Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 45:26 - ಕನ್ನಡ ಸತ್ಯವೇದವು C.L. Bible (BSI)

26 ತಂದೆ ಯಕೋಬನ ಬಳಿಗೆ ಬಂದು, “ಜೋಸೆಫನು ಇನ್ನೂ ಜೀವದಿಂದಿದ್ದಾನೆ; ಅವನೇ ಈಜಿಪ್ಟ್ ದೇಶದ ಪ್ರಧಾನಮಂತ್ರಿ” ಎಂದು ಅರುಹಿದರು. ಅವನು ಅದನ್ನು ಕೇಳಿ ಸ್ತಬ್ಧನಾದ; ಅವರನ್ನು ನಂಬಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವನಿಗೆ, “ಯೋಸೇಫನು ಇನ್ನೂ ಜೀವದಿಂದ ಇದ್ದಾನೆ ಅವನು ಐಗುಪ್ತ ದೇಶದ ಸರ್ವಾಧಿಕಾರಿಯಾಗಿದ್ದಾನೆ” ಎಂದು ತಿಳಿಸಲು, ಅವನು ಆಶ್ಚರ್ಯಪಟ್ಟು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಯೋಸೇಫನು ಇನ್ನೂ ಜೀವದಿಂದಿದ್ದಾನೆ; ಅವನು ಐಗುಪ್ತದೇಶದ ಸರ್ವಾಧಿಕಾರಿಯಾಗಿದ್ದಾನೆ ಎಂದು ತಿಳಿಸಲು ಅವನು ಸ್ತಬ್ಧನಾಗಿ ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಸಹೋದರರು ತಮ್ಮ ತಂದೆಗೆ, “ಅಪ್ಪಾ, ಯೋಸೇಫನು ಇನ್ನೂ ಬದುಕಿದ್ದಾನೆ; ಅವನು ಈಜಿಪ್ಟ್ ದೇಶಕ್ಕೆಲ್ಲಾ ರಾಜ್ಯಪಾಲನಾಗಿದ್ದಾನೆ” ಎಂದು ಹೇಳಿದರು. ಅವರ ತಂದೆಗೆ ಆಶ್ಚರ್ಯವಾಯಿತು. ಆತನು ಅವರನ್ನು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ಯೋಸೇಫನು ಇನ್ನೂ ಜೀವದಿಂದ ಇದ್ದಾನೆ! ಅವನೇ ಈಜಿಪ್ಟ್ ದೇಶವನ್ನೆಲ್ಲಾ ಆಳುತ್ತಿದ್ದಾನೆ,” ಎಂದು ಅವನಿಗೆ ತಿಳಿಸಿದಾಗ, ಅವನು ಆಶ್ಚರ್ಯಪಟ್ಟನು, ಅವರನ್ನು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 45:26
17 ತಿಳಿವುಗಳ ಹೋಲಿಕೆ  

ಅವರಲ್ಲಿ ಒಬ್ಬನು ನನ್ನನ್ನು ಬಿಟ್ಟು ಹೊರಟುಹೋದ; ಅವನು ನಿಸ್ಸಂದೇಹವಾಗಿ ಕಾಡುಮೃಗದಿಂದ ಸೀಳಿಹಾಕಲ್ಪಟ್ಟಿರಬೇಕು ಎಂದು ತಿಳಿದುಕೊಂಡೆ; ಅಂದಿನಿಂದ ಅವನನ್ನು ನಾನು ಕಂಡಿಲ್ಲ.


ದುಃಖಶಮನಮಾಡಲು ಪುತ್ರಪುತ್ರಿಯರೆಲ್ಲರು ಎಷ್ಟು ಪ್ರಯತ್ನಿಸಿದರೂ ಅವನು ಸಾಂತ್ವನಗೊಳ್ಳಲಿಲ್ಲ; "ನಾನು ಹೀಗೆಯೇ ಹಂಬಲಿಸುತ್ತಾ ನನ್ನ ಮಗನಿರುವ ಮೃತ್ಯುಲೋಕವನ್ನು ಸೇರುತ್ತೇನೆ,” ಎಂದು ಮಗನಿಗಾಗಿ ದುಃಖಿಸುತ್ತಲೇ ಇದ್ದ.


ಶಿಷ್ಯರು ಇನ್ನೂ ನಂಬದೆ, ಆನಂದಾಶ್ಚರ್ಯಭರಿತರಾಗಿದ್ದರು. ಆಗ ಯೇಸು, “ನಿಮ್ಮಲ್ಲಿ ತಿನ್ನಲು ಏನಾದರೂ ಇದೆಯೇ?’ ಎಂದು ಕೇಳಿದರು.


“ಪ್ರಭು ಜೀವಂತರಾಗಿ ಎದ್ದಿರುವುದು ನಿಜ! ಅವರು ಸಿಮೋನನಿಗೆ ಕಾಣಿಸಿಕೊಂಡರು,” ಎಂದು ಅಲ್ಲಿದ್ದವರು ಹೇಳುವುದನ್ನು ಕೇಳಿದರು.


ಪ್ರೇಷಿತರಾದರೋ ಇದೆಲ್ಲ ಕಟ್ಟುಕತೆಯೆಂದು ಭಾವಿಸಿ ನಂಬದೆಹೋದರು.


ನಂದಿದಂತಾಗಲು ಎನ್ನ ಪ್ರಾಣ ದೀವಿಗೆ ಮೊರೆಯಿಟ್ಟೆ, ಸರ್ವೇಶ್ವರಾ, ನಾ ನಿನಗೆ ನಿನ್ನ ಪರಿಶುದ್ಧ ಆಲಯದಲಿ ನೀನಾಸೀನನಿದ್ದೆ ಎನ್ನ ಪ್ರಾರ್ಥನೆಯನು ನೀನಾಲಿಸಿದೆ.


ಸೆರೆಯಿಂದೆಮ್ಮನು ಪ್ರಭು ಸಿಯೋನಿಗೆ ಮರಳಿಸಿದಾಗ I ಅದೊಂದು ಕನಸು ಕಂಡಂತಿತ್ತು ನಮಗೆ ಆವಾಗ II


ನೇಮಿಸಿದವನನು ತನ್ನ ಮನೆಗೆ ಯಜಮಾನನ್ನಾಗಿ I ಮಾಡಿದ ತನ್ನಾಸ್ತಿಗೆಲ್ಲಾ ಅಧಿಕಾರಿಯನ್ನಾಗಿ II


ಅವರು ಎದೆಗೆಟ್ಟಾಗ ನಾನು ನಗೆಬೀರುತ್ತಿದ್ದೆ ನನ್ನ ಮುಖಕಾಂತಿಯಿಂದ ಹುರಿದುಂಬಿಸುತ್ತಿದ್ದೆ.


ನಾನು ಕರೆದಾಗ ಓಗೊಟ್ಟಿದ್ದರೂ ನನ್ನ ವಿಜ್ಞಾಪನೆಯನ್ನು ಆಲಿಸುವನೆಂದು ನಂಬುತ್ತಿರಲಿಲ್ಲ.


ಯಕೋಬನು ಅವರಿಗೆ, “ನನ್ನ ಮಗ ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದ ಅವನು ಸತ್ತುಹೋದ, ಇವನೊಬ್ಬನೇ ಉಳಿದು ಇದ್ದಾನೆ, ದಾರಿಯಲ್ಲಿ ಇವನಿಗೇನಾದರೂ ಆಪತ್ತು ಸಂಭವಿಸಬಹುದು. ಆಗ, ನರೆಕೂದಲಿನ ಈ ಮುದುಕ ದುಃಖದಿಂದಲೆ ಸಮಾಧಿ ಸೇರಲು ನೀವೇ ಕಾರಣರಾಗುತ್ತೀರಿ,” ಎಂದು ಹೇಳಿದ.


ಆಗ ಅವರ ತಂದೆ ಯಕೋಬನು ಅವರಿಗೆ, “ನನ್ನನ್ನು ಮಕ್ಕಳಿಲ್ಲದವನಂತೆ ಮಾಡಿದ್ದೀರಿ; ಜೋಸೆಫನು ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾಮೀನನನ್ನೂ ಕರೆದುಕೊಂಡು ಹೋಗಬೇಕೆಂದಿದ್ದೀರಿ. ಈ ಕಷ್ಟದುಃಖವೆಲ್ಲ ನನ್ನ ತಲೆಯ ಮೇಲೆ ಬಂದೆರಗಿದೆ!” ಎಂದನು.


ಬಳಿಕ ಅವರು ಒಂದು ಹೋತವನ್ನು ಕೊಯ್ದು, ಅದರ ರಕ್ತದಲ್ಲಿ ಜೋಸೆಫನ ನಿಲುವಂಗಿಯನ್ನು ಅದ್ದಿ


ಅವರು ಈಜಿಪ್ಟ್ ದೇಶವನ್ನು ಬಿಟ್ಟು ಕಾನಾನ್ ನಾಡನ್ನು ಸೇರಿದರು.


ಕಾನಾನ್ ನಾಡನ್ನು ಅವರು ತಲುಪಿದರು. ತಮ್ಮ ತಂದೆಯ ಬಳಿಗೆ ಬಂದು ನಡೆದುದೆಲ್ಲವನ್ನು ವರದಿಮಾಡಿದರು.


ಅನಂತರ ಜೋಸೆಫನಿಗೆ, “ನಿನ್ನ ಮುಖವನ್ನು ಮತ್ತೆ ನೋಡುವೆನೆಂದು ನಾನು ನೆನಸಿರಲಿಲ್ಲ. ಈಗ ನಿನ್ನನ್ನು ಮಾತ್ರವಲ್ಲ, ನಿನ್ನ ಮಕ್ಕಳನ್ನೂ ನೋಡುವಂತೆ ದೇವರು ಅನುಗ್ರಹಿಸಿದ್ದಾರೆ!” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು