Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:27 - ಕನ್ನಡ ಸತ್ಯವೇದವು C.L. Bible (BSI)

27 ಇಸ್ರಯೇಲರು ಈಜಿಪ್ಟ್ ದೇಶಕ್ಕೆ ಸೇರಿದ ಗೋಷೆನ್ ಪ್ರಾಂತ್ಯದಲ್ಲಿ ವಾಸಮಾಡಿದರು. ಅಲ್ಲಿ ಅವರು ಆಸ್ತಿಪಾಸ್ತಿಯನ್ನು ಸಂಪಾದಿಸಿಕೊಂಡು ಬಹು ಸಂತಾನವುಳ್ಳವರಾಗಿ ಅಭಿವೃದ್ಧಿಯಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಇಸ್ರಾಯೇಲರು ಐಗುಪ್ತ ದೇಶಕ್ಕೆ ಸೇರಿರುವ ಗೋಷೆನ್ ಸೀಮೆಯಲ್ಲಿ ವಾಸಮಾಡಿದರು. ಅದರಲ್ಲಿ ಅವರು ಆಸ್ತಿಯನ್ನು ಸಂಪಾದಿಸಿ ಬಹುಸಂತಾನವಾಗಿ ಬಹಳವಾಗಿ ಹೆಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಇಸ್ರಾಯೇಲ್ಯರು ಐಗುಪ್ತದೇಶಕ್ಕೆ ಸೇರಿರುವ ಗೋಷೆನ್ ಸೀಮೆಯಲ್ಲಿ ವಾಸಮಾಡಿದರು. ಅದರಲ್ಲಿ ಅವರು ಆಸ್ತಿಯನ್ನು ಸಂಪಾದಿಸಿ ಬಹುಸಂತಾನವಾಗಿ ಬಹಳವಾಗಿ ಹೆಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಇಸ್ರೇಲನು ಈಜಿಪ್ಟಿನಲ್ಲಿ ಇಳಿದುಕೊಂಡನು. ಅವನು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಿದನು. ಅವನ ಕುಟುಂಬವು ಬೆಳೆದು ತುಂಬ ದೊಡ್ಡದಾಯಿತು. ಅವರು ಈಜಿಪ್ಟಿನಲ್ಲಿ ಜಮೀನನ್ನು ಪಡೆದುಕೊಂಡರು ಮತ್ತು ಸುಖವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಇಸ್ರಾಯೇಲರು ಈಜಿಪ್ಟ್ ದೇಶದ ಗೋಷೆನ್ ಪ್ರಾಂತದಲ್ಲಿ ವಾಸವಾಗಿದ್ದು, ಆಸ್ತಿಯನ್ನು ಸಂಪಾದಿಸಿ, ಬೆಳೆದು ಬಹಳವಾಗಿ ವೃದ್ಧಿಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:27
19 ತಿಳಿವುಗಳ ಹೋಲಿಕೆ  

ಆಗ ದೇವರು, “ನಾನೇ ದೇವರು, ನಿನ್ನ ತಂದೆ ಆರಾಧಿಸಿದ ದೇವರು, ನೀನು ಈಜಿಪ್ಟ್ ದೇಶಕ್ಕೆ ಹೋಗಲು ಅಂಜಬೇಡ; ಅಲ್ಲಿ ನಿನ್ನಿಂದ ಮಹಾಜನಾಂಗ ಉತ್ಪನ್ನವಾಗುವಂತೆ ಮಾಡುವೆನು;


ಆದರೂ ಇಸ್ರಯೇಲನ ವಂಶವು ಅಭಿವೃದ್ಧಿಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಬೆಳೆಯಿತು. ಅವರು ಶಕ್ತಿಶಾಲಿಗಳಾದರು. ಆ ದೇಶದಲ್ಲೆಲ್ಲಾ ತುಂಬಿಕೊಂಡರು.


“ದೇವರು ಅಬ್ರಹಾಮನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವ ಕಾಲವು ಸಮೀಪಿಸಿತು. ಈಗಾಗಲೇ ಈಜಿಪ್ಟ್ ದೇಶದಲ್ಲಿ ನಮ್ಮ ಜನರ ಸಂಖ್ಯೆ ಅಧಿಕವಾಗಿ ಬೆಳೆದಿತ್ತು.


ಅಭಿವೃದ್ಧಿಯಾದರು ಆತನಾಶೀರ್ವಾದದಿಂದಲೆ I ಅವರಿಗಿರಲಿಲ್ಲ ದನಕರುಗಳಾವುದರ ಕೊರತೆ II


“ಸಭೆ ಸೇರಿಸುವೆನವರನು ನಿಸ್ಸಂದೇಹವಾಗಿ ವಿಮುಕ್ತಗೊಳಿಸುವೆನವರನು ಕರೆದು ಸನ್ನೆಮಾಡಿ ಹಿಂದಿನಂತೆ ಮುಂದೆಯೂ ಬೆಳೆವರವರು ಸಮೃದ್ಧಿಯಾಗಿ.


ತನ್ನ ಜನರ ಸಂತಾನವನು ಪ್ರಭು ಅಭಿವೃದ್ಧಿಗೊಳಿಸಿದ I ಶತ್ರುಗಳಿಗಿಂತಲೂ ಅವರನು ಬಲಿಷ್ಠರನ್ನಾಗಿಸಿದ II


ಆಗ ನೀವು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಸ್ವಲ್ಪ ಮಂದಿಯೊಡನೆ ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಮಹಾಬಲಿಷ್ಠ ಜನಾಂಗವಾದರು.


ನಿನ್ನ ತಂದೆ ಅಬ್ರಹಾಮನು ನನ್ನ ಮಾತನ್ನು ಕೇಳಿ ನಾನು ಹೇಳಿದಂತೆ ಮಾಡಿದನು; ನನ್ನ ಆಜ್ಞಾವಿಧಿಗಳನ್ನೂ ನೇಮನಿಯಮಗಳನ್ನೂ ಕೈಗೊಂಡು ನಡೆದನು. ಆದುದರಿಂದ ನಾನು ಅವನಿಗೆ ಮಾಡಿದ ಪ್ರಮಾಣವನ್ನು ನೆರವೇರಿಸುತ್ತೇನೆ.


ಹೆಚ್ಚಿಸಿದಿರಿ ಅವರ ಮಕ್ಕಳನು ಆಗಸದ ನಕ್ಷತ್ರಗಳಷ್ಟೆ; ಬರಮಾಡಿದಿರಿ ಆ ಮಕ್ಕಳನು ವಾಗ್ದತ್ತ ನಾಡಿಗೆ ‘ಅದ ಸೇರಿ, ವಶಮಾಡಿಕೊಳ್ಳಿ’ ಎಂದು ಹೇಳಿದಿರಾ ಪಿತೃಗಳಿಗೆ.


ನಿಮ್ಮ ಪಿತೃಗಳು, ಎಪ್ಪತ್ತುಮಂದಿ ಮಾತ್ರ. ಈಜಿಪ್ಟ್ ದೇಶಕ್ಕೆ ಹೋದರು; ಈಗಲಾದರೋ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗುವಂತೆ ಮಾಡಿದ್ದಾರೆ.


ಈಜಿಪ್ಟರು ಅವರಿಗೆ ಎಷ್ಟು ಕಿರುಕುಳ ಕೊಡುತ್ತಿದ್ದರೋ ಅಷ್ಟೂ ಹೆಚ್ಚಿ ಹರಡಿಕೊಳ್ಳುತ್ತಿದ್ದರು.


ನಿನ್ನ ಸಂತತಿ ಭೂಮಿಯ ಧೂಳಿನಂತೆ ಅಸಂಖ್ಯ ಆಗುವುದು; ನೀನು ಪೂರ್ವಪಶ್ಚಿಮ - ದಕ್ಷಿಣೋತ್ತರ ದಿಕ್ಕುಗಳಿಗೆ ಹರಡಿಕೊಳ್ಳುವೆ. ನಿನ್ನ ಮುಖಾಂತರ ಹಾಗೂ ನಿನ್ನ ಸಂತತಿಯ ಮುಖಾಂತರ ಜಗದ ಎಲ್ಲ ರಾಷ್ಟ್ರಗಳೂ ಆಶೀರ್ವಾದ ಪಡೆಯುವುವು.


ನಿನ್ನನ್ನು ಅತ್ಯಂತ ಫಲದಾಯಕ ಪುರುಷನನ್ನಾಗಿ ಮಾಡುತ್ತೇನೆ. ನಿನ್ನಿಂದ ರಾಷ್ಟ್ರಗಳೂ ರಾಜರುಗಳೂ ಉತ್ಪತ್ತಿಯಾಗುವರು.


ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯಾತರನ್ನಾಗಿ ಮಾಡುತ್ತೇನೆ. ಭೂಮಿಯ ಧೂಳನ್ನು ಲೆಕ್ಕಿಸಲು ಸಾಧ್ಯವಾದಲ್ಲಿ ನಿನ್ನ ಸಂತಾನದವರನ್ನು ಲೆಕ್ಕಿಸಲು ಸಾಧ್ಯವಾದೀತು.


ಭೂಮಿಯ ಮೇಲೆಲ್ಲ ನೀರು ಇದ್ದುದರಿಂದ, ಕಾಲಿಡುವುದಕ್ಕೆ ಸ್ಥಳ ಕಾಣದೆ ಈ ಪಾರಿವಾಳ ನಾವೆಗೆ ಹಿಂತಿರುಗಿತು. ನೋಹನು ಕೈ ಚಾಚಿ ಅದನ್ನು ಹಿಡಿದುಕೊಂಡು ನಾವೆಯೊಳಗೆ ಹಾಕಿಕೊಂಡನು.


ಅದು ಭೂಮಿಯ ಮೇಲಿದ್ದ ನೀರು ಒಣಗುವ ತನಕ ಹೋಗುತ್ತಾ ಬರುತ್ತಾ ಇತ್ತು.


ಇದರಲ್ಲಿ ವಾಸಿಸಿ, ವ್ಯಾಪಾರಮಾಡಿ, ನೀವು ಆಸ್ತಿಯನ್ನು ಸಂಪಾದಿಸಿಕೊಳ್ಳಬಹುದು,” ಎಂದು ಹೇಳಿದನು.


ಇದಲ್ಲದೆ ಅವನಿಗೆ ದೇವರು, “ನಾನೇ ಸರ್ವವಲ್ಲಭನಾದ ದೇವರು; ನೀನು ವೃದ್ಧಿಯಾಗಿ ಬಹುಸಂತಾನವುಳ್ಳವನಾಗು. ನಿನ್ನಿಂದ ರಾಷ್ಟ್ರವೊಂದು ಉಂಟಾಗುವುದು, ಅನೇಕ ರಾಷ್ಟ್ರಗಳೂ ರಾಜರುಗಳೂ ನಿನ್ನಿಂದ ಹುಟ್ಟುವರು.


ಫರೋಹನ ಅಪ್ಪಣೆಯ ಮೇರೆಗೆ ಜೋಸೆಫನು ತನ್ನ ತಂದೆಗೂ ಅಣ್ಣತಮ್ಮಂದಿರಿಗೂ ಈಜಿಪ್ಟಿನಲ್ಲಿ ವಾಸಸ್ಥಾನವನ್ನು ನೇಮಿಸಿ, ಅದರಲ್ಲಿ ಉತ್ತಮವಾಗಿದ್ದ ರಮ್ಸೇಸ್ ಪ್ರದೇಶದಲ್ಲಿ ಸೊತ್ತನ್ನು ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು