Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 45:20 - ಕನ್ನಡ ಸತ್ಯವೇದವು C.L. Bible (BSI)

20 ಆಸ್ತಿಪಾಸ್ತಿಗಳ ವಿಷಯದಲ್ಲಿ ನೀವು ಚಿಂತಿಸಬೇಕಾಗಿಲ್ಲ. ಈಜಿಪ್ಟ್ ದೇಶದ ಅತ್ಯುತ್ತಮವಾದುವುಗಳು ನಿಮ್ಮದಾಗುವುವು'."

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಿಮ್ಮ ಸಾಮಗ್ರಿಗಳಿಗಾಗಿ ಚಿಂತಿಸಬೇಡಿರಿ. ಐಗುಪ್ತ ದೇಶದಲ್ಲೆಲ್ಲಾ ಇರುವ ಉತ್ತಮ ವಸ್ತುಗಳು ನಿಮ್ಮದೇ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಐಗುಪ್ತದೇಶದಲ್ಲೆಲ್ಲಾ ಇರುವ ಉತ್ತಮ ವಸ್ತುಗಳು ನಿಮ್ಮ ಪಾಲಿಗೆ ಬಂದದರಿಂದ ನಿಮಗಿರುವ ಸೊತ್ತಿನ ವಿಷಯ ಚಿಂತೆಪಡಬೇಕಾದ ಅವಶ್ಯವಿಲ್ಲ ಎಂಬದೇ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅವರ ಸ್ವತ್ತುಗಳ ಬಗ್ಗೆ ಚಿಂತಿಸುವುದು ಬೇಡ; ಈಜಿಪ್ಟಿನಲ್ಲಿ ನಮಗಿರುವ ಉತ್ತಮವಾದವುಗಳನ್ನು ಅವರಿಗೆ ಕೊಡೋಣ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಿಮ್ಮ ಸಾಮಗ್ರಿಗಳಿಗಾಗಿ ಚಿಂತಿಸಬೇಡಿರಿ. ಈಜಿಪ್ಟ್ ದೇಶದಲ್ಲಿರುವ ಉತ್ತಮವಾದದ್ದೆಲ್ಲಾ ನಿಮ್ಮದೇ,’ ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 45:20
23 ತಿಳಿವುಗಳ ಹೋಲಿಕೆ  

ನೀವು ಮನಃಪೂರ್ವಕವಾಗಿ ನನಗೆ ವಿಧೇಯರಾದರೆ ಈ ನಾಡಿನ ಸತ್ಫಲವನ್ನು ಸವಿಯುವಿರಿ.


“ಆ ದಿನದಲ್ಲಿ ಮಾಳಿಗೆಯ ಮೇಲಿರುವವನು ಮನೆಯಲ್ಲಿರುವ ಸರಕುಸಾಮಗ್ರಿಗಳನ್ನು ತೆಗೆದುಕೊಳ್ಳಲು ಕೆಳಗಿಳಿಯದಿರಲಿ. ಅಂತೆಯೇ, ಹೊಲದಲ್ಲಿರುವವನು ಮನೆಗೆ ಹಿಂದಿರುಗದಿರಲಿ.


“ಆದರೂ ನಾನು ಅವರನ್ನು ನಾಶಮಾಡಲಿಲ್ಲ; ನನ್ನ ಕಟಾಕ್ಷವು ಅವರನ್ನು ಉಳಿಸಿತು; ನಾನು ಅವರನ್ನು ಮರುಭೂಮಿಯಲ್ಲಿ ನಿರ್ಮೂಲಮಾಡಲಿಲ್ಲ.


ಮಿಕ್ಕವರಿಗೆ, “ನೀವು ಪಟ್ಟಣದಲ್ಲೆಲ್ಲಾ ಇವನ ಹಿಂದೆ ಸಂಚರಿಸುತ್ತಾ ಹತಿಸಿರಿ; ಯಾರನ್ನೂ ಕಟಾಕ್ಷಿಸದಿರಿ, ಉಳಿಸದಿರಿ;


ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು. ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವುವು; ಸರ್ವೇಶ್ವರನಾದ ನಾನು ದಂಡಿಸುವವನು ಎಂಬುದು ನಿನಗೆ ಚೆನ್ನಾಗಿ ಗೊತ್ತಾಗುವುದು.


ನಿನ್ನನ್ನು ಕಟಾಕ್ಷಿಸೆನು, ಉಳಿಸೆನು; ನಿನ್ನ ದುರ್ಮಾರ್ಗದ ಫಲವನ್ನು ನಿನಗೆ ತಿನ್ನಿಸುವೆನು; ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವುವು; ಆಗ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು.”


ಇವರ ಬಿಲ್ಲುಗಳು ಯುವಜನರನ್ನು ಚೂರುಚೂರು ಮಾಡುವುವು; ಇವರು ಕರುಳ ಕುಡಿಗಳನ್ನೂ ಕನಿಕರಿಸರು; ಮಕ್ಕಳುಮರಿಗಳನ್ನೂ ಕರುಣಿಸದು ಇವರ ಕಣ್ಣು.


ಹೀಗಿರಲಾಗಿ, ನೀವು ನಿಮ್ಮ ಹೆಣ್ಣುಮಕ್ಕಳನ್ನು ಅವರ ಗಂಡುಮಕ್ಕಳಿಗೆ ಕೊಡಲೂಬಾರದು, ನಿಮ್ಮ ಗಂಡುಮಕ್ಕಳಿಗಾಗಿ ಅವರ ಹೆಣ್ಣುಮಕ್ಕಳನ್ನು ತೆಗೆದುಕೊಳ್ಳಲೂಬಾರದು. ಅವರಿಗೆ ಸುಖಕ್ಷೇಮಗಳನ್ನು ಎಂದಿಗೂ ಬಯಸಬಾರದು. ಈ ಪ್ರಕಾರ ನಡೆದರೆ, ನೀವು ಬಲಗೊಂಡು, ಆ ನಾಡಿನ ಸಮೃದ್ಧಿಯನ್ನು ಅನುಭವಿಸಿ ಅದನ್ನು ನಿಮ್ಮ ಸಂತಾನದವರಿಗೆ ಶಾಶ್ವತ ಸೊತ್ತನ್ನಾಗಿ ಬಿಡುವಿರಿ’ ಎಂದು ಹೇಳಿದಿರಲ್ಲವೆ?


ಈ ವಿಷಯದಲ್ಲಿ ನಿಮ್ಮ ಮಾತನ್ನು ಯಾರೂ ಕೇಳಬಾರದು. ಯುದ್ಧಮಾಡಿದವನಿಗೆ ಸಿಕ್ಕುವಷ್ಟು ಪಾಲು ಸಾಧನಸಾಮಗ್ರಿಗಳನ್ನು ಕಾಯ್ದವನಿಗೂ ಸಿಕ್ಕಬೇಕು. ಉಭಯತ್ರರಿಗೂ ಸಮಪಾಲಾಗಬೇಕು,” ಎಂದು ಉತ್ತರಕೊಟ್ಟನು.


ಆಗ ದಾವೀದನು ತನ್ನ ಜನರಿಗೆ, “ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿ,” ಎಂದು ಆಜ್ಞಾಪಿಸಿದನು; ಅವರೆಲ್ಲರೂ ಕಟ್ಟಿಕೊಂಡರು. ದಾವೀದನೂ ಕಟ್ಟಿಕೊಂಡನು. ಹೆಚ್ಚುಕಡಿಮೆ ನಾನೂರುಮಂದಿ ದಾವೀದನ ಜೊತೆಯಲ್ಲಿ ಹೋದರು; ಇನ್ನೂರುಮಂದಿ ಸಾಮಾಗ್ರಿಗಳನ್ನು ಕಾಯುತ್ತಾ ಅಲ್ಲೇ ಇದ್ದರು.


ಅವರು, “ಆ ವ್ಯಕ್ತಿ ಇಲ್ಲಿಗೆ ಬರುವನೋ?” ಎಂದು ಸರ್ವೇಶ್ವರನನ್ನು ವಿಚಾರಿಸಿದಾಗ, “ಬಂದಿದ್ದಾನೆ; ಇಗೋ, ಸರಕು ಸಾಮಾನುಗಳ ನಡುವೆ ಅಡಗಿಕೊಂಡಿದ್ದಾನೆ,” ಎಂದು ಉತ್ತರ ಬಂದಿತು.


ಇಸ್ರಯೇಲರು ನನ್ನ ಕಟ್ಟಳೆಯನ್ನು ಮೀರಿ ಪಾಪಿಷ್ಠರಾಗಿದ್ದಾರೆ. ಮೀಸಲಾದ ವಸ್ತುಗಳನ್ನು ತೆಗೆದುಕೊಂಡು ಕಳ್ಳರಾಗಿದ್ದಾರೆ. ಅವುಗಳನ್ನು ತಮ್ಮ ಸಲಕರಣೆಗಳಲ್ಲಿ ಬಚ್ಚಿಟ್ಟುಕೊಂಡು ವಂಚಕರಾಗಿದ್ದಾರೆ.


ನೀವು ಅಂಥವರನ್ನು ಕನಿಕರಿಸಬಾರದು; ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನು, ಕಣ್ಣಿಗೆ ಪ್ರತಿಯಾಗಿ ಕಣ್ನನ್ನು, ಹಲ್ಲಿಗೆ ಪ್ರತಿಯಾಗಿ ಹಲ್ಲನ್ನು, ಕೈಗೆ ಪ್ರತಿಯಾಗಿ ಕೈಯನ್ನು, ಕಾಲಿಗೆ ಪ್ರತಿಯಾಗಿ ಕಾಲನ್ನು ಅವನಿಂದ ತೆಗೆದುಬಿಡಬೇಕು.


ನೀವು ಅವನನ್ನು ಕನಿಕರಿಸಬಾರದು. ನಿಮಗೆ ಶುಭವುಂಟಾಗುವಂತೆ ನಿರಪರಾಧಿಯ ಪ್ರಾಣವನ್ನು ತೆಗೆದವನು ಇಸ್ರಯೇಲರಲ್ಲಿ ಉಳಿಯದಂತೆ ಮಾಡಬೇಕು.


ನಿಮ್ಮ ದೇವರಾದ ಸರ್ವೇಶ್ವರಾ, ನಿಮ್ಮಿಂದ ಪರಾಜಯಪಡಿಸುವ ಜನರುಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮಗೆ ಉರುಲಾಗುವುವು.


“ಒಬ್ಬನು ಹಣವನ್ನಾಗಲಿ, ಒಡವೆಗಳನ್ನಾಗಲಿ ಸುರಕ್ಷಿತವಾಗಿಡಲು ಮತ್ತೊಬ್ಬನಿಗೆ ಒಪ್ಪಿಸಿದಾಗ ಅದು ಆ ವ್ಯಕ್ತಿಯ ಮನೆಯಲ್ಲಿ ಕಳುವಾಗಿ ಹೋದರೆ ಕಳ್ಳನು ಸಿಕ್ಕಿಕೊಂಡರೆ, ಎರಡರಷ್ಟು ದಂಡ ಕೊಡಬೇಕು.


ನಿಮ್ಮ ತಂದೆಯನ್ನೂ ಕುಟುಂಬದವರನ್ನೂ ನನ್ನ ಬಳಿಗೆ ಕರೆದುಕೊಂಡು ಬರತಕ್ಕದ್ದು. ಈಜಿಪ್ಟ್ ದೇಶದಲ್ಲಿ ನಿಮಗೆ ಅತ್ಯುತ್ತಮವಾದ ಭೂಮಿಯನ್ನು ಕೊಡುವೆನು. ನೀವು ಈ ದೇಶದ ಸುಖಸಂಪತ್ತನ್ನು ಅನುಭವಿಸಬಹುದು.”


ಮಾಳಿಗೆಯ ಮೇಲಿರುವವನು ಇಳಿದು ಮನೆಯಿಂದ ಏನನ್ನೂ ತೆಗೆದುಕೊಳ್ಳದೆ ಓಡಿಹೋಗಲಿ.


ಅದೂ ಅಲ್ಲದೆ, “ಇಗೋ, ನನ್ನ ನಾಡು ನಿನಗೆ ತೆರೆದಿದೆ; ಇಷ್ಟಬಂದ ಕಡೆ ಹೋಗಿ ವಾಸಮಾಡು,” ಎಂದನು.


ನಿನ್ನ ಸಹೋದರರಿಗೆ ಈ ಆಜ್ಞೆಯನ್ನೂ ತಿಳಿಸು: ‘ನೀವು ನಿಮ್ಮ ಮಡದಿ ಮಕ್ಕಳನ್ನು ಕರೆದುತರಲು ಈಜಿಪ್ಟ್ ದೇಶದ ಬಂಡಿಗಳನ್ನು ತೆಗೆದುಕೊಂಡುಹೋಗಿರಿ: ನಿಮ್ಮ ತಂದೆಯನ್ನು ತಂದು ಸೇರಿಸಿರಿ.


ಯಕೋಬನ ಮಕ್ಕಳು ಅದೇ ಮೇರೆಗೆ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಜೋಸೆಫನು ಅವರಿಗೆ ಬಂಡಿಗಳನ್ನೂ ಮಾರ್ಗಕ್ಕೆ ಬೇಕಾದ ಆಹಾರವನ್ನೂ ಕೊಡಿಸಿದನು.


ಈಜಿಪ್ಟ್ ದೇಶವು ನಿನ್ನ ಮುಂದಿದೆ; ಅದರಲ್ಲಿನ ಉತ್ತಮ ಭಾಗವನ್ನು ನಿನ್ನ ತಂದೆಗೂ ಸಹೋದರರಿಗೂ ವಾಸಸ್ಥಾನವಾಗಿ ನೇಮಿಸು; ಗೋಷೆನ್ ಪ್ರಾಂತ್ಯದಲ್ಲಿ ಬೇಕಾದರೆ ವಾಸಮಾಡಲಿ; ಅವರಲ್ಲಿ ನುರಿತವರು ಯಾರಾದರು ಇದ್ದರೆ ಅವರನ್ನು ನನ್ನ ದನಕರುಗಳ ಮೇಲ್ವಿಚಾರಣೆಗೆ ನೇಮಿಸು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು