Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:12 - ಕನ್ನಡ ಸತ್ಯವೇದವು C.L. Bible (BSI)

12 ತಂದೆಗೂ ಸಹೋದರರಿಗೂ ತಂದೆಯ ಮನೆಯವರೆಲ್ಲರಿಗೂ ಅವರವರ ಕುಟುಂಬಗಳಿಗೆ ಸೇರಿದವರ ಲೆಕ್ಕದ ಪ್ರಕಾರ ಆಹಾರಕೊಟ್ಟು ಅವರನ್ನು ಸಂರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೋಸೇಫನು ತನ್ನ ತಂದೆಗೂ, ಅಣ್ಣತಮ್ಮಂದಿರಿಗೂ, ತಂದೆಯ ಮನೆಯವರೆಲ್ಲರಿಗೂ ಅವರವರ ಕುಟುಂಬಗಳಿಗೆ ಸೇರಿದವರ ಲೆಕ್ಕದ ಪ್ರಕಾರ ಆಹಾರವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೋಸೇಫನು ತನ್ನ ತಂದೆಗೂ ಅಣ್ಣತಮ್ಮಂದಿರಿಗೂ ತಂದೆಯ ಮನೆಯವರೆಲ್ಲರಿಗೂ ಅವರವರ ಕುಟುಂಬಗಳಿಗೆ ಸೇರಿದವರ ಲೆಕ್ಕದ ಪ್ರಕಾರ ಆಹಾರಕ್ಕೆ ಕೊಟ್ಟು ಅವರನ್ನು ಸಂರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೋಸೇಫನು ತನ್ನ ತಂದೆಗೂ ತನ್ನ ಸಹೋದರರಿಗೂ ಮತ್ತು ಅಲ್ಲಿನ ಎಲ್ಲಾ ಜನರಿಗೂ ಬೇಕಾಗಿದ್ದ ಆಹಾರವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೋಸೇಫನು ತನ್ನ ತಂದೆಯನ್ನೂ, ತನ್ನ ಸಹೋದರರನ್ನೂ, ತನ್ನ ತಂದೆಯ ಮನೆಯವರೆಲ್ಲರನ್ನೂ ಅವರ ಮಕ್ಕಳ ಲೆಕ್ಕದ ಪ್ರಕಾರ ಆಹಾರಕೊಟ್ಟು, ಅವರನ್ನು ಸಂರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:12
16 ತಿಳಿವುಗಳ ಹೋಲಿಕೆ  

ಬರಗಾಲ ತೀರುವುದಕ್ಕೆ ಇನ್ನೂ ಐದು ವರ್ಷ ಕಳೆಯಬೇಕಾಗಿದೆ. ಆದುದರಿಂದ ನಿಮಗೂ ನಿಮ್ಮ ಕುಟುಂಬಕ್ಕೂ ನಿಮಗಿರುವ ಸಮಸ್ತಕ್ಕೂ ಬಡತನ ತಟ್ಟದಂತೆ ನಾನು ನಿಮ್ಮನ್ನು ಪೋಷಿಸುತ್ತೇನೆ’, ಎಂದು ಹೇಳಿರುವುದಾಗಿ ತಿಳಿಸಿರಿ.


ಯಾರಾದರೂ ತನ್ನ ಸಂಬಂಧಿಕರನ್ನು, ವಿಶೇಷವಾಗಿ ಸ್ವಂತ ಕುಟುಂಬದವರನ್ನು ಸಂರಕ್ಷಿಸದೆಹೋದರೆ, ಅಂಥವನು ವಿಶ್ವಾಸಭ್ರಷ್ಟನೂ ಅವಿಶ್ವಾಸಿಗಳಿಗಿಂತ ತುಚ್ಛನಾದವನೂ ಆಗಿದ್ದಾನೆ.


ವಿಧವೆಯಾದವಳಿಗೆ ಮಕ್ಕಳಾಗಲಿ ಮೊಮ್ಮಕ್ಕಳಾಗಲಿ ಇದ್ದರೆ, ಆ ಮಕ್ಕಳು ಮೊತ್ತಮೊದಲು ತಮ್ಮ ಸ್ವಂತ ಕುಟುಂಬಕ್ಕೆ ಸಹಾಯಮಾಡಬೇಕಾದುದು ಅವರ ಧಾರ್ಮಿಕ ಕರ್ತವ್ಯವೆಂಬುದು ಅವರಿಗೆ ತಿಳಿದಿರಲಿ. ಹೀಗೆ ಅವರು ತಮ್ಮ ತಂದೆತಾಯಿಯರಿಗೆ ಪ್ರತ್ಯುಪಕಾರಮಾಡಿದಂತಾಗುತ್ತದೆ. ಅಲ್ಲದೆ, ಇದು ದೇವರ ದೃಷ್ಟಿಯಲ್ಲಿ ಮೆಚ್ಚುಗೆ ಪಡೆದುದು.


ಅಂಗಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನಕರವಾದುದು; ಭಕ್ತಿಸಾಧನೆಯಾದರೋ ಎಲ್ಲಾ ದೃಷ್ಟಿಯಿಂದಲೂ ಪ್ರಯೋಜನಕರವಾದುದು. ಭಕ್ತಿಸಾಧನೆಯಿಂದ ಇಹಪರಗಳೆರಡರಲ್ಲೂ ನಿತ್ಯಜೀವವನ್ನು ಪಡೆಯುವ ಭರವಸೆ ನಮಗಿದೆ.


ತಾಯಿ ತನ್ನ ಮಕ್ಕಳನ್ನು ಸಾಕಿಸಲಹುವಂತೆಯೇ, ನಾವು ನಿಮ್ಮನ್ನು ವಾತ್ಸಲ್ಯದಿಂದ ಕಂಡೆವು.


ಅವನು ನಿನಗೆ ನವಚೈತನ್ಯವನ್ನು ಕೊಟ್ಟು ವೃದ್ಧಾಪ್ಯದಲ್ಲಿ ನಿನಗೆ ಸಂರಕ್ಷಣೆಯನ್ನು ನೀಡುವನು. ಸಪ್ತಕುವರರಿಗಿಂತ ನಿನಗೆ ಮೆಚ್ಚುಗೆ ಆದ ನಿನ್ನ ಪ್ರಿಯ ಸೊಸೆ ಈ ಮಗುವನ್ನು ನಿನಗೆ ಕೊಟ್ಟಿದ್ದಾಳೆ!” ಎಂದು ಹರಸಿದರು.


ನಿನ್ನ ತಂದೆತಾಯಿಗಳನ್ನು ಗೌರವಿಸು; ಗೌರವಿಸಿದರೆ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನಗೆ ಅನುಗ್ರಹಿಸುವ ನಾಡಿನಲ್ಲಿ ಬಹುಕಾಲ ಬಾಳುವೆ.


ಕೊಯ್ದು ಕಾಲದಲ್ಲಿ ಐದರಲ್ಲೊಂದು ಪಾಲು ಫರೋಹನಿಗೆ ಸಲ್ಲಬೇಕು. ಮಿಕ್ಕ ನಾಲ್ಕು ಪಾಲು ನಿಮ್ಮದು. ಅದನ್ನು ಬಿತ್ತನೆಗಾಗಿ ಮತ್ತು ನಿಮ್ಮ ಮನೆಯವರ ಹಾಗು ಕುಟುಂಬದವರ ಜೀವನಕ್ಕಾಗಿ ಇಟ್ಟುಕೊಳ್ಳಿ,” ಎಂದು ಹೇಳಿದನು.


ಈಜಿಪ್ಟಿನ ಎಲ್ಲೆಯಿಂದ ಎಲ್ಲೆಯವರೆಗೆ ಜನರನ್ನು ಊಳಿಗಕ್ಕೆ ಈಡುಮಾಡಿದನು.


ಜೋಸೆಫನು ಫರೋಹನ ಬಳಿಗೆ ಬಂದು, “ನನ್ನ ತಂದೆಯೂ ಸಹೋದರರೂ ದನಕುರಿಗಳನ್ನು ಹಾಗೂ ಎಲ್ಲ ಆಸ್ತಿಪಾಸ್ತಿಯನ್ನು ತೆಗೆದುಕೊಂಡು ಕಾನಾನ್ ನಾಡಿನಿಂದ ಗೋಷೆನ್ ಪ್ರಾಂತ್ಯಕ್ಕೆ ಬಂದಿದ್ದಾರೆ,” ಎಂದು ತಿಳಿಸಿದನು.


ಆದುದರಿಂದ ನೀವು ಸ್ವಲ್ಪವೂ ಸಂಕೋಚಪಡಬೇಕಾಗಿಲ್ಲ. ನಾನು ನಿಮ್ಮನ್ನೂ ನಿಮಗೆ ಸೇರಿದ ಎಲ್ಲರನ್ನೂ ಪೋಷಿಸುತ್ತೇನೆ,” ಎಂದು ಹೇಳಿ ಅವರನ್ನು ಸಂತೈಸಿ, ಅವರ ಸಂಗಡ ಪ್ರೀತಿಯಿಂದ ಮಾತಾಡಿದನು.


ನಿಮ್ಮ ಜನ ಧರೆಯಲ್ಲಿ ಉಳಿಯುವಂತೆಯೂ ನೀವು ಈ ವಿಪತ್ತಿಗೆ ಸಿಕ್ಕದೆ ಅಭಿವೃದ್ಧಿಯಾಗುವಂತೆಯೂ ದೇವರು ನನ್ನನ್ನು ನಿಮಗೆ ಮುಂಚಿತವಾಗಿ ಕಳಿಸಿದರು.


ಗೋಷೆನ್ ಪ್ರಾಂತ್ಯದಲ್ಲಿ ನನ್ನ ಬಳಿಯಲ್ಲೇ ನೀವೂ ನಿಮ್ಮ ಮಕ್ಕಳೂ ಮೊಮ್ಮಕ್ಕಳೂ ದನ, ಕುರಿ ಮೊದಲಾದ ಆಸ್ತಿಪಾಸ್ತಿಗಳ ಸಮೇತ ವಾಸಮಾಡಬಹುದು.


“ಬಟ್ಟಲು, ಬಿಂದಿಗೆ ಮುಂತಾದ ಪಾತ್ರೆಗಳನ್ನು ಮೊಳೆಗೆ ತಗಲುಹಾಕುವಂತೆ, ತಂದೆಯ ಮಕ್ಕಳು, ಮೊಮ್ಮಕ್ಕಳೆಲ್ಲರು ಅವನಿಗೆ ನೇತುಬೀಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು