Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:18 - ಕನ್ನಡ ಸತ್ಯವೇದವು C.L. Bible (BSI)

18 ಮೂರನೆಯ ದಿನ ಜೋಸೆಫನು ಅವರನ್ನು ಕರೆಸಿ, “ನಾನು ದೇವರಲ್ಲಿ ಭಯಭಕ್ತಿಯುಳ್ಳವನು; ನಿಮಗೆ ಜೀವದ ಮೇಲೆ ಆಶೆ ಇದ್ದರೆ ನಾನು ಹೇಳಿದಂತೆ ಮಾಡಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, “ನಾನು ದೇವರಿಗೆ ಭಯಪಡುವವನು. ನೀವು ಸತ್ಯವಂತರಾಗಿದ್ದರೆ ಒಂದು ಕೆಲಸವನ್ನು ಮಾಡಿ ಬದುಕಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಮೂರನೆಯ ದಿನದಲ್ಲಿ ಯೋಸೇಫನು ಅವರನ್ನು ಕರಸಿ - ನಾನು ದೇವರಿಗೆ ಭಯಪಡುವವನು; ನೀವು ಸತ್ಯವಂತರಾಗಿದ್ದರೆ ಒಂದು ಕೆಲಸವನ್ನು ಮಾಡಿ ಬದುಕಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಮೂರು ದಿನಗಳಾದ ಮೇಲೆ ಯೋಸೇಫನು ಅವರಿಗೆ, “ನಾನು ದೇವರಲ್ಲಿ ಭಯಭಕ್ತಿಯುಳ್ಳವನು. ನೀವು ಈ ಕಾರ್ಯವೊಂದನ್ನು ಮಾಡಿದರೆ ನಾನು ನಿಮ್ಮನ್ನು ಉಳಿಸುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, “ನಾನು ದೇವರಿಗೆ ಭಯಪಡುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:18
12 ತಿಳಿವುಗಳ ಹೋಲಿಕೆ  

ಅವರಿಂದ ಕಠಿಣವಾದ ಸೇವೆ ಮಾಡಿಸಿಕೊಳ್ಳಬಾರದು. ನಿಮ್ಮ ದೇವರಲ್ಲಿ ಭಯಭಕ್ತಿಯಿರಲಿ.


ನನಗಿಂತ ಮುಂಚೆಯಿದ್ದ ರಾಜ್ಯಪಾಲರು ಜನರ ಮೇಲೆ ಬಹಳ ತೆರಿಗೆ ಹೊರಿಸಿ, ಅವರಿಂದ ದಿನಕ್ಕೆ ನಾಲ್ವತ್ತು ಬೆಳ್ಳಿ ನಾಣ್ಯದ ಆಹಾರವನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಿದ್ದರು; ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸುತ್ತ ಇದ್ದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಹಾಗೆ ಮಾಡದೆ


“ಒಂದು ನಗರದಲ್ಲಿ ಒಬ್ಬ ನ್ಯಾಯಾಧೀಶನಿದ್ದ. ಅವನು ದೇವರಿಗೂ ಭಯಪಡುತ್ತಿರಲಿಲ್ಲ; ಮಾನವರಿಗೂ ಲಕ್ಷ್ಯಕೊಡುತ್ತಿರಲಿಲ್ಲ.


ಅದಕ್ಕೆ ಅಬ್ರಹಾಮನು, “ಇಲ್ಲಿಯ ಜನರಿಗೆ ದೇವರಲ್ಲಿ ಭಯಭಕ್ತಿಯಿಲ್ಲವೆಂದೂ ನನ್ನ ಹೆಂಡತಿಯ ನಿಮಿತ್ತ ನನ್ನನ್ನು ಕೊಂದಾರು ಎಂದೂ ಭಾವಿಸಿದೆ.


ಬಹುಕಾಲ ನ್ಯಾಯಾಧೀಶನು ಅವಳಿಗೆ ಕಿವಿಗೊಡಲೇ ಇಲ್ಲ. ಕೊನೆಗೆ ಅವನು, ‘ನಾನು ದೇವರಿಗೆ ಹೆದರುವವನಲ್ಲ; ಮಾನವರಿಗೆ ಲಕ್ಷ್ಯಕೊಡುವವನೂ ಅಲ್ಲ;


ಆಮೇಲೆ ನಾನು ಅವರಿಗೆ, “ನೀವು ಮಾಡಿದ್ದು ಸರಿಯಲ್ಲ; ನಾವು ನಮ್ಮ ವಿರೋಧಿಗಳಾದ ಅನ್ಯಜನರ ನಿಂದೆಗೆ ಗುರಿಯಾಗದಂತೆ ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕಲ್ಲವೇ?


ಈ ಮನೆಯಲ್ಲಿ ನನಗಿಂತ ಹೆಚ್ಚಿನ ಅಧಿಕಾರ ಪಡೆದವರು ಒಬ್ಬರೂ ಇಲ್ಲ; ನಿಮ್ಮನ್ನು ಬಿಟ್ಟು ಮಿಕ್ಕ ಎಲ್ಲವನ್ನು ನನಗೆ ಅಧೀನಮಾಡಿದ್ದಾರೆ. ನೀವು ಅವರ ಧರ್ಮಪತ್ನಿ ಅಲ್ಲವೆ? ಹೀಗಿರುವಲ್ಲಿ, ನಾನು ಇಂತಹ ಮಹಾದುಷ್ಕೃತ್ಯವೆಸಗಿ ದೇವರಿಗೆ ವಿರುದ್ಧ ಹೇಗೆ ಪಾಪಮಾಡಲಿ?” ಎಂದು ಆಕೆಗೆ ಉತ್ತರಕೊಟ್ಟ.


ನೀವು ಸತ್ಯವಂತರಾದರೆ ನಿಮ್ಮಲ್ಲಿ ಒಬ್ಬನನ್ನು ಮಾತ್ರ ಸೆರೆಯಲ್ಲಿಡುತ್ತೇನೆ. ಮಿಕ್ಕವರು ಕ್ಷಾಮದಿಂದ ಬಳಲುತ್ತಿರುವ ನಿಮ್ಮ ನಿಮ್ಮ ಕುಟುಂಬಗಳಿಗೆ ಅಗತ್ಯವಾದ ಧಾನ್ಯವನ್ನು ತೆಗೆದುಕೊಂಡು ಹೋಗಿ.


ಆದರೆ ನೀನು ಈ ಜನರಲ್ಲೆಲ್ಲಾ ಸಮರ್ಥರು, ದೇವಭಕ್ತರು, ನಂಬಿಗಸ್ಥರು ಹಾಗು ಲಂಚ ಮುಟ್ಟದವರು ಆಗಿರುವ ವ್ಯಕ್ತಿಗಳನ್ನು ಆರಿಸಿಕೊ. ಅಂಥವರನ್ನು ಸಾವಿರ, ನೂರು, ಐವತ್ತು ಹಾಗು ಹತ್ತು ಮಂದಿಗಳ ಅಧಿಪತಿಗಳನ್ನಾಗಿ ನೇಮಿಸು.


‘ಊಚ್’ ಎಂಬ ನಾಡಿನಲ್ಲಿ ‘ಯೋಬ’ ಎಂಬ ಒಬ್ಬ ವ್ಯಕ್ತಿಯಿದ್ದ. ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿ ಉಳ್ಳವನು, ಕೆಟ್ಟದ್ದನ್ನು ತೊರೆದು ಬಾಳಿದವನು.


ಆದರೆ ಆ ಸೂಲಗಿತ್ತಿಯರು ದೈವಭಕ್ತರು. ಈಜಿಪ್ಟಿನ ಅರಸ ಹೇಳಿದಂತೆ ಮಾಡದೆ ಗಂಡುಮಕ್ಕಳನ್ನು ಉಳಿಸಿದರು.


ಆದುದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯ ಮಾಡಬಾರದು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ನಿಮ್ಮ ದೇವರಾದ ಸರ್ವೇಶ್ವರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು