Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 44:34 - ಕನ್ನಡ ಸತ್ಯವೇದವು C.L. Bible (BSI)

34 ಈ ಹುಡುಗನನ್ನು ಬಿಟ್ಟು ನಾನು ನನ್ನ ತಂದೆಯ ಬಳಿಗೆ ಹೇಗೆ ತಾನೆ ಹೋಗಲಾದೀತು? ತಂದೆಗೆ ಉಂಟಾಗುವ ಮನೋಯಾತನೆಯನ್ನು ನನ್ನಿಂದ ನೋಡಲಾಗದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಈ ಹುಡುಗನನ್ನು ಬಿಟ್ಟು ನಾನು ನನ್ನ ತಂದೆಯ ಬಳಿಗೆ ಹೇಗೆ ಹೋಗಲಿ? ಹೋದರೆ, ನನ್ನ ತಂದೆಗೆ ಆಗುವ ಆಘಾತ, ದುಃಖ ನನ್ನಿಂದ ನೋಡಲಾಗದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಈ ಹುಡುಗನನ್ನು ಬಿಟ್ಟು ನಾನು ನನ್ನ ತಂದೆಯ ಬಳಿಗೆ ಹೇಗೆ ಹೋಗುವದಕ್ಕಾದೀತು? ತಂದೆಗೆ ಮಹಾ ಶೋಕವುಂಟಾಗುವದನ್ನು ನಾನು ನೋಡಕೂಡದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ನನ್ನ ಜೊತೆಯಲ್ಲಿ ಈ ಹುಡುಗನಿಲ್ಲದೆ ನಾನು ನನ್ನ ತಂದೆಯ ಬಳಿಗೆ ಹಿಂತಿರುಗಿ ಹೋಗಲು ಸಾಧ್ಯವಿಲ್ಲ. ನಮ್ಮ ತಂದೆಗೆ ಸಂಭವಿಸುವುದನ್ನು ನೋಡಲು ನನಗೆ ತುಂಬ ಭಯವಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಹುಡುಗನು ನನ್ನ ಬಳಿಯಲ್ಲಿರದೆ, ನಾನು ಹೇಗೆ ನನ್ನ ತಂದೆಯ ಬಳಿಗೆ ಹೋಗಲಿ? ಹೋದರೆ ನನ್ನ ತಂದೆಗೆ ಬರುವ ಕೇಡನ್ನು ನಾನು ನೋಡಬೇಕಾದೀತು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 44:34
10 ತಿಳಿವುಗಳ ಹೋಲಿಕೆ  

ನನ್ನ ಜನರಿಗೆ ಕೇಡು ಸಂಭವಿಸುವುದನ್ನು ಕಣ್ಣಾರೆ ಕಂಡು ನಾನು ಹೇಗೆ ತಾನೆ ಸಹಿಸಲಿ? ನನ್ನ ಕುಲನಾಶವನ್ನು ಕಂಡು ಸುಮ್ಮನಿರುವುದಾದರೂ ಹೇಗೆ?” ಎಂದು ಬಿನ್ನವಿಸಿದಳು.


ಎರಗಿವೆಯಾದರೂ ಕಷ್ಟ ಸಂಕಟಗಳು I ನನಗಾನಂದಾಯಕ ನಿನ್ನ ಆಜ್ಞೆಗಳು II


ಸುತ್ತುಕೊಂಡಿದ್ದವೆನ್ನನು ಮೃತ್ಯುಪಾಶಗಳು I ಬಿಗಿಹಿಡಿದಿದ್ದವು ಪಾತಾಳ ವೇದನೆಗಳು I ಬಂದೊದಗಿದ್ದವೆನಗೆ ಕಷ್ಟಸಂಕಟಗಳು II


ನನ್ನ ವೈರಿಗೆ ಕೇಡುಬಂದಾಗ ನಾನು ಹಿಗ್ಗಿದೆನೋ? ಅವನ ವಿನಾಶಕ್ಕಾಗಿ ನಾನು ಸಂತೋಷಪಟ್ಟೆನೋ?


ನಾನು ನಾಡಿನ ಮೇಲೂ ಇದರ ನಿವಾಸಿಗಳ ಮೇಲೂ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮೃತಿಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು,’ ಎಂಬುದಾಗಿ ತಿಳಿಸಿರಿ,” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.


ಸರ್ವೇಶ್ವರ ಸ್ವಾಮಿ ಇಸ್ರಯೇಲರ ಪರವಾಗಿ ಫರೋಹನಿಗೂ ಈಜಿಪ್ಟಿನವರಿಗೂ ಮಾಡಿದ್ದೆಲ್ಲವನ್ನೂ ಮತ್ತು ದಾರಿಯಲ್ಲಿ ತಮಗುಂಟಾದ ಎಲ್ಲ ಕಷ್ಟದುಃಖಗಳನ್ನು ಹಾಗು ಸರ್ವೇಶ್ವರ ಹೇಗೆ ಅವುಗಳಿಂದ ಕಾಪಾಡಿದರೆಂಬುದನ್ನು ಮೋಶೆ ತನ್ನ ಮಾವನಿಗೆ ವಿವರಿಸಿದನು.


ಆದುದರಿಂದ ತಮ್ಮಲ್ಲಿ ನಾನು ಮಾಡುವ ಪ್ರಾರ್ಥನೆ ಇದು; ಈ ಹುಡುಗನಿಗೆ ಬದಲಾಗಿ, ತಮ್ಮ ಸೇವಕನಾದ ನನ್ನನ್ನು ತಮ್ಮ ಗುಲಾಮನನ್ನಾಗಿ ಇರಿಸಿಕೊಳ್ಳಿ; ಇವನು ತನ್ನ ಅಣ್ಣಂದಿರ ಸಂಗಡ ಹೋಗುವಂತೆ ಅನುಗ್ರಹಿಸಿ.


ಇದನ್ನು ಕೇಳಿದ ಮೇಲೆ ತನ್ನ ಪರಿವಾರದವರ ಮುಂದೆ, ತನ್ನನ್ನೇ ಇನ್ನು ತಡೆಹಿಡಿದುಕೊಳ್ಳಲು ಜೋಸೆಫನಿಂದ ಆಗಲಿಲ್ಲ. “ಇಲ್ಲಿಂದ ಎಲ್ಲರನ್ನು ಆಚೆ ಕಳಿಸಿರಿ,” ಎಂದು ಬಾಯ್ತೆರೆದು ಹೇಳಿದ. ಜೋಸೆಫನ ಅಣ್ಣತಮ್ಮಂದಿರಿಗೆ ತನ್ನ ಪರಿಚಯ ಸಿಗುವಂತೆ ಮಾಡುವಾಗ ಇತರರು ಯಾರೂ ಹತ್ತಿರ ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು