Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 6:13 - ಕನ್ನಡ ಸತ್ಯವೇದವು C.L. Bible (BSI)

13 ಜಗವಿಡೀ ಕೆಟ್ಟುಹೋಗಿರುವುದನ್ನು ಕಂಡ ದೇವರು, ನೋಹನಿಗೆ, “ನರಮಾನವರೆಲ್ಲರಿಗೆ ಸರ್ವನಾಶವನ್ನು ತೀರ್ಮಾನಿಸಿದ್ದೇನೆ. ಜಗವೆಲ್ಲವು ಹಿಂಸಾಚಾರದಿಂದ ತುಂಬಿಹೋಗಿದೆ. ನಾನು ಅವರನ್ನೂ ಜಗದಲ್ಲಿರುವುದೆಲ್ಲವನ್ನೂ ಅಳಿಸಿಬಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ದೇವರು ನೋಹನಿಗೆ, “ಎಲ್ಲಾ ಮನುಷ್ಯರಿಗೆ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅನ್ಯಾಯದಿಂದಲೂ ಹಿಂಸೆಯಿಂದಲೂ ತುಂಬಿದೆ; ನಾನು ಭೂಮಿಯೊಂದಿಗೆ ಅವರನ್ನೂ ಅಳಿಸಿ ಬಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ದೇವರು ನೋಹನಿಗೆ - ಎಲ್ಲಾ ದೇಹಿಗಳಿಗೂ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅವರ ಅನ್ಯಾಯದಿಂದ ತುಂಬಿ ಅದೆ; ನಾನು ಅವರನ್ನೂ ಭೂವಿುಯ ಮೇಲಿರುವದೆಲ್ಲವನ್ನೂ ಅಳಿಸಿಬಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದ್ದರಿಂದ ದೇವರು ನೋಹನಿಗೆ, “ನಾನು ಎಲ್ಲಾ ಜನರಿಗೂ ಅಂತ್ಯವನ್ನು ಬರಮಾಡಬೇಕೆಂದಿದ್ದೇನೆ; ಯಾಕೆಂದರೆ ಅವರು ಕೋಪ, ಹಿಂಸೆಗಳಿಂದ ಭೂಮಿಯನ್ನು ತುಂಬಿಸಿದ್ದಾರೆ. ಆದಕಾರಣ ನಾನು ಎಲ್ಲಾ ಜೀವಿಗಳನ್ನು ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ದೇವರು ನೋಹನಿಗೆ, “ನಾನು ಮನುಷ್ಯರೆಲ್ಲರಿಗೂ ಅಂತ್ಯವನ್ನು ತೀರ್ಮಾನಿಸಿದ್ದೇನೆ. ಅವರಿಂದ ಭೂಮಿಯು ಹಿಂಸಾಚಾರದಿಂದ ತುಂಬಿದೆ. ನಾನು ಭೂಮಿಯೊಂದಿಗೆ ಅವರನ್ನೂ ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 6:13
19 ತಿಳಿವುಗಳ ಹೋಲಿಕೆ  

ಎಲ್ಲದರ ಅಂತ್ಯಕಾಲವು ಹತ್ತಿರವಾಯಿತು. ಈ ಕಾರಣ ನೀವು ಜಿತೇಂದ್ರಿಯರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಮಾಡುತ್ತಿರಿ.


ಅವರು ನನಗೆ: “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಿದರು. “ಮಾಗಿದ ಹಣ್ಣಿನ ಒಂದು ಬುಟ್ಟಿ” ಎಂದು ಉತ್ತರಿಸಿದೆ. ಆಗ ಸರ್ವೇಶ್ವರ ನನಗೆ ಹೀಗೆಂದರು: “ಇಸ್ರಯೇಲರಾದ ನನ್ನ ಜನರಿಗೆ ಕಡೆಗಾಲ ಮಾಗುತ್ತಾ ಬಂದಿದೆ. ಇನ್ನು ಅವರನ್ನು ಕಂಡೂ ಕಾಣದಂತೆ ಇರಲಾರೆ. ಅವರನ್ನು ದಂಡಿಸಿಯೇ ತೀರುವೆನು.


ಮನುಷ್ಯರು ಮೊದಲ್ಗೊಂಡು ಪ್ರಾಣಿಪಕ್ಷಿ, ಕ್ರಿಮಿಕೀಟದವರೆಗೆ ಭೂಮಿಯ ಮೇಲಿನದೆಲ್ಲವೂ ನಾಶವಾಯಿತು. ಭೂಮಿಯಿಂದ ಎಲ್ಲವೂ ನಿರ್ಮೂಲವಾಯಿತು. ನೋಹನು ಹಾಗೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳು ಮಾತ್ರ ಉಳಿದುಕೊಂಡವು.


ದೇವಪುತ್ರರೂ ಮನುಷ್ಯಪುತ್ರಿಯರೂ ಕೂಡಿ ಮಕ್ಕಳು ಹುಟ್ಟಿದರು. ಆ ಕಾಲದಿಂದಲೂ ಅದಾದನಂತರವೂ ಜಗದಲ್ಲಿ ‘ನೆಪೀಲಿಯರು’ ಇದ್ದರು. ಇವರೇ ಪ್ರಾಚೀನಕಾಲದ ಸುಪ್ರಸಿದ್ಧ ಪರಾಕ್ರಮಿಗಳು.


ವಿಶ್ವಾಸವಿದ್ದುದರಿಂದಲೇ ನೋವನು ಕಾಣದೆ ಇದ್ದ ತನ್ನ ಭವಿಷ್ಯದ ಬಗ್ಗೆ ದೇವರಿಂದ ಮುನ್ನೆಚ್ಚರಿಕೆ ಪಡೆದಾಗ ಅದನ್ನು ಲಕ್ಷ್ಯಕ್ಕೆ ತಂದುಕೊಂಡು ಕುಟುಂಬವನ್ನು ರಕ್ಷಿಸಿಕೊಳ್ಳಲು ನಾವೆಯೊಂದನ್ನು ನಿರ್ಮಿಸಿದನು. ಇಡೀ ಜಗತ್ತೇ ದಂಡನೆಗೆ ಗುರಿಯಾಯಿತು. ನೋವನಾದರೋ ತನ್ನ ವಿಶ್ವಾಸದ ಫಲವಾಗಿ ಸತ್ಸಂಬಂಧಕ್ಕೆ ಬಾಧ್ಯಸ್ಥನಾದನು.


“ಬಹುಜಲಾಶ್ರಯಗಳ ನಡುವೆ ನಿಂತಿರುವ ನಗರಿಯೇ, ಧನಭರಿತ ಪುರಿಯೇ, ನಿನ್ನ ಅಂತ್ಯಕಾಲವು ಬಂದಿದೆ. ನೀನು ಕೊಳ್ಳೆಹೊಡೆದದ್ದು ಸಾಕಾಗಿದೆ.”


ಅಣ್ಣತಮ್ಮಂದಿರು ಸಿಮೆಯೋನ್ - ಲೇವಿಯರು ಅವರ ಕತ್ತಿಗಳು ಹಿಂಸಾತ್ಮಕ ಆಯುಧಗಳು.


ನೀನು ತುರಾಯಿಮರದಿಂದ ನಾವೆಯೊಂದನ್ನು ಮಾಡಿಕೊ; ಅದರ ತುಂಬ ಕೊಠಡಿಗಳಿರಲಿ; ಅದರ ಒಳಕ್ಕೂ ಹೊರಕ್ಕೂ ರಾಳಪದಾರ್ಥವನ್ನು ಹಚ್ಚು.


ಏಳು ದಿನಗಳಾನಂತರ ಭೂಮಿಯ ಮೇಲೆ ನಲವತ್ತು ದಿನ ಹಗಲಿರುಳೆನ್ನದೆ ಮಳೆ ಸುರಿಸುವೆನು; ನಾನು ಸೃಷ್ಟಿಮಾಡಿದ ಜೀವರಾಶಿಗಳನ್ನೆಲ್ಲ ಭೂಮಿಯಿಂದ ಅಳಿಸಿಹಾಕುವೆನು,” ಎಂದು ಹೇಳಿದರು.


ಈ ಕಾರಣ ಭೂಮಿಯ ಮೇಲೆ ಸಂಚರಿಸುತ್ತಿದ್ದ ಎಲ್ಲ ಪ್ರಾಣಿಗಳು, ಕಾಡುಮೃಗಗಳು, ಸಾಕುಪ್ರಾಣಿಗಳು, ಕ್ರಿಮಿಕೀಟಗಳು, ಮನುಷ್ಯರು ಸಹಿತವಾಗಿ ನಾಶವಾದುವು.


ಗಮಗಮಿಸುವ ಅದರ ಸುಗಂಧವು ಸ್ವಾಮಿಯನ್ನು ಮುಟ್ಟಿತು. ಅವರು ಮನದಲ್ಲೆ ಹೀಗೆಂದುಕೊಂಡರು: “ಇನ್ನು ಮೇಲೆ ನಾನು ಮನುಷ್ಯರ ನಿಮಿತ್ತ ಭೂಮಿಯನ್ನು ಶಪಿಸುವುದಿಲ್ಲ. ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದು. ಈಗ ಮಾಡಿದಂತೆ ಇನ್ನು ಮೇಲೆ ಎಲ್ಲ ಜೀವಿಗಳನ್ನು ನಾನು ಸಂಹರಿಸುವುದಿಲ್ಲ.


ರಾಷ್ಟ್ರಗಳೇ, ಬನ್ನಿ, ಹತ್ತಿರಕ್ಕೆ ಬಂದು ಕೇಳಿರಿ; ಜನಾಂಗಗಳೇ, ಕಿವಿಗೊಡಿರಿ; ಜಗವೂ ಅದರಲ್ಲಿರುವ ಸಮಸ್ತವೂ, ಲೋಕವೂ ಅದರ ನಿವಾಸಿಗಳೆಲ್ಲರೂ ಆಲಿಸಲಿ.


ತನ್ನ ಪರಿಚಾರಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಸ್ವಾಮಿ ಸರ್ವೇಶ್ವರ ಏನೂ ಮಾಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು