Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 48:18 - ಕನ್ನಡ ಸತ್ಯವೇದವು C.L. Bible (BSI)

18 “ಹಾಗಲ್ಲ ಅಪ್ಪಾ, ಇವನೇ ಜೇಷ್ಠ ಪುತ್ರ; ಬಲಗೈಯನ್ನು ಇವನ ತಲೆಯ ಮೇಲೆ ಇಡು”, ಎಂದು ಹೇಳಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೋಸೇಫನು ತಂದೆಗೆ, “ಅಪ್ಪಾ, ಇವನೇ ಚೊಚ್ಚಲ ಮಗನು ಬಲಗೈಯನ್ನು ಇವನ ತಲೆಯ ಮೇಲೆ ಇಡಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಹಾಗಲ್ಲಪ್ಪಾ; ಇವನೇ ಚೊಚ್ಚಲಮಗನು; ಬಲಗೈಯನ್ನು ಇವನ ತಲೆಯ ಮೇಲೆ ಇಡಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೋಸೇಫನು ತನ್ನ ತಂದೆಗೆ, “ನೀನು ನಿನ್ನ ಬಲಗೈಯನ್ನು ತಪ್ಪಾಗಿ ಎಫ್ರಾಯೀಮನ ಮೇಲೆ ಇಟ್ಟಿರುವೆ. ಮೊದಲು ಹುಟ್ಟಿದವನು ಮನಸ್ಸೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೋಸೇಫನು ತನ್ನ ತಂದೆಗೆ, “ಅಪ್ಪಾ, ಹಾಗಲ್ಲ, ಇವನೇ ಜೇಷ್ಠಪುತ್ರನು. ಇವನ ತಲೆಯ ಮೇಲೆ ಬಲಗೈ ಇಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 48:18
11 ತಿಳಿವುಗಳ ಹೋಲಿಕೆ  

ಅದಕ್ಕೆ ನಾನು, ‘ಬೇಡವೇ ಬೇಡ ಸ್ವಾಮಿ, ಅಶುದ್ಧ ಹಾಗು ಅಸ್ಪೃಶ್ಯವಾದುದು ಯಾವುದೂ ನನ್ನ ಬಾಯನ್ನು ಎಂದೂ ಹೊಕ್ಕಿಲ್ಲ,’ ಎಂದೆ.


ಪೇತ್ರನು, “ಇದು ಬೇಡವೆ ಬೇಡ ಸ್ವಾಮಿ, ಅಶುದ್ಧ ಹಾಗೂ ನಿಷಿದ್ಧ ಆದುದನ್ನು ನಾನೆಂದೂ ತಿಂದವನಲ್ಲ,” ಎಂದನು.


ಅದಕ್ಕೆ ಅವರು, ‘ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆಹೋದೀತು, ನೀವು ಅಂಗಡಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು,’ ಎಂದರು.


ನಿಮ್ಮಲ್ಲಿ ಗಂಡಸರು ಮಾತ್ರ ಹೋಗಿ ಸರ್ವೇಶ್ವರನನ್ನು ಆರಾಧಿಸಬಹುದು. ನೀವು ಕೇಳಿಕೊಂಡದ್ದು ಅಷ್ಟೇ ಅಲ್ಲವೆ?” ಎಂದು ಹೇಳಿ ಅವರನ್ನು ತನ್ನ ಸನ್ನಿಧಿಯಿಂದ ಹೊರಡಿಸಿಬಿಟ್ಟನು.


ರೂಬೇನನೇ, ನೀನೆನ್ನ ಜೇಷ್ಠಪುತ್ರನು ನನ್ನ ಚೈತನ್ಯಸ್ವರೂಪನು, ನನ್ನ ವೀರ್ಯದ ಪ್ರಥಮ ಫಲ ನೀನು ಹಿರಿಮೆಯಲು, ಒಲುಮೆಯಲು ಪ್ರಮುಖನೆನಿಸಿಕೊಳ್ಳುವವನು.


ಜೋಸೆಫನು ತನ್ನ ಅಣ್ಣತಮ್ಮಂದಿರನ್ನು, ಹಿರಿಯವನು ಮೊದಲ್ಗೊಂಡು ಕಿರಿಯವನವರೆಗೂ, ಅವರವರ ಮಯಸ್ಸಿನ ಪ್ರಕಾರ ಕುಳ್ಳಿರಿಸಿದ್ದನು. ಇದನ್ನು ಗಮನಿಸಿದ ಅವರು ಒಬ್ಬರನ್ನೊಬ್ಬರು ನೋಡುತ್ತಾ ಆಶ್ಚರ್ಯಪಟ್ಟರು.


ಅದಕ್ಕೆ ಲಾಬಾನನು, “ಹಿರಿಯ ಮಗಳನ್ನು ಇರಿಸಿಕೊಂಡು ಕಿರಿಯ ಮಗಳನ್ನು ಮದುವೆಮಾಡಿಕೊಡುವುದು ನಮ್ಮ ನಾಡಿನ ಪದ್ಧತಿಯಲ್ಲ.


ತನ್ನ ಹಿರಿಯ ಮಗ ಏಸಾವನ ಬಟ್ಟೆಗಳಲ್ಲಿ ಶ್ರೇಷ್ಠವಾದವು ಮನೆಯಲ್ಲಿ ಆಕೆಯ ವಶದಲ್ಲಿದ್ದವು. ಅವುಗಳನ್ನು ತೆಗೆದು ಕಿರಿಯ ಮಗ ಯಕೋಬನಿಗೆ ತೊಡಿಸಿದಳು


ಅದಕ್ಕೆ ಲೋಟನು, “ಸ್ವಾಮೀ ಅದು ನನ್ನಿಂದಾಗದು;


ತನ್ನ ತಂದೆ ಬಲಗೈಯನ್ನು ಎಫ್ರಯಿಮನ ತಲೆಯ ಮೇಲೆ ಇಟ್ಟದ್ದು ಜೋಸೆಫನಿಗೆ ಹಿಡಿಸಲಿಲ್ಲ. ಅವನು ಆ ಕೈಯನ್ನು ಹಿಡಿದು ಎಫ್ರಯಿಮನ ತಲೆಯಿಂದ ಎತ್ತಿ ಮನಸ್ಸೆಯ ತಲೆಯ ಮೇಲೆ ಇಡುವಂತೆ ತಂದೆಗೆ,


ಆದರೆ ತಂದೆ ಅದಕ್ಕೆ ಒಪ್ಪದೆ, “ಗೊತ್ತು ಮಗನೇ, ನನಗೆ ಗೊತ್ತು; ಇವನಿಂದಲೂ ಒಂದು ರಾಷ್ಟ್ರ ಉತ್ಪತ್ತಿಯಾಗುವುದು; ಇವನೂ ಬಲಿಷ್ಠನಾಗುವನು. ಅವನಿಂದ ರಾಷ್ಟ್ರಗಳ ಸಮೂಹವೆ ಉತ್ಪತ್ತಿಯಾಗುವುದು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು