Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 44:30 - ಕನ್ನಡ ಸತ್ಯವೇದವು C.L. Bible (BSI)

30 "ತಮ್ಮ ಸೇವಕರಾದ ನನ್ನ ತಂದೆಯ ಬಳಿಗೆ ನಾನು ಸೇರಿದಾಗ, ಅವರ ಪ್ರಾಣದ ಪ್ರಾಣವಾಗಿರುವ ಈ ಹುಡುಗ ನನ್ನ ಸಂಗಡ ಇಲ್ಲದೆ ಹೋದರೆ, ಹುಡುಗ ಬರಲಿಲ್ಲವೆಂದು ಅವರು ಕೂಡಲೆ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 “ನಮ್ಮ ತಂದೆಯ ಪ್ರಾಣವು ಇವನ ಪ್ರಾಣವು ಒಂದೇ ಆಗಿರುವುದರಿಂದ ನಾವು ನಿನ್ನ ಸೇವಕನಾದ ನಮ್ಮ ತಂದೆಯ ಬಳಿಗೆ ಹೋದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನಮ್ಮ ತಂದೆಯ ಪ್ರಾಣವೂ ಇವನ ಪ್ರಾಣವೂ ಒಂದೇಯಾಗಿರುವದರಿಂದ ನಾನು ನಿನ್ನ ಸೇವಕನಾದ ನನ್ನ ತಂದೆಯ ಬಳಿಗೆ ಸೇರಿದಾಗ ಈ ಹುಡುಗನು ಸಂಗಡ ಇಲ್ಲದೆ ಹೋದರೆ ಹುಡುಗನು ಬರಲಿಲ್ಲವೆಂದು ಅವನು ತಿಳಿದಕೂಡಲೇ ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನಮ್ಮ ತಂದೆಗಂತೂ ಇವನನ್ನು ಕಂಡರೆ ಪ್ರಾಣಪ್ರೀತಿ. ಆದ್ದರಿಂದ ನಮ್ಮ ಈ ಕಿರಿಯ ತಮ್ಮನಿಲ್ಲದೆ ಹೋದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 “ಹೀಗಿರಲಾಗಿ ನಾನು ನಿನ್ನ ದಾಸನಾದ ನನ್ನ ತಂದೆಯ ಬಳಿಗೆ ಹೋಗುವ ಸಮಯದಲ್ಲಿ ಅವನ ಪ್ರಾಣವು ಹುಡುಗನ ಪ್ರಾಣದಲ್ಲಿ ನೆಟ್ಟಿದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 44:30
8 ತಿಳಿವುಗಳ ಹೋಲಿಕೆ  

ದಾವೀದನ ಮತ್ತು ಸೌಲನ ಸಂಭಾಷಣೆ ಮುಗಿಯಿತು. ಇದಾದ ಕೂಡಲೆ ಯೋನಾತಾನನು ಹಾಗು ದಾವೀದನು ಪ್ರಾಣ ಗೆಳೆಯರಾದರು. ಯೋನಾತಾನನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸತೊಡಗಿದನು.


ಇದನ್ನು ಕೇಳಿದ್ದೇ ಅರಸನ ಎದೆಯೊಡೆಯಿತು. ಅವನು, “ನನ್ನ ಮಗನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು! ಅಬ್ಷಾಲೋಮನೇ, ನನ್ನ ಮಗನೇ ಮಗನೇ,” ಎಂದು ಕೂಗಿ ಗೋಳಿಡುತ್ತಾ ಹೆಬ್ಬಾಗಿಲಿನ ಮೇಲಿದ್ದ ಕೋಣೆಗೆ ಹೋದನು.


ಯಾವನಾದರೂ ನನ್ನ ಒಡೆಯರಾದ ನಿಮ್ಮನ್ನು ಹಿಂಸಿಸಿ ಜೀವತೆಗೆಯಬೇಕೆಂದು ಇರುವಾಗ, ಆ ನಿಮ್ಮ ಜೀವ, ತಮ್ಮ ದೇವರಾದ ಸರ್ವೇಶ್ವರನ ರಕ್ಷಣೆಯಲ್ಲಿರುವ ಜೀವನಿಕ್ಷೇಪದಲ್ಲಿ ಸುಭದ್ರವಾಗಿರಲಿ; ಆದರೆ ನಿಮ್ಮ ಶತ್ರುಗಳ ಜೀವವನ್ನು ಕವಣೆಯ ಕಲ್ಲನ್ನೋ ಎಂಬಂತೆ ಎಸೆದುಬಿಡಲಿ.


ಈ ಹುಡುಗನನ್ನು ಬಿಟ್ಟು ನಾನು ನನ್ನ ತಂದೆಯ ಬಳಿಗೆ ಹೇಗೆ ತಾನೆ ಹೋಗಲಾದೀತು? ತಂದೆಗೆ ಉಂಟಾಗುವ ಮನೋಯಾತನೆಯನ್ನು ನನ್ನಿಂದ ನೋಡಲಾಗದು.”


ಆಗ ತಮ್ಮ ಸೇವಕರಾದ ನಾವು, ತಮ್ಮ ಸೇವಕ ಹಾಗು ನರೆಕೂದಲಿನ ಮುದುಕ ಆದ ನಮ್ಮ ತಂದೆ ಸಂಕಟದಿಂದಲೆ ಸಮಾಧಿ ಸೇರಲು ಕಾರಣರಾಗುತ್ತೇವೆ.


ಜೋಸೆಫನು, “ಹಾಗೆ ಎಂದಿಗೂ ಆಗಬಾರದು; ಆ ಪಾತ್ರೆ ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರ ನನಗೆ ಗುಲಾಮನಾಗಬೇಕು; ನೀವಾದರೋ ಅಡ್ಡಿಯಿಲ್ಲದೆ ನಿಮ್ಮ ತಂದೆಯ ಬಳಿಗೆ ಹೋಗಬಹುದು,” ಎಂದನು.


ನಾವು ‘ತಂದೆ ಇದ್ದಾರೆ, ಅವರು ಮುದುಕ; ಮುಪ್ಪಿನಲ್ಲಿ ಅವರಿಗೆ ಹುಟ್ಟಿದ ಒಬ್ಬ ಚಿಕ್ಕ ಹುಡುಗ ಇದ್ದಾನೆ. ಅವನ ಒಡಹುಟ್ಟಿದವನು ಸತ್ತುಹೋದ. ಅವನ ತಾಯಿಯ ಹೊಟ್ಟೆಯಲ್ಲಿ ಹುಟ್ಟಿದವರಲ್ಲಿ ಅವನೊಬ್ಬನೇ ಉಳಿದಿದ್ದಾನೆ. ಅವನ ಮೇಲೆ ತಂದೆಗೆ ಅಪಾರ ಪ್ರೀತಿ,’ ಎಂದು ಹೇಳಿದೆವು.


ನಾವು, ‘ಆ ಹುಡುಗನು ತಂದೆಯನ್ನು ಬಿಟ್ಟು ಅಗಲುವುದಕ್ಕಾಗುವುದಿಲ್ಲ; ಅಗಲಿದರೆ ತಂದೆ ಸತ್ತುಹೋದಾರು,’ ಎಂದು ಒಡೆಯರಾದ ತಮಗೆ ತಿಳಿಸಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು