Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:33 - ಕನ್ನಡ ಸತ್ಯವೇದವು C.L. Bible (BSI)

33 ಮಕ್ಕಳಿಗೆ ಈ ಆಜ್ಞೆಯನ್ನು ಕೊಟ್ಟು ಮುಗಿಸಿದ ನಂತರ ಯಕೋಬನು ಹಾಸಿಗೆಯಲ್ಲಿ ತನ್ನ ಕಾಲುಗಳನ್ನು ಮಡಚಿಕೊಂಡು ಪ್ರಾಣಬಿಟ್ಟು, ಮೃತರಾದ ಪಿತೃಗಳ ಬಳಿಗೆ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಯಾಕೋಬನು ತನ್ನ ಮಕ್ಕಳಿಗೆ ಅಪ್ಪಣೆ ಕೊಡುವುದನ್ನು ಮುಗಿಸಿದ ನಂತರ ಹಾಸಿಗೆಯ ಮೇಲೆ ತನ್ನ ಕಾಲುಗಳನ್ನು ಮಡಚಿಕೊಂಡು ಪ್ರಾಣಬಿಟ್ಟು ಪೂರ್ವಿಕರ ಬಳಿಗೆ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಯಾಕೋಬನು ತನ್ನ ಮಕ್ಕಳಿಗೆ ಅಪ್ಪಣೆಕೊಡುವದನ್ನು ಮುಗಿಸಿದನಂತರ ಹಾಸಿಗೆಯ ಮೇಲೆ ತನ್ನ ಕಾಲುಗಳನ್ನು ಮುದುರಿಕೊಂಡು ಪ್ರಾಣಬಿಟ್ಟು ಪಿತೃಗಳ ಬಳಿಗೆ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಯಾಕೋಬನು ತನ್ನ ಗಂಡುಮಕ್ಕಳೊಂದಿಗೆ ಮಾತನಾಡಿದ ಮೇಲೆ ತನ್ನ ಹಾಸಿಗೆಯ ಮೇಲೆ ಕಾಲುಗಳನ್ನು ಮುದುರಿಕೊಂಡು ಪ್ರಾಣಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಯಾಕೋಬನು ತನ್ನ ಪುತ್ರರಿಗೆ ಆಜ್ಞಾಪಿಸಿದ ತರುವಾಯ, ತನ್ನ ಕಾಲುಗಳನ್ನು ಮಂಚದ ಮೇಲೆ ಮುದುರಿಕೊಂಡನು. ಅವನು ಪ್ರಾಣ ಬಿಟ್ಟು ತನ್ನ ಪಿತೃಗಳೊಂದಿಗೆ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:33
22 ತಿಳಿವುಗಳ ಹೋಲಿಕೆ  

ಯಕೋಬನು ತನ್ನ ಮಕ್ಕಳಿಗೆ ಕೊಟ್ಟ ಆಜ್ಞೆ ಇದು: “ನಾನು ನನ್ನ ದಿವಂಗತ ಪೂರ್ವಜರನ್ನು ಸೇರುವ ಕಾಲ ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂಮಿಯಲ್ಲಿರುವ ಗವಿಯೊಳಗೆ, ಪಿತೃಗಳ ಬಳಿಯಲ್ಲಿ ನನ್ನನ್ನು ಸಮಾಧಿಮಾಡಬೇಕು.


ಪೂರ್ಣ ಆಯುಷ್ಯವನ್ನು ಕಳೆದು, ಹಣ್ಣು ಹಣ್ಣು ಮುದುಕನಾಗಿ ಪ್ರಾಣಬಿಟ್ಟು ಅವನು ತನ್ನ ಪಿತೃಗಳ ಬಳಿಗೆ ಸೇರಿದನು.


ಸ್ವರ್ಗದಲ್ಲಿ ದಾಖಲೆಯಾಗಿರುವ ಜೇಷ್ಠಪುತ್ರನ ಸಭೆಗೆ; ನೀವು ಬಂದಿರುವುದು ಸಕಲ ಮಾನವರ ನ್ಯಾಯಮೂರ್ತಿಯಾದ ದೇವರ ಸನ್ನಿಧಿಗೆ; ಸಿದ್ಧಿಗೆ ಬಂದ ಸತ್ಪುರುಷರ ಆತ್ಮಗಳ ಸಮೂಹಕ್ಕೆ;


ವಿಶ್ವಾಸದಿಂದಲೇ ಜೋಸೆಫನು, ತಾನು ಸಾಯುವ ಗಳಿಗೆಯು ಸಮೀಪಿಸಿದಾಗ, ಇಸ್ರಯೇಲಿನ ಜನರು ಈಜಿಪ್ಟಿನಿಂದ ಹೊರಬರುವುದನ್ನು ಸೂಚಿಸಿದನು. ಅಲ್ಲದೆ, ತನ್ನ ಶವಸಂಸ್ಕಾರದ ಬಗ್ಗೆ ಆದೇಶ ನೀಡಿದನು.


ಇವರ ಒಟ್ಟು ಸಂಖ್ಯೆ ಎಪ್ಪತ್ತೈದು. ಯಕೋಬನು ಈಜಿಪ್ಟಿಗೆ ಹೋದನು. ಅವನೂ ನಮ್ಮ ಪಿತಾಮಹರೂ ಅಲ್ಲೇ ನಿಧನರಾದರು.


“ನಿನ್ನ ಮಾತು ಸರ್ವೇಶ್ವರಾ, ನೆರವೇರಿತಿಂದು ಇನ್ನು ತೆರಳಬಿಡು ಶಾಂತಿಯಿಂದ ನಿನ್ನ ದಾಸನಾದ ಎನ್ನನ್ನು.


ಮಣ್ಣಿನ ದೇಹ ತನ್ನ ಭೂಮಿಗೆ ಸೇರಿಹೋಗುವುದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. (ಇಷ್ಟರೊಳಗೆ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ).


ನನ್ನನು ಮರಣಕ್ಕೆ ಗುರಿಮಾಡುವೆಯೆಂದು ತಿಳಿದಿದೆ ಸಮಸ್ತಜೀವಿಗಳು ತೆರಳುವ ಮಂದಿರಕ್ಕೆ ಸೇರಿಸುವೆಯೆಂದು ಗೊತ್ತೇ ಇದೆ.


ಮನುಜನೋ ಬಿದ್ದಿರುತ್ತಾನೆ ಸತ್ತು ಕೊನೆಯುಸಿರೆಳೆದಾಗ ಎಲ್ಲವು ಮುಗಿಯಿತು.


ಸುಗ್ಗಿಕಾಲದಲ್ಲಿ ಕಾಳುತೆನೆ ಕಣ ಸೇರುವಂತೆ ವೃದ್ಧಾಪ್ಯ ಕಳೆದ ಮೇಲೆ ನೀನು ಸಮಾಧಿ ಸೇರುವೆ.


ಯಕೋಬನು ತನ್ನ ಮಕ್ಕಳನ್ನು ಕರೆಯಿಸಿ ಇಂತೆಂದನು: ಕೂಡಿಬನ್ನಿ ನೀವೆಲ್ಲರು, ನುಡಿವೆನು ನಿಮಗೆ ಮುಂದೆ ಸಂಭವಿಸುವುದನ್ನು;


ಇಷ್ಮಾಯೇಲನು ನೂರಮೂವತ್ತೇಳು ವರ್ಷ ಬದುಕಿದ್ದನು. ಅನಂತರ ಸತ್ತು ತನ್ನ ಪಿತೃಗಳ ಬಳಿಗೆ ಸೇರಿದನು.


ಸರ್ವೇಶ್ವರ ಬಳಿಕ ಅಬ್ರಾಮನನ್ನು ಹೊರಗೆ ಕರೆತಂದು, “ಆಕಾಶದ ಕಡೆಗೆ ನೋಡು. ಆ ನಕ್ಷತ್ರಗಳನ್ನು ನಿನ್ನಿಂದಾದರೆ ಲೆಕ್ಕಿಸು. ನಿನ್ನ ಸಂತಾನವು ಅಷ್ಟು ಅಸಂಖ್ಯಾತವಾಗುವುದು!” ಎಂದರು.


ಹೊಲದ ಸಮೇತ ಹಿತ್ತಿಯರಿಂದ ಕ್ರಯಕ್ಕೆ ಕೊಂಡುಕೊಂಡ ಆ ಗವಿಯೊಳಗೆ ನನಗೂ ಸಮಾಧಿಯಾಗಲಿ,” ಎಂದನು.


ಆಗ ಜೋಸೆಫನು ತನ್ನ ತಂದೆಯ ಶವದ ಮೇಲೆ ಬಿದ್ದು, ಕಣ್ಣೀರು ಇಡುತ್ತಾ, ಅವರಿಗೆ ಮುದ್ದಿಟ್ಟನು.


ಎಲೀಷನು ಮಾರಕರೋಗದಿಂದ ನರಳುತ್ತಿದ್ದನು. ಇಸ್ರಯೇಲರ ಅರಸ ಯೋವಾಷನು ಇದನ್ನು ಕೇಳಿ ಅವನ ಬಳಿಗೆ ಹೋಗಿ, “ತಂದೆಯೇ, ನನ್ನ ತಂದೆಯೇ, ಇಸ್ರಯೇಲರಿಗೆ ರಥಾರಥಾಶ್ವಬಲಗಳಾಗಿ ಇದ್ದವರೇ,” ಎಂದು ಗೋಳಿಡುತ್ತಾ ಅಧೋಮುಖನಾಗಿ ಬಿದ್ದು ಅತ್ತು ಪ್ರಲಾಪಿಸಿದನು.


ಎಲೀಷನು ಮೃತನಾದನು. ಅವನ ಶವವನ್ನು ಸಮಾಧಿಮಾಡಿದರು. ಮೋವಾಬ್ಯರು ಪ್ರತಿವರ್ಷದ ಪ್ರಾರಂಭದಲ್ಲಿ ಸುಲಿಗೆಮಾಡುವುದಕ್ಕಾಗಿ ಗುಂಪುಗುಂಪಾಗಿ ಬರುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು