Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 2:14 - ಕನ್ನಡ ಸತ್ಯವೇದವು C.L. Bible (BSI)

14 ನಿಮ್ಮಲ್ಲಿ ದೌಡೋಡುವವನು ಕೂಡ ತಲೆತಪ್ಪಿಸಿಕೊಳ್ಳಲಾರನು. ಬಲಿಷ್ಠನೂ ಬಲಹೀನನಾಗುವನು. ಪರಾಕ್ರಮಿಯೂ ಪ್ರಾಣ ಉಳಿಸಿಕೊಳ್ಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ತ್ವರೆಯಾಗಿ ಓಡುವವನು ತಪ್ಪಿಸಿಕೊಳ್ಳಲಾರನು. ಬಲಿಷ್ಠನು ತನ್ನ ಬಲವನ್ನು, ತನ್ನ ಪ್ರಾಣವನ್ನು ಬಲಪಡಿಸಿಕೊಳ್ಳಲಾರನು. ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ವೇಗಿಗೂ ಓಡಿಹೋಗುವದಕ್ಕೆ ಶಕ್ತಿಯಿರದು, ಬಲಿಷ್ಟನು ತನ್ನ ಬಲವನ್ನು ಸ್ಥಿರಪಡಿಸಿಕೊಳ್ಳನು, ಪರಾಕ್ರವಿುಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯಾರೂ ತಪ್ಪಿಸಿಕೊಳ್ಳಲಾರರು. ಅತಿ ವೇಗವಾದ ಓಟಗಾರರೂ ತಪ್ಪಿಸಿಕೊಳ್ಳಲಾರರು. ಬಲಶಾಲಿಗಳಿಗೂ ಶಕ್ತಿ ಸಾಲದು. ಸಿಪಾಯಿಗಳಿಗೂ ತಮ್ಮನ್ನು ಕಾಪಾಡಿಕೊಳ್ಳಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದ್ದರಿಂದ ತ್ವರೆಯಾಗಿ ಓಡುವವನು ತಪ್ಪಿಸಿಕೊಳ್ಳನು. ಬಲಿಷ್ಠನು ತನ್ನ ತ್ರಾಣವನ್ನು ಬಲಪಡಿಸಿಕೊಳ್ಳಲಾರನು. ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 2:14
9 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿ : “ಜ್ಞಾನಿ ತನ್ನ ಜ್ಞಾನಕ್ಕಾಗಿ, ಪರಾಕ್ರಮಿ ತನ್ನ ಪರಾಕ್ರಮಕ್ಕಾಗಿ ಐಶ್ವರ್ಯವಂತ ತನ್ನ ಐಶ್ವರ್ಯಕ್ಕಾಗಿ ಹೆಚ್ಚಳಪಡದಿರಲಿ.


ಲೋಕದಲ್ಲಿ ನಾನು ಇನ್ನೊಂದು ವಿಷಯವನ್ನು ಗಮನಿಸಿದೆ; ಓಟ ಪಂದ್ಯದಲ್ಲಿ ವೇಗವಾಗಿ ಓಡುವವನೇ ಯಾವಾಗಲೂ ಗೆಲ್ಲುವನು ಎನ್ನುವಂತಿಲ್ಲ; ಬಲಿಷ್ಠರಿಗೇ ಯುದ್ಧದಲ್ಲಿ ಜಯಗಿಟ್ಟುತ್ತದೆ ಎನ್ನುವಹಾಗಿಲ್ಲ. ಜ್ಞಾನಿಗೆ ಜೀವನಾಂಶ ದೊರಕುವುದು, ಜಾಣನಿಗೆ ಹಣ ಲಭಿಸುವುದು, ಪ್ರವೀಣನಿಗೆ ಪಟ್ಟಪದವಿ ಸಿಕ್ಕುವುದು ಎನ್ನುವಂತಿಲ್ಲ. ಇವರೆಲ್ಲರೂ ಸಮಯ ಸಂದರ್ಭಗಳಿಗೆ ಒಳಪಟ್ಟಿರುತ್ತಾರೆ.


ಅರಸನಾವನು ವಿಜೇತನಾಗನು ಮಹಾ ಸೇನಾಬಲದಿಂದಲೆ I ಶೂರನಾವನು ಜಯಶೀಲನಾಗನು ಕೇವಲ ಭುಜಬಲದಿಂದಲೆ II


ದುರ್ಜನರು ನಿರಾಶೆಯಿಂದ ಕಂಗೆಡುವರು ಪ್ರಾಣಬಿಡಬೇಕೆಂಬುದೇ ಅವರ ಆಶೆಯಾಗಿರುವುದು.”


ಕುರಿಗಾಹಿಗಳು ಓಡಿಹೋಗುವುದಕ್ಕೆ ದಾರಿ ಸಿಕ್ಕದು ಮೇಷಪಾಲರು ತಲೆತಪ್ಪಿಸಿಕೊಳ್ಳಲಿಕ್ಕೆ ಆಸ್ಪದ ದೊರಕದು.


ಇವರನ್ನು ನೋಡಿ, ಜುದೇಯದ ಅರಸ ಚಿದ್ಕೀಯನು ಮತ್ತು ಸಮಸ್ತ ಸೈನಿಕರು ಅದೇ ರಾತ್ರಿಯಲ್ಲಿ ಹೊರಟು, ಅರಸನ ಉದ್ಯಾನ ಮಾರ್ಗವಾಗಿ ಎರಡು ಗೋಡೆಗಳ ನಡುವಣ ಬಾಗಿಲಿನಿಂದ ನಗರವನ್ನು ಬಿಟ್ಟು, ಅರಾಬಾ ಎಂಬ ಕಣಿವೆ ಪ್ರದೇಶದ ಕಡೆಗೆ ಪಲಾಯನ ಮಾಡಿದರು.


ಬಲಾಢ್ಯರನ್ನು ತಟ್ಟನೆ ಬಡಿದು ಕೋಟೆಗಳ ಕೆಡವುವಾತನು ಆತನೇ, ಸರ್ವೇಶ್ವರಸ್ವಾಮಿ ಎಂಬುದೇ ಆತನ ನಾಮಧೇಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು