Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:7 - ಕನ್ನಡ ಸತ್ಯವೇದವು C.L. Bible (BSI)

7 ಬಳಿಕ ಜೋಸೆಫನು ತನ್ನ ತಂದೆ ಯಕೋಬನನ್ನು ಕರೆದುಕೊಂಡು ಬಂದು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಿದನು. ಯಕೋಬನು ಫರೋಹನನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೋಸೇಫನು ತನ್ನ ತಂದೆಯಾದ ಯಾಕೋಬನನ್ನು ಕರೆದುಕೊಂಡು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಲು, ಯಾಕೋಬನು ಫರೋಹನನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೋಸೇಫನು ತನ್ನ ತಂದೆಯಾದ ಯಾಕೋಬನನ್ನು ಕರಕೊಂಡು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಲು ಯಾಕೋಬನು ಫರೋಹನನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ಯೋಸೇಫನು ತನ್ನ ತಂದೆಯನ್ನು ಫರೋಹನ ಸನ್ನಿಧಿಗೆ ಕರೆಯಿಸಿದನು. ಯಾಕೋಬನು ಫರೋಹನನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೋಸೇಫನು ತನ್ನ ತಂದೆ ಯಾಕೋಬನನ್ನು ಕರೆದುಕೊಂಡು ಬಂದು, ಫರೋಹನ ಮುಂದೆ ನಿಲ್ಲಿಸಿದನು. ಯಾಕೋಬನು ಫರೋಹನನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:7
18 ತಿಳಿವುಗಳ ಹೋಲಿಕೆ  

ಫರೋಹನನ್ನು ಆಶೀರ್ವದಿಸಿ, ಅವನ ಸನ್ನಿಧಿಯಿಂದ ಹೊರಟುಹೋದನು.


ಸರ್ವರನ್ನೂ ಸನ್ಮಾನಿಸಿರಿ, ಸಹೋದರರನ್ನು ಸ್ನೇಹಿಸಿರಿ, ದೇವರಲ್ಲಿ ಭಯಭಕ್ತಿ ಇಡಿ, ದೇಶಾಧಿಕಾರಿಗಳಿಗೆ ಗೌರವ ನೀಡಿ.


ಬಳಿಕ ರೊಟ್ಟಿಯನ್ನು ತೆಗೆದುಕೊಂಡು, ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ, ಅದನ್ನು ಮುರಿದು, ಶಿಷ್ಯರಿಗೆ ಕೊಡುತ್ತಾ, “ಇದು ನಿಮಗಾಗಿ ಒಪ್ಪಿಸಲಾಗುವ ನನ್ನ ಶರೀರ, ನನ್ನ ಸ್ಮರಣೆಗಾಗಿ ಇದನ್ನು ಮಾಡಿರಿ,” ಎಂದರು.


ಅವರೆಲ್ಲರೂ ಊಟಮಾಡುತ್ತಿರುವಾಗ ಯೇಸುಸ್ವಾಮಿ ರೊಟ್ಟಿಯನ್ನು ತೆಗೆದುಕೊಂಡು ದೈವಸ್ತುತಿಮಾಡಿ, ಅದನ್ನು ಮುರಿದು, ಶಿಷ್ಯರಿಗೆ ಕೊಡುತ್ತಾ, “ಇದನ್ನು ತೆಗೆದುಕೊಂಡು ಭುಜಿಸಿರಿ, ಇದು ನನ್ನ ಶರೀರ,” ಎಂದರು.


ಆಗ ಎಲೀಷನು ಗೇಹಜಿಗೆ, “ನೀನು ಹೋಗಿ, ನಡುಕಟ್ಟಿಕೊಂಡು, ನನ್ನ ಕೋಲನ್ನು ತೆಗೆದುಕೊಂಡು ಹೋಗಿ, ಆ ಹುಡುಗನ ಮುಖದ ಮೇಲಿಡು; ಹೋಗುವಾಗ ದಾರಿಯಲ್ಲಿ ಯಾರನ್ನೂ ವಂದಿಸಬೇಡ; ಯಾವ ವಂದನೆಯನ್ನೂ ಸ್ವೀಕರಿಸಬೇಡ," ಎಂದು ಹೇಳಿ ಕಳುಹಿಸಿದನು.


ಅರಸ ದಾವೀದನ ಸೇವಕರು ನಮ್ಮ ಒಡೆಯನೂ ಅರಸನೂ ಆದ ದಾವೀದನ ಮುಂದೆ ಬಂದು, ‘ನಿಮ್ಮ ದೇವರು ನಿಮ್ಮ ಹೆಸರಿಗಿಂತಲೂ ಸೊಲೊಮೋನನ ಹೆಸರನ್ನು ಪ್ರಸಿದ್ಧಿಗೆ ತರಲಿ! ರಾಜ್ಯವನ್ನು ನಿಮ್ಮ ಕಾಲದಲ್ಲಿ ಇದ್ದುದಕ್ಕಿಂತ ಅವನ ಕಾಲದಲ್ಲಿ ಹೆಚ್ಚು ಅಭಿವೃದ್ಧಿಗೊಳಿಸಲಿ!’ ಎಂದು ಅವನನ್ನು ಹರಸಿದ್ದಾರೆ. ಅರಸನು ತನ್ನ ಹಾಸಿಗೆಯ ಮೇಲೆ ಬಿದ್ದುಕೊಂಡು,


ಜನರೆಲ್ಲರು ನದಿ ದಾಟಿದರು. ಅರಸನು ದಾಟಿದ ಮೇಲೆ ಬರ್ಜಿಲ್ಲೈಯನ್ನು ಮುದ್ದಿಟ್ಟು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಊರಿಗೆ ಮರಳಿದನು.


ಆಗ ಯೋವಾಬನು ನೆಲಕ್ಕೆ ಬಿದ್ದು ನಮಸ್ಕರಿಸಿ ಅರಸನನ್ನು ಹರಸಿ, “ಅರಸರೇ, ನನ್ನ ಒಡೆಯರೇ, ನೀವು ನಿಮ್ಮ ಸೇವಕನಾದ ನನ್ನ ಬಿನ್ನಹವನ್ನು ಆಲಿಸಿದ್ದರಿಂದ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆದೊರಕಿತೆಂದು ಈಗ ಗೊತ್ತಾಯಿಸು,” ಎಂದು ಹೇಳಿದನು.


ತೋವಿಗೂ ಹದದೆಜೆರನಿಗೂ ಹಗೆತನವಿತ್ತು. ದಾವೀದನು ಹದದೆಜೆರನ ಮೇಲೆ ದಾಳಿಮಾಡಿ ಅವನನ್ನು ಸೋಲಿಸಿದುದರಿಂದ ತೋವು ದಾವೀದನನ್ನು ಅಭಿನಂದಿಸುವುದಕ್ಕಾಗಿ ಹಾಗು ಹರಸುವುದಕ್ಕಾಗಿ ತನ್ನ ಮಗ ಯೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೆ ತಾಮ್ರ, ಬೆಳ್ಳಿ ಹಾಗು ಬಂಗಾರದ ಪಾತ್ರೆಗಳನ್ನು ತಂದನು.


ಎಲ್ಕಾನನಿಗೆ ಏಲಿ, “ನೀನು ಸರ್ವೇಶ್ವರನಿಗೆ ಸಮರ್ಪಿಸಿಬಿಟ್ಟ ಈ ಮಗನಿಗೆ ಬದಲಾಗಿ ಈ ಹನ್ನಳಿಂದ ನಿನಗೆ ಬೇರೆ ಮಕ್ಕಳಾಗಲಿ!” ಎಂದು ಹೇಳಿ ಅವನನ್ನೂ ಅವನ ಹೆಂಡತಿಯನ್ನೂ ಆಶೀರ್ವದಿಸುತ್ತಿದ್ದನು. ಅನಂತರ ಅವರು ಸ್ವಗ್ರಾಮಕ್ಕೆ ಹಿಂದಿರುಗುತ್ತಿದ್ದರು.


ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ, ಹೆಬ್ರೋನ್ ನಗರವನ್ನು ಅವನಿಗೆ ಸೊತ್ತಾಗಿ ಕೊಟ್ಟನು.


ನೀವು ಕೇಳಿಕೊಂಡಂತೆ ಸರ್ವೇಶ್ವರನನ್ನು ಆರಾಧಿಸಿ. ನಿಮ್ಮ ಕೋರಿಕೆಯಂತೆ ಕುರಿದನಗಳನ್ನೂ ತೆಗೆದುಕೊಂಡು ಹೋಗಬಹುದು. ನನ್ನ ಹಿತಕ್ಕಾಗಿಯೂ ಪ್ರಾರ್ಥನೆಮಾಡಿ,” ಎಂದನು.


ಯಕೋಬನು ತನ್ನ ತಂದೆ ಇಸಾಕನ ಬಳಿಗೆ ಮಮ್ರೆಗೆ ಬಂದನು. ಮಮ್ರೆಯು ಹೆಬ್ರೋನೆಂಬ ಕಿರ್ಯತರ್ಬಕ್ಕೆ ಸೇರಿದುದು. ಅದೇ ಅಬ್ರಹಾಮ್ ಹಾಗು ಇಸಾಕನು ಪರದೇಶಸ್ಥರಾಗಿ ವಾಸವಾಗಿದ್ದ ಸ್ಥಳ.


ಫರೋಹನು, “ನಿನಗೆಷ್ಟು ವರ್ಷ?” ಎಂದು ಕೇಳಿದನು.


ಇದಲ್ಲದೆ ಅವರನ್ನು ಆಶೀರ್ವದಿಸಿ ಕಳಿಸಿದನು. ಅವರು ತಮ್ಮ ತಮ್ಮ ನಿವಾಸಗಳಿಗೆ ಹೋದರು.


ಎಂಟನೆಯ ದಿವಸ ಜನರಿಗೆ ಹೋಗುವುದಕ್ಕೆ ಅಪ್ಪಣೆಯಾಯಿತು. ಅವರು ಅರಸನನ್ನು ವಂದಿಸಿ, ಸರ್ವೇಶ್ವರ ತಮ್ಮ ದಾಸ ದಾವೀದನಿಗೂ ತಮ್ಮ ಪ್ರಜೆಗಳಾದ ಇಸ್ರಯೇಲರಿಗೂ ಮಾಡಿದ ಸರ್ವೋಪಕಾರಗಳನ್ನು ಸ್ಮರಿಸಿ, ಆನಂದಚಿತ್ತರಾಗಿ ಹರ್ಷಿಸುತ್ತಾ, ತಮ್ಮ ತಮ್ಮ ನಿವಾಸಗಳಿಗೆ ತೆರಳಿದರು.


“ಭೂಮ್ಯಾಕಾಶಗಳನ್ನು ಉಂಟುಮಾಡಿದ ಪರಾತ್ಪರ ದೇವರ ಆಶೀರ್ವಾದ ಅಬ್ರಾಮನಿಗಿರಲಿ; ನಿನ್ನ ಶತ್ರುಗಳನ್ನು ನಿನ್ನ ಕೈವಶಮಾಡಿದ ಆ ಪರಾತ್ಪರ ದೇವರಿಗೆ ಸ್ತೋತ್ರವಾಗಲಿ!”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು