Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 50:13 - ಕನ್ನಡ ಸತ್ಯವೇದವು C.L. Bible (BSI)

13 ಅವನ ಶವವನ್ನು ಕಾನಾನ್ ನಾಡಿಗೆ ಹೊತ್ತುಕೊಂಡು ಹೋಗಿ ಮಕ್ಪೇಲ ಎಂಬ ಬಯಲಿನಲ್ಲಿರುವ ಗವಿಯೊಳಗೆ ಸಮಾಧಿಮಾಡಿದರು. ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಮಮ್ರೆಗೆದುರಿನಲ್ಲಿರುವ ಆ ಗವಿಯನ್ನು ಸುತ್ತಲು ಇರುವ ಭೂಮಿ ಸಮೇತ, ಸ್ವಂತ ಸ್ಮಶಾನಭೂಮಿಗಾಗಿ ಕೊಂಡುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವನ ಶವವನ್ನು ಕಾನಾನ್ ದೇಶಕ್ಕೆ ಹೊತ್ತುಕೊಂಡು ಹೋಗಿ ಮಕ್ಪೇಲ ಎಂಬ ಬಯಲಿನಲ್ಲಿರುವ ಗುಹೆಯೊಳಗೆ ಸಮಾಧಿಮಾಡಿದರು. ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಮಮ್ರೆಗೆದುರಿನಲ್ಲಿರುವ ಆ ಗವಿಯನ್ನು ಸುತ್ತಲಿರುವ ಭೂಮಿ ಸಹಿತ ಸ್ವಂತ ಸ್ಮಶಾನ ಭೂಮಿಯನ್ನಾಗಿ ಕೊಂಡುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವನ ಶವವನ್ನು ಕಾನಾನ್‍ದೇಶಕ್ಕೆ ಹೊತ್ತುಕೊಂಡುಹೋಗಿ ಮಕ್ಪೇಲ ಎಂಬ ಬೈಲಿನಲ್ಲಿರುವ ಗವಿಯೊಳಗೆ ಸಮಾಧಿಮಾಡಿದರು. ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಮಮ್ರೆಗೆದುರಿನಲ್ಲಿರುವ ಆ ಗವಿಯನ್ನು ಸುತ್ತಲಿರುವ ಭೂವಿುಸಹಿತ ಸ್ವಕೀಯ ಶ್ಮಶಾನಭೂವಿುಯಾಗುವದಕ್ಕೆ ಕೊಂಡುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವರು ಅವನ ಶರೀರವನ್ನು ಕಾನಾನ್ ದೇಶಕ್ಕೆ ತೆಗೆದುಕೊಂಡು ಹೋಗಿ ಮಕ್ಪೇಲದಲ್ಲಿದ್ದ ಗವಿಯಲ್ಲಿ ಸಮಾಧಿ ಮಾಡಿದರು. ಮಮ್ರೆಯ ಬಯಲಿನಲ್ಲಿದ್ದ ಈ ಗವಿಯನ್ನು ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಸಮಾಧಿಯ ಸ್ಥಳಕ್ಕಾಗಿ ಕೊಂಡುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವನ ಪುತ್ರರು ಅವನನ್ನು ಕಾನಾನ್ ದೇಶಕ್ಕೆ ತೆಗೆದುಕೊಂಡುಹೋಗಿ, ಅಬ್ರಹಾಮನು ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನಿನಿಂದ ಕೊಂಡುಕೊಂಡಿದ್ದ ಮಮ್ರೆಗೆ ಎದುರಾಗಿರುವಂಥ ಮಕ್ಪೇಲ ಹೊಲದ ಗವಿಯಲ್ಲಿ ಹೂಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 50:13
14 ತಿಳಿವುಗಳ ಹೋಲಿಕೆ  

ಅವರ ಅವಶೇಷಗಳನ್ನು ಮರಳಿ ಶೇಕೆಮಿಗೆ ಕೊಂಡೊಯ್ಯಲಾಯಿತು. ಅಲ್ಲಿ ಹಾಮೋರ್ ಎಂಬವನ ಮಕ್ಕಳಿಂದ ಅಬ್ರಹಾಮನು ಕ್ರಯಕ್ಕೆ ಕೊಂಡುಕೊಂಡಿದ್ದ ಸಮಾಧಿಯಲ್ಲಿ ಹೂಳಿದರು.


ಅವನು ಸತ್ತು ಪಿತೃಗಳ ಬಳಿ ಸೇರಿದಾಗ ಅವನ ಶವವನ್ನು ಅವನ ಅರಮನೆಯಿರುವ ಉಜ್ಜನ ವನದಲ್ಲಿ ಸಮಾಧಿ ಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಆಮೋನನು ಅರಸನಾದನು.


ಯಕೋಬನು ತನ್ನ ತಂದೆ ಇಸಾಕನ ಬಳಿಗೆ ಮಮ್ರೆಗೆ ಬಂದನು. ಮಮ್ರೆಯು ಹೆಬ್ರೋನೆಂಬ ಕಿರ್ಯತರ್ಬಕ್ಕೆ ಸೇರಿದುದು. ಅದೇ ಅಬ್ರಹಾಮ್ ಹಾಗು ಇಸಾಕನು ಪರದೇಶಸ್ಥರಾಗಿ ವಾಸವಾಗಿದ್ದ ಸ್ಥಳ.


ಅವನ ಮಕ್ಕಳಾದ ಇಸಾಕ್ - ಇಷ್ಮಾಯೇಲರು ಅವನನ್ನು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಹೊಲದಲ್ಲಿದ್ದ ಮಕ್ಪೇಲದ ಗವಿಯಲ್ಲಿ ಸಮಾಧಿಮಾಡಿದರು. ಅದು ಮಮ್ರೆಗೆ ಪೂರ್ವದಿಕ್ಕಿನಲ್ಲಿದೆ.


ಆ ಜಮೀನನ್ನೂ ಅದರಲ್ಲಿರುವ ಗವಿಯನ್ನೂ ಅಬ್ರಹಾಮನಿಗೆ ಸ್ವಂತ ಸ್ಮಶಾನಭೂಮಿಯಾಗಲೆಂದು ಸ್ವಾಧೀನಗೊಳಿಸಿದವರು ಆ ಹಿತ್ತಿಯರೇ.


ನಾನು ಮೃತರಾದ ಪಿತೃಗಳೊಂದಿಗೆ ಸೇರಿಕೊಂಡಾಗ, ನನ್ನ ಶವವನ್ನು ಈಜಿಪ್ಟ್ ದೇಶದಿಂದ ತೆಗೆದುಕೊಂಡು ಹೋಗಿ, ಆ ಪಿತೃಗಳ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಬೇಕು. ಹಾಗೆ ಮಾಡುತ್ತೇನೆಂದು ನೀನು ನನ್ನ ತೊಡೆಯ ಕೆಳಗೆ ಕೈಯಿಟ್ಟು ಪ್ರಮಾಣ ಮಾಡಬೇಕು" ಎಂದು ಕೇಳಿಕೊಂಡನು. ಅವನು, “ನೀನು ಹೇಳಿದಂತೆಯೇ ಮಾಡುತ್ತೇನೆ,” ಎಂದು ಪ್ರಮಾಣ ಮಾಡಿದನು.


ಯಕೋಬನ ಮಕ್ಕಳು ತಂದೆಯ ಅಪ್ಪಣೆಯಂತೆ


ತಂದೆಯನ್ನು ಸಮಾಧಿಮಾಡಿದ ಮೇಲೆ ಜೋಸೆಫನೂ ಅವನ ಅಣ್ಣತಮ್ಮಂದಿರೂ ಆ ಶವಸಂಸ್ಕಾರಕ್ಕಾಗಿ ಅವನ ಜೊತೆಯಲ್ಲಿ ಹೋಗಿದ್ದ ಎಲ್ಲರೂ ಈಜಿಪ್ಟಿಗೆ ಹಿಂದಿರುಗಿದರು.


ಅವನ ಜಮೀನಿನ ಅಂಚಿನಲ್ಲಿರುವ ಮಕ್ಪೇಲದ ಗವಿಯನ್ನು ನನಗೆ ಕೊಡಿಸಬೇಕೆಂದು ವಿನಂತಿಸುತ್ತೇನೆ. ಅವನು ಆ ಸಮಾಧಿಯ ಸ್ಥಳವನ್ನು ನನ್ನ ಸ್ವಂತಕ್ಕೆ ನಿಮ್ಮ ಎದುರಿಗೇ ಬಿಟ್ಟುಕೊಟ್ಟರೆ ಪೂರ್ಣಕ್ರಯವನ್ನು ಕೊಟ್ಟುಬಿಡುತ್ತೇನೆ,” ಎಂದನು.


ಪೂರ್ಣ ಆಯುಷ್ಯವನ್ನು ಕಳೆದು, ಹಣ್ಣು ಹಣ್ಣು ಮುದುಕನಾಗಿ ಪ್ರಾಣಬಿಟ್ಟು ಅವನು ತನ್ನ ಪಿತೃಗಳ ಬಳಿಗೆ ಸೇರಿದನು.


ನಾನೇ ನಿನ್ನೊಂದಿಗೆ ಈಜಿಪ್ಟಿಗೆ ಬರುವೆನು. ಅಲ್ಲಿಂದ ನಿನ್ನನ್ನು ನಿಶ್ಚಯವಾಗಿ ವಾಪಸ್ಸು ಕರೆದುಕೊಂಡು ಬರುವೆನು. ನೀನು ಸಾಯುವ ಕಾಲದಲ್ಲಿ ಜೋಸೆಫನು ಹಾಜರಿದ್ದು ನಿನ್ನ ಕಣ್ಣುಗಳನ್ನು ಮುಚ್ಚುವನು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು