Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 7:21 - ಕನ್ನಡ ಸತ್ಯವೇದವು C.L. Bible (BSI)

21 ಈ ಕಾರಣ ಭೂಮಿಯ ಮೇಲೆ ಸಂಚರಿಸುತ್ತಿದ್ದ ಎಲ್ಲ ಪ್ರಾಣಿಗಳು, ಕಾಡುಮೃಗಗಳು, ಸಾಕುಪ್ರಾಣಿಗಳು, ಕ್ರಿಮಿಕೀಟಗಳು, ಮನುಷ್ಯರು ಸಹಿತವಾಗಿ ನಾಶವಾದುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಪಶು, ಪಕ್ಷಿ, ಮೃಗ, ಕ್ರಿಮಿಕೀಟಗಳು ಮನುಷ್ಯರ ಸಹಿತವಾಗಿ ಭೂಮಿಯ ಮೇಲೆ ಚಲಿಸುವ ಸಕಲ ಭೂಜಂತುಗಳೆಲ್ಲವೂ ನಾಶವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಪಶುಪಕ್ಷಿ ಮೃಗಕ್ರಿವಿುಗಳು ಮನುಷ್ಯರು ಸಹಿತವಾಗಿ ಭೂವಿುಯ ಮೇಲೆ ಸಂಚರಿಸುವ ಸಕಲ ಪ್ರಾಣಿಗಳೂ ಲಯವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21-22 ಭೂಮಿಯ ಮೇಲಿದ್ದ ಪ್ರತಿಯೊಂದು ಜೀವಿಯು ಸತ್ತುಹೋಯಿತು. ಎಲ್ಲಾ ಪುರುಷರು ಮತ್ತು ಸ್ತ್ರೀಯರು ಸತ್ತುಹೋದರು. ಎಲ್ಲಾ ಪಕ್ಷಿಗಳು, ಪಶುಗಳು, ಪ್ರಾಣಿಗಳು ಮತ್ತು ಪ್ರತಿಯೊಂದು ಬಗೆಯ ಕ್ರಿಮಿಗಳು ಸತ್ತುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಪಕ್ಷಿಗಳು, ಪಶುಗಳು, ಕಾಡುಮೃಗಗಳು, ನೆಲದ ಮೇಲೆ ಚಲಿಸುವ ಸಕಲ ಪ್ರಾಣಿಗಳು ಮತ್ತು ಮನುಷ್ಯರು ನಾಶವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 7:21
20 ತಿಳಿವುಗಳ ಹೋಲಿಕೆ  

ಜಗವಿಡೀ ಕೆಟ್ಟುಹೋಗಿರುವುದನ್ನು ಕಂಡ ದೇವರು, ನೋಹನಿಗೆ, “ನರಮಾನವರೆಲ್ಲರಿಗೆ ಸರ್ವನಾಶವನ್ನು ತೀರ್ಮಾನಿಸಿದ್ದೇನೆ. ಜಗವೆಲ್ಲವು ಹಿಂಸಾಚಾರದಿಂದ ತುಂಬಿಹೋಗಿದೆ. ನಾನು ಅವರನ್ನೂ ಜಗದಲ್ಲಿರುವುದೆಲ್ಲವನ್ನೂ ಅಳಿಸಿಬಿಡುತ್ತೇನೆ.


ಏಳು ದಿನಗಳಾನಂತರ ಭೂಮಿಯ ಮೇಲೆ ನಲವತ್ತು ದಿನ ಹಗಲಿರುಳೆನ್ನದೆ ಮಳೆ ಸುರಿಸುವೆನು; ನಾನು ಸೃಷ್ಟಿಮಾಡಿದ ಜೀವರಾಶಿಗಳನ್ನೆಲ್ಲ ಭೂಮಿಯಿಂದ ಅಳಿಸಿಹಾಕುವೆನು,” ಎಂದು ಹೇಳಿದರು.


ನಾನು ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಲಿದ್ದೇನೆ. ಅದು ಆಕಾಶದ ಕೆಳಗಿರುವ ಸಕಲ ಪ್ರಾಣಿಗಳನ್ನೂ ಅಳಿಸಿಬಿಡುವುದು. ಭೂಮಿಯಲ್ಲಿರುವ ಸಮಸ್ತವೂ ನಾಶವಾಗುವುದು.


ಸರ್ವಸೃಷ್ಟಿಯು ನಿರರ್ಥಕತೆಗೆ ಒಳಗಾಯಿತು. ಇದು ಅದರ ಸ್ವಂತ ಇಚ್ಛೆಯಿಂದಲ್ಲ. ದೇವರ ಇಚ್ಛೆಯಿಂದಲೇ ಆಯಿತು. ಆದರೂ ಸೃಷ್ಟಿಗೆ ನಿರೀಕ್ಷೆಯೊಂದಿದೆ.


ಪುರಾತನ ಕಾಲದ ಜನರನ್ನೂ ಸಹ ದೇವರು ದಂಡಿಸದೆ ಬಿಡಲಿಲ್ಲ. ನೀತಿಮಾರ್ಗವನ್ನು ಸಾರಿದ ನೋವನನ್ನು ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಕಾಪಾಡಿ, ದುರ್ಜನರಿಂದ ಕೂಡಿದ್ದ ಜಗತ್ತಿನ ಮೇಲೆ ಜಲಪ್ರಳಯವನ್ನು ಬರಮಾಡಿದರು.


ಸೃಷ್ಟಿಸಮಸ್ತವು ಇಂದಿನವರೆಗೆ ನರಳುತ್ತಾ ಪ್ರಸವವೇದನೆಪಡುತ್ತಾ ಇದೆ ಎಂಬುದು ನಮಗೆ ತಿಳಿದಿದೆ.


ನೋವನು ನಾವೆಯನ್ನು ಹತ್ತುವ ದಿನದ ತನಕ ಜನರು ತಿನ್ನುತ್ತಾ ಕುಡಿಯುತ್ತಾ ಇದ್ದರು; ಮದುವೆ ಮಾಡಿಕೊಳ್ಳುತ್ತಾ, ಮಾಡಿಕೊಡುತ್ತಾ ಇದ್ದರು; ಜಲಪ್ರಳಯ ಬಂದು ಎಲ್ಲರನ್ನು ನಾಶಮಾಡಿತು.


ಜಲಪ್ರಳಯ ಬಂದು ಅವರನ್ನು ಕೊಚ್ಚಿಕೊಂಡು ಹೋಗುವ ತನಕ ಅದರ ಅರಿವೇ ಅವರಿಗಿರಲಿಲ್ಲ. ನರಪುತ್ರನು ಆಗಮಿಸುವಾಗಲೂ ಹಾಗೆಯೇ ನಡೆಯುವುದು.


ಮನುಷ್ಯರು, ಮೃಗಗಳು, ಆಕಾಶದ ಪಕ್ಷಿಗಳು, ಸಮುದ್ರದ ಮೀನುಗಳು - ಇವೆಲ್ಲವನ್ನು ನಾಶಪಡಿಸುವೆನು. ದುರ್ಜನರು ಬಿದ್ದು ಸಾಯುವಂತೆ ಮಾಡುವೆನು; ನರಸಂತಾನವನ್ನು ಧರೆಯ ಮೇಲಿಂದ ಕಿತ್ತುಹಾಕುವೆನು.” ಇದು ಸರ್ವೇಶ್ವರಸ್ವಾಮಿಯ ನುಡಿ.


ಅದರ ಮುಂದೆ ಕಬಳಿಸುವ ಬೆಂಕಿ; ಅದರ ಹಿಂದೆ ಧಗಧಗಿಸುವ ಜ್ವಾಲೆ. ಅದು ಬರುವ ಮುನ್ನ ನಾಡು ಏದೆನ್ ಉದ್ಯಾನವನ; ಅದು ದಾಟಿದ ನಂತರ ಸುಡುಗಾಡು. ಅದರ ಆಪತ್ತಿನಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


ಇದರಿಂದ ನಾಡು ಶೋಕಸಾಗರದಲ್ಲಿ ಮುಳುಗಿದೆ. ಅದರ ನಿವಾಸಿಗಳೆಲ್ಲ ನರಳುತ್ತಿದ್ದಾರೆ. ನೆಲದ ಮೇಲಿನ ಜಂತುಗಳು, ಆಕಾಶದ ಪಕ್ಷಿಗಳು ಬಳಲುತ್ತಿವೆ. ಜಲಜಂತುಗಳು ಸಹ ನಶಿಸಿಹೋಗುತ್ತಿವೆ.


ಬಿರುಕು ಬಿಡುವುದು ಭೂಮಿ ಸೀಳುಪಾಳಾಗಿ ಕತ್ತರಿಸುವುದು ಕದಲಿಹೋಗಿ.


ಇದಕಾರಣ ಕಬಳಿಸಿದೆ ಜಗವನು ಶಾಪ, ತಟ್ಟಿದೆ ಆ ಜನರಿಗೆ ದಂಡನೆಯ ತಾಪ. ಸುಟ್ಟಮೇಲೆ ಉಳಿದಿಹರು ಅವರಲಿ ಕೆಲವರು ಮಾತ್ರ.


ಎಲ್ಲ ತರದ ದೊಡ್ಡ - ಚಿಕ್ಕ ಕಾಡುಮೃಗಗಳನ್ನೂ ಸಾಕುಪ್ರಾಣಿಗಳನ್ನೂ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನು ದೇವರು ಸೃಷ್ಟಿಮಾಡಿದರು. ಅವರ ನೋಟಕ್ಕೆ ಅದು ಚೆನ್ನಾಗಿ ಕಂಡಿತು.


ಸಮಸ್ತಜನರು ಒಟ್ಟಾಗಿ ಅಳಿದುಹೋಗುವರು ಮರಳಿ ಮನುಷ್ಯರೆಲ್ಲರೂ ಮಣ್ಣಾಗಿ ಮಾರ್ಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು