Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 46:2 - ಕನ್ನಡ ಸತ್ಯವೇದವು C.L. Bible (BSI)

2 ಆ ರಾತ್ರಿ ದೇವರು ಯಕೋಬನಿಗೆ ದರ್ಶನವಿತ್ತು, “ಯಕೋಬನೇ, ಯಕೋಬನೇ,” ಎಂದು ಕರೆಯಲು, ಅವನು, "ಇಗೋ, ಸಿದ್ಧನಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅಲ್ಲಿ ದೇವರು ರಾತ್ರಿಯ ದರ್ಶನದಲ್ಲಿ ಇಸ್ರಾಯೇಲನಿಗೆ, “ಯಾಕೋಬನೇ, ಯಾಕೋಬನೇ” ಎಂದು ಕರೆಯಲು, ಅವನು, “ಇಗೋ ಇದ್ದೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅಲ್ಲಿ ದೇವರು ರಾತ್ರಿಯ ಸ್ವಪ್ನದಲ್ಲಿ ಇಸ್ರಾಯೇಲನನ್ನು - ಯಾಕೋಬನೇ, ಯಾಕೋಬನೇ ಎಂದು ಕರೆಯಲು, ಅವನು - ಇದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆ ರಾತ್ರಿ ದೇವರು ಕನಸಿನಲ್ಲಿ ಅವನೊಂದಿಗೆ ಮಾತನಾಡಿದನು. ದೇವರು ಅವನನ್ನು, “ಯಾಕೋಬನೇ, ಯಾಕೋಬನೇ” ಎಂದು ಕರೆದನು. ಅದಕ್ಕೆ ಇಸ್ರೇಲನು, “ಇಗೋ, ಇದ್ದೇನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದೇವರು ಇಸ್ರಾಯೇಲನಿಗೆ ರಾತ್ರಿಯ ದರ್ಶನದಲ್ಲಿ ಮಾತನಾಡಿ, “ಯಾಕೋಬನೇ, ಯಾಕೋಬನೇ,” ಎಂದರು. ಅದಕ್ಕವನು, “ಇಗೋ, ಇದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 46:2
23 ತಿಳಿವುಗಳ ಹೋಲಿಕೆ  

ಈ ಘಟನೆಗಳೆಲ್ಲ ನಡೆದ ಮೇಲೆ ಅಬ್ರಾಮನಿಗೆ ಒಂದು ದಿವ್ಯದರ್ಶನ ಆಯಿತು. ಅದರಲ್ಲಿ ಸರ್ವೇಶ್ವರ ಸ್ವಾಮಿಯ ಈ ವಾಣಿ ಕೇಳಿಸಿತು: “ಅಬ್ರಾಮನೇ ಭಯಪಡಬೇಡ, ನಿನ್ನನ್ನು ರಕ್ಷಿಸುವ ಕವಚ ನಾನೇ, ಘನವಾದ ಬಹುಮಾನ ಸಿಗುವುದು ನಿನಗೆ".


ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು; ಮಕೆದೋನಿಯದ ಒಬ್ಬ ವ್ಯಕ್ತಿ ಅಲ್ಲಿ ನಿಂತು, “ಮಕೆದೋನಿಯಕ್ಕೆ ಬಂದು ನಮಗೆ ಸಹಾಯಮಾಡಿ,” ಎಂದು ಅಂಗಲಾಚಿದನು.


ಅದೊಂದು ಮಧ್ಯಾಹ್ನ, ಸುಮಾರು ಮೂರು ಗಂಟೆಯ ಸಮಯ, ಅವನಿಗೊಂದು ದಿವ್ಯದರ್ಶನವಾಯಿತು: ದೇವದೂತನೊಬ್ಬನು ತನ್ನ ಮನೆಯೊಳಗೆ ಬಂದು, “ಕೊರ್ನೇಲಿಯಾ,” ಎಂದು ಕರೆಯುವುದನ್ನು ಸ್ಪಷ್ಟವಾಗಿ ಕಂಡನು.


ದಮಸ್ಕಸಿನಲ್ಲಿ ಅನನೀಯ ಎಂಬ ಶಿಷ್ಯನಿದ್ದನು. ಪ್ರಭು ಅವನಿಗೆ ದರ್ಶನವಿತ್ತು, “ಅನನೀಯಾ” ಎಂದು ಕರೆಯಲು ಅವನು, “ಸ್ವಾಮೀ, ಅಪ್ಪಣೆಯಾಗಲಿ,” ಎಂದನು.


ಅವನು ನೆಲಕ್ಕುರುಳಿದನು. “ಸೌಲನೇ, ಸೌಲನೇ, ನನ್ನನ್ನೇಕೆ ಹಿಂಸಿಸುತ್ತಿರುವೆ?” ಎಂಬ ವಾಣಿ ಅವನಿಗೆ ಕೇಳಿಸಿತು.


ಆ ರಾತ್ರಿಯೇ ಸ್ವಪ್ನದಲ್ಲಿ ಕನಸಿನ ಗುಟ್ಟು ದಾನಿಯೇಲನಿಗೆ ವ್ಯಕ್ತವಾಯಿತು. ಕೂಡಲೆ ಆತನು ಪರಲೋಕ ದೇವರನ್ನು ಹೀಗೆಂದು ಸ್ತುತಿಸಿದನು:


ಜನರಿಗೆ ಗಾಢನಿದ್ರೆ ಹತ್ತುವ ಹೊತ್ತಿನಲಿ ರಾತ್ರಿಕಾಲದ ಸ್ವಪ್ನಯೋಚನೆಗಳ ಸುಳಿಯಲಿ


ದೇವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನ ಕಾಲದಲ್ಲಿ ಅವನು ದೇವರನ್ನು ಅವಲಂಬಿಸಿದ್ದ ಕಾಲಾವಧಿಯಲ್ಲೇ ದೇವರಾದ ಸರ್ವೇಶ್ವರ ಅವನನ್ನು ಅಭಿವೃದ್ಧಿಗೆ ತಂದದ್ದು.


ಸರ್ವೇಶ್ವರ ಪ್ರತ್ಯಕ್ಷರಾಗಿ ಹಿಂದಿನಂತೆಯೇ, “ಸಮುವೇಲನೇ, ಸಮುವೇಲನೇ,” ಎಂದರು. ಸಮುವೇಲನು, “ಅಪ್ಪಣೆಯಾಗಲಿ, ತಮ್ಮ ದಾಸನಾದ ನಾನು ಕಾದಿದ್ದೇನೆ,” ಎಂದನು.


ಆಗ ಸರ್ವೇಶ್ವರಸ್ವಾಮಿ ಸಮುವೇಲನನ್ನು ಕರೆದರು. ಸಮುವೇಲನು, “ಇಗೋ ಬಂದೇ,” ಎಂದು ಉತ್ತರಕೊಟ್ಟು,


ದೈವೋಕ್ತಿಗಳನ್ನು ಕೇಳುವವನ ಭವಿಷ್ಯವಾಣಿ ಪರವಶನಾಗಿ ಕಣ್ದೆರೆದು ಸರ್ವಶಕ್ತನ ದರ್ಶನ ಹೊಂದಿದಾ ವ್ಯಕ್ತಿಯ ವಾಣಿ.


ಅವರು ಸಮೀಪಿಸಿದಾಗ, “ನನ್ನ ಮಾತಿಗೆ ಕಿವಿಗೊಡಿ ನಿಮ್ಮಲ್ಲಿ ಪ್ರವಾದಿಯಿದ್ದರೆ ಅವನಿಗೆ ಕಾಣಿಸಿಕೊಳ್ಳುವೆ ಜ್ಞಾನದೃಷ್ಟಿಯಲ್ಲಿ ಇಲ್ಲವೆ ಅವನ ಸಂಗಡ ಮಾತಾಡುವೆ ಸ್ವಪ್ನದಲ್ಲಿ.


ಆ ಕನಸಿನಲ್ಲಿ ದೇವದೂತನು, ‘ಯಕೋಬನೇ’ ಎಂದು ಕರೆದನು. ನಾನು, ‘ಇಗೋ, ಇದ್ದೇನೆ’, ಎಂದು ಹೇಳಿದೆ.


ಆದರೆ ಸರ್ವೇಶ್ವರನ ದೂತನು ಆಕಾಶದಿಂದ, "ಅಬ್ರಹಾಮನೇ, ಹೇ ಅಬ್ರಹಾಮನೇ" ಎಂದು ಕರೆದನು. ಅದಕ್ಕೆ ಅಬ್ರಹಾಮನು, “ಇಗೋ ಸಿದ್ಧನಿದ್ದೇನೆ” ಎಂದ.


ಈ ಘಟನೆಗಳಾದ ಬಳಿಕ ದೇವರು ಅಬ್ರಹಾಮನನ್ನು ಪರೀಕ್ಷಿಸುವುದಕ್ಕೋಸ್ಕರ, “ಅಬ್ರಹಾಮನೇ,” ಎಂದು ಕರೆದರು. ಅವನು “ಇಗೋ, ಸಿದ್ಧನಿದ್ದೇನೆ” ಎಂದನು.


ಆಗ ಅಬ್ರಾಮನಿಗೆ ಸರ್ವೇಶ್ವರ, “ಇದನ್ನು ನೀನು ಸ್ಪಷ್ಟವಾಗಿ ತಿಳಿದುಕೊಳ್ಳಬೇಕು: ನಿನ್ನ ಸಂತತಿಯವರು ಅನ್ಯ ನಾಡಿಗೆ ಆಗಂತುಕರಂತೆ ಹೋಗುವರು; ಆ ನಾಡಿಗರಿಗೆ ಗುಲಾಮರಾಗುವರು; ನಾನೂರು ವರ್ಷ ಅಲ್ಲಿಯವರ ಶೋಷಣೆಗೆ ಗುರಿಯಾಗುವರು.


ಅಲ್ಲದೆ, “ಪೇತ್ರಾ, ಏಳು, ಕೊಯ್ದು ತಿನ್ನು,” ಎಂಬ ವಾಣಿ ಅವನಿಗೆ ಕೇಳಿಸಿತು.


ಆದರೆ ದೇವರು ಅಬೀಮೆಲೆಕನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ನೀನು ಆ ಮಹಿಳೆಯನ್ನು ಸೇರಿಸಿಕೊಂಡ ಕಾರಣ ಸಾಯತಕ್ಕವನು, ಆಕೆಗೆ ಗಂಡನಿದ್ದಾನೆ,” ಎಂದರು.


ಸರ್ವೇಶ್ವರ ಗಿದ್ಯೋನನಿಗೆ, “ನಿನ್ನ ಸಂಗಡ ಇರುವ ಜನರು ಹೆಚ್ಚು ಸಂಖ್ಯೆಯಲ್ಲಿದ್ದಾರೆ. ಇವರ ಕೈಗೆ ಮಿದ್ಯಾನ್ಯರನ್ನು ಒಪ್ಪಿಸುವುದು ನನಗೆ ಸರಿಯಾಗಿ ಕಾಣುವುದಿಲ್ಲ; ಏಕೆಂದರೆ ಹಾಗೆ ಒಪ್ಪಿಸಿಕೊಟ್ಟರೆ ಸ್ವಂತ ಶಕ್ತಿಯಿಂದಲೇ ನಮಗೆ ರಕ್ಷಣೆ ಲಭಿಸಿತು ಎಂದು ಹೆಚ್ಚಳಪಟ್ಟು ನನ್ನನ್ನು ಅಲಕ್ಷ್ಯಮಾಡಬಹುದು.


ಅದೇ ರಾತ್ರಿ ಸರ್ವೇಶ್ವರ ಗಿದ್ಯೋನ್ಯನಿಗೆ, “ನೀನು ಎದ್ದು ಹೋಗಿ ಶತ್ರುಗಳ ಪಾಳೆಯದ ಮೇಲೆ ಬೀಳು; ಅದನ್ನು ನಿನಗೆ ಒಪ್ಪಿಸಿಕೊಟ್ಟಿದ್ದೇನೆ.


ರಾತ್ರಿಯಲ್ಲಿ ನನಗೆ ಈ ದರ್ಶನವಾಯಿತು. ಇಗೋ, ಕೆಂಪು ಕುದುರೆಯನ್ನೇರಿದ್ದ ಒಬ್ಬ ವ್ಯಕ್ತಿ ತಗ್ಗಿನಲ್ಲಿರುವ ಸುಗಂಧ ವೃಕ್ಷಗಳ ನಡುವೆ ನಿಂತಿದ್ದಾನೆ. ಅವನ ಹಿಂದೆ ಕೆಂಪು, ನಸುಗೆಂಪು ಮತ್ತು ಬಿಳಿಯ ಕುದುರೆಗಳಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು