Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 48:20 - ಕನ್ನಡ ಸತ್ಯವೇದವು C.L. Bible (BSI)

20 ಆ ದಿನ ಅವರನ್ನು ಆಶೀರ್ವದಿಸುತ್ತಾ ಹೀಗೆಂದನು: "ಎಫ್ರಯಿಮ್ - ಮನಸ್ಸೆಯಂತೆ ನಿಮ್ಮನ್ನೂ ಅಭಿವೃದ್ಧಿಗೊಳಿಸಲಿ ದೇವರು! ಹೀಗೆ ನಿಮ್ಮ ಹೆಸರನ್ನು ಉಚ್ಚರಿಸುತ್ತಾ ಇತರರನ್ನು ಆಶೀರ್ವದಿಸುವರು ಇಸ್ರಯೇಲರು". ಈ ರೀತಿಯಾಗಿ ಅವನು ಎಫ್ರಯಿಮನನ್ನು ಮನಸ್ಸೆಗಿಂತ ಮುಂದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆ ದಿನದಲ್ಲಿ ಅವನು ಅವರನ್ನು ಆಶೀರ್ವದಿಸಿ, “ನಿಮ್ಮ ಹೆಸರಿನಲ್ಲಿ ಇಸ್ರಾಯೇಲರು ಆಶೀರ್ವದಿಸಲ್ಪಡುವರು. ಎಫ್ರಾಯೀಮ್ ಹಾಗೂ ಮನಸ್ಸೆಯ ಹಾಗೆ ದೇವರು ನಿಮ್ಮನ್ನೂ ಆಶೀರ್ವದಿಸಲಿ” ಎಂದು ಹೇಳಿ ಎಫ್ರಾಯೀಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆ ಕಾಲದಲ್ಲಿ ಅವನು ಅವರನ್ನು ಆಶೀರ್ವದಿಸಿ - ಇಸ್ರಾಯೇಲ್ಯರು ಯಾರನ್ನಾದರೂ ಆಶೀರ್ವದಿಸುವಾಗ - ಎಫ್ರಾಯೀಮನಿಗೂ ಮನಸ್ಸೆಗೂ ಉಂಟಾದ ಸಂತತಿಯಂತೆ ದೇವರು ನಿನಗೂ ಸಂತಾನವನ್ನು ಅನುಗ್ರಹಿಸಲಿ ಎಂದು ನಿಮ್ಮನ್ನು ದೃಷ್ಟಾಂತಮಾಡಿ ಹೇಳುವರು ಅಂದನು. ಹೀಗೆ ಹೇಳಿದ್ದರಿಂದ ಎಫ್ರಾಯೀಮನನ್ನು ಮನಸ್ಸೆಗೆ ಮುಂದಾಗಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅಂದು ಇಸ್ರೇಲನು ಅವರನ್ನು ಆಶೀರ್ವದಿಸಿ, “ಇಸ್ರೇಲರು ನಿಮ್ಮ ಹೆಸರುಗಳ ಮೂಲಕ ಬೇರೆಯವರನ್ನು ಆಶೀರ್ವದಿಸುವರು. ‘ದೇವರು ನಿನ್ನನ್ನು ಎಫ್ರಾಯೀಮನಂತೆಯೂ ಮನಸ್ಸೆಯಂತೆಯೂ ಮಾಡಲಿ’ ಎಂದು ಹೇಳುವರು” ಎಂದನು. ಹೀಗೆ, ಇಸ್ರೇಲನು ಎಫ್ರಾಯೀಮನನ್ನು ಮನಸ್ಸೆಗಿಂತ ದೊಡ್ಡವನನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಹೀಗೆ ಅವನು ಅವರನ್ನು ಆ ದಿನದಲ್ಲಿ ಆಶೀರ್ವದಿಸಿ, ಹೀಗೆಂದನು: “ನಿಮ್ಮ ಹೆಸರಿನಲ್ಲಿ ಇಸ್ರಾಯೇಲರು ಈ ಆಶೀರ್ವಾದವನ್ನು ಹೇಳುವರು: ‘ಎಫ್ರಾಯೀಮ್ ಮನಸ್ಸೆಯರ ಹಾಗೆ ದೇವರು ನಿನ್ನನ್ನು ಮಾಡಲಿ.’ ” ಹೀಗೆ ಹೇಳುತ್ತಾ ಯಾಕೋಬನು ಎಫ್ರಾಯೀಮನಿಗೆ ಮನಸ್ಸೆಗಿಂತಲೂ ಉನ್ನತಸ್ಥಾನವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 48:20
13 ತಿಳಿವುಗಳ ಹೋಲಿಕೆ  

“ಸಾವಿರ, ಹತ್ತು ಸಾವಿರ, ಸಂತತಿಯಾಗಲಿ, ಎಲೆ ತಂಗಿ ನಿನಗೆ; ವೈರಿಗಳ ನಗರಗಳು ಸ್ವಾಧೀನವಾಗಲಿ ನಿನ್ನ ಸಂತತಿಗೆ!”


“ಸರ್ವಶಕ್ತ ದೇವರು ನಿನ್ನನ್ನು ಆಶೀರ್ವದಿಸಲಿ; ನಿನಗೆ ಬಹಳ ಸಂತತಿಯನ್ನು ಕೊಡಲಿ; ನಿನ್ನಿಂದ ಅನೇಕ ಜನಾಂಗಗಳು ಹುಟ್ಟುವಂತೆ ಅನುಗ್ರಹಿಸಲಿ;


ನಾಡನ್ನು ಸಂಚರಿಸಿ ನೋಡಿಬರುವುದಕ್ಕೆ ಮೋಶೆ ಕಳಿಸಿದ್ದ ವ್ಯಕ್ತಿಗಳ ಹೆಸರುಗಳು ಇವೇ. ಮೋಶೆ ನೂನನ ಮಗ ಹೋಶೇಯನಿಗೆ ‘ಯೆಹೋಶುವ’ ಎಂದು ಹೆಸರಿಟ್ಟನು.


ಜೋಸೆಫ್ ಅಂದರೆ ಮನಸ್ಸೆ ಕುಲದ ಸೂಸೀಯ ಮಗ ಗದ್ದೀ


ಎಂಟನೆಯ ದಿನ ಮನಸ್ಸೆ ಕುಲಾಧಿಪತಿ ಪೆದಾಚೂರನ ಮಗ ಗಮ್ಲೀಯೇಲನು ತಂದ ಕಾಣಿಕೆಗಳು:


ಏಳನೆಯ ದಿನ ಎಫ್ರಾಯಿಮ್ ಕುಲಾಧಿಪತಿ ಅಮ್ಮೂಹೂದನ ಮಗ ಎಲೀಷಾವನು ತಂದ ಕಾಣಿಕೆಗಳು:


ಎಫ್ರಾಯೀಮ್ ಕುಲದ ನೂನನ ಮಗ ಹೋಶೇಯ


ವಿಶ್ವಾಸದಿಂದಲೇ ಯಕೋಬನು, ತಾನು ಸಾಯುವ ಸಮಯದಲ್ಲಿ ಜೋಸೆಫನ ಪ್ರತಿಯೊಬ್ಬ ಮಗನನ್ನೂ ಆಶೀರ್ವದಿಸಿದನು; ಊರುಗೋಲಿನ ಮೇಲೆ ಬಾಗಿಕೊಂಡೇ ದೇವರನ್ನು ಆರಾಧಿಸಿದನು.


ಬಳಿಕ ಯಕೋಬನು ಜೋಸೆಫನಿಗೆ, “ನನಗೆ ಮರಣ ಸಮೀಪಿಸಿದೆ; ಆದರೆ ದೇವರು ನಿಮ್ಮೊಂದಿಗಿದ್ದು ನಿಮ್ಮನ್ನು ಪಿತೃಗಳ ನಾಡಿಗೆ ಮರಳಿ ಬರಮಾಡುವರು.


ಜೋಸೆಫ್ಯರು ಯೆಹೋಶುವನಿಗೆ, “ನೀವು ಚೀಟುಹಾಕಿ, ನಮಗೆ ಒಂದೇ ಒಂದುಭಾಗವನ್ನು ಕೊಟ್ಟಿದ್ದೀರಿ, ಇದು ಸರಿಯೆ? ಸರ್ವೇಶ್ವರ ಸ್ವಾಮಿ ನಮ್ಮನ್ನು ಇಂದಿನವರೆಗೂ ಆಶೀರ್ವದಿಸಿ ನಮ್ಮನ್ನು ಮಹಾಜನಾಂಗವಾಗಿಸಿದ್ದಾರಲ್ಲವೆ?” ಎಂದು ಕೇಳಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು