Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 1:8 - ಕನ್ನಡ ಸತ್ಯವೇದವು C.L. Bible (BSI)

8 ನಾನು ಅಷ್ಡೋದಿನಲ್ಲಿ ಸಿಂಹಾಸನಾರೂಢನಾಗಿ ಇರುವವನನ್ನೂ ಅಷ್ಕೆಲೋನಿನಲ್ಲಿ ಆಡಳಿತಾಧಿಕಾರಿಯನ್ನೂ ನಿರ್ಮೂಲ ಮಾಡುವೆನು. ಎಕ್ರೋನಿನ ಪಟ್ಟಣವನ್ನು ಶಿಕ್ಷಿಸುವೆನು. ಫಿಲಿಷ್ಟಿಯರಲ್ಲಿ ಅಳಿದುಳಿದವರೆಲ್ಲರೂ ನಾಶವಾಗಿಹೋಗುವರು,” ಇದೂ ಸರ್ವೇಶ್ವರಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ಅಷ್ದೋದಿನೊಳಗಿಂದ ಸಿಂಹಾಸನಾಸೀನನನ್ನೂ ಮತ್ತು ಅಷ್ಕೆಲೋನಿನೊಳಗಿಂದ ರಾಜದಂಡ ದಾರಿಯನ್ನೂ ನಿರ್ಮೂಲಮಾಡುವೆನು. ನಾನು ಎಕ್ರೋನಿನ ವಿರುದ್ಧವಾಗಿ ಕೈಯೆತ್ತುವೆನು, ಉಳಿದ ಫಿಲಿಷ್ಟಿಯರೆಲ್ಲರೂ ನಾಶವಾಗಿ ಹೋಗುವರು.” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ಅಷ್ಡೋದಿನೊಳಗಿಂದ ಸಿಂಹಾಸನಾಸೀನನನ್ನೂ ಅಷ್ಕೆಲೋನಿನೊಳಗಿಂದ ರಾಜದಂಡಧಾರಿಯನ್ನೂ ನಿರ್ಮೂಲ ಮಾಡಿ ಎಕ್ರೋನಿನ ಮೇಲೆ ಕೈಯೆತ್ತುವೆನು; ಉಳಿದ ಫಿಲಿಷ್ಟಿಯರೆಲ್ಲರೂ ನಾಶವಾಗಿ ಹೋಗುವರು; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇದಲ್ಲದೆ, ನಾನು ಅಷ್ಡೋದಿನಲ್ಲಿ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನನ್ನು ನಾಶಮಾಡುವೆನು; ಅಷ್ಕೆಲೋನಿನಲ್ಲಿ ರಾಜದಂಡ ಹಿಡಿಯುವವನನ್ನು ನಾಶಮಾಡುವೆನು; ಎಕ್ರೋನಿನ ಜನರನ್ನು ಶಿಕ್ಷಿಸುವೆನು. ಆಮೇಲೆ ಅಳಿದುಳಿದ ಫಿಲಿಷ್ಟಿಯರು ಸಾಯುವರು.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅಷ್ಡೋದಿನಿಂದ ನಿವಾಸಿಯನ್ನು ಮತ್ತು ಅಷ್ಕೆಲೋನಿನಿಂದ ರಾಜದಂಡ ಹಿಡಿಯುವವನನ್ನು ನಾಶಮಾಡುವೆನು. ಫಿಲಿಷ್ಟಿಯರಲ್ಲಿ ಕೊನೆಯವರು ಸಾಯುವವರೆಗೂ ನಾನು ಎಕ್ರೋನಿನ ವಿರುದ್ಧ ನನ್ನ ಕೈಯನ್ನು ತಿರುಗಿಸುವೆನು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 1:8
17 ತಿಳಿವುಗಳ ಹೋಲಿಕೆ  

ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಗೋ, ನಾನು ಫಿಲಿಷ್ಟಿಯರ ಮೇಲೆ ಕೈಯೆತ್ತುವೆನು; ಕೆರೇತಿಯರನ್ನು ಕತ್ತರಿಸಿಬಿಟ್ಟು, ಸಮುದ್ರತೀರದಲ್ಲಿನ ಜನಶೇಷವನ್ನು ನಿಶ್ಶೇಷಮಾಡುವೆನು;


ಅಷ್ಡೋದಿನಲ್ಲಿ ಮಿಶ್ರಜಾತಿಯವರು ವಾಸಮಾಡುವರು. ಸರ್ವೇಶ್ವರ ಇಂತೆನ್ನುತ್ತಾರೆ: “ಫಿಲಿಷ್ಟಿಯದ ಗರ್ವವನ್ನು ಅಡಗಿಸುವೆನು. ಅವರು ಸವಿಯುವ ರಕ್ತಸಿಕ್ತ ಮಾಂಸವನ್ನು ಅವರ ಬಾಯಿಂದ ಕಕ್ಕಿಸುವೆನು.


ಅಸ್ಸೀರಿಯಾದ ಅರಸನಾದ ಸರ್ಗೋನನು ಕಳುಹಿಸಿದ ದಳಪತಿ, ಫಿಲಿಷ್ಟಿಯರ ಪಟ್ಟಣವಾದ ಅಷ್ಡೋದಿಗೆ ಬಂದು ಅದನ್ನು ಮುತ್ತಿ ಆಕ್ರಮಿಸಿಕೊಂಡನು.


“ಅಡಗಿಸುತ್ತಿದ್ದೆ ಅವರ ಶತ್ರುಗಳನು ಸುಲಭವಾಗಿ I ಸದೆಬಡಿಯುತ್ತಿದ್ದೆ ಅವರ ವೈರಿಗಳನು ಸರಿಯಾಗಿ, II


ಉಜ್ಜೀಯನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೊರಟು ಗತ್‍ಊರು, ಯಬ್ನೆ, ಅಷ್ಡೋದ್ ಎಂಬ ಪಟ್ಟಣಗಳ ಗೋಡೆಗಳನ್ನು ಕೆಡವಿಬಿಟ್ಟು ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಕುರಿಗಾಹಿಗೆ ವಿರುದ್ಧವಾಗಿ, ನನ್ನಾಸಂಗಡಿಗನಿಗೆದುರಾಗಿ, ಓ ಖಡ್ಗವೇ, ಎಚ್ಚರಗೊಳ್ಳು; ಕೊಲ್ಲು ಕುರಿಗಾಹಿಯನು. ಆಗ ಚದರುವುವು ಕುರಿಗಳು, ಕೈಮಾಡಲಿರುವೆ ಮರಿಗಳ ಮೇಲೂ.


ಅಷ್ಡೋದಿನ ಅರಮನೆಗಳಲ್ಲೂ ಈಜಿಪ್ಟಿನ ಸೌಧಗಳಲ್ಲೂ ಹೀಗೆಂದು ಪ್ರಕಟಿಸಿರಿ; “ಸಮಾರ್ಯದ ಬೆಟ್ಟಗುಡ್ಡಗಳಿಗೆ ಕೂಡಿಬನ್ನಿ. ಪಟ್ಟಣದಲ್ಲಿ ಎಷ್ಟೊಂದು ಗಲಭೆಗೊಂದಲ, ಎಷ್ಟೊಂದು ಹಿಂಸಾಚಾರ ನಡೆಯುತ್ತಿದೆ, ನೋಡಿ.


ನಿಮ್ಮ ಮೇಲೆ ಕೈಮಾಡುವೆನು. ನಿಮ್ಮ ಲೋಹವನ್ನು ಪುಟಹಾಕಿ ನಿಮ್ಮ ಕಲ್ಮಷವನ್ನು ಪೂರ್ತಿಯಾಗಿ ಕರಗಿಸಿಬಿಡುವೆನು. ಕಂದುಕೆಸರನ್ನೆಲ್ಲ ತೊಡೆದುಹಾಕುವೆನು.


ಫರೋಹನು ಗಾಜಾ ಊರಿಗೆ ಮುತ್ತಿಗೆ ಹಾಕುವ ಮೊದಲು ಫಿಲಿಷ್ಟಿಯರ ವಿಷಯವಾಗಿ ಪ್ರವಾದಿ ಯೆರೆಮೀಯನಿಗೆ ಸರ್ವೇಶ್ವರನಿಂದ ಕೇಳಿಬಂದ ವಾಣಿ:


“ಟೈರ್, ಸಿದೋನ್ ಮತ್ತು ಫಿಲಿಷ್ಟಿಯ ಪ್ರಾಂತ್ಯಗಳೇ, ನನ್ನ ಮೇಲೆ ನಿಮಗಿರುವ ದೂರು ಯಾವುದು? ನನಗೆ ಪ್ರತೀಕಾರ ಮಾಡಬೇಕೆಂದಿರುವಿರೋ? ಹಾಗೇನಾದರೂ ಮಾಡಿದ್ದೇ ಆದರೆ, ನೀವು ಮಾಡಿದ ಕೇಡನ್ನು ತಡಮಾಡದೆ ನಿಮ್ಮ ತಲೆಗೇ ತರುವೆನು.


ಆದಕಾರಣ ನಾನು ಗಾಜದ ಪ್ರಾಕಾರಗಳ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು.


ಯಕೋಬವಂಶ ಅಗ್ನಿಯಂತೆ; ಜೋಸೆಫನ ವಂಶ ಜ್ವಾಲೆಯಂತೆ. ಇವೆರಡೂ ಸೇರಿ ಕೂಳೆಯಂತೆ ಇರುವ ಏಸಾವಿನ ವಂಶವನ್ನು ಧಗಧಗನೆ ದಹಿಸಿ ಭಸ್ಮಮಾಡುವುವು. ಏಸಾವಿನ ವಶದಲ್ಲಿ ಯಾರೂ ಉಳಿಯುವುದಿಲ್ಲ.” ಇದು ಸರ್ವೇಶ್ವರಸ್ವಾಮಿಯ ನುಡಿ.


ಇದನ್ನು ಕಂಡು ಅಷ್ಕೆಲೋನ್ ಭಯದಿಂದ ನಡುಗುವುದು. ಗಾಜಾ ಪಟ್ಟಣ ಸಂಕಟದಿಂದ ಗೋಳಾಡುವುದು; ಎಕ್ರೋನ್ ನಿರಾಶೆಯಿಂದ ಪ್ರಲಾಪಿಸುವುದು; ಗಾಜಾ ಪಟ್ಟಣಕ್ಕೆ ರಾಜನೇ ಇಲ್ಲದಂತಾಗುವುದು. ಅಷ್ಕೆಲೋನ್ ನಿರ್ಜನ ಪ್ರದೇಶವಾಗುವುದು;


ಫಿಲಿಷ್ಟಿಯರು ಸರ್ವೇಶ್ವರನಿಗೆ ಪ್ರಾಯಶ್ಚಿತಾರ್ಥವಾಗಿ ಸಮರ್ಪಿಸಿದ ಚಿನ್ನದ ಗಡ್ಡೆಗಳ ಸಂಸ್ಥಾನಾನುಸಾರವಾದ ಪಟ್ಟಿ ಇದು: ಅಷ್ಡೋದ್, ಗಾಜಾ, ಪರವಾಗಿ ಒಂದು, ಅಷ್ಕೆಲೋನ್ ಪರವಾಗಿ ಒಂದು, ಗತ್ ಪರವಾಗಿ ಒಂದು ಮತ್ತು ಎಕ್ರೋನ್ ಪರವಾಗಿ ಒಂದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು