Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:34 - ಕನ್ನಡ ಸತ್ಯವೇದವು C.L. Bible (BSI)

34 ಜೋಸೆಫನು ತನ್ನ ಮುಂದೆ ಬಡಿಸಿದ್ದ ಪದಾರ್ಥಗಳಲ್ಲಿ ಅವರಿಗೆ ಭಾಗಗಳನ್ನು ಕಳಿಸಿದನು. ಬೆನ್ಯಾಮೀನನಿಗೆ ಬಂದ ಭಾಗವಾದರೋ ಮಿಕ್ಕವರ ಭಾಗಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಯಥೇಚ್ಛವಾಗಿ ಪಾನಮಾಡಿ ಜೋಸೆಫನ ಸಂಗಡ ಸಂಭ್ರಮದಿಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರಗಳಲ್ಲಿ ಭಾಗಗಳನ್ನು ಕಳುಹಿಸಿದಾಗ, ಬೆನ್ಯಾಮೀನನಿಗೆ ಬಂದ ಭಾಗವು ಮಿಕ್ಕಾದವರ ಭಾಗಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಪಾನಮಾಡಿ ಅವನ ಸಂಗಡ ಸಂತೋಷದಿಂದ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಯೋಸೇಫನು ತನ್ನ ಮುಂದೆ ಬಡಿಸಿದ್ದ ಪದಾರ್ಥಗಳಲ್ಲಿ ಅವರಿಗೆ ಭಾಗಗಳನ್ನು ಕಳುಹಿಸಿದನು; ಆದರೆ ಬೆನ್ಯಾಮೀನನಿಗೆ ಬಂದ ಭಾಗವು ವಿುಕ್ಕಾದವರ ಭಾಗಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಯಥೇಚ್ಫವಾಗಿ ಪಾನಮಾಡಿ ಅವನ ಸಂಗಡ ಸಂಭ್ರಮದಿಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಸೇವಕರು ಯೋಸೇಫನ ಮೇಜಿನಿಂದ ಊಟವನ್ನು ತೆಗೆದುಕೊಂಡು ಅವರಿಗೆ ಬಡಿಸುತ್ತಿದ್ದರು. ಆದರೆ ಸೇವಕರು ಬೆನ್ಯಾಮೀನನಿಗೆ ಬೇರೆಯವರಿಗಿಂತ ಐದರಷ್ಟು ಹೆಚ್ಚಾಗಿ ಕೊಟ್ಟರು. ಸಹೋದರರು ಯಥೇಚ್ಛವಾಗಿ ಊಟ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರವನ್ನು ಕಳುಹಿಸಿದಾಗ, ಬೆನ್ಯಾಮೀನನಿಗೆ ಕಳುಹಿಸಿದ ಆಹಾರವು ಅವರೆಲ್ಲರ ಆಹಾರಗಳಿಗಿಂತ ಐದರಷ್ಟು ಹೆಚ್ಚಾಗಿತ್ತು ಮತ್ತು ಅವರು ಅವನ ಸಂಗಡ ಕುಡಿದು ಸಂತೋಷದಿಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:34
12 ತಿಳಿವುಗಳ ಹೋಲಿಕೆ  

ಅದೂ ಅಲ್ಲದೆ, ಪ್ರತಿಯೊಬ್ಬನಿಗೂ ಶ್ರೇಷ್ಠವಾದ ಹೊಸ ಬಟ್ಟೆಗಳನ್ನು ಕೊಟ್ಟನು. ಬೆನ್ಯಾಮೀನನಿಗಾದರೋ ಮುನ್ನೂರು ಬೆಳ್ಳಿನಾಣ್ಯಗಳನ್ನು ಹಾಗು ಐದು ಶ್ರೇಷ್ಠವಾದ ಹೊಸಬಟ್ಟೆಗಳನ್ನು ಕೊಟ್ಟನು.


ಅನಂತರ ಅವನಿಗೆ, “ನೀನು ಮನೆಗೆ ಹೋಗಿ ಕೈಕಾಲು ತೊಳೆದುಕೋ,” ಎಂದು ಹೇಳಿದನು. ಊರೀಯನು ಅರಮನೆಯಿಂದ ಹೊರಟ ಕೂಡಲೆ ಅವನ ಹಿಂದೆಯೇ ಅರಸನ ಭೋಜನ ಪದಾರ್ಥಗಳೂ ಹೋದವು.


ಅವನು ಹನ್ನಳನ್ನು ಬಹಳವಾಗಿ ಪ್ರೀತಿಸುತ್ತಿದ್ದರೂ ಒಂದು ಭಾಗವನ್ನು ಮಾತ್ರ ಆಕೆಗೆ ಕೊಡುತ್ತಾ ಇದ್ದನು. ಏಕೆಂದರೆ ಸರ್ವೇಶ್ವರ ಆಕೆಗೆ ಮಕ್ಕಳನ್ನು ಕೊಟ್ಟಿರಲಿಲ್ಲ.


ಆದುದರಿಂದ ಅವನು ಮದುಮಗನನ್ನು ಕರೆದು, “ಜನರೆಲ್ಲರೂ ಉತ್ತಮವಾದ ದ್ರಾಕ್ಷಾರಸವನ್ನು ಮೊದಲು ಹಂಚುತ್ತಾರೆ; ಅತಿಥಿಗಳು ಯಥೇಚ್ಛವಾಗಿ ಕುಡಿದಾದ ಮೇಲೆ ಸಾಧಾರಣ ದ್ರಾಕ್ಷಾರಸವನ್ನು ಕೊಡುತ್ತಾರೆ. ನೀನಾದರೋ ಉತ್ತಮವಾದುದನ್ನು ಈವರೆಗೂ ಇಟ್ಟಿದ್ದೀಯಲ್ಲಾ!” ಎಂದು ಹೇಳಿದನು.


ನರಪುತ್ರನು ಬಂದನು; ಅನ್ನಪಾನೀಯಗಳನ್ನು ಸೇವಿಸಿದನು. ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ ಎನ್ನುತ್ತಾರೆ. ಆದರೆ ದೈವಜ್ಞಾನವೇ ನಿಜವಾದ ಜ್ಞಾನವೆಂದು ಅದರ ಕಾರ್ಯಗಳಿಂದಲೇ ಸಮರ್ಥಿಸಲಾಗುತ್ತದೆ,” ಎಂದರು.


ಇಗೋ, ಬಾಬಿಲೋನಿನವರನ್ನು ಹುರಿದುಂಬಿಸಲಿದ್ದೇನೆ. ಅವರು ಭಯೋತ್ಪಾದಕರು ಹಾಗೂ ಉಗ್ರಗಾಮಿಗಳು. ಅವರು ಜಗದ ಉದ್ದಗಲಕ್ಕೂ ಹರಡಿ ತಮ್ಮದಲ್ಲದ ನಾಡುಗಳನ್ನು ಆಕ್ರಮಿಸಿಕೊಳ್ಳಲು ಸಂಚರಿಸುವರು.


ನನ್ನ ಪ್ರಿಯಳೇ, ನನ್ನ ವಧುವೇ, ಇದೋ ನಾ ಬಂದಿರುವೆ ನನ್ನ ತೋಟದೊಳಗೆ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ. ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ; ಪ್ರಿಯರೇ, ಕುಡಿಯಿರಿ ತೃಪ್ತಿಯಾಗುವಷ್ಟು ಪಾನಮಾಡಿರಿ. ನಲ್ಲೆ :


ವಿನೋದಕ್ಕಾಗಿ ಔತಣ, ಆನಂದಕ್ಕಾಗಿ ಮದ್ಯಪಾನ; ಎಲ್ಲವನ್ನು ಒದಗಿಸಿಕೊಡುವುದಕ್ಕಾಗಿ ಹಣ.


ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ತಿನ್ನು; ದ್ರಾಕ್ಷಾರಸವನ್ನು ಉಲ್ಲಾಸದಿಂದ ಕುಡಿ; ದೇವರು ನಿನ್ನ ನಡತೆಯನ್ನು ಈಗಾಗಲೇ ಮೆಚ್ಚಿಕೊಂಡಿದ್ದಾರೆ.


ಸಾರಾಯಿ ಸಾಯುತ್ತಿರುವವನಿಗಿರಲಿ; ಮದ್ಯ, ಮನೋವ್ಯಥೆಪಡುವವನಿಗಿರಲಿ.


ಜೋಸೆಫ್, ಬೆನ್ಯಾಮೀನ್ - ಇವರಿಬ್ಬರು ರಾಖೇಲಳಲ್ಲಿ ಹುಟ್ಟಿದವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು