Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 45:1 - ಕನ್ನಡ ಸತ್ಯವೇದವು C.L. Bible (BSI)

1 ಇದನ್ನು ಕೇಳಿದ ಮೇಲೆ ತನ್ನ ಪರಿವಾರದವರ ಮುಂದೆ, ತನ್ನನ್ನೇ ಇನ್ನು ತಡೆಹಿಡಿದುಕೊಳ್ಳಲು ಜೋಸೆಫನಿಂದ ಆಗಲಿಲ್ಲ. “ಇಲ್ಲಿಂದ ಎಲ್ಲರನ್ನು ಆಚೆ ಕಳಿಸಿರಿ,” ಎಂದು ಬಾಯ್ತೆರೆದು ಹೇಳಿದ. ಜೋಸೆಫನ ಅಣ್ಣತಮ್ಮಂದಿರಿಗೆ ತನ್ನ ಪರಿಚಯ ಸಿಗುವಂತೆ ಮಾಡುವಾಗ ಇತರರು ಯಾರೂ ಹತ್ತಿರ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೋಸೇಫನು ಇದನ್ನು ಕೇಳಿ ತನ್ನ ಎದುರಿನಲ್ಲಿ ನಿಂತಿದ್ದವರ ಮುಂದೆ ದುಃಖವನ್ನು ತಾಳಲಾರದೆ, “ಎಲ್ಲರನ್ನು ನನ್ನ ಬಳಿಯಿಂದ ಹೊರಗೆ ಕಳುಹಿಸಿರಿ” ಎಂದು ಕೂಗಿದನು. ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ ತನ್ನ ಗುರುತು ಸಿಕ್ಕುವಂತೆ ಮಾಡುವ ವೇಳೆಯಲ್ಲಿ ಬೇರೆ ಯಾರೂ ಹತ್ತಿರ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೋಸೇಫನು ಇದನ್ನು ಕೇಳಿ ತನ್ನ ಎದುರಿನಲ್ಲಿದ್ದವರ ಮುಂದೆ ತಾಳಲಾರದೆ - ನನ್ನ ಬಳಿಯಿಂದ ಎಲ್ಲರನ್ನೂ ಆಚೆಗೆ ಕಳುಹಿಸಿರಿ ಎಂದು ಬಾಯಿಬಿಟ್ಟು ಹೇಳಿದನು. ಯೋಸೇಫನು ಅಣ್ಣತಮ್ಮಂದಿರಿಗೆ ತನ್ನ ಗುರುತು ಸಿಕ್ಕುವಂತೆ ಮಾಡುವ ವೇಳೆಯಲ್ಲಿ ಇತರರು ಯಾರೂ ಹತ್ತರ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೋಸೇಫನು ಇದನ್ನು ಕೇಳಿ ತನ್ನ ಎದುರಿನಲ್ಲಿದ್ದವರ ಮುಂದೆ ತಾಳಿಕೊಳ್ಳಲಾರದೆ, “ಇಲ್ಲಿರುವ ಎಲ್ಲರನ್ನೂ ಹೊರಗೆ ಕಳುಹಿಸಿರಿ” ಎಂದು ಅಪ್ಪಣೆಕೊಟ್ಟನು. ಅಲ್ಲಿದ್ದವರು ಹೊರಗೆ ಹೋದರು; ಸಹೋದರರು ಮಾತ್ರ ಯೋಸೇಫನೊಡನೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಯೋಸೇಫನು ತನ್ನ ಸುತ್ತಲೂ ನಿಂತಿದ್ದವರ ಮುಂದೆ ಮನಸ್ಸನ್ನು ಬಿಗಿಹಿಡಿದುಕೊಳ್ಳಲು ಆಗಲಿಲ್ಲ. “ಎಲ್ಲರನ್ನೂ ತನ್ನ ಬಳಿಯಿಂದ ಹೊರಗೆ ಹೋಗುವಂತೆ ಮಾಡಿರಿ,” ಎಂದು ಕೂಗಿದನು. ಯೋಸೇಫನು ತನ್ನ ಸಹೋದರರಿಗೆ ತನ್ನನ್ನು ಪರಿಚಯಿಸಿಕೊಳ್ಳಲು ಹೋದಾಗ, ಅಲ್ಲಿ ಬೇರೆ ಯಾರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 45:1
12 ತಿಳಿವುಗಳ ಹೋಲಿಕೆ  

“ನಿನ್ನ ಸೋದರನು ನಿನಗೆ ಅಪರಾಧಮಾಡಿದರೆ, ನೀನು ಹೋಗಿ ನೀವಿಬ್ಬರೇ ಇರುವಾಗ, ಅವನ ತಪ್ಪನ್ನು ಮನಗಾಣಿಸು. ಅವನು ನಿನಗೆ ಕಿವಿಗೊಟ್ಟರೆ ಅವನ ಸೋದರತ್ವವನ್ನು ನೀನು ಮತ್ತೆ ಗಳಿಸಿಕೊಂಡಂತಾಗುವುದು.


ಅವರು ಕಾಣಿಸಿಕೊಂಡದ್ದು ಎಲ್ಲಾ ಜನರಿಗೆ ಅಲ್ಲ; ದೇವರಿಂದ ಸಾಕ್ಷಿಗಳಾಗಿ ಆಯ್ಕೆಯಾಗಿದ್ದ ನಮಗೆ. ಅವರು ಪುನರುತ್ಥಾನ ಹೊಂದಿದ ನಂತರ ಅವರೊಡನೆಯೇ ಊಟಮಾಡಿದವರು ನಾವು.


‘ಸರ್ವೇಶ್ವರನ ವಿಷಯವನ್ನು ಪ್ರಕಟಿಸೆನು, ಅವರ ಹೆಸರಿನಲ್ಲಿ ಇನ್ನು ಮಾತಾಡೆನು’ ಎಂದುಕೊಂಡೆನಾದರೆ ನನ್ನ ಹೃದಯದೊಳು ಸಂಕಟ ಉಂಟಾಗುತ್ತದೆ. ಸುಡುಬೆಂಕಿ ನನ್ನೆಲುಬುಗಳಲ್ಲಿ ಅಡಗಿದೆಯೋ ಎಂಬಂತೆ ಅದನ್ನು ತಡೆತಡೆದು ದಣಿದಿರುವೆ, ಇನ್ನು ಸಹಿಸಲಾಗದಿದೆ.


ನನ್ನನ್ನೇ ತಡೆಹಿಡಿದೆನು : ಆದರೀಗ ಸಮಯ ಬಂದಿಹುದು; ಪ್ರಸವವೇದನೆಯನು ಅನುಭವಿಸುವ ಸ್ತ್ರೀಯಂತೆ ಅಬ್ಬರಿಸುವೆನು


ಸಾರಬೇಡಿ ಈ ಸುದ್ದಿಯನು ‘ಗತ್’ ಊರಿನಲಿ ಘೋಷಿಸಬೇಡಿ ಅಷ್ಕೆಲೋನಿನ ಬೀದಿಗಳಲಿ. ಏಕೆನೆ, ಉಲ್ಲಾಸಿಸಿಯಾರು ಆ ಫಿಲಿಷ್ಟಿಯ ಮಹಿಳೆಯರು; ಜಯಘೋಷ ಮಾಡಿಯಾರು ಸುನ್ನತಿಯಿಲ್ಲದವರಾ ಸ್ತ್ರೀಯರು!


ಎರಡನೆಯ ಬಾರಿ ಅವರು ಬಂದಾಗ ಜೋಸೆಫನು ತನ್ನ ಗುರುತನ್ನು ಸಹೋದರರಿಗೆ ತಿಳಿಸಿದನು. ಆಗ ಫರೋಹನಿಗೆ ಜೋಸೆಫನ ವಂಶದ ಪರಿಚಯವಾಯಿತು.


ಈ ಹುಡುಗನನ್ನು ಬಿಟ್ಟು ನಾನು ನನ್ನ ತಂದೆಯ ಬಳಿಗೆ ಹೇಗೆ ತಾನೆ ಹೋಗಲಾದೀತು? ತಂದೆಗೆ ಉಂಟಾಗುವ ಮನೋಯಾತನೆಯನ್ನು ನನ್ನಿಂದ ನೋಡಲಾಗದು.”


ಅನಂತರ ಆಕೆ ಅವುಗಳನ್ನು ಬಾಣಲಿಯಿಂದ ತೆಗೆದು ಅವನ ಮುಂದಿಟ್ಟಳು. ಅವನು ಊಟಮಾಡದೆ ಎಲ್ಲಾ ಜನರನ್ನು ತನ್ನ ಬಳಿಯಿಂದ ಹೊರಡಿಸಬೇಕೆಂದು ಅಪ್ಪಣೆ ಮಾಡಿದನು.


ಜೋಸೆಫನಾದರೋ ಅವರ ಬಳಿಯಿಂದ ಮರೆಯಾಗಿ ಹೋಗಿ ಕಣ್ಣೀರು ಸುರಿಸಿದ. ತರುವಾಯ ಅವರ ಬಳಿಗೆ ಬಂದು, ಸಂಭಾಷಣೆ ಮುಂದುವರೆಸಿ, ಸಿಮೆಯೋನನನ್ನು ಆರಿಸಿ, ಅವರ ಕಣ್ಣೆದುರಿನಲ್ಲೇ ಅವನಿಗೆ ಬೇಡಿಹಾಕಿಸಿದ.


“ದಾವೀದನ ವಂಶಜರಲ್ಲೂ ಜೆರುಸಲೇಮಿನ ನಿವಾಸಿಗಳ ಮನದಲ್ಲೂ ಕರುಣಿಸುವ ಹಾಗೂ ಪ್ರಾರ್ಥಿಸುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನೇ ಅವರು ಆಗ ದಿಟ್ಟಿಸಿ ನೋಡುವರು. ಏಕೈಕ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಕಾಲವಾದ ಜ್ಯೇಷ್ಠ ಪುತ್ರನಿಗಾಗಿ ಎಂಬಂತೆ ಅತ್ತು ಪ್ರಲಾಪಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು