Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 48:17 - ಕನ್ನಡ ಸತ್ಯವೇದವು C.L. Bible (BSI)

17 ತನ್ನ ತಂದೆ ಬಲಗೈಯನ್ನು ಎಫ್ರಯಿಮನ ತಲೆಯ ಮೇಲೆ ಇಟ್ಟದ್ದು ಜೋಸೆಫನಿಗೆ ಹಿಡಿಸಲಿಲ್ಲ. ಅವನು ಆ ಕೈಯನ್ನು ಹಿಡಿದು ಎಫ್ರಯಿಮನ ತಲೆಯಿಂದ ಎತ್ತಿ ಮನಸ್ಸೆಯ ತಲೆಯ ಮೇಲೆ ಇಡುವಂತೆ ತಂದೆಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ತನ್ನ ತಂದೆಯು ಬಲಗೈಯನ್ನು ಎಫ್ರಾಯೀಮನ ತಲೆಯ ಮೇಲೆ ಇಡುವುದನ್ನು ಯೋಸೇಫನು ಕಂಡು ಅಸಮಾಧಾನಪಟ್ಟು ಅವನ ಕೈಯನ್ನು ಎಫ್ರಾಯೀಮನ ತಲೆಯಿಂದ ಎತ್ತಿ ಮನಸ್ಸೆಯ ತಲೆಯ ಮೇಲೆ ಇಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ತನ್ನ ತಂದೆಯು ಬಲಗೈಯನ್ನು ಎಫ್ರಾಯೀಮನ ತಲೆಯ ಮೇಲೆ ಇಡುವದನ್ನು ಯೋಸೇಫನು ಕಂಡು ಅಸಮಾಧಾನಪಟ್ಟು ಅವನ ಕೈಯನ್ನು ಎಫ್ರಾಯೀಮನ ತಲೆಯಿಂದ ಎತ್ತಿ ಮನಸ್ಸೆಯ ತಲೆಯ ಮೇಲೆ ಇಡುವದಕ್ಕಾಗಿ ಹಿಡಿದು ತಂದೆಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಇಸ್ರೇಲನು ತನ್ನ ಬಲಗೈಯನ್ನು ಎಫ್ರಾಯೀಮನ ತಲೆಯ ಮೇಲಿಟ್ಟಿದ್ದರಿಂದ ಯೋಸೇಫನು ಅಸಮಾಧಾನದಿಂದ ನೋಡಿ ತಂದೆಯ ಕೈಯನ್ನು ಹಿಡಿದುಕೊಂಡನು; ಅಲ್ಲದೆ ತಂದೆಯ ಕೈಯನ್ನು ಎಫ್ರಾಯೀಮನ ತಲೆಯ ಮೇಲಿಂದ ತೆಗೆದುಕೊಂಡು ಮನಸ್ಸೆಯ ತಲೆಯ ಮೇಲೆ ಇಡಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ತನ್ನ ತಂದೆಯು ಎಫ್ರಾಯೀಮನ ತಲೆಯ ಮೇಲೆ ಬಲಗೈಯನ್ನು ಇಟ್ಟದ್ದನ್ನು ಯೋಸೇಫನು ಕಂಡಾಗ, ಅದು ಅವನಿಗೆ ಇಷ್ಟವಾಗಿರಲಿಲ್ಲ. ಆದ್ದರಿಂದ ಅವನು ತನ್ನ ತಂದೆಯ ಕೈಯನ್ನು ಹಿಡಿದು, ಎಫ್ರಾಯೀಮನ ತಲೆಯ ಮೇಲಿಂದ ತೆಗೆದು, ಮನಸ್ಸೆಯ ತಲೆಯ ಮೇಲೆ ಇಡುವುದರಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 48:17
13 ತಿಳಿವುಗಳ ಹೋಲಿಕೆ  

ಮನಸ್ಸೆಯು ಜೇಷ್ಠಮಗನಾಗಿದ್ದರೂ ಯಕೋಬನು ತನ್ನ ಕೈಗಳನ್ನು ಅಡ್ಡಡ್ಡವಾಗಿ ಚಾಚಿ ಕಿರಿಯವನಾದ ಎಫ್ರಯಿಮನ ತಲೆಯ ಮೇಲೆ ಬಲಗೈಯನ್ನು, ಮನಸ್ಸೆಯ ತಲೆಯ ಮೇಲೆ ಎಡಗೈಯನ್ನು ಇಟ್ಟು,


ಅವರು ಹುಟ್ಟುವುದಕ್ಕೆ ಮುಂಚೆಯೇ, ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡುವುದಕ್ಕೆ ಮೊದಲೇ, “ಹಿರಿಯವನು ಕಿರಿಯವನಿಗೆ ಸೇವೆಮಾಡುವನು,” ಎಂದು ಆಕೆಗೆ ಹೇಳಲಾಗಿತ್ತು. ಇದರಿಂದ ದೇವರು ತಮಗಿಷ್ಟಬಂದವರನ್ನು ಆರಿಸಿಕೊಳ್ಳುತ್ತಾರೆಂಬ ಸಂಕಲ್ಪವು ಸ್ಥಿರಗೊಂಡಿತು. ಈ ಸಂಕಲ್ಪ ಮಾನವನು ಸಾಧಿಸುವ ಸತ್ಕಾರ್ಯಗಳ ಮೇಲೆ ಅಲ್ಲ, ಕರೆನೀಡುವ ದೇವರ ಚಿತ್ತದ ಮೇಲೆ ನೆಲೆಗೊಂಡಿದೆ.


ಸರ್ವೇಶ್ವರ ನಿನ್ನ ಹರ್ಷವನ್ನು ಕಂಡು ಬೇಸರಗೊಂಡಾನು; ತನ್ನ ಕೋಪವನ್ನು ಅವನ ಕಡೆಯಿಂದ ತಿರುಗಿಸಿಬಿಟ್ಟಾನು.


ಜನಗಣತಿ ಮಾಡಿದ್ದು ದೇವರಿಗೆ ಕೆಟ್ಟದ್ದು ಎಂದು ಕಂಡಿತು. ಆದ್ದರಿಂದ ಅವರು ಇಸ್ರಯೇಲರನ್ನು ಶಿಕ್ಷಿಸಿದರು.


ಇವನು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿ ಹಾಗು ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತಲೂ ದುಷ್ಟನು ಆಗಿದ್ದನು.


ಆದರೆ ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನೀನು ಅವನ ಚೆಲುವಿಕೆಯನ್ನಾಗಲಿ ಎತ್ತರವನ್ನಾಗಲಿ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಸರ್ವೇಶ್ವರ ಮನುಷ್ಯರಂತೆ ಬಹಿರಂಗದ ತೋರಿಕೆಯನ್ನು ನೋಡುವುದಿಲ್ಲ; ಅಂತರಂಗವನ್ನೇ ವೀಕ್ಷಿಸುತ್ತಾನೆ,” ಎಂದರು.


ಅದಕ್ಕೆ ಬಿಳಾಮನು, “ನಾನು ಪಾಪಮಾಡಿದೆ, ನೀನೆ ನನಗೆದುರಾಗಿ ದಾರಿಯಲ್ಲಿ ನಿಂತಿರುವುದು ನನಗೆ ತಿಳಿಯದೆ ಹೋಯಿತು. ನಾನು ಮಾಡುವುದು ನಿನಗೆ ಕೆಟ್ಟದ್ದಾಗಿ ತೋರಿದರೆ ಹಿಂದಕ್ಕೆ ತಿರುಗಿಕೊಳ್ಳುತ್ತೇನೆ,” ಎಂದನು.


ಇಸ್ರಯೇಲರು ತಮಗೆ ದುರವಸ್ಥೆ ಪ್ರಾಪ್ತವಾಯಿತೆಂದು ಸರ್ವೇಶ್ವರ ಸ್ವಾಮಿಗೆ ವಿರುದ್ಧ ಗುಣಗುಟ್ಟಿದರು. ಅದಕ್ಕೆ ಕೋಪಗೊಂಡ ಸರ್ವೇಶ್ವರ ಅವರ ಮಧ್ಯೆ ಬೆಂಕಿ ಬೀಳುವಂತೆ ಮಾಡಿದರು. ಇದರ ಪರಿಣಾಮವಾಗಿ ಪಾಳೆಯದ ಕಡೇಭಾಗದಲ್ಲಿದ್ದವರು ಸುಟ್ಟುಹೋದರು.


ಈ ನಡತೆ ಸರ್ವೇಶ್ವರ ಸ್ವಾಮಿಯ ದೃಷ್ಟಿಯಲ್ಲಿ ಕೆಟ್ಟದಾಗಿತ್ತು. ಆದ್ದರಿಂದ ಸರ್ವೇಶ್ವರ ಅವನನ್ನೂ ಸಾವಿಗೀಡುಮಾಡಿದರು.


ಕಾನಾನ್ಯರ ಹೆಣ್ಣುಗಳು ತನ್ನ ತಂದೆ ಇಸಾಕನಿಗೆ ಹಿಡಿಸಲಿಲ್ಲ ಎಂಬುದನ್ನು ಅರಿತುಕೊಂಡ ಅವನು


“ಹಾಗಲ್ಲ ಅಪ್ಪಾ, ಇವನೇ ಜೇಷ್ಠ ಪುತ್ರ; ಬಲಗೈಯನ್ನು ಇವನ ತಲೆಯ ಮೇಲೆ ಇಡು”, ಎಂದು ಹೇಳಿದ.


ಜೋಸೆಫನ ಚೊಚ್ಚಲ ಮಗ ಮನಸ್ಸೆಯ ವಂಶದವರಿಗೆ ದೊರಕಿದ ಸೊತ್ತಿನ ವಿವರ ಇದು: ಮನಸ್ಸೆಯ ಹಿರಿಯ ಮಗನೂ ಗಿಲ್ಯಾದನ ತಂದೆಯೂ ಆದ ಮಾಕೀರನು ಯುದ್ಧವೀರನು. ಆದ್ದರಿಂದ ಅವನಿಗೆ ಗಿಲ್ಯಾದ, ಬಾಷಾನ ಎಂಬ ಪ್ರಾಂತ್ಯಗಳು ಸಿಕ್ಕಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು