Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:17 - ಕನ್ನಡ ಸತ್ಯವೇದವು C.L. Bible (BSI)

17 ಅವರು ತಮ್ಮ ಪಶುಪ್ರಾಣಿಗಳನ್ನು ಜೋಸೆಫನ ಬಳಿಗೆ ತಂದರು. ಅವನು ಅವರ ಕುದುರೆಗಳನ್ನೂ ದನಕುರಿಕತ್ತೆಗಳನ್ನೂ ತೆಗೆದುಕೊಂಡು ಅವರಿಗೆ ಧಾನ್ಯ ಕೊಡಿಸಿದನು. ಹೀಗೆ ಆ ವರ್ಷ ಅವರ ಪಶುಪ್ರಾಣಿಗಳನ್ನು ಪಡೆದು, ಧಾನ್ಯಕೊಟ್ಟು ಅವರನ್ನು ಕಾಪಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವರು ತಮ್ಮ ಕುರಿದನಗಳನ್ನು ಯೋಸೇಫನ ಬಳಿಗೆ ತೆಗೆದುಕೊಂಡು ಬರಲು, ಅವನು ಅವರ ಕುದುರೆಗಳನ್ನೂ, ಕುರಿದನಗಳನ್ನೂ, ಕತ್ತೆಗಳನ್ನೂ ತೆಗೆದುಕೊಂಡು ಅವರಿಗೆ ಧಾನ್ಯವನ್ನು ಕೊಟ್ಟನು. ಆ ವರ್ಷದಲ್ಲಿ ಅವರ ಕುರಿದನಗಳನ್ನೆಲ್ಲಾ ತೆಗೆದುಕೊಂಡು ಧಾನ್ಯವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವರು ತಮ್ಮ ಪಶುಗಳನ್ನು ಯೋಸೇಫನ ಬಳಿಗೆ ತರಲು ಅವನು ಅವರ ಕುದುರೆಗಳನ್ನೂ ಕುರಿದನಕತ್ತೆಗಳನ್ನೂ ತೆಗೆದುಕೊಂಡು ಅವರಿಗೆ ಧಾನ್ಯವನ್ನು ಕೊಡಿಸಿದನು. ಆ ವರುಷದಲ್ಲಿ ಅವರ ದನಕುರಿಗಳನ್ನೆಲ್ಲಾ ತೆಗೆದುಕೊಂಡು ಧಾನ್ಯವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದ್ದರಿಂದ ಜನರು ತಮ್ಮ ದನಕರುಗಳನ್ನೂ ಕುದುರೆಗಳನ್ನೂ ಇತರ ಎಲ್ಲಾ ಪಶುಗಳನ್ನೂ ಕೊಟ್ಟು ಆಹಾರವನ್ನು ಕೊಂಡುಕೊಂಡರು. ಆ ವರ್ಷ ಯೋಸೇಫನು ಅವರಿಗೆ ಆಹಾರವನ್ನು ಕೊಟ್ಟು ಅವರ ಪಶುಗಳನ್ನು ಕೊಂಡುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರು ತಮ್ಮ ಪಶುಗಳನ್ನೆಲ್ಲಾ ಯೋಸೇಫನ ಬಳಿಗೆ ತಂದರು. ಅವುಗಳ ಬದಲಾಗಿ ಅವನು ಆಹಾರ ಧಾನ್ಯ ಕೊಟ್ಟನು. ಅವರ ಕುದುರೆಗಳನ್ನೂ ಕುರಿಗಳನ್ನೂ ಆಡುಗಳನ್ನೂ ದನಗಳನ್ನೂ ಕತ್ತೆಗಳನ್ನೂ ಬದಲಾಗಿ ತೆಗೆದುಕೊಂಡನು. ಆ ವರ್ಷ ಅವರು ಆಹಾರಕ್ಕಾಗಿ ತಮ್ಮ ಎಲ್ಲಾ ಪಶುಪ್ರಾಣಿಗಳನ್ನು ಮಾರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:17
7 ತಿಳಿವುಗಳ ಹೋಲಿಕೆ  

“ಯಾರೂ ಇಬ್ಬರು ಯಜಮಾನರಿಗೆ ಜೀತಮಾಡಲಾಗದು. ಅವನು ಒಬ್ಬನನ್ನು ದ್ವೇಷಿಸಿ, ಇನ್ನೊಬ್ಬನನ್ನು ಪ್ರೀತಿಸುತ್ತಾನೆ; ಅಥವಾ, ಒಬ್ಬನೊಡನೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುತ್ತಾನೆ. ದೇವರಿಗೂ ದ್ರವ್ಯಕ್ಕೂ ಒಟ್ಟಿಗೆ ಸೇವೆಮಾಡಲು ನಿಮ್ಮಿಂದಾಗದು.”


ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಆಶ್ರಯಿಸದೆ, ಸಹಾಯಕ್ಕಾಗಿ ಈಜಿಪ್ಟಿಗೆ ತೆರಳುವವರಿಗೆ ಧಿಕ್ಕಾರ ! ಅವರಿಗೆ ಬೇಕು ಆ ನಾಡಿನ ಅಶ್ವಬಲ, ರಥಗಳ ಸಂಖ್ಯಾಬಲ, ಸವಾರರ ಶೌರ್ಯ.


ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ, ಎಂದ ಹಾಗೆ ಒಬ್ಬ ಮನುಷ್ಯ ಪ್ರಾಣ ಉಳಿಸಿಕೊಳ್ಳಲು ತನ್ನ ಸರ್ವಸ್ವವನ್ನೂ ತೊರೆದುಬಿಡುತ್ತಾನೆ.


ಅರಸ ಸೊಲೊಮೋನನ ಕುದುರೆಗಳು ಈಜಿಪ್ಟ್ ದೇಶದವುಗಳು; ಅವನ ವರ್ತಕರು ಅವುಗಳನ್ನು ಹಿಂಡುಗಟ್ಟಳೆಯಾಗಿ ಕೊಂಡುಕೊಂಡು ಬರುತ್ತಿದ್ದರು.


ಸರ್ವೇಶ್ವರನು ನಾಡಿನಲ್ಲಿರುವ ನಿನ್ನ ಎಲ್ಲ ಕುದುರೆ, ಕತ್ತೆ, ಒಂಟೆ, ದನ, ಕುರಿ, ಆಡು ಇವೆಲ್ಲ ಪ್ರಾಣಿಗಳ ಮೇಲೆ ಕೈಯೆತ್ತಿ ದೊಡ್ಡರೋಗ ಬರುವಂತೆ ಮಾಡುವರೆಂದು ತಿಳಿದುಕೊ.


ಜೋಸೆಫನು, “ನಿಮ್ಮ ದನಕರುಗಳನ್ನು ತನ್ನಿ, ಹಣವಿಲ್ಲದಿದ್ದರೆ ದನಕರುಗಳನ್ನು ತೆಗೆದುಕೊಂಡು ಧಾನ್ಯ ಕೊಡಿಸುತ್ತೇನೆ,” ಎಂದನು.


ಆ ವರ್ಷ ಕಳೆದು ಮಾರನೆಯ ವರ್ಷದಲ್ಲಿ ಅವರು ಅವನ ಬಳಿಗೆ ಬಂದು, “ನಮ್ಮ ಹಣವೆಲ್ಲ ವೆಚ್ಚವಾಯಿತು. ನಮ್ಮ ಪಶುಪ್ರಾಣಿಗಳು ದಣಿಯ ವಶವಾದುವು; ಇನ್ನು ಉಳಿದಿರುವುದು ನಮ್ಮ ಭೂಮಿ ಮತ್ತು ದೇಹಗಳೇ ಹೊರತು ಬೇರೇನೂ ಇಲ್ಲ; ದಣಿಗೆ ಮುಚ್ಚುಮರೆಯಿಲ್ಲದೆ ತಿಳಿಸುತ್ತಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು