Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 1:12 - ಕನ್ನಡ ಸತ್ಯವೇದವು C.L. Bible (BSI)

12 ಆದುದರಿಂದ ನಾನು ತೇಮಾನ್ ಪಟ್ಟಣದ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಬೊಚ್ರದ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾನು ತೇಮಾನಿನ ಮೇಲೆ ಬೆಂಕಿಯನ್ನು ಸುರಿಸುವೆನು, ಮತ್ತು ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾನು ತೇಮಾನಿನ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದ್ದರಿಂದ ನಾನು ತೇಮಾನಿನಲ್ಲಿ ಬೆಂಕಿಯನ್ನು ಹಾಕುವೆನು. ಆ ಬೆಂಕಿಯು ಬೋಚ್ರದ ಉನ್ನತ ಗೋಪುರಗಳನ್ನು ನಾಶಮಾಡುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ನಾನು ತೇಮಾನಿನ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಬೊಚ್ರದ ಕೋಟೆಗಳನ್ನು ದಹಿಸಿಬಿಡುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 1:12
14 ತಿಳಿವುಗಳ ಹೋಲಿಕೆ  

ಹೀಗಿರಲು, ಸರ್ವೇಶ್ವರನಾದ ನಾನು, ಎದೋಮಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ ತೇಮಾನ್ಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; ಕಾಡುಮೃಗಗಳು ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವುವು. ಅವುಗಳ ನಾಶಕ್ಕಾಗಿ ಹುಲ್ಲುಗಾವಲು ನಿಶ್ಚಯವಾಗಿ ಕಳವಳಪಡುವುದು.


ಎದೋಮನ್ನು ಕುರಿತು ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ತೇಮಾನ್ ನಾಡಿಗಿದ್ದ ಬುದ್ಧಿ ಏನಾಯಿತು? ವಿವೇಕಿಗಳಿಗಿದ್ದ ಆಲೋಚನಾಶಕ್ತಿ ಅಳಿದುಹೋಯಿತೋ? ಅವರ ಜ್ಞಾನ ಮಾಯವಾಯಿತೋ?


ಶತ್ರುವು ಬೊಚ್ರದ ಮೇಲೆ ಎರಗಲು ರಣಹದ್ದಿನಂತೆ ರೆಕ್ಕೆಗಳನ್ನು ಹರಡಿ ಹಾರಿ ಏರುವನು. ಆ ದಿನದಂದು ಎದೋಮಿನ ಶೂರರ ಎದೆ ಹೆರುವ ಹೆಂಗಸಿನ ಎದೆಯಂತೆ ಅದರುವುದು.


ಬೊಚ್ರ ನಗರವು ಪಾಳುಬೀಳುವುದು. ಜನರು ಅದನ್ನು ನೋಡಿ ಬೆಚ್ಚಿಬೀಳುವರು. ಅದು ಶಾಪಕ್ಕೂ ನಿಂದೆ ಪರಿಹಾಸ್ಯಕ್ಕೂ ಗುರಿಯಾಗುವುದು. ಅದಕ್ಕೆ ಸೇರಿದ ಊರುಗಳೆಲ್ಲ ನಿತ್ಯನಾಶ ಹೊಂದುವುವು. ಇದನ್ನು ಆಣೆಯಿಟ್ಟು ಹೇಳಿದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ.


ಸರ್ವೇಶ್ವರ ಸ್ವಾಮಿಯ ಖಡ್ಗವು ರಕ್ತಮಯವಾಗಿದೆ; ಅದು ಕೊಬ್ಬಿನಿಂದಲೂ ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡಗಳ ವಪೆಯಿಂದಲೂ ತುಂಬಿದೆ; ಸರ್ವೇಶ್ವರ ಬೊಚ್ರದಲ್ಲಿ ಈ ಬಲಿಯನ್ನೂ ಎದೋಮಿನಲ್ಲಿ ಈ ದೊಡ್ಡ ಸಂಹಾರವನ್ನೂ ಮಾಡಬೇಕೆಂದಿದ್ದಾರೆ.


ಬೆಲಗನು ಸತ್ತ ಮೇಲೆ ಬೊಚ್ರದವನಾದ ಚೆರಹನ ಮಗ ಯೋಬಾಬನು ಆಧಿಪತ್ಯಕ್ಕೆ ಬಂದನು.


ಎಲೀಫಜನಿಗೆ ತೇಮಾನ್, ಓಮಾರ್, ಚೆಫೋ, ಗತಾಮ್, ಕೆನಜ್, ಎಂಬ ಐದು ಮಕ್ಕಳು.


ಆಕಾಶದಲ್ಲಿ ನನ್ನ ಖಡ್ಗವು ಆವೇಶದಿಂದ ಕಾರ್ಯಮಾಡಿದೆ. ಇಗೋ, ನಾನು ಶಪಿಸಿದ ಎದೋಮ್ ಎಂಬ ಜನಾಂಗದ ಮೇಲೆ ನ್ಯಾಯತೀರಿಸಲು ಅದು ಎರಗಲಿದೆ.


“ಎದೋಮಿನ ಬೊಚ್ರನಗರದಿಂದ ಬರುವ ಈತನು ಯಾರು? ರಕ್ತಗೆಂಪಾದ ಉಡುಪನ್ನುಟ್ಟು ಥಳಥಳಿಸುವ ವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯದಿಂದ ಮೆರೆಯುತ್ತಾ ನಡೆದುಬರುವ ಈತನು ಯಾರು? “ಆತನು ನಾನೇ, ಸತ್ಯವನು ಘೋಷಿಸುವವನು, ಆತನು ನಾನೇ, ಉದ್ಧರಿಸಲು ಸಮರ್ಥನು".


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾನು ಎದೋಮಿನ ಮೇಲೆ ಕೈಯೆತ್ತಿ, ಅದರೊಳಗಿಂದ ಜನರನ್ನೂ ಪಶುಗಳನ್ನೂ ನಿರ್ಮೂಲಪಡಿಸಿ, ತೇಮೊನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ, ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು.


ಓಬದ್ಯನು ಕಂಡ ದೈವದರ್ಶನ: ಎದೋಮ್ ನಾಡಿನ ವಿಷಯವಾಗಿ ಸ್ವಾಮಿ ಸರ್ವೇಶ್ವರ ಇಂತೆನ್ನುತ್ತಾರೆ: “ಹೊರಡಿರಿ, ಎದೋಮಿನ ಮೇಲೆ ಯುದ್ಧಮಾಡಲು ತೆರಳೋಣ” ಹೀಗೆಂದು ತಮ್ಮ ದೂತನ ಮುಖಾಂತರ ಸರ್ವೇಶ್ವರ ರಾಷ್ಟ್ರಗಳಿಗೆ ಹೇಳಿಕಳುಹಿಸಿದ್ದಾರೆ. ಅವರಿಂದ ಬಂದ ಈ ಸಮಾಚಾರವನ್ನು ನಾವು ಕೇಳಿದ್ದೇವೆ.


ಬರುತಿಹನು ದೇವನು ಎದೋಮಿನಿಂದ ಆ ಪರಮಪಾವನಸ್ವಾಮಿ ಪಾರಾನ್ ಪರ್ವತದಿಂದ. ಆವರಿಸುವುದು ಆತನ ಪ್ರಭಾವ ಆಕಾಶಮಂಡಲವನು ತುಂಬಿಹುದು ಆತನ ಮಹಿಮೆ ಭೂಮಂಡಲವನು.


ಬೆಳನು ಮರಣಹೊಂದಿದ ತರುವಾಯ ಬೊಚ್ರದ ಜೆರಹನ ಮಗ ಯೋಬಾಬ ಅವನ ಉತ್ತರಾಧಿಕಾರಿಯಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು