Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:38 - ಕನ್ನಡ ಸತ್ಯವೇದವು C.L. Bible (BSI)

38 ಯಕೋಬನು ಅವರಿಗೆ, “ನನ್ನ ಮಗ ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದ ಅವನು ಸತ್ತುಹೋದ, ಇವನೊಬ್ಬನೇ ಉಳಿದು ಇದ್ದಾನೆ, ದಾರಿಯಲ್ಲಿ ಇವನಿಗೇನಾದರೂ ಆಪತ್ತು ಸಂಭವಿಸಬಹುದು. ಆಗ, ನರೆಕೂದಲಿನ ಈ ಮುದುಕ ದುಃಖದಿಂದಲೆ ಸಮಾಧಿ ಸೇರಲು ನೀವೇ ಕಾರಣರಾಗುತ್ತೀರಿ,” ಎಂದು ಹೇಳಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆದರೆ ಯಾಕೋಬನು ಅವರಿಗೆ, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದವನು ಸತ್ತು ಹೋದನು. ಇವನೊಬ್ಬನೇ ಉಳಿದಿದ್ದಾನೆ. ಮಾರ್ಗದಲ್ಲಿ ಇವನಿಗೇನಾದರೂ ಕೇಡಾದರೆ ಈ ಮುದಿ ತಲೆ ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಆದರೆ ಯಾಕೋಬನು ಅವರಿಗೆ - ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಇವನ ಒಡಹುಟ್ಟಿದವನು ಸತ್ತು ಹೋದನು; ಇವನೊಬ್ಬನೇ ಉಳಿದಿದ್ದಾನೆ; ಮಾರ್ಗದಲ್ಲಿ ಇವನಿಗೇನಾದರೂ ಕೇಡಾದರೆ ಈ ಮುದಿತಲೆ ದುಃಖದಿಂದಲೇ ಪಾತಾಳಕ್ಕೆ ಸೇರಲು ನೀವು ಕಾರಣವಾಗುವಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಯಾಕೋಬನು, “ನಾನು ನಿಮ್ಮೊಂದಿಗೆ ಬೆನ್ಯಾಮೀನನನ್ನು ಕಳುಹಿಸಿಕೊಡುವುದಿಲ್ಲ. ಅವನ ಸಹೋದರನು ಸತ್ತುಹೋದನು; ನನ್ನ ಹೆಂಡತಿಯಾದ ರಾಹೇಲಳಲ್ಲಿ ಹುಟ್ಟಿದ ಗಂಡುಮಕ್ಕಳಲ್ಲಿ ಇವನೊಬ್ಬನೇ ಉಳಿದಿರುವುದು. ಈಜಿಪ್ಟಿಗೆ ಪ್ರಯಾಣ ಮಾಡುವಾಗ ಇವನಿಗೆ ಅಪಾಯ ಸಂಭವಿಸಿದರೆ ವಯಸ್ಸಾದ ನಾನು ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣವಾಗುವಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಆದರೆ ಯಾಕೋಬನು, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು, ಅವನ ಅಣ್ಣ ಸತ್ತು ಹೋಗಿ, ಇವನೊಬ್ಬನೇ ಉಳಿದಿದ್ದಾನೆ. ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ, ನನ್ನ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ಇಳಿಸುವಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:38
20 ತಿಳಿವುಗಳ ಹೋಲಿಕೆ  

ದುಃಖಶಮನಮಾಡಲು ಪುತ್ರಪುತ್ರಿಯರೆಲ್ಲರು ಎಷ್ಟು ಪ್ರಯತ್ನಿಸಿದರೂ ಅವನು ಸಾಂತ್ವನಗೊಳ್ಳಲಿಲ್ಲ; "ನಾನು ಹೀಗೆಯೇ ಹಂಬಲಿಸುತ್ತಾ ನನ್ನ ಮಗನಿರುವ ಮೃತ್ಯುಲೋಕವನ್ನು ಸೇರುತ್ತೇನೆ,” ಎಂದು ಮಗನಿಗಾಗಿ ದುಃಖಿಸುತ್ತಲೇ ಇದ್ದ.


ಆದರೆ ಜೋಸೆಫನ ಒಡಹುಟ್ಟಿದ ತಮ್ಮನಾದ ಬೆನ್ಯಾಮೀನನನ್ನು ಯಕೋಬನು ಅವರ ಸಂಗಡ ಕಳಿಸಲಿಲ್ಲ. ಏಕೆಂದರೆ, ಅವನಿಗೆ ಏನಾದರೂ ಆಪತ್ತು ಒದಗೀತೆಂಬ ಹೆದರಿಕೆ ಅವನದು.


ಯಕೋಬನು ಅದರ ಗುರುತನ್ನು ಹಿಡಿದು, ” ಈ ಅಂಗಿ ನಿಶ್ಚಯವಾಗಿ ನನ್ನ ಮಗನದೇ; ಕಾಡುಮೃಗ ಅವನನ್ನು ಕೊಂದು ತಿಂದಿರಬೇಕು, ಜೋಸೆಫನನ್ನು ಅದು ನಿಸ್ಸಂದೇಹವಾಗಿ ಸೀಳಿಹಾಕಿರಬೇಕು,” ಎಂದು ಹೇಳಿ,


ಅದಕ್ಕೆ ಅವರು, “ತಮ್ಮ ಸೇವಕರಾದ ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರು; ಕಾನಾನ್ ನಾಡಿನವರು, ಒಬ್ಬ ತಂದೆಯ ಮಕ್ಕಳು; ನಮ್ಮಲ್ಲಿ ಚಿಕ್ಕವನು ತಂದೆಯ ಬಳಿಯಲ್ಲೇ ಇದ್ದಾನೆ; ಒಬ್ಬನು ಇಲ್ಲವಾದನು,” ಎಂದರು.


ನಾನೇ ನಿಮಗೆ ಆಧಾರ ಮುಪ್ಪಿನ ತನಕ ಹೊತ್ತು ಸಲಹುವೆನು ನಿಮ್ಮನು ನರೆಬಂದಾಗ. ಉಂಟುಮಾಡಿದವನು ನಾನೇ, ಹೊರುವವನು ನಾನೇ ಹೌದು, ನಿಮ್ಮನು ಹೊತ್ತು ಸಲಹುವವನು ನಾನೇ.


ನನ್ನ ರೋಗದಲ್ಲಿ ನಾನು ಇಂತೆಂದುಕೊಂಡೆ : ಮಧ್ಯಪ್ರಾಯದಲ್ಲೇ ಮೃತ್ಯುಲೋಕವನ್ನು ಸಮೀಪಿಸಿರುವೆ ನನ್ನ ಆಯುಷ್ಯವನ್ನು ನಾ ಕಳೆದುಕೊಂಡಿರುವೆ.


ದೇವರು ತಾವು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳುವಳಿಕೆಯನ್ನೂ, ಸುಖಸಂತೋಷವನ್ನೂ ದಯಪಾಲಿಸುತ್ತಾರಲ್ಲವೇ? ಪಾಪಿಗಾದರೋ, ಪ್ರಯೋಜನಕರವಾದುವುಗಳನ್ನು ಕೂಡಿಸಿಡುವ ಪ್ರಯಾಸವನ್ನು ಮಾತ್ರ ವಿಧಿಸಿದ್ದಾರೆ. ಆದರೆ ಅವು ತಮಗೆ ಮೆಚ್ಚುಗೆಯಾದವರಿಗೆ ಸೇರಬೇಕಾದವು. ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.


ಲೋಕದಲ್ಲಿ ನಡೆಯುವ ಎಲ್ಲ ಕಾರ್ಯಕಲಾಪಗಳನ್ನು ಗಮನಿಸಿದ್ದೇನೆ. ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ಎಲ್ಲವೂ ವ್ಯರ್ಥ.


ನಮ್ಮ ಆಯುಷ್ಕಾಲ ಎಪ್ಪತ್ತು ವರುಷ I ಹೆಚ್ಚಾಗಿದ್ದರೆ ಬಲ, ಎಂಬತ್ತು ವರುಷ II


ದೇವಾ, ನರೆಯ ಮುದುಕನಾಗಿರುವಾಗ ನನ್ನ ಕೈ ಬಿಡಬೇಡಯ್ಯಾ I ನಿನ್ನ ಪರಾಕ್ರಮವನು ಮುಂದಿನ ಪೀಳಿಗೆಗೆ ಸಾರುವ ತನಕ ಬೇಡವಯ್ಯಾ I ನಿನ್ನ ಪ್ರತಾಪವನು ತಲತಲಾಂತರದವರೆಗೆ ಪ್ರಕಟಿಸುವೆನಯ್ಯಾ II


ಅವನಿಗೇನು ಮಾಡಬೇಕೆಂಬುದು ಬುದ್ಧಿವಂತನಾದ ನಿನಗೆ ಗೊತ್ತಿದೆ; ಅವನ ಮುದಿತಲೆ ಸಮಾಧಿಯನ್ನು ಸಮಾಧಾನದಿಂದ ಸೇರದಂತೆ ಮಾಡು.


ನಾವು ‘ತಂದೆ ಇದ್ದಾರೆ, ಅವರು ಮುದುಕ; ಮುಪ್ಪಿನಲ್ಲಿ ಅವರಿಗೆ ಹುಟ್ಟಿದ ಒಬ್ಬ ಚಿಕ್ಕ ಹುಡುಗ ಇದ್ದಾನೆ. ಅವನ ಒಡಹುಟ್ಟಿದವನು ಸತ್ತುಹೋದ. ಅವನ ತಾಯಿಯ ಹೊಟ್ಟೆಯಲ್ಲಿ ಹುಟ್ಟಿದವರಲ್ಲಿ ಅವನೊಬ್ಬನೇ ಉಳಿದಿದ್ದಾನೆ. ಅವನ ಮೇಲೆ ತಂದೆಗೆ ಅಪಾರ ಪ್ರೀತಿ,’ ಎಂದು ಹೇಳಿದೆವು.


ದುಃಖ ತಾಳಲಾಗದೆ ತನ್ನ ಬಟ್ಟೆಯನ್ನು ಹರಿದುಕೊಂಡ; ನಡುವಿಗೆ ಗೋಣಿತಟ್ಟನ್ನು ಸುತ್ತಿಕೊಂಡ; ತನ್ನ ಮಗನಿಗಾಗಿ ಬಹುದಿನಗಳವರೆಗೂ ಅತ್ತು ಪ್ರಲಾಪಿಸಿದ.


ಅದಕ್ಕೆ ರೂಬೇನನು, “ನಾನು ಈ ಹುಡುಗನನ್ನು ನಿಮಗೆ ಪುನಃ ತಂದೊಪ್ಪಿಸುತ್ತೇನೆ; ಇಲ್ಲದೆಹೋದರೆ ನನ್ನಿಬ್ಬರು ಗಂಡುಮಕ್ಕಳನ್ನು ಕೊಂದುಹಾಕಬಹುದು. ಇವನನ್ನು ನನ್ನ ವಶಕ್ಕೆ ಕೊಡಿ, ನಾನು ತಪ್ಪದೆ ಇವನನ್ನು ನಿಮ್ಮ ಬಳಿಗೆ ಕರೆದುಕೊಂಡು ಬರುತ್ತೇನೆ,” ಎಂದು ಹೇಳಿದ.


ನಿಮ್ಮ ತಮ್ಮನನ್ನೂ ಕರೆದುಕೊಂಡು ಮರಳಿ ಆ ಮನುಷ್ಯನ ಬಳಿಗೆ ಹೋಗಿ.


ನಾವು, ‘ಆ ಹುಡುಗನು ತಂದೆಯನ್ನು ಬಿಟ್ಟು ಅಗಲುವುದಕ್ಕಾಗುವುದಿಲ್ಲ; ಅಗಲಿದರೆ ತಂದೆ ಸತ್ತುಹೋದಾರು,’ ಎಂದು ಒಡೆಯರಾದ ತಮಗೆ ತಿಳಿಸಿದೆವು.


ಸಾಗರಕ್ಕೆ ನೆರೆಬಂತೋ ಎಂಬ ಹಾಗೆ ಶುಭ್ರಗೊಳಿಸುತ್ತದೆ ತಾನು ಬಂದ ಹಾದಿಯನ್ನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು