Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:29 - ಕನ್ನಡ ಸತ್ಯವೇದವು C.L. Bible (BSI)

29 ಅನಂತರ ಕಣ್ಣೆತ್ತಿ, ತನ್ನ ಒಡಹುಟ್ಟಿದ ತಮ್ಮನಾದ ಬೆನ್ಯಾಮೀನನನ್ನು ನೋಡಿದನು. “ನೀವು ಹೇಳಿದ ನಿಮ್ಮ ಕಿರಿಯ ತಮ್ಮ ಇವನೇನೋ?” ಎಂದು ಕೇಳಿ ಅವನಿಗೆ, “ಮಗು, ದೇವರ ಪ್ರೀತಿ ನಿನ್ನ ಮೇಲಿರಲಿ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಗ ಅವನು ಕಣ್ಣೆತ್ತಿ ತನ್ನ ಒಡಹುಟ್ಟಿದ ತಮ್ಮನಾದ ಬೆನ್ಯಾಮೀನನನ್ನು ನೋಡಿ, “ನೀವು ಹೇಳಿದ ನಿಮ್ಮ ಕಿರಿಯ ತಮ್ಮನು ಇವನೋ?” ಎಂದು ಕೇಳಿ ಅವನಿಗೆ, “ಮಗನೇ, ದೇವರ ದಯೆ ನಿನ್ನ ಮೇಲೆ ಇರಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆಗ ಅವನು ಕಣ್ಣೆತ್ತಿ ತನ್ನ ಒಡಹುಟ್ಟಿದ ತಮ್ಮನಾದ ಬೆನ್ಯಾಮೀನನನ್ನು ನೋಡಿ - ನೀವು ಹೇಳಿದ ನಿಮ್ಮ ಕಿರೀ ತಮ್ಮನು ಇವನೋ ಎಂದು ಕೇಳಿ ಅವನಿಗೆ - ಮಗನೇ, ದೇವರ ದಯೆ ನಿನ್ನ ಮೇಲಿರಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಬಳಿಕ ಯೋಸೇಫನು ತನ್ನ ಸಹೋದರನಾದ ಬೆನ್ಯಾಮೀನನನ್ನು ನೋಡಿದನು. (ಬೆನ್ಯಾಮೀನ ಮತ್ತು ಯೋಸೇಫ ಒಂದೇ ತಾಯಿಯ ಮಕ್ಕಳು.) ಯೋಸೇಫನು, “ನೀವು ನನಗೆ ತಿಳಿಸಿದ ನಿಮ್ಮ ಕಿರಿಯ ತಮ್ಮನು ಇವನೋ?” ಎಂದು ಕೇಳಿದನು. ಆಮೇಲೆ ಯೋಸೇಫನು ಬೆನ್ಯಾಮೀನನಿಗೆ “ಮಗನೇ, ದೇವರು ನಿನಗೆ ಒಳ್ಳೆಯದನ್ನು ಮಾಡಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆಗ ಅವನು ತನ್ನ ದೃಷ್ಟಿಯಿಟ್ಟು, ತನ್ನ ತಾಯಿಯ ಮಗನೂ ತನ್ನ ತಮ್ಮನೂ ಆದ ಬೆನ್ಯಾಮೀನನನ್ನು ನೋಡಿ, “ನೀವು ನನಗೆ ಹೇಳಿದ ನಿಮ್ಮ ಚಿಕ್ಕ ತಮ್ಮನು ಇವನೋ?” ಎಂದು ಹೇಳಿ, “ನನ್ನ ಮಗನೇ, ದೇವರು ನಿನಗೆ ಕೃಪಾಳುವಾಗಿರಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:29
22 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಪ್ರಸನ್ನ ಮುಖದಿಂದ ನಿಮ್ಮನ್ನು ನೋಡಿ ನಿಮಗೆ ದಯೆ ತೋರಲಿ!


ಅದಕ್ಕೆ ಅವರು, “ತಮ್ಮ ಸೇವಕರಾದ ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರು; ಕಾನಾನ್ ನಾಡಿನವರು, ಒಬ್ಬ ತಂದೆಯ ಮಕ್ಕಳು; ನಮ್ಮಲ್ಲಿ ಚಿಕ್ಕವನು ತಂದೆಯ ಬಳಿಯಲ್ಲೇ ಇದ್ದಾನೆ; ಒಬ್ಬನು ಇಲ್ಲವಾದನು,” ಎಂದರು.


ಸೋದರ ಪ್ರೀತಿಯಲ್ಲಿ ನೆಲೆಯಾಗಿ ನಿಲ್ಲಿರಿ.


ನಮ್ಮ ಉದ್ಧಾರಕರಾದ ದೇವರ ಮತ್ತು ನಮ್ಮ ನಿರೀಕ್ಷೆಯಾಗಿರುವ ಕ್ರಿಸ್ತಯೇಸುವಿನ ಆಜ್ಞಾನುಸಾರ, ನಾನು ಕ್ರಿಸ್ತಯೇಸುವಿನ ಪ್ರೇಷಿತನಾಗಿದ್ದೇನೆ. ಪಿತನಾದ ದೇವರೂ ನಮ್ಮ ಪ್ರಭುವಾದ ಕ್ರಿಸ್ತಯೇಸುವೂ ನಿನಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನೂ ಅನುಗ್ರಹಿಸಲಿ!


ಅವರ ಈ ಮಾತನ್ನು ಕೇಳಿದ ಶಿಷ್ಯರು ಬೆರಗಾದರು. ಯೇಸು ಪುನಃ ಅವರಿಗೆ, “ಮಕ್ಕಳೇ, ದೇವರ ಸಾಮ್ರಾಜ್ಯವನ್ನು ಸೇರುವುದು ಎಷ್ಟು ಕಷ್ಟ!


ಯೇಸು ಹಿಂದಿರುಗಿ ಆಕೆಯನ್ನು ನೋಡಿ, “ಮಗಳೇ ಹೆದರಬೇಡ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ,” ಎಂದರು. ಆ ಕ್ಷಣದಲ್ಲೇ ಆಕೆ ವ್ಯಾಧಿಯಿಂದ ಮುಕ್ತಳಾದಳು.


ಆಗ ಜನರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅವರ ಬಳಿಗೆ ತಂದರು. ಯೇಸು ಅವರ ವಿಶ್ವಾಸವನ್ನು ಮೆಚ್ಚಿ, ಆ ಪಾರ್ಶ್ವವಾಯು ರೋಗಿಗೆ, “ಮಗು, ಧೈರ್ಯದಿಂದಿರು. ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.


ಆದುದರಿಂದ ಯಾಜಕರೇ, ದೇವರ ದಯೆ ನಿಮಗೆ ದೊರಕುವಂತೆ ಅವರನ್ನು ಒಲಿಸಿಕೊಳ್ಳಿರಿ. ಇಂಥ ಕಾಣಿಕೆ ನಿಮ್ಮ ಕೈಯಲ್ಲಿದ್ದರೆ ಯಾರಿಗಾದರು ದೇವರು ನಿಮ್ಮ ಕೋರಿಕೆಯನ್ನು ಈಡೇರಿಸುವುದುಂಟೋ? ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ:


ಸರ್ವೇಶ್ವರಾ, ನಮಗೆ ಕೃಪೆತೋರಿ. ನಿಮಗಾಗಿ ಕಾದಿದ್ದೇವೆ. ದಿನದಿಂದ ದಿನಕ್ಕೆ ನಮಗೆ ಬೆಂಬಲವಾಗಿರಿ. ಆಪತ್ಕಾಲದಲ್ಲಿ ನಮಗೆ ರಕ್ಷಣೆ ನೀಡಿರಿ.


ಜೆರುಸಲೇಮಿನಲ್ಲಿ ವಾಸಿಸುವ ಸಿಯೋನಿನ ಜನರೇ, ನೀವಿನ್ನು ಅಳಬೇಕಾಗಿಲ್ಲ. ನಿಮ್ಮ ಕೂಗನ್ನು ಕೇಳಿದ್ದೇ, ಸರ್ವೇಶ್ವರ ನಿಮಗೆ ಕೃಪೆತೋರಿಸುವರು. ನಿಮ್ಮ ಸ್ವರವನ್ನು ಕೇಳಿದಾಕ್ಷಣ ಸದುತ್ತರವನ್ನು ದಯಪಾಲಿಸುವರು.


ಸಜ್ಜನನಿಗೆ ಮೂಡುವುದು ಜ್ಯೋತಿ ಕತ್ತಲೊಳು I ನ್ಯಾಯಪ್ರಿಯನು ಆತ, ದಯಾವಂತ, ಕೃಪಾಳು II


ಆತನ ಅದ್ಭುತಕಾರ್ಯ ಸ್ಮರಣೀಯ I ಕರುಣಾವಂತ ಪ್ರಭು, ಪ್ರೀತಿಮಯ II


ಹರಸು ದೇವಾ, ನಮ್ಮನಾಶೀರ್ವದಿಸು I ನಿನ್ನ ಮುಖಕಾಂತಿಯಿಂದೆಮ್ಮನು ಬೆಳಗಿಸು II


ಹೀಗಿರಲಾಗಿ ನನ್ನ ಮಕ್ಕಳೇ, ಉದಾಸೀನರಾಗಿರಬೇಡಿ; ಸರ್ವೇಶ್ವರ ತಮ್ಮನ್ನು ಆರಾಧಿಸುವುದಕ್ಕೂ ತಮಗೆ ಧೂಪಾರತಿ ಎತ್ತುವುದಕ್ಕೂ ನಿಮ್ಮನ್ನು ತಮ್ಮ ಸಾನ್ನಿಧ್ಯಸೇವಕರನ್ನಾಗಿ ಆರಿಸಿಕೊಂಡರಲ್ಲವೇ?’ ಎಂದು ಹೇಳಿದನು.


ಆಕಾನನಿಗೆ ಯೆಹೋಶುವನು, “ಮಗನೇ, ನೀನು ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ಸ್ತುತಿಸಿ ಸ್ತೋತ್ರ ಸಲ್ಲಿಸು. ನೀನು ಮಾಡಿದ್ದನ್ನು ಮುಚ್ಚುಮರೆಯಿಲ್ಲದೆ ನನಗೆ ತಿಳಿಸು, ಎಂದನು


ನನ್ನನ್ನು ಇಲ್ಲಿಗೆ ಕಳಿಸಿದವರು ನೀವಲ್ಲ, ದೇವರೇ. ಅವರು ನನ್ನನ್ನು ಫರೋಹನಿಗೆ ಮಂತ್ರಿಯಾಗಿಯೂ ಅವರ ಆಸ್ಥಾನಕ್ಕೆ ಅಧಿಪತಿಯಾಗಿಯೂ ಈಜಿಪ್ಟ್ ದೇಶಕ್ಕೆ ಸರ್ವಾಧಿಕಾರಿಯಾಗಿಯೂ ಮಾಡಿದ್ದಾರೆ.


ನಾವೆಲ್ಲರು ಒಬ್ಬ ತಂದೆಯ ಮಕ್ಕಳು; ನಾವು ಸತ್ಯವಂತರೇ ಹೊರತು ಗೂಢಚಾರರಲ್ಲ,” ಎಂದರು.


ಜೋಸೆಫ್, ಬೆನ್ಯಾಮೀನ್ - ಇವರಿಬ್ಬರು ರಾಖೇಲಳಲ್ಲಿ ಹುಟ್ಟಿದವರು.


ಅದಕ್ಕೆ ತಾವು ಸೇವಕರಾದ ನಮಗೆ, “ನಾನು ಆ ಹುಡುಗನನ್ನು ನೋಡಬೇಕು, ಅವನನ್ನು ನನ್ನ ಬಳಿಗೆ ಕರೆದು ತನ್ನಿ,’ ಎಂದು ಅಪ್ಪಣೆಕೊಟ್ಟಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು