Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 1:7 - ಕನ್ನಡ ಸತ್ಯವೇದವು C.L. Bible (BSI)

7 ಆದಕಾರಣ ನಾನು ಗಾಜದ ಪ್ರಾಕಾರಗಳ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ಗಾಜದ ಕೋಟೆಯ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಅದರ ಅರಮನೆಗಳನ್ನು ನುಂಗಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನು ಗಾಜದ ಕೋಟೆಯ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಅರಮನೆಗಳನ್ನು ನುಂಗಿಬಿಡುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅದಕ್ಕಾಗಿ ನಾನು ಗಾಜದ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು. ಈ ಬೆಂಕಿಯು ಗಾಜದ ಎತ್ತರವಾದ ಗೋಪುರಗಳನ್ನು ನಾಶಮಾಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾನು ಗಾಜದ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವರ ಕೋಟೆಗಳನ್ನು ದಹಿಸಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 1:7
17 ತಿಳಿವುಗಳ ಹೋಲಿಕೆ  

ಗಾಜಾಪಟ್ಟಣ ನಿರ್ಜನವಾಗುವುದು, ಅಷ್ಕೆಲೋನ್ ಹಾಳಾಗುವುದು; ಅಷ್ಡೋದಿನ ನಿವಾಸಿಗಳನ್ನು ನಡುಮಧ್ಯಾಹ್ನದಲ್ಲೆ ಅಟ್ಟಿಸಿಬಿಡಲಾಗುವುದು; ಎಕ್ರೋನಿನ ಜನರನ್ನು ನಿರ್ಮೂಲಮಾಡಲಾಗುವುದು.


ಫರೋಹನು ಗಾಜಾ ಊರಿಗೆ ಮುತ್ತಿಗೆ ಹಾಕುವ ಮೊದಲು ಫಿಲಿಷ್ಟಿಯರ ವಿಷಯವಾಗಿ ಪ್ರವಾದಿ ಯೆರೆಮೀಯನಿಗೆ ಸರ್ವೇಶ್ವರನಿಂದ ಕೇಳಿಬಂದ ವಾಣಿ:


ಗಾಜಪ್ರಾಂತ್ಯದವರೆಗೆ ವಾಸವಾಗಿದ್ದ ಫಿಲಿಷ್ಟಿಯರನ್ನು ಸೋಲಿಸಿ ಕಾವಲುಗಾರರ ಗೋಪುರವಿದ್ದ ಚಿಕ್ಕ ಹಳ್ಳಿ ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಮಹಾನಗರಗಳವರೆಗೂ ಎಲ್ಲಾ ಊರುಗಳನ್ನು ಹಾಳುಮಾಡಿದನು.


ಪ್ರಿಯರೇ, ಮುಯ್ಯಿಗೆ ಮುಯ್ಯಿ ತೀರಿಸಬೇಡಿ. ಅದನ್ನು ದೇವರಿಗೇ ಬಿಟ್ಟುಬಿಡಿ. ಏಕೆಂದರೆ, “ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ಎಲ್ಲರಿಗೂ ತಕ್ಕ ಪ್ರತಿಫಲವನ್ನು ಕೊಡುವವನು ನಾನೇ,” ಎಂಬ ಪ್ರಭುವಿನ ವಾಕ್ಯ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ನಾನು ಹಜಾಯೇಲನ ಅರಮನೆಯ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಬೆನ್‍ಹದದನ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು.


ಉಜ್ಜೀಯನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೊರಟು ಗತ್‍ಊರು, ಯಬ್ನೆ, ಅಷ್ಡೋದ್ ಎಂಬ ಪಟ್ಟಣಗಳ ಗೋಡೆಗಳನ್ನು ಕೆಡವಿಬಿಟ್ಟು ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.


ಅವನ ಶತ್ರುಗಳಿಗೆ ಮುಯ್ಯಿತೀರಿಸುವುದು ನನ್ನ ಕೆಲಸ; ಸಮೀಪಿಸಿತವರಿಗೆ ಜಾರಿಬೀಳುವ ಸಮಯ, ವಿಪತ್ಕಾಲ; ಬೇಗಬರುವುದು ಅವರಿಗೆ ಸಿದ್ಧವಾದ ದುರ್ಗತಿಕಾಲ!


ಗಾಜಾ ಊರು ತಲೆಬೋಳಿಸಿಕೊಂಡಿದೆ ಅಷ್ಕೆಲೋನ್ ಊರು ನಿಶ್ಶಬ್ದವಾಗಿದೆ. ಅನಕಿಮ್ ಬೈಲುನಾಡಿನ ಅವಶೇಷವೇ, ಎಂದಿನವರೆಗೆ ನಿನ್ನನ್ನೇ ಕತ್ತರಿಸಿಕೊಳ್ಳುತ್ತಿರುವೆ !


ನಾನು ಈಜಿಪ್ಟಿಗೆ ಬೆಂಕಿಹಚ್ಚಿ, ಅದರ ಸಹಾಯಕರನ್ನೆಲ್ಲ ನಾಶಮಾಡಿದ ಮೇಲೆ ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”


ನಾನು ಮಾಗೋಗ್ ದೇಶದ ಮೇಲೂ ಕರಾವಳಿಯ ಸೀಮೆಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೂ ಬೆಂಕಿಯನ್ನು ಕಳುಹಿಸುವೆನು; ಆಗ ನಾನೇ ಸರ್ವೇಶ್ವರ ಎಂದು ಅವರಿಗೆ ನಿಶ್ಚಿತವಾಗುವುದು.


ಸರ್ವೇಶ್ವರ ಇಂತೆನ್ನುತ್ತಾರೆ: “ಗಾಜದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ಇಡೀ ಜನಾಂಗವನ್ನೇ ಸೆರೆಹಿಡಿದು ಎದೋಮ್ ನಾಡಿಗೆ ಗಡೀಪಾರು ಮಾಡಿದ್ದಾರೆ.


ನಾನು ಅಷ್ಡೋದಿನಲ್ಲಿ ಸಿಂಹಾಸನಾರೂಢನಾಗಿ ಇರುವವನನ್ನೂ ಅಷ್ಕೆಲೋನಿನಲ್ಲಿ ಆಡಳಿತಾಧಿಕಾರಿಯನ್ನೂ ನಿರ್ಮೂಲ ಮಾಡುವೆನು. ಎಕ್ರೋನಿನ ಪಟ್ಟಣವನ್ನು ಶಿಕ್ಷಿಸುವೆನು. ಫಿಲಿಷ್ಟಿಯರಲ್ಲಿ ಅಳಿದುಳಿದವರೆಲ್ಲರೂ ನಾಶವಾಗಿಹೋಗುವರು,” ಇದೂ ಸರ್ವೇಶ್ವರಸ್ವಾಮಿಯ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು