Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:8 - ಕನ್ನಡ ಸತ್ಯವೇದವು C.L. Bible (BSI)

8 ಯೆಹೂದನೇ, ವಂದಿಸುವರು ನಿನ್ನನು ಸಹೋದರರು ನಿನ್ನ ಕೈಯಲ್ಲಿರುವುದು ಶತ್ರುಗಳ ಕುತ್ತಿಗೆಯು ಎರಗುವರು ನಿನಗೆ ನಿನ್ನ ಅಣ್ಣತಮ್ಮಂದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೂದನೇ, ನಿನ್ನ ಅಣ್ಣತಮ್ಮಂದಿರು ನಿನ್ನನ್ನೇ ಸ್ತುತಿಸುವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವುದು. ನಿನ್ನ ಸಹೋದರರು ನಿನಗೆ ಆಡ್ಡ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೂದನೇ, ನಿನ್ನ ಅಣ್ಣತಮ್ಮಂದಿರು ನಿನ್ನನ್ನೇ ಸ್ತುತಿಸುವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು; ನಿನ್ನ ಸಹೋದರರು ನಿನಗೇ ಎರಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಯೆಹೂದನೇ, ನಿನ್ನ ಸಹೋದರರು ನಿನ್ನನ್ನೇ ಹೊಗಳುವರು. ನೀನು ನಿನ್ನ ವೈರಿಗಳನ್ನು ಸೋಲಿಸುವೆ. ನಿನ್ನ ಸಹೋದರರು ನಿನಗೇ ಅಡ್ಡಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳುವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವುದು. ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:8
38 ತಿಳಿವುಗಳ ಹೋಲಿಕೆ  

ನಮ್ಮ ಪ್ರಭು ಹುಟ್ಟಿದ್ದು ಯೂದನ ಕುಲದಲ್ಲಿ ಎಂಬುದು ತಿಳಿದ ವಿಷಯ. ಮೋಶೆ ಯಾಜಕರನ್ನು ಕುರಿತು ಮಾತನಾಡಿದಾಗ ಈ ಕುಲದ ಬಗ್ಗೆ ಏನನ್ನೂ ಹೇಳಲಿಲ್ಲ.


ಸೇವೆಗೈಯಲಿ ನಿನಗೆ ಹೊರನಾಡುಗಳು ಅಡ್ಡಬೀಳಲಿ ನಿನಗೆ ಹೊರಜನಾಂಗಗಳು ಒಡೆಯನಾಗು ಸೋದರರಿಗೆ ಅಡ್ಡಬೀಳಲಿ ತಾಯಕುಡಿ ನಿನಗೆ ಶಾಪವಿರಲಿ ನಿನ್ನನ್ನು ಶಪಿಸುವವರಿಗೆ ಆಶೀರ್ವಾದವು ನಿನ್ನನ್ನು ಹರಸುವವರಿಗೆ!”


ಯೆಹೂದನ ಕುಲ ಅತಿ ಬಲಶಾಲಿಯಾಗಿ ಎಲ್ಲಾ ಕುಲಗಳಿಗೆ ನಾಯಕನೊಬ್ಬನನ್ನು ಒದಗಿಸಿಕೊಟ್ಟಿತು.)


ತಂದ ಮೇಲೆ ಯೆಹೋಶುವನು ಎಲ್ಲಾ ಇಸ್ರಯೇಲರನ್ನು ಕರೆಸಿ ತನ್ನ ಜೊತೆಯಲ್ಲಿ ಬಂದಿದ್ದ ಸೇನಾಧಿಪತಿಗಳಿಗೆ, “ಹತ್ತಿರ ಬಂದು ಆ ಅರಸರ ಕೊರಳಿನ ಮೇಲೆ ನಿಮ್ಮ ಪಾದಗಳನ್ನಿಡಿ,” ಎಂದು ಹೇಳಿದನು. ಅಂತೆಯೇ ಅವರು ಹತ್ತಿರ ಬಂದು ಕುತ್ತಿಗೆಯ ಮೇಲೆ ಕಾಲಿಟ್ಟರು.


ಯೆಹೂದ ಕುಲ ಕುರಿತು ಮೋಶೆ ಹೇಳಿದ್ದು: “ಸರ್ವೇಶ್ವರಾ, ಯೆಹೂದನ ಮೊರೆಯನ್ನಾಲಿಸು ಬಂಧುಗಳೊಡನೆ ಅವನನ್ನು ಮರಳಿ ಸೇರಿಸು ತನ್ನ ಹಕ್ಕುಬಾಧ್ಯತೆಗಳನ್ನು ಕಾದಿರಿಸಿಕೊಳ್ಳಲು ಶತ್ರುಗಳ ಕೈಯಿಂದ ಅವನನ್ನು ತಪ್ಪಿಸು.”


ಮಗದೊಮ್ಮೆ ಗರ್ಭಧರಿಸಿ ಈ ಸಾರಿಯೂ ಗಂಡು ಮಗುವನ್ನೇ ಹೆತ್ತಳು. "ಈಗ ಸರ್ವೇಶ್ವರಸ್ವಾಮಿಯ ಸ್ತುತಿಮಾಡುತ್ತೇನೆ,“ ಎಂದು ಹೇಳಿ ಆ ಮಗುವಿಗೆ “ಯೆಹೂದ" ಎಂದು ನಾಮಕರಣ ಮಾಡಿದಳು. ಆ ಮೇಲೆ ಆಕೆಗೆ ಗರ್ಭಧಾರಣೆ ಆಗುವುದು ನಿಂತುಹೋಯಿತು.


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ಆಗ ಸಭಾಪ್ರಮುಖರಲ್ಲಿ ಒಬ್ಬರು ನನಗೆ, “ದುಃಖಿಸಬೇಡ, ಇಗೋ, ಯೂದಕುಲದ ಸಿಂಹವೂ ದಾವೀದನ ವಂಶಜರೂ ಆದ ಒಬ್ಬರು ಜಯಗಳಿಸಿದ್ದಾರೆ. ಅವರು ಆ ಏಳು ಮುದ್ರೆಗಳನ್ನು ಒಡೆದು ಈ ಸುರುಳಿಯನ್ನು ಬಿಚ್ಚಬಲ್ಲರು", ಎಂದು ಹೇಳಿದರು.


ಅವರ ಶತ್ರುಗಳು ತಮ್ಮ ಕಾಲಡಿಗೆ ಬರುವತನಕ ಅಲ್ಲೇ ಕಾದಿರುತ್ತಾರೆ.


ಅಮ್ಮೋನೇ, ನಿನ್ನ ಜೋಯಿಸರು ಮಿಥ್ಯೆಯನ್ನು ಕಲ್ಪಿಸಿಕೊಂಡು ಸುಳ್ಳುಸುಳ್ಳಾಗಿ ಕಣಿ ಹೇಳುತ್ತಿದ್ದಾರೆ. ಸಮಯವು ಸಮೀಪಿಸಿ ಅಪರಾಧದ ಕಡೆಗಾಲವು ಸಂಭವಿಸಿ ಹತರಾಗಿ ಬಿದ್ದಿರುವ ದುಷ್ಟರ ಗತಿಯನ್ನು ನೋಡು; ಜೋಯಿಸರನ್ನು ನಂಬಿದ ನೀನೂ ಆ ದುಷ್ಟರ ಕತ್ತುಗಳ ಮೇಲೆ ಬೀಳುವೆ.


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ಸುಪ್ರಸಿದ್ಧನು ದೇವನು ಜುದೇಯನಾಡಿನಲಿ I ಸುಪ್ರಖ್ಯಾತ ಆತನ ನಾಮ ಇಸ್ರಯೇಲಿನಲಿ II


ಕೆಲವು ಮಂದಿ ಆಶೇರ್ಯರು, ಮನಸ್ಸೆಯವರು ಹಾಗು ಜೆಬುಲೂನ್ಯರು ಮಾತ್ರ ದೀನಮನಸ್ಕರಾಗಿ ಜೆರುಸಲೇಮಿಗೆ ಬಂದರು.


ಜುದೇಯದ ಕೋಟೆಕೊತ್ತಲುಗಳುಳ್ಳ ಎಲ್ಲ ಪಟ್ಟಣಗಳಲ್ಲೂ ಸೈನ್ಯವನ್ನಿರಿಸಿದನು. ಜುದೇಯ ನಾಡಿನಲ್ಲೂ ಹಾಗೂ ತನ್ನ ತಂದೆ ಆಸನು ಕಿತ್ತುಕೊಂಡಿದ್ದ ಎಫ್ರಯಿಮರ ಪಟ್ಟಣಗಳಲ್ಲೂ ಅಧಿಕಾರಿಗಳನ್ನು ನೇಮಿಸಿದನು.


ಆಮೇಲೆ ಆಸನು ಎಲ್ಲಾ ಯೆಹೂದ ಹಾಗೂ ಬೆನ್ಯಾಮೀನ್ ಕುಲಗಳವರನ್ನು ಬರಮಾಡಿದನು. ದೇವರಾದ ಸರ್ವೇಶ್ವರ ತನ್ನೊಂದಿಗೆ ಇರುವುದನ್ನು ನೋಡಿ, ತನ್ನ ಬಳಿಗೆ ಗುಂಪುಗುಂಪಾಗಿ ಕೂಡಿಬಂದು, ಜುದೇಯ ನಾಡಿನಲ್ಲಿ ನೆಲಸಿದ್ದ ಎಫ್ರಯಿಮ್, ಮನಸ್ಸೆ ಹಾಗೂ ಸಿಮೆಯೋನ್ ಕುಲಗಳವರನ್ನು ಸಹ ಕರೆಸಿಕೊಂಡನು.


ಆಸನಿಗೆ ಸೈನ್ಯವಿತ್ತು; ಅದರಲ್ಲಿ ಗುರಾಣಿ ಬರ್ಜಿಗಳನ್ನು ಹಿಡಿದ ಮೂರು ಲಕ್ಷ ಮಂದಿ ಯೆಹೂದ್ಯರಿದ್ದರು. ಖೇಡ್ಯ ಹಿಡಿದವರೂ ಬಿಲ್ಲುಗಾರರೂ ಆದ ಎರಡು ಲಕ್ಷದ ಎಂಬತ್ತು ಸಾವಿರ ಮಂದಿ ಬೆನ್ಯಾಮೀನ್ಯರೂ ಇದ್ದರು. ಇವರೆಲ್ಲರು ರಣವೀರರು.


ಯೋವಾಬನು ಅರಸನಿಗೆ ಒಪ್ಪಿಸಿದ ಜನಗಣತಿಯ ಅಂಕೆಸಂಖ್ಯೆಗಳಲ್ಲಿ ಇಸ್ರಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಎಂಟು ಲಕ್ಷ ಹಾಗು ಯೆಹೂದ್ಯರಲ್ಲಿ ಐದು ಲಕ್ಷ ಇದ್ದರು.


ಆ ಶತ್ರುಗಳೋಡಿದರು ನನಗೆ ಬೆಂಗೊಟ್ಟು ಆ ಹಗೆಗಳನು ನಿರ್ಮೂಲಮಾಡಿದೆ ನಾ ಗುರಿಯಿಟ್ಟು.


ಹೆಬ್ರೋನಿನಲ್ಲಿದ್ದ ಅರಸ ದಾವೀದನು ತನ್ನ ಬಳಿಗೆ ಬಂದಿದ್ದ ಇಸ್ರಯೇಲರ ಹಿರಿಯರೊಡನೆ ಅಲ್ಲೇ ಸರ್ವೇಶ್ವರನ ಸನ್ನಿಧಿಯಲ್ಲಿ ಒಪ್ಪಂದಮಾಡಿಕೊಂಡನು. ಅವರು ದಾವೀದನನ್ನು ಅಭಿಷೇಕಿಸಿ ಇಸ್ರಯೇಲರ ಅರಸನನ್ನಾಗಿ ಮಾಡಿದರು.


ಇಸ್ರಯೇಲರು ಬೇತೇಲಿಗೆ ಹೋಗಿ, ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು ಎಂದು ದೇವರಾದ ಸರ್ವೇಶ್ವರನನ್ನು ಕೇಳಲು ಅವರು, “ಮೊದಲು ಯೆಹೂದಕುಲದವರು ಹೋಗಲಿ,” ಎಂದು ಹೇಳಿದರು.


ಯೆಹೂದ ಕುಲದವರಾದ ಇವರಲ್ಲಿ ಲೆಕ್ಕಿತರಾದವರ ಸ೦ಖ್ಯೆ: 76,500:


ಮುಂಭಾಗದಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿದ್ದವನು ಅಮ್ಮೀನಾದಾಬನ ಮಗ ನಹಶೋನನು.


ಯೆಹೂದನ ಮಕ್ಕಳು - ಏರ್, ಓನಾನ್, ಶೆಲಾಹ, ಪೆರೆಜ್ ಮತ್ತು ಜೆರಹ (ಇವರಲ್ಲಿ ಏರ್ ಹಾಗೂ ಓನಾನ್ ಕಾನಾನ್ ನಾಡಿನಲ್ಲೇ ಕಾಲವಾಗಿದ್ದರು). ಪೆರೆಚನ ಮಕ್ಕಳು - ಹೆಚ್ರೋನ್ ಮತ್ತು ಹಾಮೂಲ್.


ಆಗ ಈಜಿಪ್ಟ್ ದೇಶದಲ್ಲಿ ಅಧಿಕಾರ ನಡೆಸುತ್ತಿದ್ದವನು ಹಾಗೂ ಜನರಿಗೆ ದವಸಧಾನ್ಯ ಮಾರಾಟ ಮಾಡಿಸುತ್ತಿದ್ದವನು ಜೋಸೆಫನೇ. ಇಂತಿರಲು ಅವನ ಅಣ್ಣಂದಿರು ಬಂದು ಅವನ ಮುಂದೆ ನೆಲದವರೆಗೂ ಬಾಗಿ ನಮಸ್ಕರಿಸಿದರು.


ಯೆಹೂದ ಕುಲದಲ್ಲಿ ಉಳಿದ ಕುಟು೦ಬಗಳು ಇವು - ಶೆಲಹನಿ೦ದ ಶೇಲಾನ್ಯರು, ಪೆರೆಚನಿ೦ದ ಪೆರೆಚ್ಯರು, ಹಾಗು ಜೆರಹನಿ೦ದ ಜೆರಹಿಯರು.


“ಇಸ್ರಯೇಲ್ ದೇವರಾದ ಸರ್ವೇಶ್ವರ ನನ್ನ ತಂದೆಯ ಮನೆಯವರೆಲ್ಲರಲ್ಲಿ ನನ್ನನ್ನೇ ಸದಾ ಇಸ್ರಯೇಲರ ಅರಸನಾಗಿರುವುದಕ್ಕೆ ಆರಿಸಿಕೊಂಡರು; ಯೆಹೂದಕುಲ ರಾಜಕುಲವಾಗಬೇಕೆಂದು ನೇಮಿಸಿ ಆ ಕುಲದಲ್ಲಿ ನನ್ನ ತಂದೆಯ ಕುಟುಂಬವನ್ನು ಆರಿಸಿಕೊಂಡರು. ನನ್ನ ತಂದೆಯ ಎಲ್ಲ ಮಕ್ಕಳಲ್ಲಿ ನನ್ನನ್ನೇ ಮೆಚ್ಚಿ, ಇಸ್ರಯೇಲರೆಲ್ಲರ ಅರಸನನ್ನಾಗಿ ಮಾಡಿದರು.


ಯೆಹೂದ ಕುಲದ ಗೋತ್ರಗಳಿಗೆ ಸಿಕ್ಕಿದ ಸೊತ್ತಿನ ವಿವರ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು