Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:29 - ಕನ್ನಡ ಸತ್ಯವೇದವು C.L. Bible (BSI)

29 ಯಕೋಬನು ತನ್ನ ಮಕ್ಕಳಿಗೆ ಕೊಟ್ಟ ಆಜ್ಞೆ ಇದು: “ನಾನು ನನ್ನ ದಿವಂಗತ ಪೂರ್ವಜರನ್ನು ಸೇರುವ ಕಾಲ ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂಮಿಯಲ್ಲಿರುವ ಗವಿಯೊಳಗೆ, ಪಿತೃಗಳ ಬಳಿಯಲ್ಲಿ ನನ್ನನ್ನು ಸಮಾಧಿಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಇಸ್ರಾಯೇಲನು ತನ್ನ ಮಕ್ಕಳಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ, “ನಾನು ನನ್ನ ಪೂರ್ವಿಕರ ಬಳಿಗೆ ಸೇರಬೇಕಾದ ಕಾಲವು ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂಮಿಯಲ್ಲಿರುವ ಗವಿಯೊಳಗೆ ನನ್ನನ್ನು ನನ್ನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಇಸ್ರಾಯೇಲನು ತನ್ನ ಮಕ್ಕಳಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ - ನಾನು ನನ್ನ ಪಿತೃಗಳ ಬಳಿಗೆ ಸೇರಬೇಕಾದ ಕಾಲ ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂವಿುಯಲ್ಲಿರುವ ಗವಿಯೊಳಗೆ ನನಗೆ ಪಿತೃಗಳ ಬಳಿಯಲ್ಲಿ ಸಮಾಧಿಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಬಳಿಕ ಇಸ್ರೇಲನು ಅವರಿಗೆ ಈ ಆಜ್ಞೆಯನ್ನು ಕೊಟ್ಟನು: “ನಾನು ಸತ್ತಾಗ, ನನ್ನ ಪೂರ್ವಿಕರ ಸಂಗಡವಿರಲು ಇಷ್ಟಪಡುತ್ತೇನೆ. ನನ್ನ ಪೂರ್ವಿಕರಿಗೆ ಸಮಾಧಿ ಮಾಡಿರುವ ಹಿತ್ತಿಯನಾದ ಎಫ್ರೋನನ ಗವಿಯಲ್ಲಿ ನನಗೆ ಸಮಾಧಿಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅವನು ಅವರಿಗೆ ಆಜ್ಞಾಪಿಸಿ ಹೇಳಿದ್ದೇನೆಂದರೆ, “ನಾನು ನನ್ನ ಜನರೊಂದಿಗೆ ಸೇರಿಕೊಳ್ಳುತ್ತೇನೆ. ನನ್ನ ಪಿತೃಗಳ ಸಂಗಡ ಹಿತ್ತಿಯನಾದ ಎಫ್ರೋನನ ಹೊಲದಲ್ಲಿರುವ ಗವಿಯಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:29
16 ತಿಳಿವುಗಳ ಹೋಲಿಕೆ  

ಅವನ ಶವವನ್ನು ಕಾನಾನ್ ನಾಡಿಗೆ ಹೊತ್ತುಕೊಂಡು ಹೋಗಿ ಮಕ್ಪೇಲ ಎಂಬ ಬಯಲಿನಲ್ಲಿರುವ ಗವಿಯೊಳಗೆ ಸಮಾಧಿಮಾಡಿದರು. ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಮಮ್ರೆಗೆದುರಿನಲ್ಲಿರುವ ಆ ಗವಿಯನ್ನು ಸುತ್ತಲು ಇರುವ ಭೂಮಿ ಸಮೇತ, ಸ್ವಂತ ಸ್ಮಶಾನಭೂಮಿಗಾಗಿ ಕೊಂಡುಕೊಂಡಿದ್ದನು.


ನಾನು ಮೃತರಾದ ಪಿತೃಗಳೊಂದಿಗೆ ಸೇರಿಕೊಂಡಾಗ, ನನ್ನ ಶವವನ್ನು ಈಜಿಪ್ಟ್ ದೇಶದಿಂದ ತೆಗೆದುಕೊಂಡು ಹೋಗಿ, ಆ ಪಿತೃಗಳ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಬೇಕು. ಹಾಗೆ ಮಾಡುತ್ತೇನೆಂದು ನೀನು ನನ್ನ ತೊಡೆಯ ಕೆಳಗೆ ಕೈಯಿಟ್ಟು ಪ್ರಮಾಣ ಮಾಡಬೇಕು" ಎಂದು ಕೇಳಿಕೊಂಡನು. ಅವನು, “ನೀನು ಹೇಳಿದಂತೆಯೇ ಮಾಡುತ್ತೇನೆ,” ಎಂದು ಪ್ರಮಾಣ ಮಾಡಿದನು.


ನೀನಂತೂ ಹಣ್ಣುಹಣ್ಣು ಮುದುಕನಾಗಿ ಶವಸಂಸ್ಕಾರವನ್ನು ಪಡೆಯುವೆ; ಶಾಂತಿ ಸಮಾಧಾನದಿಂದ ನಿನ್ನ ಪಿತೃಗಳನ್ನು ಸೇರುವೆ.


ಸ್ವರ್ಗದಲ್ಲಿ ದಾಖಲೆಯಾಗಿರುವ ಜೇಷ್ಠಪುತ್ರನ ಸಭೆಗೆ; ನೀವು ಬಂದಿರುವುದು ಸಕಲ ಮಾನವರ ನ್ಯಾಯಮೂರ್ತಿಯಾದ ದೇವರ ಸನ್ನಿಧಿಗೆ; ಸಿದ್ಧಿಗೆ ಬಂದ ಸತ್ಪುರುಷರ ಆತ್ಮಗಳ ಸಮೂಹಕ್ಕೆ;


ದಯವಿಟ್ಟು ನಿಮ್ಮ ಸೇವಕನಾದ ನನಗೆ ಹಿಂದಿರುಗಿ ಹೋಗುವುದಕ್ಕೆ ಅಪ್ಪಣೆಯಾಗಲಿ; ನಾನು ನನ್ನ ತಂದೆತಾಯಿಗಳ ಸಮಾಧಿಯಿರುವ ಸ್ವಂತ ಊರಿಗೆ ಹೋಗಿ ಅಲ್ಲೇ ಸಾಯುವೆನು. ಇಗೋ, ಇಲ್ಲಿ ನಿಮ್ಮ ಸೇವಕನಾದ ಕಿಮ್ಹಾಮನಿರುತ್ತಾನೆ. ನನ್ನ ಒಡೆಯರಾದ ಅರಸರು ಇವನನ್ನು ಕರೆದುಕೊಂಡು ಹೋಗಿ ತಮ್ಮ ಇಷ್ಟವಿದ್ದಂತೆ ಇವನಿಗೆ ದಯೆತೋರಿಸಿ,” ಎಂದನು.


ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿ, ಅವನು ಆ ಹಿತ್ತಿಯರ ಮುಂದೆ ಸೂಚಿಸಿದ ನಾನೂರು ಬೆಳ್ಳಿ ನಾಣ್ಯಗಳನ್ನು, ವ್ಯಾಪಾರಿಗಳಲ್ಲಿ ಪ್ರಚಲಿತವಾಗಿದ್ದ ಬೆಳ್ಳಿಯಿಂದ ತೂಕಮಾಡಿ ಕೊಟ್ಟನು.


ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲಕ್ಕೆ ಸೇರಿದ ಎಫ್ರೋನನ ಜಮೀನು, ಅದಕ್ಕೆ ಸೇರಿದ ಗವಿ, ಅದರಲ್ಲಿ ಮತ್ತು ಅದರ ಸುತ್ತಣ ಅಂಚಿನಲ್ಲಿದ್ದ ಮರಗಳು, ಇವೆಲ್ಲವೂ


ಇವೇ ಇಸ್ರಯೇಲಿನ ಹನ್ನೆರಡು ಕುಲಗೋತ್ರಗಳು; ಇದೇ ಅವರ ತಂದೆ ಕೊಟ್ಟ ಆಶೀರ್ವಾದ: ಒಂದೊಂದು ಕುಲಕ್ಕೆ ಅವನು ನುಡಿದ ಒಂದೊಂದು ಆಶೀರ್ವಚನ.


ಮಕ್ಕಳಿಗೆ ಈ ಆಜ್ಞೆಯನ್ನು ಕೊಟ್ಟು ಮುಗಿಸಿದ ನಂತರ ಯಕೋಬನು ಹಾಸಿಗೆಯಲ್ಲಿ ತನ್ನ ಕಾಲುಗಳನ್ನು ಮಡಚಿಕೊಂಡು ಪ್ರಾಣಬಿಟ್ಟು, ಮೃತರಾದ ಪಿತೃಗಳ ಬಳಿಗೆ ಸೇರಿದನು.


ಅವನ ಜಮೀನಿನ ಅಂಚಿನಲ್ಲಿರುವ ಮಕ್ಪೇಲದ ಗವಿಯನ್ನು ನನಗೆ ಕೊಡಿಸಬೇಕೆಂದು ವಿನಂತಿಸುತ್ತೇನೆ. ಅವನು ಆ ಸಮಾಧಿಯ ಸ್ಥಳವನ್ನು ನನ್ನ ಸ್ವಂತಕ್ಕೆ ನಿಮ್ಮ ಎದುರಿಗೇ ಬಿಟ್ಟುಕೊಟ್ಟರೆ ಪೂರ್ಣಕ್ರಯವನ್ನು ಕೊಟ್ಟುಬಿಡುತ್ತೇನೆ,” ಎಂದನು.


ಆ ಜಮೀನನ್ನೂ ಅದರಲ್ಲಿರುವ ಗವಿಯನ್ನೂ ಅಬ್ರಹಾಮನಿಗೆ ಸ್ವಂತ ಸ್ಮಶಾನಭೂಮಿಯಾಗಲೆಂದು ಸ್ವಾಧೀನಗೊಳಿಸಿದವರು ಆ ಹಿತ್ತಿಯರೇ.


ಯಕೋಬನು ತನ್ನ ತಂದೆ ಇಸಾಕನ ಬಳಿಗೆ ಮಮ್ರೆಗೆ ಬಂದನು. ಮಮ್ರೆಯು ಹೆಬ್ರೋನೆಂಬ ಕಿರ್ಯತರ್ಬಕ್ಕೆ ಸೇರಿದುದು. ಅದೇ ಅಬ್ರಹಾಮ್ ಹಾಗು ಇಸಾಕನು ಪರದೇಶಸ್ಥರಾಗಿ ವಾಸವಾಗಿದ್ದ ಸ್ಥಳ.


ಯಕೋಬನ ಮಕ್ಕಳು ತಂದೆಯ ಅಪ್ಪಣೆಯಂತೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು