Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:15 - ಕನ್ನಡ ಸತ್ಯವೇದವು C.L. Bible (BSI)

15 ಸೂಕ್ತವೆಂದುಕೊಂಡು ತನ್ನ ನಾಡು ವಿಶ್ರಾಂತಿಗೆ, ಸುಖಾನುಭವಕೆ ಬಗ್ಗಿಸುವನು ಬೆನ್ನನು ಹೊರೆ ಹೊರುವುದಕ್ಕೆ, ಬಿಟ್ಟಿಯ ಕೆಲಸಕ್ಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ತಾನು ಸೇರಿದ ಪ್ರದೇಶವು ವಿಶ್ರಾಂತಿಗೆ ಅನುಕೂಲವೂ ಸುಖಾಸ್ಪದವೂ ಆಗಿರುವುದನ್ನು ಕಂಡನು. ಅವನು ಹೊರೆಯನ್ನು ಹೊರುವುದಕ್ಕೆ ಬೆನ್ನು ಬಗ್ಗಿಸಿಕೊಂಡು ಬಿಟ್ಟೀ ಸೇವೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ತಾನು ಸೇರಿದ ಪ್ರದೇಶವು ವಿಶ್ರಾಂತಿಗೆ ಅನುಕೂಲವೂ ಸುಖಾಸ್ಪದವೂ ಆಗಿರುವದನ್ನು ನೋಡಿ ಅವನು ಹೊರೆಯನ್ನು ಹೊರುವದಕ್ಕೆ ಬೆನ್ನು ಬೊಗ್ಗಿಸಿಕೊಂಡು ಬಿಟ್ಟೀ ಕೆಲಸವನ್ನು ಮಾಡುವವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅವನು ತನ್ನ ವಿಶ್ರಾಂತಿಗೆ ಅನುಕೂಲವಾಗಿರುವ ಮತ್ತು ಪ್ರಶಾಂತವಾಗಿರುವ ನಾಡನ್ನು ನೋಡುವನು. ಅವನು ಭಾರವಾದ ಹೊರೆಗಳನ್ನು ಹೊರುವುದಕ್ಕೂ ಗುಲಾಮನಂತೆ ದುಡಿಯುವುದಕ್ಕೂ ಒಪ್ಪಿಕೊಳ್ಳುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ವಿಶ್ರಾಂತಿಯು ಒಳ್ಳೆಯದೆಂದೂ ದೇಶವು ರಮ್ಯವೆಂದೂ ನೋಡಿ ಹೊರೆ ಹೊರುವುದಕ್ಕೆ ತನ್ನ ಹೆಗಲನ್ನು ಬಗ್ಗಿಸಿ ಬಿಟ್ಟಿಯ ಕೆಲಸ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:15
10 ತಿಳಿವುಗಳ ಹೋಲಿಕೆ  

ಭಾರವಾದ ಹಾಗೂ ಹೊರಲಾಗದ ಹೊರೆಗಳನ್ನು ಕಟ್ಟಿ ಮಾನವರ ಹೆಗಲ ಮೇಲೆ ಹೇರುತ್ತಾರೆ. ತಾವಾದರೋ ಅವನ್ನು ಕಿರುಬೆರಳಿನಿಂದಲೂ ಮುಟ್ಟಲೊಲ್ಲರು.


“ನರಪುತ್ರನೇ, ಬಾಬಿಲೋನಿನ ನೆಬೂಕದ್ನೆಚ್ಚರನು ಟೈರಿಗೆ ಮುತ್ತಿಗೆ ಹಾಕಿ, ತನ್ನ ಸೈನಿಕರಿಂದ ಬಹು ಶ್ರಮದ ಸೇವೆಯನ್ನು ಮಾಡಿಸಿದ್ದಾನೆ; ಪ್ರತಿಯೊಬ್ಬನ ತಲೆ ಬೋಳಾಗಿದೆ. ಪ್ರತಿಯೊಬ್ಬನ ಹೆಗಲು ಕಾಯಿಕಟ್ಟಿದೆ; ಆದರೂ ಆ ಮುತ್ತಿಗೆಯಲ್ಲಿ ಅವನು ಪಟ್ಟ ಶ್ರಮಕ್ಕೆ ಅವನಿಗಾಗಲಿ ಅವನ ಸೈನಿಕರಿಗಾಗಲಿ ಟೈರಿನಿಂದ ಫಲವೇನೂ ಸಿಕ್ಕಲಿಲ್ಲ.


ಅಪರಿಚಿತ ವಾಣಿಯೊಂದು ನುಡಿಯಿತೀ ಮಾತನು : I “ತಪ್ಪಿಸಿದೆ ನಾನು ಹೆಗಲಮೇಲೆ ನೀ ಹೊರೆಹೊರುವುದನು I ಬಿಡುಗಡೆ ಮಾಡಿದೆ ಗೂಡೆಯೆತ್ತುವ ಕೈಗಳನು II


ಸರ್ವೇಶ್ವರನ ಅನುಗ್ರಹದಿಂದ ಸುತ್ತಮುತ್ತ ಇದ್ದ ವೈರಿಗಳ ಭಯ ನಿಂತುಹೋಯಿತು. ದಾವೀದನು ನೆಮ್ಮದಿಯಿಂದ ಅರಮನೆಯಲ್ಲಿ ವಾಸಿಸುತ್ತಿದ್ದನು.


ನಾಡಿನಲ್ಲಿ ನಾಲ್ವತ್ತು ವರ್ಷಗಳ ಕಾಲ ನೆಮ್ಮದಿ ನೆಲಸಿತ್ತು. ತರುವಾಯ ಕೆನಜನ ಮಗ ಒತ್ನೀಯೇಲನು ಮರಣ ಹೊಂದಿದನು.


ಅದರ ಹಿಂದಿನ ಹೆಸರು, ‘ಕಿರ್ಯತ್ ಅರ್ಬ’ ಎಂದು. ಅರ್ಬ ಎಂಬವನು ಈ ಎತ್ತರದ ವ್ಯಕ್ತಿಗಳಲ್ಲಿ ಪ್ರಮುಖನು. ಯುದ್ಧವು ನಿಂತಿತು. ನಾಡಿನಲ್ಲಿ ಶಾಂತಿಸಮಾಧಾನ ನೆಲೆಸಿತು.


ಇಸ್ಸಾಕಾರನು ಕುರಿಹಟ್ಟಿಗಳ ನಡುವೆ ಮಲಗಿರುವ ದೊಡ್ಡ ಕತ್ತೆ.


ದಾನನು ತನ್ನ ಜನರನ್ನಾಳುವನು ಇಸ್ರಯೇಲಿನಿತರ ಕುಲಗಳಂತೆ.


ಚೂಟಿಯಾದವನು ಆಳುವನು ಯಜಮಾನನಾಗಿ; ಮೈಗಳ್ಳನು ಬಾಳುವನು ಗುಲಾಮನಾಗಿ.


ಆ ಅಸ್ಸೀರಿಯಾದವರು ಕತ್ತಿಯಿಂದ ಹತರಾಗುವರು, ಮನುಷ್ಯರ ಕತ್ತಿಯಿಂದಲ್ಲ; ಖಡ್ಗವು ಅವರನ್ನು ಕಬಳಿಸುವುದು, ಅದು ಮಾನವ ಖಡ್ಗವಲ್ಲ. ಅವರು ಕತ್ತಿಗೆ ಹೆದರಿ ಓಡುವರು. ಅವರ ಯುವಕರು ಗುಲಾಮರಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು