Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:34 - ಕನ್ನಡ ಸತ್ಯವೇದವು C.L. Bible (BSI)

34 ಆದರೆ ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು. ಕರೆದುಕೊಂಡು ಬಂದರೆ, ನೀವು ಗೂಢಚಾರರಲ್ಲ. ಸತ್ಯವಂತರೇ ಎಂದು ತಿಳಿದುಕೊಳ್ಳುತ್ತೇನೆ; ನಿಮ್ಮ ಅಣ್ಣನನ್ನು ಬಿಡುಗಡೆ ಮಾಡುತ್ತೇನೆ ಮತ್ತು ನೀವು ಈ ದೇಶದಲ್ಲಿ ವ್ಯಾಪಾರ ನಡೆಸಬಹುದು,” ಎಂದು ಹೇಳಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು, ಕರೆದುಕೊಂಡು ಬಂದರೆ ನೀವು ಗೂಢಚಾರರಲ್ಲ ಸತ್ಯವಂತರೇ ಎಂದು ತಿಳಿದುಕೊಂಡು ನಿಮ್ಮ ಅಣ್ಣನನ್ನು ಸೆರೆಯಿಂದ ಬಿಡಿಸುತ್ತೇನೆ ಮತ್ತು ನೀವು ಈ ದೇಶದಲ್ಲಿ ವ್ಯಾಪಾರ ಮಾಡಬಹುದು” ಎಂದು ಹೇಳಿದನು ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರಕೊಂಡು ಬರಬೇಕು; ಕರಕೊಂಡು ಬಂದರೆ ನೀವು ಗೂಢಚಾರರಲ್ಲ, ಸತ್ಯವಂತರೇ ಎಂದು ತಿಳಿದುಕೊಂಡು ನಿಮ್ಮ ಅಣ್ಣನನ್ನು ಬಿಡಿಸಿಬಿಡುತ್ತೇನೆ, ಮತ್ತು ನೀವು ಈ ದೇಶದಲ್ಲಿ ವ್ಯಾಪಾರ ನಡಿಸಬಹುದೆಂದು ಹೇಳಿದನು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆಮೇಲೆ ನಿಮ್ಮ ಕಿರಿಯ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ. ಆಗ ನೀವು ಯಥಾರ್ಥರಾದವರೋ ಗೂಢಚಾರರೋ ಎಂದು ಗೊತ್ತಾಗುವುದು. ನೀವು ಸತ್ಯವನ್ನು ಹೇಳಿದ್ದರೆ ನಿಮ್ಮ ಸಹೋದರನನ್ನು ನಿಮಗೆ ಒಪ್ಪಿಸುವೆನು; ನಮ್ಮ ದೇಶದಲ್ಲಿ ಆಹಾರವನ್ನು ಕೊಳ್ಳಲು ನಿಮಗೆ ಯಾವ ತಡೆಯೂ ಇರುವುದಿಲ್ಲ’ ಎಂದು ಹೇಳಿದನು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ನಿಮ್ಮ ಚಿಕ್ಕ ತಮ್ಮನನ್ನು ನನ್ನ ಬಳಿಗೆ ತನ್ನಿರಿ. ಆಗ ನೀವು ಗೂಢಚಾರರಲ್ಲವೆಂದೂ, ಯಥಾರ್ಥರೆಂದೂ ತಿಳಿದುಕೊಂಡು, ನಿಮ್ಮ ಸಹೋದರರನ್ನು ನಿಮಗೆ ಒಪ್ಪಿಸುವೆನು. ಆಗ ನೀವು ದೇಶದಲ್ಲಿ ವ್ಯಾಪಾರ ಮಾಡಬಹುದು,’ ಎಂದು ಹೇಳಿದನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:34
7 ತಿಳಿವುಗಳ ಹೋಲಿಕೆ  

ಇದರಲ್ಲಿ ವಾಸಿಸಿ, ವ್ಯಾಪಾರಮಾಡಿ, ನೀವು ಆಸ್ತಿಯನ್ನು ಸಂಪಾದಿಸಿಕೊಳ್ಳಬಹುದು,” ಎಂದು ಹೇಳಿದನು.


“ಈ ಜನರು ನಮ್ಮೊಡನೆ ಶಾಂತಿಸಮಾಧಾನದಿಂದಿದ್ದಾರೆ; ಇವರು ನಮ್ಮ ನಾಡಿನಲ್ಲೇ ವಾಸಮಾಡಿಕೊಂಡು ವ್ಯಾಪಾರಮಾಡಲಿ; ಈ ನಾಡು ಅವರಿಗೂ ನಮಗೂ ಸಾಕಾಗುವಷ್ಟು ವಿಸ್ತಾರವಾಗಿದೆ. ನಾವು ಅವರ ಹೆಣ್ಣು ಮಕ್ಕಳನ್ನು ಮದುವೆಮಾಡಿಕೊಳ್ಳೋಣ, ನಮ್ಮ ಹೆಣ್ಣು ಮಕ್ಕಳನ್ನು ಅವರಿಗೆ ಕೊಡೋಣ.


ತುಟ್ಟತುದಿಯ ಚಿಗುರುಗಳನ್ನು ಕಚ್ಚಿ ವಾಣಿಜ್ಯ ದೇಶಕ್ಕೆ ತೆಗೆದುಕೊಂಡುಹೋಗಿ ಬಹುಮಂದಿ ವರ್ತಕರಿರುವ ಪಟ್ಟಣದಲ್ಲಿ ಇಟ್ಟುಬಿಟ್ಟಿತು.


ಪ್ರತಿವರ್ಷ ಸುಮಾರು ಇಪ್ಪತ್ತಮೂರು ಸಾವಿರ ಕಿಲೋಗ್ರಾಂ ಬಂಗಾರ ದೊರಕುತ್ತಿತ್ತು.


ಆದರೆ ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು, ಕರೆದುಕೊಂಡು ಬಂದರೆ, ನಿಮ್ಮ ಮಾತು ಸತ್ಯವೆಂದು ತಿಳಿದುಕೊಳ್ಳುತ್ತೇನೆ, ಆಗ ನೀವು ಸಾಯದೆ ಉಳಿಯುವಿರಿ,” ಎಂದನು. ಅವರು ಹಾಗೆಯೇ ಮಾಡಲು ಒಪ್ಪಿಕೊಂಡರು.


ಅದೂ ಅಲ್ಲದೆ, “ಇಗೋ, ನನ್ನ ನಾಡು ನಿನಗೆ ತೆರೆದಿದೆ; ಇಷ್ಟಬಂದ ಕಡೆ ಹೋಗಿ ವಾಸಮಾಡು,” ಎಂದನು.


ಇದು ನಿಜವೋ ಸುಳ್ಳೋ ಎಂದು ಗೊತ್ತಾಗಬೇಕಾದರೆ ನೀವು ನಿಮ್ಮ ತಮ್ಮನನ್ನು ಬರಮಾಡಬೇಕು. ಅವನು ಬಂದ ಹೊರತು, ಫರೋಹನ ಜೀವದಾಣೆ, ನೀವು ಇಲ್ಲಿಂದ ಹೊರಟುಹೋಗಕೂಡದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು