ಆದಿಕಾಂಡ 47:13 - ಕನ್ನಡ ಸತ್ಯವೇದವು C.L. Bible (BSI)13 ಬರವು ಬಹು ಘೋರವಾಗಿತ್ತು. ದೇಶದ ಯಾವ ಭಾಗದಲ್ಲೂ ಆಹಾರ ಸಿಕ್ಕುತ್ತಿರಲಿಲ್ಲ. ಈ ನಿಮಿತ್ತ ಈಜಿಪ್ಟ್ ದೇಶವೂ ಕಾನಾನ್ ನಾಡೂ ಹಾಗೆ ಸೊರಗಿಹೋಗುತ್ತಿದ್ದುವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಬರವು ಬಹು ಘೋರವಾಗಿದ್ದುದರಿಂದ ದೇಶದ ಯಾವ ಭಾಗದಲ್ಲಿಯೂ ಆಹಾರ ಸಿಕ್ಕುತ್ತಿರಲಿಲ್ಲ. ಆ ಬರದ ನಿಮಿತ್ತ ಐಗುಪ್ತ ದೇಶವು ಹಾಗೂ ಕಾನಾನ್ ದೇಶವು ಕ್ಷಾಮದಿಂದ ಬರಡಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಬರವು ಬಹು ಘೋರವಾಗಿದ್ದದರಿಂದ ದೇಶದ ಯಾವ ಭಾಗದಲ್ಲಿಯೂ ಆಹಾರ ಸಿಕ್ಕುತ್ತಿರಲಿಲ್ಲ. ಆ ಬರದ ನಿವಿುತ್ತ ಐಗುಪ್ತದೇಶದವರಿಗೂ ಕಾನಾನ್ದೇಶದವರಿಗೂ ದಿಕ್ಕುತೋರದೆ ಹೋಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಬರಗಾಲವು ಹೆಚ್ಚು ಭೀಕರವಾಯಿತು. ದೇಶದಲ್ಲಿ ಎಲ್ಲಿಯೂ ಆಹಾರ ಇರಲಿಲ್ಲ. ಈಜಿಪ್ಟ್ ಮತ್ತು ಕಾನಾನ್ ದೇಶಗಳು ಬರಗಾಲದಿಂದ ಬಡದೇಶಗಳಾದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದರೆ ಬರವು ಅತಿ ಘೋರವಾಗಿದ್ದದ್ದರಿಂದ ದೇಶದಲ್ಲೆಲ್ಲಾ ಆಹಾರ ಇರಲಿಲ್ಲ. ಈಜಿಪ್ಟ್ ದೇಶವೂ, ಕಾನಾನ್ ದೇಶವೂ ಕ್ಷಾಮದಿಂದ ಕ್ಷೀಣವಾದವು. ಅಧ್ಯಾಯವನ್ನು ನೋಡಿ |
ಅಹಾಬನು ಅವನಿಗೆ, “ನಾವು ದೇಶಸಂಚಾರಮಾಡುತ್ತಾ ಎಲ್ಲಾ ಹಳ್ಳ ಬುಗ್ಗೆಗಳಿಗೆ ಹೋಗಿ ಅವುಗಳಲ್ಲಿ ಹುಲ್ಲು ಸಿಕ್ಕುತ್ತದೋ ನೋಡೋಣ; ಸಿಕ್ಕುವುದಾದರೆ ನಮ್ಮ ಕುದುರೆಗಳೂ ಹೇಸರಕತ್ತೆಗಳೂ ಉಳಿಯುವುವು; ಆಗ ಅವುಗಳನ್ನು ಕೊಲ್ಲುವ ಅವಶ್ಯಕತೆ ಇರುವುದಿಲ್ಲ,” ಎಂದು ಹೇಳಿ ಸಂಚಾರಕ್ಕಾಗಿ ನಾಡನ್ನು ಎರಡು ಭಾಗಮಾಡಿ, ಒಂದು ಭಾಗಕ್ಕೆ ಓಬದ್ಯನನ್ನು ಕಳುಹಿಸಿ, ಇನ್ನೊಂದು ಭಾಗಕ್ಕೆ ತಾನೇ ಹೊರಟುಹೋದನು.