Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 46:34 - ಕನ್ನಡ ಸತ್ಯವೇದವು C.L. Bible (BSI)

34 'ಚಿಕ್ಕಂದಿನಿಂದ ಇಂದಿನವರೆಗೂ ನಿಮ್ಮ ಸೇವಕರಾದ ನಾವು, ನಮ್ಮ ಪೂರ್ವಜರ ಪದ್ಧತಿಯಂತೆ ಮಂದೆ ಮೇಯಿಸುವವರು,’ ಎಂದು ಹೇಳಿರಿ. ಆಗ ಗೋಷೆನ್ ಪ್ರಾಂತ್ಯವನ್ನು ನಿಮ್ಮ ನಿವಾಸಕ್ಕೆ ನೇಮಿಸುವನು - ಏಕೆಂದರೆ ಕುರಿ ಕಾಯುವವರೆಂದರೆ ಈಜಿಪ್ಟಿಯರಿಗೆ ಹಿಡಿಸದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 “ನೀವು ಚಿಕ್ಕಂದಿನಿಂದ ಇದುವರೆಗೂ ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಪದ್ಧತಿಯ ಮೇರೆಗೆ ಪಶುಪಾಲಕರು ಎಂದು ಹೇಳಿರಿ. ಪಶುಪಾಲಕರು ಐಗುಪ್ತರಿಗೆ ಅಸಹ್ಯವಾಗಿರುವುದರಿಂದ, ಗೋಷೆನ್ ಸೀಮೆಯನ್ನು ನಿಮ್ಮ ನಿವಾಸಕ್ಕಾಗಿ ನೇಮಿಸುವನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನೀವು - ಚಿಕ್ಕಂದಿನಿಂದ ಇದುವರೆಗೂ ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಪದ್ಧತಿಯ ಮೇರೆಗೆ ಪಶುಪಾಲಕರು ಅನ್ನಿರಿ. ಪಶುಪಾಲಕರು ಐಗುಪ್ತ್ಯರಿಗೆ ಅಸಹ್ಯವಾಗಿರುವದರಿಂದ ಗೋಷೆನ್‍ಸೀಮೆಯನ್ನು ನಿಮ್ಮ ನಿವಾಸಕ್ಕೆ ನೇವಿುಸುವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ನೀವು ಅವನಿಗೆ, ‘ನಾವು ಕುರುಬರು. ನಮ್ಮ ಜೀವಮಾನವೆಲ್ಲಾ ನಾವು ಪಶುಗಳನ್ನು ಸಾಕುವುದರ ಮೂಲಕ ಜೀವನ ಮಾಡಿದೆವು. ನಮಗಿಂತ ಮೊದಲು ನಮ್ಮ ಪೂರ್ವಿಕರು ಸಹ ಇದೇ ರೀತಿ ಜೀವಿಸಿದರು’ ಎಂದು ಹೇಳಿರಿ. ಆಗ ಅವನು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲು ನಿಮಗೆ ಅವಕಾಶ ಮಾಡಿಕೊಡುತ್ತಾನೆ. ಈಜಿಪ್ಟಿನ ಜನರು ಕುರುಬರನ್ನು ಇಷ್ಟಪಡುವುದಿಲ್ಲ. ಆದ್ದರಿಂದ ನೀವು ಗೋಷೆನಿನಲ್ಲಿ ವಾಸಿಸುವುದು ಒಳ್ಳೆಯದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ನೀವು ಅವನಿಗೆ, ‘ಚಿಕ್ಕಂದಿನಿಂದ ಇಂದಿನವರೆಗೂ ನಿನ್ನ ದಾಸರಾದ ನಾವೂ ನಮ್ಮ ಪೂರ್ವಿಕರೂ ಪಶುಗಳನ್ನು ಕಾಯುವವರಾಗಿದ್ದೇವೆ,’ ಎಂದು ಹೇಳಬೇಕು. ಏಕೆಂದರೆ ಕುರಿ ಕಾಯುವವರೆಲ್ಲಾ ಈಜಿಪ್ಟಿನವರಿಗೆ ಅಸಹ್ಯವಾಗಿದ್ದರಿಂದ, ನೀವು ಗೋಷೆನ್ ಪ್ರಾಂತದಲ್ಲಿ ವಾಸವಾಗಿರುವಂತೆ ನೇಮಿಸುವನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 46:34
17 ತಿಳಿವುಗಳ ಹೋಲಿಕೆ  

ಆದರೆ ಮೋಶೆ, “ಹಾಗೆ ಮಾಡುವುದು ಸರಿಯಲ್ಲ. ನಮ್ಮ ದೇವರಾದ ಸರ್ವೇಶ್ವರನಿಗೆ ನಾವು ಬಲಿಯಾಗಿ ಕೊಡುವ ಆಹುತಿ ಈಜಿಪ್ಟಿನವರಿಗೆ ನಿಷಿದ್ಧವಾದದ್ದು. ನಿಷಿದ್ಧವೆಂದು ಈಜಿಪ್ಟಿನವರು ತಿಳಿದುಕೊಂಡು ಇರುವ ಆಹುತಿಯನ್ನು ನಾವು ಅವರ ಕಣ್ಮುಂದೆಯೇ ಮಾಡಿದರೆ ಅವರು ನಮ್ಮನ್ನು ಕಲ್ಲೆಸೆದು ಕೊಲ್ಲುವರಲ್ಲವೆ?


ಪರಿಚಾರಕರು ಅವನಿಗೆ ಬೇರೆ, ಅವನ ಅಣ್ಣತಮ್ಮಂದಿರಿಗೇ ಬೇರೆ, ಅವನ ಸಂಗಡವಿದ್ದ ಈಜಿಪ್ಟಿನವರಿಗೇ ಬೇರೆ, ಹೀಗೆ ಬೇರೆಬೇರೆಯಾಗಿ ಊಟಕ್ಕೆ ಬಡಿಸಿದರು. ಈಜಿಪ್ಟಿನವರು ಹಿಬ್ರಿಯರ ಸಹಪಂಕ್ತಿಯಲ್ಲಿ ಊಟಮಾಡುವುದಿಲ್ಲ; ಅದು ಅವರಿಗೆ ಅಸಹ್ಯ.


ಅವರು ಕುರಿಕಾಯುವವರು, ಮಂದೆ ಮೇಯಿಸುವುದು ಅವರ ಕಸುಬು. ಅವರು ತಮ್ಮ ಕುರಿದನಗಳನ್ನೂ ತಮಗಿದ್ದ ಎಲ್ಲವನ್ನೂ ತಂದಿದ್ದಾರೆ,’ ಎಂದು ಹೇಳುತ್ತೇನೆ.


ಒಮ್ಮೆ ಜೋಸೆಫನ ಅಣ್ಣಂದಿರು ತಂದೆಯ ಆಡುಕುರಿಗಳನ್ನು ಮೇಯಿಸಲು ಶೆಕೆಮಿಗೆ ಹೋಗಿದ್ದರು.


ಗೋಷೆನ್ ಪ್ರಾಂತ್ಯದಲ್ಲಿ ನನ್ನ ಬಳಿಯಲ್ಲೇ ನೀವೂ ನಿಮ್ಮ ಮಕ್ಕಳೂ ಮೊಮ್ಮಕ್ಕಳೂ ದನ, ಕುರಿ ಮೊದಲಾದ ಆಸ್ತಿಪಾಸ್ತಿಗಳ ಸಮೇತ ವಾಸಮಾಡಬಹುದು.


ಆದರೆ ಅದೇ ದಿನ ಲಾಬಾನನು ಹೋತಗಳಲ್ಲಿ ರೇಖೆ, ಮಚ್ಚೆ ಇದ್ದವುಗಳನ್ನೂ, ಮೇಕೆಗಳಲ್ಲಿ ಚುಕ್ಕೆ, ಮಚ್ಚೆ ಇದ್ದವುಗಳನ್ನೂ ಅಂದರೆ, ಸ್ವಲ್ಪ ಬಿಳುಪಾದ ಬಣ್ಣ ತೋರಿದ ಎಲ್ಲವುಗಳನ್ನೂ, ಕುರಿಗಳಲ್ಲಿ ಕಪ್ಪಾಗಿದ್ದವುಗಳನ್ನೂ ವಿಂಗಡಿಸಿ ತನ್ನ ಮಕ್ಕಳ ವಶಕ್ಕೆ ಒಪ್ಪಿಸಿಬಿಟ್ಟನು.


ತನ್ನ ಮಗಳಾದ ದೀನಳಿಗೆ ಶೆಕೆಮನಿಂದ ಮಾನಭಂಗವಾಯಿತೆಂಬ ಸಮಾಚಾರ ಯಕೋಬನಿಗೆ ಮುಟ್ಟಿದಾಗ ಅವನ ಗಂಡು ಮಕ್ಕಳು ಅಡವಿಯಲ್ಲಿ ದನಕಾಯುತ್ತಿದ್ದರು. ಅವರು ಬರುವ ತನಕ ಯಕೋಬನು ಸುಮ್ಮನೆ ಇದ್ದನು.


ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳ ಬೇರೆ. ಇದೂ ಅಲ್ಲದೆ, ಆ ಕಾಲದಲ್ಲಿ ಕಾನಾನ್ಯರೂ ಪೆರಿಜೀಯರೂ ಅದೇ ನಾಡಿನಲ್ಲಿ ವಾಸವಾಗಿದ್ದರು.


ಆದುದರಿಂದ ಅಬ್ರಾಮನು ಲೋಟನಿಗೆ ಹೀಗೆಂದನು: “ನನಗೂ ನಿನಗೂ, ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು. ನಾವು ಬಳಗದವರು.


ಗೆರಾರಿನ ದನಕಾಯುವವರು ಬಂದು ಆ ನೀರು ತಮ್ಮದು ಎಂದು ಹೇಳಿ ಇಸಾಕನ ದನಕಾಯುವವರ ಸಂಗಡ ಜಗಳವಾಡಿದರು. ಆದುದರಿಂದ ಇಸಾಕನು ಆ ಬಾವಿಗೆ “ಏಸೆಕ್" ಎಂದು ಹೆಸರಿಟ್ಟರು.


ಆಗ ಜೋಸೆಫನಿಗೆ ಹದಿನೇಳು ವರ್ಷ, ಇನ್ನೂ ಯುವಕ, ತನ್ನ ಅಣ್ಣಂದಿರ ಜೊತೆಯಲ್ಲಿ, ಅಂದರೆ ತನ್ನ ಮಲತಾಯಿಯರಾದ ಬಿಲ್ಹಾ, ಜಿಲ್ಪಾ ಎಂಬುವರ ಮಕ್ಕಳ ಜೊತೆಯಲ್ಲಿ, ಆಡುಕುರಿಗಳನ್ನು ಮೇಯಿಸುತ್ತಿದ್ದ, ಅಣ್ಣಂದಿರು ಏನಾದರೂ ತಪ್ಪಿ ನಡೆದರೆ ತಂದೆಗೆ ವರದಿ ಮಾಡುತ್ತಿದ್ದ.


ನಿಮ್ಮ ತಂದೆಯನ್ನೂ ಕುಟುಂಬದವರನ್ನೂ ನನ್ನ ಬಳಿಗೆ ಕರೆದುಕೊಂಡು ಬರತಕ್ಕದ್ದು. ಈಜಿಪ್ಟ್ ದೇಶದಲ್ಲಿ ನಿಮಗೆ ಅತ್ಯುತ್ತಮವಾದ ಭೂಮಿಯನ್ನು ಕೊಡುವೆನು. ನೀವು ಈ ದೇಶದ ಸುಖಸಂಪತ್ತನ್ನು ಅನುಭವಿಸಬಹುದು.”


ಫರೋಹನು, “ನಿಮ್ಮ ಕಸುಬು ಏನು”, ಎಂದು ಕೇಳಲು ಅವರು, “ನಿಮ್ಮ ಸೇವಕರಾದ ನಾವು ನಮ್ಮ ಪೂರ್ವಜರ ಪದ್ಧತಿಯ ಮೇರೆಗೆ ಕುರಿ ಕಾಯುವವರು;


ಕಾನಾನ್ ನಾಡಿನಲ್ಲಿ ಬರವು ಘೋರವಾದ್ದರಿಂದ ನಿಮ್ಮ ಸೇವಕರ ದನಕುರಿಗಳಿಗೆ ಮೇವು ಸಿಕ್ಕಲಿಲ್ಲ. ಆದ್ದರಿಂದ ಈ ದೇಶದಲ್ಲಿ ಸ್ವಲ್ಪಕಾಲ ಇರಬೇಕೆಂದು ಬಂದಿದ್ದೇವೆ. ಸೇವಕರು ಗೋಷೆನ್ ಪ್ರಾಂತ್ಯದಲ್ಲಿ ವಾಸಮಾಡುವಂತೆ ಅಪ್ಪಣೆಯಾಗಬೇಕು,” ಎಂದು ವಿನಂತಿಸಿದರು.


ಈಜಿಪ್ಟ್ ದೇಶವು ನಿನ್ನ ಮುಂದಿದೆ; ಅದರಲ್ಲಿನ ಉತ್ತಮ ಭಾಗವನ್ನು ನಿನ್ನ ತಂದೆಗೂ ಸಹೋದರರಿಗೂ ವಾಸಸ್ಥಾನವಾಗಿ ನೇಮಿಸು; ಗೋಷೆನ್ ಪ್ರಾಂತ್ಯದಲ್ಲಿ ಬೇಕಾದರೆ ವಾಸಮಾಡಲಿ; ಅವರಲ್ಲಿ ನುರಿತವರು ಯಾರಾದರು ಇದ್ದರೆ ಅವರನ್ನು ನನ್ನ ದನಕರುಗಳ ಮೇಲ್ವಿಚಾರಣೆಗೆ ನೇಮಿಸು,” ಎಂದನು.


ಫರೋಹನ ಅಪ್ಪಣೆಯ ಮೇರೆಗೆ ಜೋಸೆಫನು ತನ್ನ ತಂದೆಗೂ ಅಣ್ಣತಮ್ಮಂದಿರಿಗೂ ಈಜಿಪ್ಟಿನಲ್ಲಿ ವಾಸಸ್ಥಾನವನ್ನು ನೇಮಿಸಿ, ಅದರಲ್ಲಿ ಉತ್ತಮವಾಗಿದ್ದ ರಮ್ಸೇಸ್ ಪ್ರದೇಶದಲ್ಲಿ ಸೊತ್ತನ್ನು ಕೊಟ್ಟನು.


ಆ ದಿನದಲ್ಲಿ ನನ್ನ ಜನರು ವಾಸವಾಗಿರುವ ಗೋಷೆನ್ ಪ್ರಾಂತ್ಯಕ್ಕೆ ಈ ಪಿಡುಗು ತಗಲದಂತೆ ಮಾಡುವೆನು. ಅಲ್ಲಿ ಈ ಕಾಟ ಇರುವುದಿಲ್ಲ. ಇದರಿಂದ ಭೂಲೋಕವನ್ನಾಳುವ ಸರ್ವೇಶ್ವರನು ನಾನೇ ಎಂದು ನೀನು ಅರಿತುಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು