Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:9 - ಕನ್ನಡ ಸತ್ಯವೇದವು C.L. Bible (BSI)

9 ಅವನಿಗೆ ನಾನೇ ಹೊಣೆ; ಅವನ ವಿಷಯ ನನಗೆ ಬಿಡಿ. ನಾನು ಅವನನ್ನು ಮತ್ತೆ ಕರೆದುಕೊಂಡು ಬಂದು ನಿಮ್ಮ ಎದುರಿನಲ್ಲಿ ನಿಲ್ಲಿಸದೆಹೋದರೆ ಆ ದೋಷ ಸದಾಕಾಲ ನನ್ನ ಮೇಲೆ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ಅವನ ವಿಷಯ ನನ್ನನ್ನೇ ಕೇಳಬಹುದು. ನಾನು ಅವನನ್ನು ತಿರುಗಿ ಕರೆದುಕೊಂಡು ಬಂದು ನಿನ್ನೆದುರಿನಲ್ಲಿ ನಿಲ್ಲಿಸದೆ ಹೋದರೆ ಆ ಅಪರಾಧ ಎಂದೆಂದಿಗೂ ನನ್ನ ಮೇಲೆ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾನೇ ಅವನಿಗೆ ಹೊಣೆ; ಅವನ ವಿಷಯ ನನ್ನನ್ನೇ ಕೇಳಬಹುದು. ನಾನು ಅವನನ್ನು ತಿರಿಗಿ ಕರಕೊಂಡು ಬಂದು ನಿನ್ನೆದುರಿನಲ್ಲಿ ನಿಲ್ಲಿಸದೆ ಹೋದರೆ ಆ ದೋಷ ಎಂದೆಂದಿಗೂ ನನ್ನ ಮೇಲೆ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವನು ಸುರಕ್ಷಿತವಾಗಿರುವಂತೆ ನಾನು ನೋಡಿಕೊಳ್ಳುವೆನು. ನಾನು ಅವನಿಗೆ ಜವಾಬ್ದಾರನಾಗಿರುತ್ತೇನೆ. ನಾನು ಅವನನ್ನು ನಿನ್ನ ಬಳಿಗೆ ಮತ್ತೆ ಕರೆದುಕೊಂಡು ಬರದಿದ್ದರೆ, ನೀನು ಸದಾಕಾಲ ನನ್ನನ್ನು ದೂಷಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ನೀನು ಅವನ ವಿಷಯದಲ್ಲಿ ನನ್ನನ್ನೇ ಕೇಳಬಹುದು. ನಾನು ಅವನನ್ನು ನಿನ್ನ ಬಳಿಗೆ ತಂದು ನಿನ್ನೆದುರಿಗೆ ನಿಲ್ಲಿಸದಿದ್ದರೆ, ಎಂದೆಂದಿಗೂ ನಾನು ಅಪರಾಧವನ್ನು ಹೊರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:9
16 ತಿಳಿವುಗಳ ಹೋಲಿಕೆ  

ಅದಕ್ಕೆ ರೂಬೇನನು, “ನಾನು ಈ ಹುಡುಗನನ್ನು ನಿಮಗೆ ಪುನಃ ತಂದೊಪ್ಪಿಸುತ್ತೇನೆ; ಇಲ್ಲದೆಹೋದರೆ ನನ್ನಿಬ್ಬರು ಗಂಡುಮಕ್ಕಳನ್ನು ಕೊಂದುಹಾಕಬಹುದು. ಇವನನ್ನು ನನ್ನ ವಶಕ್ಕೆ ಕೊಡಿ, ನಾನು ತಪ್ಪದೆ ಇವನನ್ನು ನಿಮ್ಮ ಬಳಿಗೆ ಕರೆದುಕೊಂಡು ಬರುತ್ತೇನೆ,” ಎಂದು ಹೇಳಿದ.


ಆದ್ದರಿಂದಲೇ, ಯೇಸು ಅತ್ಯಂತ ಶ್ರೇಷ್ಠವಾದ ಒಡಂಬಡಿಕೆಗೆ ಆಧಾರಪುರುಷರಾಗಿದ್ದಾರೆ.


ನಾನು ದುಷ್ಟನಿಗೆ - ‘ದುಷ್ಟನೇ, ನೀನು ಸತ್ತೇಸಾಯುವೆ’ ಎಂದು ನುಡಿಯುವಾಗ ನೀನು ಆ ದುಷ್ಟನನ್ನು ತನ್ನ ದುರ್ಮಾರ್ಗದಿಂದ ತಪ್ಪಿಸಲು ಅವನನ್ನು ಎಚ್ಚರಪಡಿಸದೆಹೋದರೆ ಅವನು ತನ್ನ ಅಪರಾಧದಿಂದಲೇ ಸಾಯಬೇಕಾಗುವುದು; ಅವನ ಮರಣಕ್ಕೆ ಹೊಣೆಯಾದ ನಿನಗೆ ಮುಯ್ಯಿತೀರಿಸುವೆನು.


ಆದರೆ ಕಾವಲುಗಾರನೇ ಬೀಳುವ ಖಡ್ಗವನ್ನು ನೋಡಿಯೂ ಕೊಂಬನ್ನೂದದೆ, ಸಜ್ಜನರನ್ನು ಎಚ್ಚರಿಸದೆ ಹೋದರೆ ಖಡ್ಗ ಬಿದ್ದು ಆ ಜನರೊಳಗೆ ಯಾವನನ್ನೇ ಆಗಲಿ ನಾಶಮಾಡಿದರೆ, ತನ್ನ ಅಧರ್ಮದಲ್ಲೇ ನಾಶಗೊಂಡ ಆ ಮನುಷ್ಯನ ಮರಣಕ್ಕೆ, ಕಾವಲುಗಾರನೇ ಹೊಣೆ. ಅವನಿಗೆ ನಾನು ಮುಯ್ಯಿ ತೀರಿಸುವೆನು.


ಇದಲ್ಲದೆ, ಸಜ್ಜನನೊಬ್ಬನು ತನ್ನ ಸನ್ನಡತೆಯನ್ನು ಬಿಟ್ಟು ಅಧರ್ಮಮಾಡುವಲ್ಲಿ, ನಾನು ಅವನ ಮುಂದೆ ಒಡ್ಡುವ ಆತಂಕವನ್ನು ಎಡವಿ ಅವನು ಸತ್ತೇ ಸಾಯುವನು; ನೀನು ಅವನನ್ನು ಎಚ್ಚರಿಸದೆಹೋದ ಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಸುಕೃತ್ಯಗಳು ಲೆಕ್ಕಕ್ಕೆಬಾರವು; ಅವನ ಮರಣಕ್ಕೆ ನೀನೆ ಹೊಣೆಯಾಗುವೆ.


ನಾನು ದುಷ್ಟನಿಗೆ, “ನೀನು ಖಂಡಿತವಾಗಿ ಸಾಯುವೆ,” ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆ ಹಾಗು ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆ ಇದ್ದರೆ, ಆ ದುಷ್ಟನು ತನ್ನ ಅಪರಾಧಕ್ಕಾಗಿ ಸಾಯಬೇಕಾಗುವುದು; ಅವನ ಮರಣಕ್ಕೆ ನೀನೆ ಹೊಣೆಯಾಗುವೆ.


ಹೊಣೆಗಾರನಾಗು ನಿನ್ನ ದಾಸನ ಕ್ಷೇಮಕೆ I ಆ ಗರ್ವಿಗಳು ಬಾಧಕರಾಗದಿರಲಿ ನನಗೆ II


ಓ ದೇವರೇ, ನೀನೆ ನನಗೆ ಈಡು ಕೊಡುವವನು ನಿನ್ನನ್ನು ಬಿಟ್ಟರೆ ನನಗಿಲ್ಲ ಒಪ್ಪಂದಮಾಡುವವರಾರು.


ನನ್ನ ಒಡೆಯರೂ ಅರಸರೂ ಆದ ತಾವು ಹಾಗೇ ಮಾಡದೆ, ಸತ್ತು ಪಿತೃಗಳ ಬಳಿಗೆ ಸೇರಿಕೊಂಡರೆ, ನಾನೂ ನನ್ನ ಮಗನೂ ದೋಷಾರೋಪಣೆಗೆ ಗುರಿಯಾಗುತ್ತೇವೆ,” ಎಂದು ಹೇಳಿದಳು.


ಕಾಡುಮೃಗಗಳು ಕೊಂದ ಆಡುಕುರಿಗಳ ಅಳಿದುಳಿಕೆಗಳನ್ನು ನಿಮಗೆ ತಂದುತೋರಿಸದೆ, ನಾನೇ ಈಡು ತೆತ್ತಿದ್ದೇನೆ. ಹಗಲಲ್ಲಾಗಲಿ ರಾತ್ರಿಯಲ್ಲಾಗಲಿ ಕದ್ದುಹೋದ ಜಾನುವಾರುಗಳಿಗೆ ಪರಿಹಾರವನ್ನು ನನ್ನ ಕೈಯಿಂದಲೆ ಕಿತ್ತುಕೊಂಡಿದ್ದೀರಿ.


ನಿಮ್ಮ ರಕ್ತಸುರಿಸಿ ಪ್ರಾಣತೆಗೆಯುವವರೆಗೆ ಮುಯ್ಯಿತೀರಿಸುವೆನು - ಮೃಗವಾಗಿದ್ದರೆ ಅದಕ್ಕೂ, ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿತೀರಿಸುವೆನು.


ಲೋಕಾದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಅಂದರೆ, ಹೇಬೆಲನ ರಕ್ತ ಮೊದಲ್ಗೊಂಡು, ಬಲಿಪೀಠಕ್ಕೂ ದೇವಾಲಯಕ್ಕೂ ನಡುವೆ ಹತನಾದ ಜಕರೀಯನ ರಕ್ತದವರೆಗೂ ಈ ಪೀಳಿಗೆಯವರು ಲೆಕ್ಕಕೊಡಬೇಕಾಗುವುದು.’ ಹೌದು, ಈ ಪೀಳಿಗೆಯವರೇ ಲೆಕ್ಕಕೊಡಬೇಕಾಗುವುದೆಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.


ನಾವು ತಡಮಾಡದೆ ಇದ್ದಿದ್ದರೆ, ಇಷ್ಟರೊಳಗೆ ಎರಡು ಸಾರಿ ಹೋಗಿ ಬರುತ್ತಿದ್ದೆವು,” ಎಂದು ಹೇಳಿದನು.


ಅದಕ್ಕೆ ಆ ತೆಕೋವದ ಸ್ತ್ರೀ, “ಅರಸರೇ, ಒಡೆಯರೇ, ಅಪರಾಧ ನನ್ನ ಮೇಲೆಯೂ ನನ್ನ ಕುಟುಂಬದ ಮೇಲೆಯೂ ಇರಲಿ; ಅರಸರಿಗೂ ಅವರ ಸಿಂಹಾಸನಕ್ಕೂ ದೋಷಹತ್ತದಿರಲಿ,” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು