋತಿಷಿಗಳಿಂದ ತಾನು ವಂಚಿತನಾದೆ ಎಂದು ಅರಿತ ಹೆರೋದನು ರೋಷಾವೇಶಗೊಂಡನು. ಬೆತ್ಲೆಹೇಮಿಗೂ ಅದರ ಸುತ್ತಮುತ್ತಲಿಗೂ ಆಳುಗಳನ್ನು ಕಳುಹಿಸಿದನು. ತಾನು ಜ್ಯೋತಿಷಿಗಳಿಂದ ತಿಳಿದುಕೊಂಡಿದ್ದ ಕಾಲದ ಆಧಾರದ ಮೇಲೆ ಅಲ್ಲಿದ್ದ, ಎರಡು ವರ್ಷಗಳಿಗೆ ಮೀರದ, ಎಲ್ಲಾ ಗಂಡುಮಕ್ಕಳನ್ನು ಕೊಂದುಹಾಕಿಸಿದನು.


ನಮ್ಮ ಪಿತೃಗಳು ಪಾಪಮಾಡಿ ಗತಿಸಿಹೋದರು ಅವರ ದೋಷಫಲವನ್ನು ನಾವು ಸವಿಯಬೇಕಾಗಿ ಬಂದಿತು.


ಸರ್ವೇಶ್ವರ ಹೀಗೆನ್ನುತ್ತಾರೆ: “ಕೇಳಿಬರುತ್ತಿದೆ ರಾಮಾ ಊರಿನೊಳು ರೋದನ ಗೋಳಾಟ, ಅಘೋರ ಆಕ್ರಂದನ. ಕಳೆದುಕೊಂಡ ಮಕ್ಕಳಿಗಾಗಿ ಗೋಳಾಡುತ್ತಿಹಳು ರಾಖೇಲಳು ಇನ್ನಿಲ್ಲದ ಅವುಗಳಿಗಾಗಿ ಉಪಶಮನ ಒಲ್ಲೆನೆನುತಿಹಳು.”


ತಂದೆ ಯಕೋಬನ ಬಳಿಗೆ ಬಂದು, “ಜೋಸೆಫನು ಇನ್ನೂ ಜೀವದಿಂದಿದ್ದಾನೆ; ಅವನೇ ಈಜಿಪ್ಟ್ ದೇಶದ ಪ್ರಧಾನಮಂತ್ರಿ” ಎಂದು ಅರುಹಿದರು. ಅವನು ಅದನ್ನು ಕೇಳಿ ಸ್ತಬ್ಧನಾದ; ಅವರನ್ನು ನಂಬಲೇ ಇಲ್ಲ.


ಅವರಲ್ಲಿ ಒಬ್ಬನು ನನ್ನನ್ನು ಬಿಟ್ಟು ಹೊರಟುಹೋದ; ಅವನು ನಿಸ್ಸಂದೇಹವಾಗಿ ಕಾಡುಮೃಗದಿಂದ ಸೀಳಿಹಾಕಲ್ಪಟ್ಟಿರಬೇಕು ಎಂದು ತಿಳಿದುಕೊಂಡೆ; ಅಂದಿನಿಂದ ಅವನನ್ನು ನಾನು ಕಂಡಿಲ್ಲ.


ಯಕೋಬನು ಅವರಿಗೆ, “ನನ್ನ ಮಗ ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದ ಅವನು ಸತ್ತುಹೋದ, ಇವನೊಬ್ಬನೇ ಉಳಿದು ಇದ್ದಾನೆ, ದಾರಿಯಲ್ಲಿ ಇವನಿಗೇನಾದರೂ ಆಪತ್ತು ಸಂಭವಿಸಬಹುದು. ಆಗ, ನರೆಕೂದಲಿನ ಈ ಮುದುಕ ದುಃಖದಿಂದಲೆ ಸಮಾಧಿ ಸೇರಲು ನೀವೇ ಕಾರಣರಾಗುತ್ತೀರಿ,” ಎಂದು ಹೇಳಿದ.


ಆಗ ಅವರ ತಂದೆ ಯಕೋಬನು ಅವರಿಗೆ, “ನನ್ನನ್ನು ಮಕ್ಕಳಿಲ್ಲದವನಂತೆ ಮಾಡಿದ್ದೀರಿ; ಜೋಸೆಫನು ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾಮೀನನನ್ನೂ ಕರೆದುಕೊಂಡು ಹೋಗಬೇಕೆಂದಿದ್ದೀರಿ. ಈ ಕಷ್ಟದುಃಖವೆಲ್ಲ ನನ್ನ ತಲೆಯ ಮೇಲೆ ಬಂದೆರಗಿದೆ!” ಎಂದನು.


ನಾವೆಲ್ಲರು ಒಬ್ಬ ತಂದೆಯ ಮಕ್ಕಳು; ನಾವು ಸತ್ಯವಂತರೇ ಹೊರತು ಗೂಢಚಾರರಲ್ಲ,” ಎಂದರು.


ಜೋಸೆಫನು ಅವರಿಗೆ, “ಸುಳ್ಳು, ನಮ್ಮ ದೇಶದ ದುರ್ಬಲ ಸ್ಥಳಗಳನ್ನು ತಿಳಿದುಕೊಳ್ಳುವುದಕ್ಕೆ ಬಂದಿದ್ದೀರಿ,” ಎಂದನು.


ಜೋಸೆಫನು ಅವರಿಗೆ, “ನಾನು ಈಗಾಗಲೆ ಹೇಳಿದಂತೆ ನೀವು ಗೂಢಚಾರರೇ,


ಅನಂತರ ಕಣ್ಣೆತ್ತಿ, ತನ್ನ ಒಡಹುಟ್ಟಿದ ತಮ್ಮನಾದ ಬೆನ್ಯಾಮೀನನನ್ನು ನೋಡಿದನು. “ನೀವು ಹೇಳಿದ ನಿಮ್ಮ ಕಿರಿಯ ತಮ್ಮ ಇವನೇನೋ?” ಎಂದು ಕೇಳಿ ಅವನಿಗೆ, “ಮಗು, ದೇವರ ಪ್ರೀತಿ ನಿನ್ನ ಮೇಲಿರಲಿ!” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು