Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 44:21 - ಕನ್ನಡ ಸತ್ಯವೇದವು C.L. Bible (BSI)

21 ಅದಕ್ಕೆ ತಾವು ಸೇವಕರಾದ ನಮಗೆ, “ನಾನು ಆ ಹುಡುಗನನ್ನು ನೋಡಬೇಕು, ಅವನನ್ನು ನನ್ನ ಬಳಿಗೆ ಕರೆದು ತನ್ನಿ,’ ಎಂದು ಅಪ್ಪಣೆಕೊಟ್ಟಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ಅದಕ್ಕೆ ತಾವು, ‘ನಾನು ಆ ಹುಡುಗನನ್ನು ನೋಡಬೇಕು ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ’ ಎಂದು ಅಪ್ಪಣೆಕೊಡಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅದಕ್ಕೆ ನೀನು ಸೇವಕರಾದ ನಮಗೆ - ನಾನು ಆ ಹುಡುಗನನ್ನು ನೋಡಬೇಕು, ಅವನನ್ನು ನನ್ನ ಬಳಿಗೆ ಕರಕೊಂಡು ಬನ್ನಿರಿ ಎಂದು ಅಪ್ಪಣೆಕೊಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಬಳಿಕ ನೀವು ನಮಗೆ, ‘ಹಾಗಾದರೆ ಆ ಸಹೋದರನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ, ನಾನು ಅವನನ್ನು ನೋಡಬೇಕು’ ಎಂದು ಹೇಳಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಅದಕ್ಕೆ ನೀನು ನಿನ್ನ ದಾಸರಿಗೆ, ‘ನಾನು ಅವನನ್ನು ನೋಡುವ ಹಾಗೆ, ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,’ ಎಂದು ಹೇಳಿದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 44:21
7 ತಿಳಿವುಗಳ ಹೋಲಿಕೆ  

ಇದು ನಿಜವೋ ಸುಳ್ಳೋ ಎಂದು ಗೊತ್ತಾಗಬೇಕಾದರೆ ನೀವು ನಿಮ್ಮ ತಮ್ಮನನ್ನು ಬರಮಾಡಬೇಕು. ಅವನು ಬಂದ ಹೊರತು, ಫರೋಹನ ಜೀವದಾಣೆ, ನೀವು ಇಲ್ಲಿಂದ ಹೊರಟುಹೋಗಕೂಡದು.


ಆದರೆ ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು, ಕರೆದುಕೊಂಡು ಬಂದರೆ, ನಿಮ್ಮ ಮಾತು ಸತ್ಯವೆಂದು ತಿಳಿದುಕೊಳ್ಳುತ್ತೇನೆ, ಆಗ ನೀವು ಸಾಯದೆ ಉಳಿಯುವಿರಿ,” ಎಂದನು. ಅವರು ಹಾಗೆಯೇ ಮಾಡಲು ಒಪ್ಪಿಕೊಂಡರು.


ಶತ್ರುವಶವಾಗಿ ಸೆರೆಗೆ ಹೋಗಿದ್ದರೂ ಅಲ್ಲಿಯೂ ಖಡ್ಗವು ನನ್ನ ಆಜ್ಞಾನುಸಾರ ಅವರನ್ನು ಕೊಲ್ಲುವುದು; ಅವರ ಮೇಲಿಗಾಗಿ ಅಲ್ಲ, ಕೇಡಿಗಾಗಿಯೇ ಅವರ ಮೇಲೆ ಕಣ್ಣಿಡುವೆನು.


ನೋಡು, ನಿನ್ನ ಕೈಗೆ ಹಾಕಿದ್ದ ಬೇಡಿಗಳನ್ನು ಈ ದಿನ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ಮನಸಿದ್ದರೆ ಬಾ. ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ಮನಸ್ಸಿಲ್ಲದಿದ್ದರೆ ಬರಬೇಕಾಗಿಲ್ಲ. ಇಗೋ ದೇಶವೆಲ್ಲ ನಿನ್ನ ಕಣ್ಣೆದುರಿಗಿದೆ. ನಿನಗೆ ಯಾವ ಕಡೆಗೆ ಹೋಗುವುದು ಸರಿಯೆಂದು, ಒಳ್ಳೆಯದೆಂದು ತೋರುತ್ತದೋ ಆ ಕಡೆಗೆ ಹೋಗು,” ಎಂದು ಹೇಳಿದನು.


ಅವರ ಮೇಲೆ ಕನಿಕರ ತೋರಿ ಕಟಾಕ್ಷಿಸಿ ಈ ನಾಡಿಗೆ ಮರಳಿ ಬರಮಾಡುವೆನು. ಅವರನ್ನು ಕಟ್ಟುವೆನು, ಕೆಡುವುದಿಲ್ಲ; ನೆಡುವೆನು, ಕೀಳುವುದಿಲ್ಲ.


ಅನಂತರ ಕಣ್ಣೆತ್ತಿ, ತನ್ನ ಒಡಹುಟ್ಟಿದ ತಮ್ಮನಾದ ಬೆನ್ಯಾಮೀನನನ್ನು ನೋಡಿದನು. “ನೀವು ಹೇಳಿದ ನಿಮ್ಮ ಕಿರಿಯ ತಮ್ಮ ಇವನೇನೋ?” ಎಂದು ಕೇಳಿ ಅವನಿಗೆ, “ಮಗು, ದೇವರ ಪ್ರೀತಿ ನಿನ್ನ ಮೇಲಿರಲಿ!” ಎಂದು ಹೇಳಿದನು.


ನಾವು, ‘ಆ ಹುಡುಗನು ತಂದೆಯನ್ನು ಬಿಟ್ಟು ಅಗಲುವುದಕ್ಕಾಗುವುದಿಲ್ಲ; ಅಗಲಿದರೆ ತಂದೆ ಸತ್ತುಹೋದಾರು,’ ಎಂದು ಒಡೆಯರಾದ ತಮಗೆ ತಿಳಿಸಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು