Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 6:16 - ಕನ್ನಡ ಸತ್ಯವೇದವು C.L. Bible (BSI)

16 ಅದರ ಚಾವಣಿಯ ಕೆಳಗೆ ಸುತ್ತಲೂ ಒಂದು ಮೊಳ ಎತ್ತರದ ಕಿಟಕಿ ಇಡು, ಪಕ್ಕದಲ್ಲಿ ಬಾಗಿಲಿರಲಿ; ಒಂದರ ಮೇಲೆ ಒಂದರಂತೆ ನಾವೆಯಲ್ಲಿ ಮೂರು ಅಂತಸ್ತುಗಳನ್ನು ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅದರ ಚಾವಣಿಯ ಕೆಳಗೆ ಸುತ್ತಲೂ ಒಂದು ಮೊಳ ಎತ್ತರದ ಕಿಟಕಿಯನ್ನು ಮಾಡಬೇಕು; ಪಕ್ಕದಲ್ಲಿ ಬಾಗಿಲನ್ನಿಡಬೇಕು. ನಾವೆಯಲ್ಲಿ ಒಂದರ ಮೇಲೆ ಒಂದಾಗಿ ಮೂರು ಅಂತಸ್ತುಗಳನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅದರ ಚಾವಣಿಯ ಕೆಳಗೆ ಸುತ್ತಲೂ ಒಂದು ಮೊಳ ಎತ್ತರದ ಬೆಳಕು ಕಂಡಿಯನ್ನು ಮಾಡಬೇಕು; ಪಕ್ಕದಲ್ಲಿ ಬಾಗಲನ್ನಿಡಬೇಕು. ನಾವೆಯಲ್ಲಿ ಒಂದರ ಮೇಲೆ ಒಂದಾಗಿ ಮೂರು ಅಂತಸ್ತುಗಳನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಕಿಟಕಿಯ ಮೇಲ್ಛಾವಣಿಗೆ ಹದಿನೆಂಟು ಇಂಚು ಕೆಳಗಿರಲಿ. ನಾವೆಯ ಪಾರ್ಶ್ವದಲ್ಲಿ ಬಾಗಿಲಿರಲಿ. ನಾವೆಯಲ್ಲಿ ಮೇಲಂತಸ್ತು ಮಧ್ಯಂತಸ್ತು ಮತ್ತು ಕೆಳಂತಸ್ತು ಎಂಬ ಮೂರು ಅಂತಸ್ತುಗಳಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅದಕ್ಕೆ ಚಾವಣಿಯನ್ನು ಮಾಡು, ಅದರ ಕೆಳಗೆ ಹದಿನೆಂಟು ಇಂಚಿನ ಕಿಟಕಿಯನ್ನು ನಾವೆಯ ಸುತ್ತಲೂ ಮಾಡಬೇಕು; ಅದರ ಪಕ್ಕದಲ್ಲಿ ನಾವೆಯ ಬಾಗಿಲನ್ನು ಇಡಬೇಕು. ಕೆಳಗಿನದು, ಎರಡನೆಯದು, ಮೂರನೆಯದು ಎಂಬ ಮೂರು ಅಂತಸ್ತುಗಳನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 6:16
9 ತಿಳಿವುಗಳ ಹೋಲಿಕೆ  

ಗರ್ಭಗೃಹ, ಪ್ರಾಕಾರದಲ್ಲಿನ ದ್ವಾರಮಂಟಪಗಳು, ಹೊಸ್ತಿಲುಗಳು, ತೆರೆಯಲಾಗದ ಕಿಟಕಿಗಳು, ಹೊಸ್ತಿಲಿನ ಎದುರಿಗೆ ಮೂರಂತಸ್ತಾಗಿ ಸುತ್ತಲು ಕಟ್ಟಲಾಗಿದ್ದ ಗೋಡೆಯಟ್ಟಗಳು, ಇವುಗಳನ್ನೂ ಅಳೆದನು.


ನಲವತ್ತು ದಿನಗಳಾದ ಮೇಲೆ ನೋಹನು ತಾನು ಮಾಡಿದ್ದ ನಾವೆಯ ಕಿಟಕಿಯನ್ನು ತೆರೆದು ಕಾಗೆಯೊಂದನ್ನು ಹೊರಕ್ಕೆ ಬಿಟ್ಟನು.


ದೇವರು ನೋಹನಿಗೆ ಅಪ್ಪಣೆಕೊಟ್ಟ ಮೇರೆಗೆ, ಗಂಡು ಹೆಣ್ಣಂತೆ ಎಲ್ಲ ಪ್ರಾಣಿಗಳು ಬಂದು ಸೇರಿದವು. ಬಳಿಕ ಸರ್ವೇಶ್ವರ, ನೋಹನನ್ನು ಒಳಗೆ ಬಿಟ್ಟು ಬಾಗಿಲನ್ನು ಮುಚ್ಚಿದರು.


ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗಡೆ ನಿಲ್ಲಬೇಕಾಗುವುದು. ಬಾಗಿಲನ್ನು ತಟ್ಟುತ್ತಾ, ‘ಸ್ವಾಮೀ, ನಮಗೆ ಬಾಗಿಲು ತೆರೆಯಿರಿ,’ ಎಂದು ನೀವು ಕೇಳುವಿರಿ. ಅದಕ್ಕೆ ಅವನು, ‘ನೀವು ಎಲ್ಲಿಯವರೋ ನಾನು ಅರಿಯೆ’ ಎನ್ನುವನು.


ಒಳಗಣ ಪ್ರಾಕಾರಕ್ಕೆ ಸೇರಿದ ಹತ್ತು ಮೀಟರ್ ಅಗಲದ ದೀಕ್ಷಿತರ ಪ್ರಾಕಾರಕ್ಕೂ ಹೊರಗಣ ಪ್ರಾಕಾರದ ನೆಲಗಟ್ಟಿಗೂ ನಡುವೆಯಿದ್ದ ಆ ಪ್ರದೇಶ ಇಪ್ಪತ್ತೈದು ಮೀಟರ್ ಅಗಲ. ಅಲ್ಲಿನ ಎರಡು ಸಾಲುಗಳ ಮೂರನೆಯ ಅಂತಸ್ತಿನ ಅಂಚಿನ ದಾರಿಗಳು ಒಂದಕ್ಕೊಂದು ಎದುರಾಗಿದ್ದವು.


ಯೇಹುವು ಜೆಸ್ರೀಲಿಗೆ ಬಂದನು. ಈಜೆಬೆಳು ಅದನ್ನು ಕೇಳಿ ತಲೆಯನ್ನು ಆಭರಣಗಳಿಂದ ಅಲಂಕರಿಸಿಕೊಂಡು, ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು, ಕಿಟಕಿಯಿಂದ ನೋಡುತ್ತಾ ನಿಂತಳು.


ಮಂಜೂಷವು ದಾವೀದನಗರದೊಳಗೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಇಣಿಕಿ ನೋಡಿ ದಾವೀದನು ಸರ್ವೇಶ್ವರನ ಮುಂದೆ ನಲಿದಾಡುತ್ತಾ ಕುಣಿಯುತ್ತಾ ಇರುವುದನ್ನು ಕಂಡು ಮನಸ್ಸಿನಲ್ಲೇ ಅವನನ್ನು ತಿರಸ್ಕರಿಸಿದಳು.


ಅದನ್ನು ಹೀಗೆ ಮಾಡು: ಅದರ ಉದ್ದ ಮುನ್ನೂರು ಮೊಳ, ಅಗಲ ಐವತ್ತು ಮೊಳ, ಎತ್ತರ ಮೂವತ್ತು ಮೊಳ ಇರಲಿ.


ನಾನು ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಲಿದ್ದೇನೆ. ಅದು ಆಕಾಶದ ಕೆಳಗಿರುವ ಸಕಲ ಪ್ರಾಣಿಗಳನ್ನೂ ಅಳಿಸಿಬಿಡುವುದು. ಭೂಮಿಯಲ್ಲಿರುವ ಸಮಸ್ತವೂ ನಾಶವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು