Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 2:10 - ಕನ್ನಡ ಸತ್ಯವೇದವು C.L. Bible (BSI)

10 ಈಜಿಪ್ಟಿನಿಂದ ನಿಮ್ಮನ್ನು ಹೊರತಂದವನು ನಾನೇ. ನಲವತ್ತು ವರ್ಷಗಳ ಕಾಲ ಅರಣ್ಯದ ಮಾರ್ಗವಾಗಿ ನಿಮ್ಮನ್ನು ನಡೆಸಿ ಕರೆತಂದು, ಅಮೋರ್ಯದವರ ನಾಡನ್ನು ನಿಮಗೆ ದೊರಕಿಸಿಕೊಟ್ಟವನು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇಸ್ರಾಯೇಲ್ಯರೇ, ನೀವು ಅಮ್ಮೋನಿಯರ ದೇಶವನ್ನು ಸ್ವಾಧೀನಪಡಿಸಿಕೊಳ್ಳಲು, ನಾನು ನಿಮ್ಮನ್ನು ಐಗುಪ್ತ ದೇಶದೊಳಗಿಂದ ಪಾರುಮಾಡಿ, ನಲ್ವತ್ತು ವರ್ಷ ಅರಣ್ಯದಲ್ಲಿ ನಿಮ್ಮನ್ನು ನಡೆಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 [ಇಸ್ರಾಯೇಲ್ಯರೇ,] ಅಮೋರಿಯರ ದೇಶವನ್ನು ನಿಮಗೆ ದೊರಕಿಸಬೇಕೆಂದು ನಾನು ನಿಮ್ಮನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿಕೊಂಡು ಬಂದೆನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಈಜಿಪ್ಟ್ ದೇಶದಿಂದ ನಿಮ್ಮನ್ನು ಹೊರತಂದವನು ನಾನೇ. ನಲವತ್ತು ವರ್ಷಗಳ ತನಕ ನಾನು ಅಡವಿಯಲ್ಲಿ ನಿಮ್ಮನ್ನು ನಡಿಸಿದೆನು. ನಾನು ಅಮೋರಿಯರ ದೇಶವನ್ನು ಸ್ವಾಧೀನಪಡಿಸಲು ಅವರಿಗೆ ಸಹಾಯ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾನೇ ನಿಮ್ಮನ್ನು ಈಜಿಪ್ಟ್ ದೇಶದಿಂದ ಕರೆತಂದೆನು. ಅಮೋರಿಯರ ದೇಶವನ್ನು ನಿಮಗೆ ಸೊತ್ತಾಗಿ ಕೊಡಲು, ನಿಮ್ಮನ್ನು ನಾಲ್ವತ್ತು ವರ್ಷ ಮರುಭೂಮಿಯಲ್ಲಿ ನಡೆಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 2:10
26 ತಿಳಿವುಗಳ ಹೋಲಿಕೆ  

“ನೀವು ಕೈಹಾಕಿದ ಎಲ್ಲ ಕೆಲಸಗಳನ್ನೂ ನಿಮ್ಮ ದೇವರಾದ ಸರ್ವೇಶ್ವರ ಸಫಲಪಡಿಸಿದ್ದಾರೆ. ಈ ದೊಡ್ಡ ಮರುಭೂಮಿಯಲ್ಲಿ ನೀವು ಸಂಚರಿಸುತ್ತಿರುವಾಗಲೆಲ್ಲ ಅವರು ನಿಮ್ಮನ್ನು ಪರಾಂಬರಿಸುತ್ತಾ ಬಂದರು. ಈ ನಲವತ್ತು ವರ್ಷ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇದ್ದುದರಿಂದಲೆ ನಿಮಗೆ ಏನೂ ಕಡಿಮೆಯಾಗಲಿಲ್ಲ,” ಎಂದು ಹೇಳಿದನು.


ಆ ದಿನ ಸರ್ವೇಶ್ವರ ಇಸ್ರಯೇಲರನ್ನು ಪಡೆಪಡೆಯಾಗಿ ಈಜಿಪ್ಟ್ ದೇಶದಿಂದ ಹೊರಗೆ ಕರೆದೊಯ್ದರು.


ಇಸ್ರಯೇಲಿನ ಜನರೇ, ಕಿವಿಗೊಡಿ. ಈಜಿಪ್ಟ್ ದೇಶದಿಂದ ನಿಮ್ಮನ್ನು ಬಿಡುಗಡೆಮಾಡಿ ಕರೆತಂದ ಸರ್ವೆಶ್ವರ ನಿಮ್ಮ ವಿರುದ್ಧವಾಗಿ ನುಡಿಯುವ ಮಾತುಗಳನ್ನು ಆಲಿಸಿರಿ:


ಬೆಂಗಾಡಿನಲ್ಲಿ ಸುಮಾರು ನಾಲ್ವತ್ತು ವರ್ಷಗಳ ಕಾಲ ಅವರನ್ನು ಕಾಪಾಡಿದರು.


ಆಗ ದೇವರು ಅವರಿಗೆ ವಿಮುಖರಾದರು. ಆಕಾಶದ ಗ್ರಹಗಳನ್ನೇ ಅವರು ಪೂಜಿಸಲೆಂದು ಬಿಟ್ಟುಬಿಟ್ಟರು. ಇದನ್ನು ಕುರಿತೇ ಪ್ರವಾದಿಗಳ ಗ್ರಂಥದಲ್ಲಿ: ‘ಓ ಇಸ್ರಯೇಲರೇ, ನೀವು ಮರಳುಗಾಡಿನಲ್ಲಿ ನಾಲ್ವತ್ತು ವರ್ಷಗಳಕಾಲ ದಹನಬಲಿಗಳನ್ನು ಅರ್ಪಿಸಿದ್ದು ನನಗಲ್ಲ.


ಈಜಿಪ್ಟ್ ದೇಶದಿಂದ ನಾನು ನಿನ್ನನ್ನು ಕರೆತಂದೆ; ದಾಸತ್ವದ ಬಂಧನದಿಂದ ನಿನ್ನನ್ನು ಬಿಡುಗಡೆ ಮಾಡಿದೆ. ನಿನಗೆ ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ನಾಯಕರನ್ನಾಗಿ ಕಳುಹಿಸಿದೆ.


“ಇಸ್ರಯೇಲಿನ ಜನರೇ, ನನ್ನ ದೃಷ್ಟಿಯಲ್ಲಿ ನೀವಾಗಲಿ ಎಥಿಯೋಪಿಯದವರಾಗಲೀ, ಒಂದೇ ಅಲ್ಲವೆ? ನಾನು ನಿಮ್ಮನ್ನು ಈಜಿಪ್ಟಿನಿಂದ ಕರೆತಂದಂತೆ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ, ಅರಾಮ್ಯರನ್ನು ಕೀರ್ ನಾಡಿನಿಂದಲೂ ಕರೆತರಲಿಲ್ಲವೆ?


ಆದಕಾರಣ ಅವರನ್ನು ಈಜಿಪ್ಟಿನವರ ಕೈಯಿಂದ ಬಿಡಿಸುವುದಕ್ಕು ಮತ್ತು ಆ ದೇಶದಿಂದ ಹೊರತಂದು ಹಾಲೂ ಜೇನೂ ಹರಿಯುವ ಸವಿಸ್ತಾರವಾದ ಒಳ್ಳೆಯ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಆಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ನಡೆಸಿಕೊಂಡು ಹೋಗುವುದಕ್ಕು ಇಳಿದು ಬಂದಿದ್ದೇನೆ.


“ಆದರೂ ನಾನು ಅವರನ್ನು ಈಜಿಪ್ಟಿನಿಂದ ಬಿಡಿಸಿ ಮರುಭೂಮಿಗೆ ಕರೆದುತಂದೆ.


ನಲವತ್ತು ವರುಷ ಆ ಪೀಳಿಗೆಯ ಬಗ್ಗೆ ನಾ ಬೇಸರಗೊಂಡೆ I ‘ತಪ್ಪುಮನಸ್ಕರು ಇವರು, ನನ್ನ ಮಾರ್ಗವನು ಮೆಚ್ಚರಿವರು’ ಎಂದುಕೊಂಡೆ II


ಈ ಪರಿ ಸಲಹಿದಿರಿ ಮರುಭೂಮಿಯಲಿ ನಾಲ್ವತ್ತು ವರ್ಷ ಅಲ್ಲವರಿಗಿರಲಿಲ್ಲ ಯಾವುದೊಂದು ಸಂಕಷ್ಟ. ಊದಿಹೋಗಲಿಲ್ಲ ಕಾಲು, ಹರಿದುಹೋಗಲಿಲ್ಲ ಅವರ ವಸ್ತ್ರ.


ಆದರೆ ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಮನೆಯವರು ಹಾಗು ಒಳ್ಳೆಯದು, ಕೆಟ್ಟದು ಎಂಬುದನ್ನು ಅರಿಯದ ನಿಮ್ಮ ಹಸುಳೆಗಳು ಅಲ್ಲಿಗೆ ಸೇರುವರು; ಅವರಿಗೇ ಆ ನಾಡನ್ನು ಕೊಡುವೆನು; ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು.


“ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದಲ್ಲಿದ್ದ ನಿನ್ನನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದವನು.


ಇಸ್ರಯೇಲರು ಈ ಪಟ್ಟಣಗಳನ್ನೆಲ್ಲಾ ವಶಮಾಡಿಕೊಂಡರು. ಹೆಷ್ಬೋನಿನಲ್ಲೂ ಅದಕ್ಕೆ ಸೇರಿದ ಗ್ರಾಮಗಳಲ್ಲೂ ಅಮೋರಿಯರ ಬೇರೆ ಎಲ್ಲಾ ಊರುಗಳಲ್ಲೂ ವಾಸಿಸಿದರು.


ಗೆಷೂರ್ಯರ ನಾಡು, ದಕ್ಷಿಣದಲ್ಲಿದ್ದ ಅವ್ವೀಯರ ನಾಡು; ಸಿದೋನ್ಯರಿಗೆ ಸೇರಿದ ಮೆಯರಾದಿಂದ ಅಮೋರಿಯರ ಮೇರೆಯಾದ ಅಫೇಕದವರೆಗಿರುವ ಕಾನಾನ್ಯರ ನಾಡು;


ಅದಲ್ಲದೆ ತಾವು ಸಂಚರಿಸಿ ನೋಡಿ ಬಂದ ನಾಡಿನ ವಿಷಯವಾಗಿ ಇಸ್ರಯೇಲರಿಗೆ ಅಶುಭ ಸಮಾಚಾರವನ್ನೇ ಹೇಳುವವರಾದರು. “ನಾವು ಸಂಚಾರಮಾಡಿ ನೋಡಿ ಬಂದ ನಾಡು ತನ್ನಲ್ಲಿ ವಾಸಿಸುವವರನ್ನೇ ಕಬಳಿಸುವಂತಿದೆ. ನಾವು ಅಲ್ಲಿ ನೋಡಿದ ಜನರೆಲ್ಲರು ಬಹು ಎತ್ತರವಾದ ವ್ಯಕ್ತಿಗಳು.


ಸರ್ವೇಶ್ವರ ಇಸ್ರಯೇಲರ ಮೇಲೆ ಕೋಪಗೊಂಡು ತಮ್ಮ ದೃಷ್ಟಿಯಲ್ಲಿ ಕೆಟ್ಟ ನಡತೆಯುಳ್ಳವರಾಗಿದ್ದ ಆ ಪೀಳಿಗೆಯವರೆಲ್ಲರು ನಾಶವಾಗುವ ತನಕ, ಅಂದರೆ ನಾಲ್ವತ್ತುವರ್ಷ ಕಾಲ, ಇಸ್ರಯೇಲರನ್ನು ಮರುಭೂಮಿಯಲ್ಲೆ ಅಲೆಯುವಂತೆ ಮಾಡಿದರು.


‘ನೀವು ದೀರ್ಘಕಾಲ ಮರುಭೂಮಿಯಲ್ಲಿದ್ದಿರಿ. ಅನಂತರ ನಿಮ್ಮನ್ನು ಜೋರ್ಡನಿನ ಆಚೆ ಅಮೋರಿಯರ ನಾಡಿಗೆ ಕರೆತಂದೆ. ನಿಮ್ಮೊಡನೆ ಯುದ್ಧಕ್ಕೆ ಬಂದ ಅವರನ್ನು ನಿಮ್ಮ ಕೈವಶಮಾಡಿದೆ. ನೀವು ಅವರ ನಾಡನ್ನು ಸ್ವತಂತ್ರಿಸಿಕೊಂಡಿರಿ. ಅವರನ್ನು ನಿಮ್ಮೆದುರಿನಲ್ಲೇ ನಾಶಮಾಡಿದೆ.


ಅವರು - ‘ನಮ್ಮನ್ನು ಈಜಿಪ್ಟ್ ದೇಶದಿಂದ ಬರಮಾಡಿ, ಕಾಡುಮೇಡು, ಹಳ್ಳಕೊಳ್ಳ, ಕಗ್ಗತ್ತಲು, ನಿರ್ಜಲ, ನಿರ್ಜನ ಹಾಗೂ ಯಾರೂ ಹಾದುಹೋಗದ ಬೆಂಗಾಡಿನ ಮಾರ್ಗವಾಗಿ ನಡೆಸಿಬಂದ ಆ ಸರ್ವೇಶ್ವರ ಎಲ್ಲಿ?’ ಎಂದುಕೊಳ್ಳಲಿಲ್ಲವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು