Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:16 - ಕನ್ನಡ ಸತ್ಯವೇದವು C.L. Bible (BSI)

16 ಬೆನ್ಯಾಮೀನನು ಅವರ ಸಂಗಡ ಇರುವುದನ್ನು ಜೋಸೆಫನು ನೋಡಿದನು. ಕೂಡಲೆ ಗೃಹನಿರ್ವಾಹಕನನ್ನು ಕರೆದು, “ಈ ಜನರು ನನ್ನ ಸಂಗಡ ಈ ಮಧ್ಯಾಹ್ನ ಊಟಮಾಡಬೇಕಾಗಿ ಇದೆ; ಇವರನ್ನು ಮನೆಯೊಳಗೆ ಕರೆದುಕೊಂಡು ಹೋಗು. ಮಾಂಸದ ಅಡುಗೆ ಮಾಡಿ, ಎಲ್ಲವನ್ನು ಸಿದ್ಧಪಡಿಸು,” ಎಂದು ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಬೆನ್ಯಾಮೀನನು ಅವರ ಸಂಗಡ ಇರುವುದನ್ನು ಯೋಸೇಫನು ಕಂಡು ತನ್ನ ಗೃಹನಿರ್ವಾಹಕನನ್ನು ಕರೆಯಿಸಿ, “ಈ ಮನುಷ್ಯರನ್ನು ಮನೆಯೊಳಗೆ ಕರೆದುಕೊಂಡು ಹೋಗು, ಒಳ್ಳೆ ಕೊಬ್ಬಿದ ಪಶುವನ್ನು ಕೊಯ್ದು ಅಡುಗೆ ಸಿದ್ಧಮಾಡು. ಏಕೆಂದರೆ ಈ ಮನುಷ್ಯರು ಈ ಹೊತ್ತು ಮಧ್ಯಾಹ್ನ ನನ್ನ ಸಂಗಡ ಊಟ ಮಾಡುವರು” ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಬೆನ್ಯಾಮೀನನು ಅವರ ಸಂಗಡ ಇರುವದನ್ನು ಯೋಸೇಫನು ಕಂಡು ತನ್ನ ಮನೆವಾರ್ತೆಯವನನ್ನು ಕರಸಿ - ಈ ಮನುಷ್ಯರು ಈ ಹೊತ್ತು ಮಧ್ಯಾಹ್ನ ನನ್ನ ಸಂಗಡ ಊಟಮಾಡಬೇಕಾಗಿದೆ; ಇವರನ್ನು ಮನೆಯೊಳಗೆ ಕರೆದುಕೊಂಡು ಹೋಗಿ ಪಶುವನ್ನು ಕೊಯಿಸಿ ಎಲ್ಲಾ ಸಿದ್ಧಪಡಿಸು ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಸಹೋದರರೊಂದಿಗೆ ಬೆನ್ಯಾಮೀನನು ಇರುವುದನ್ನು ಕಂಡ ಯೋಸೇಫನು ತನ್ನ ಸೇವಕನಿಗೆ, “ಈ ಜನರನ್ನು ನನ್ನ ಮನೆಯೊಳಗೆ ಕರೆದುಕೊಂಡು ಹೋಗು; ಕುರಿಯನ್ನು ಕೊಯ್ದು ಅಡಿಗೆ ಮಾಡು. ಈ ಜನರು ಈ ಹೊತ್ತು ಮಧ್ಯಾಹ್ನ ನನ್ನೊಂದಿಗೆ ಊಟಮಾಡುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೋಸೇಫನು ಬೆನ್ಯಾಮೀನನನ್ನು ಅವರ ಸಂಗಡ ಕಂಡಾಗ ತನ್ನ ಮನೆ ಉಗ್ರಾಣಿಕನಿಗೆ, “ಈ ಮನುಷ್ಯರನ್ನು ಮನೆಗೆ ಕರೆದುಕೊಂಡು ಹೋಗಿ, ಮಾಂಸದ ಅಡುಗೆ ಸಿದ್ಧಮಾಡು. ಏಕೆಂದರೆ ಈ ಮನುಷ್ಯರು ಮಧ್ಯಾಹ್ನದಲ್ಲಿ ನನ್ನ ಸಂಗಡ ಊಟಮಾಡಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:16
12 ತಿಳಿವುಗಳ ಹೋಲಿಕೆ  

ತರುವಾಯ ಜೋಸೆಫನು ತನ್ನ ಗೃಹನಿರ್ವಾಹಕನನ್ನು ಕರೆದು, “ಆ ಜನರ ಗೋಣಿಚೀಲಗಳಲ್ಲಿ ಹೊರುವಷ್ಟು ಧಾನ್ಯವನ್ನು ತುಂಬಿಸಿ, ಒಬ್ಬೊಬ್ಬನ ಚೀಲದ ಬಾಯಿಯಲ್ಲಿ ಅವನವನ ಹಣದ ಗಂಟನ್ನಿಡು.


ಮನೆಯ ಬಾಗಿಲ ಬಳಿ ಗೃಹನಿರ್ವಾಹಕನಿಗೆ,


ಪಶುಗಳನ್ನು ಕೊಯ್ಯಿಸಿ ದ್ರಾಕ್ಷಾರಸವನ್ನು ಬೆರೆಸಿ ಔತಣವನ್ನು ಆಕೆ ಸಿದ್ಧಪಡಿಸುತ್ತಿದ್ದಾಳೆ.


ಉಣ್ಣೆ ಕತ್ತರಿಸುವವರಿಗಾಗಿ ನಾನು ಸಿದ್ಧಮಾಡಿಸಿದ ಮಾಂಸವನ್ನೂ ಆಹಾರಪಾನಗಳನ್ನೂ ಎತ್ತಿ ಎಲ್ಲಿಂದಲೋ ಬಂದವರಿಗೆ ಕೊಡಲಾಗದು,” ಎಂದು ಉತ್ತರಕೊಟ್ಟನು.


ಅವರು ಪಟ್ಟಣಗಳನ್ನು ಬಿಟ್ಟು ಸ್ವಲ್ಪದೂರ ಹೋಗುವಷ್ಟರಲ್ಲಿ, ಜೋಸೆಫನು ತನ್ನ ಗೃಹನಿರ್ವಾಹಕನಿಗೆ, ‘ನೀನೆದ್ದು ಆ ಜನರನ್ನು ಹಿಂದಟ್ಟಿ ಹೋಗಿ ಹಿಡಿ. ಅವರಿಗೆ, ‘ನೀವು ಉಪಕಾರಕ್ಕೆ ಪ್ರತಿಯಾಗಿ ಏಕೆ ಅಪಕಾರ ಮಾಡಿದಿರಿ?


ಅಲ್ಲದೆ, ಯಕೋಬನು ಆ ಬೆಟ್ಟದ ಮೇಲೆ ಬಲಿಯನ್ನರ್ಪಿಸಿ ಬಂಧುಗಳನ್ನು ತನ್ನೊಡನೆ ಸಹಭೋಜನಕ್ಕೆ ಕರೆಸಿದನು. ಅವರು ಸಹಭೋಜನ ಮಾಡಿ ಆ ರಾತ್ರಿಯೆಲ್ಲಾ ಬೆಟ್ಟದ ಮೇಲಿದ್ದರು.


ಆಗ ಇಸಾಕನು ಅವರಿಗೆ ಔತಣವನ್ನು ಏರ್ಪಡಿಸಿದನು; ಅವರೆಲ್ಲರು ತಿಂದು ಕುಡಿದರು.


ಕ್ರಮೇಣ ಆ ಮಗು ಬೆಳೆದು ಹಾಲು ಕುಡಿಯುವುದನ್ನು ಬಿಟ್ಟಿತು. ಇಸಾಕನು ಮೊಲೆಬಿಟ್ಟ ಆ ದಿನದಂದು ಅಬ್ರಹಾಮನು ದೊಡ್ಡ ಔತಣವನ್ನು ಏರ್ಪಡಿಸಿದ್ದನು.


ಅದಕ್ಕೆ ಪ್ರತ್ಯುತ್ತರವಾಗಿ ಅಬ್ರಾಮನು - “ಸ್ವಾಮಿ ಸರ್ವೇಶ್ವರಾ, ನನಗೇ ಏನು ಕೊಟ್ಟರೇನು? ನಾನು ಪುತ್ರಸಂತಾನವಿಲ್ಲದವನು. ನನ್ನ ಮನೆಮಾರುಗಳಿಗೆ ಉತ್ತರಾಧಿಕಾರಿ ದಮಸ್ಕದ ಎಲೀಯೆಜರನೇ ಹೊರತು ಮತ್ತಾರೂ ಇಲ್ಲ;


ಅದೇ ಮೇರೆಗೆ ಗೃಹನಿರ್ವಾಹಕನು ಅವರನ್ನು ಜೋಸೆಫನ ಮನೆಗೆ ಕರೆದುಕೊಂಡು ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು