Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 45:27 - ಕನ್ನಡ ಸತ್ಯವೇದವು C.L. Bible (BSI)

27 ಆದರೆ ಜೋಸೆಫನು ಹೇಳಿಕಳಿಸಿದ ಎಲ್ಲ ಮಾತುಗಳನ್ನು ಕೇಳಿ, ತನ್ನ ಪ್ರಯಾಣಕ್ಕಾಗಿ ಅವನಿಂದ ಬಂದಿದ್ದ ಬಂಡಿಗಳನ್ನು ನೋಡಿ ಅವರ ತಂದೆ ಯಕೋಬನಿಗೆ ಹೊಸ ಜೀವ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ತರುವಾಯ ಯೋಸೇಫನು ಹೇಳಿ ಕಳುಹಿಸಿದ್ದ ಎಲ್ಲಾ ಮಾತುಗಳನ್ನು ಕೇಳಿ ತನ್ನ ಪ್ರಯಾಣಕ್ಕೋಸ್ಕರ ಯೋಸೇಫನ ಕಡೆಯಿಂದ ಬಂದ ರಥಗಳನ್ನು ನೋಡಿದಾಗ ಯಾಕೋಬನ ಆತ್ಮವು ಉಲ್ಲಾಸಗೊಂಡಿತು, ಅಲ್ಲದೆ ಅವನಿಗೆ ಹೊಸ ಜೀವ ಬಂದಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ತರುವಾಯ ಯೋಸೇಫನು ಹೇಳಿಕಳುಹಿಸಿದ್ದ ಎಲ್ಲಾ ಮಾತುಗಳನ್ನು ಕೇಳಿ ತನ್ನ ಪ್ರಯಾಣಕ್ಕೋಸ್ಕರ ಯೋಸೇಫನ ಕಡೆಯಿಂದ ಬಂದ ರಥಗಳನ್ನು ನೋಡಿ ಇಸ್ರಾಯೇಲನೆನಿಸಿಕೊಳ್ಳುವ ಅವರ ತಂದೆ ಯಾಕೋಬನು ಚೇತರಿಸಿಕೊಂಡು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದರೆ ಯೋಸೇಫನು ತಮಗೆ ಹೇಳಿದ್ದೆಲ್ಲವನ್ನು ಸಹೋದರರು ತಮ್ಮ ತಂದೆಗೆ ಹೇಳಿದರು. ಆಮೇಲೆ ತನ್ನನ್ನು ಈಜಿಪ್ಟಿಗೆ ಕರೆದುಕೊಂಡು ಬರಲು ಯೋಸೇಫನು ಕಳುಹಿಸಿದ್ದ ರಥಗಳನ್ನು ಯಾಕೋಬನು ನೋಡಿ ಉಲ್ಲಾಸಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆದರೆ ಯೋಸೇಫನು ತಮಗೆ ಹೇಳಿದ ಎಲ್ಲಾ ಮಾತುಗಳನ್ನು ಅವರು ಯಾಕೋಬನಿಗೆ ಹೇಳಿದರು. ಅವನನ್ನು ಕರೆದುಕೊಂಡು ಹೋಗುವುದಕ್ಕೆ ಯೋಸೇಫನು ಕಳುಹಿಸಿದ ರಥಗಳನ್ನು ಅವನು ನೋಡಿದಾಗ ಯಾಕೋಬನ ಆತ್ಮವು ಉಜ್ಜೀವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 45:27
8 ತಿಳಿವುಗಳ ಹೋಲಿಕೆ  

“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ನಿನ್ನ ಸಹೋದರರಿಗೆ ಈ ಆಜ್ಞೆಯನ್ನೂ ತಿಳಿಸು: ‘ನೀವು ನಿಮ್ಮ ಮಡದಿ ಮಕ್ಕಳನ್ನು ಕರೆದುತರಲು ಈಜಿಪ್ಟ್ ದೇಶದ ಬಂಡಿಗಳನ್ನು ತೆಗೆದುಕೊಂಡುಹೋಗಿರಿ: ನಿಮ್ಮ ತಂದೆಯನ್ನು ತಂದು ಸೇರಿಸಿರಿ.


ಮೂರನೆಯ ದಿನದಲ್ಲಿ ಅವರು ನಮ್ಮನ್ನು ಎಬ್ಬಿಸುವರು. ಆಗ ನಾವು ಅವರ ಸನ್ನಿಧಿಯಲ್ಲಿ ಬಾಳುವೆವು.


ನವಜೀವವನು ತುಂಬಿಸಲಾರೆಯಾ ನಮ್ಮಲಿ? I ಆಗ ನಿನ್ನ ಜನರು ಆನಂದಿಸುವರು ನಿನ್ನಲಿ II


ಅಂಜೂರ ಹಣ್ಣಿನ ಉಂಡೆಯನ್ನೂ ಎರಡು ದ್ರಾಕ್ಷಿಗೊಂಚಲುಗಳನ್ನೂ ಕೊಟ್ಟರು. ಮೂರು ದಿವಸ ಹಗಲಿರುಳು ಅನ್ನಪಾನವಿಲ್ಲದ್ದರಿಂದ ಬಹಳವಾಗಿ ಬಳಲಿಹೋಗಿದ್ದ ಇವನು ಅವುಗಳನ್ನು ತಿಂದು ಚೇತರಿಸಿಕೊಂಡನು.


ದೇವರು ಲೆಹೀಯಲ್ಲಿ ಒರಳಬಂಡೆಯನ್ನು ಸೀಳಿ ಅದರೊಳಗಿಂದ ನೀರು ಬರುವಂತೆ ಮಾಡಿದರು. ಅವನು ಕುಡಿದು ಪುನಃ ಚೇತನಗೊಂಡನು. ಆದುದರಿಂದ ಅದಕ್ಕೆ ‘ಏನ್ ಹಕ್ಕೋರೇ’ ಎಂದು ಹೆಸರಾಯಿತು; ಅದು ಇಂದಿನವರೆಗೂ ಲೆಹೀಯಲ್ಲಿದೆ.


ಕೊನೆಗೆ ಯಕೋಬನು, “ನನ್ನ ಮಗ ಜೋಸೆಫ್ ಜೀವದಿಂದಿದ್ದಾನೆ, ನನಗೆ ಅಷ್ಟೇ ಸಾಕು! ನಾನು ಸಾಯುವುದಕ್ಕೆ ಮುಂಚೆ ಹೋಗಿ ಅವನನ್ನು ನೋಡುತ್ತೇನೆ,” ಎಂದನು.


ದೂರನಾಡಿನಿಂದ ಬಂದ ಶುಭವರದಿ, ದಣಿದ ಪ್ರಾಣಕ್ಕೆ ತಣ್ಣೀರ ತೃಪ್ತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು