Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 2:5 - ಕನ್ನಡ ಸತ್ಯವೇದವು C.L. Bible (BSI)

5 ಆದಕಾರಣ ನಾನು ಜುದೇಯದ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಜೆರುಸಲೇಮಿನ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದಕಾರಣ ನಾನು ಯೆಹೂದದ ಮೇಲೆ ಬೆಂಕಿಯನ್ನು ಉರಿಸುವೆನು. ಅದು ಯೆರೂಸಲೇಮಿನ ಅರಮನೆಗಳನ್ನು ನುಂಗಿಬಿಡುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆದಕಾರಣ ನಾನು ಯೆಹೂದದ ಮೇಲೆ ಬೆಂಕಿಯನ್ನು ಸುರಿಸುವೆನು; ಅದು ಯೆರೂಸಲೇವಿುನ ಅರಮನೆಗಳನ್ನು ನುಂಗಿಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದ್ದರಿಂದ ನಾನು ಯೆಹೂದದಲ್ಲಿ ಬೆಂಕಿಯನ್ನು ಹಚ್ಚುವೆನು; ಆ ಬೆಂಕಿಯು ಜೆರುಸಲೇಮಿನ ಉನ್ನತ ಬುರುಜುಗಳನ್ನು ನಾಶಮಾಡುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾನು ಯೆಹೂದದ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಯೆರೂಸಲೇಮಿನ ಕೋಟೆಗಳನ್ನು ದಹಿಸಿಬಿಡುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 2:5
11 ತಿಳಿವುಗಳ ಹೋಲಿಕೆ  

“ಇಸ್ರಯೇಲ್ ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ. ಜುದೇಯವು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ನಿರ್ಮಿಸಿಕೊಂಡಿದೆ. ಆದರೆ ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಕಾರುವೆನು. ಅದು ಆ ಸೌಧಗಳನ್ನು ನುಂಗಿಬಿಡುವುದು.”


ಆದರೆ ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಹೊತ್ತು, ಜೆರುಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಗೊಳ್ಳದೆ, ಆ ಸಬ್ಬತ್ ದಿನವನ್ನು ಪವಿತ್ರ ದಿನ ಎಂದು ಆಚರಿಸದೆಹೋದರೆ, ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು. ಅದು ಜೆರುಸಲೇಮಿನ ಅರಮನೆಗಳನ್ನು ದಹಿಸಿಬಿಡುವುದು, ಆ ಬೆಂಕಿ ಆರುವುದೇ ಇಲ್ಲ.”


ಈ ನಗರಕ್ಕೆ ಒಳಿತನ್ನು ಅಲ್ಲ, ಕೆಡುಕನ್ನು ಮಾಡಲೆಂದೆ ಇದರ ಮೇಲೆ ಕಣ್ಣಿಟ್ಟಿದ್ದೇನೆ. ಇದು ಬಾಬಿಲೋನಿಯಾದ ಅರಸನ ಕೈವಶವಾಗುವುದು. ಅವನು ಇದನ್ನು ಸುಟ್ಟು ಭಸ್ಮಮಾಡುವನು. ಇದು ಸರ್ವೇಶ್ವರನಾದ ನನ್ನ ನುಡಿ.’


ಸರ್ವೇಶ್ವರನ ಆಲಯವನ್ನೂ ಅರಮನೆಯನ್ನೂ ಜೆರುಸಲೇಮಿನ ಎಲ್ಲ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ಅರಮನೆಯನ್ನೂ ಪ್ರಜೆಗಳ ಮನೆಗಳನ್ನೂ ಬಾಬಿಲೋನಿಯದವರು ಬೆಂಕಿಯಿಂದ ಸುಟ್ಟು ಜೆರುಸಲೇಮಿನ ಸುತ್ತಣವಿದ್ದ ಗೋಡೆಗಳನ್ನು ಕೆಡವಿದರು.


ಸರ್ವೇಶ್ವರನ ಆಲಯವನ್ನೂ ಅರಮನೆಯನ್ನೂ ಜೆರುಸಲೇಮಿನ ಎಲ್ಲ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ಇಂತಿರಲು ಸ್ವಾಮಿ ಸರ್ವೇಶ್ವರ ಹೇಳುವುದೇನೆಂದರೆ: “ಶತ್ರುಗಳು ನಿಮ್ಮ ನಾಡಿಗೆ ಮುತ್ತಿಗೆಹಾಕುವರು. ನಿಮ್ಮ ಕೋಟೆಕೊತ್ತಲಗಳನ್ನು ನೆಲಸಮಮಾಡುವರು. ನಿಮ್ಮ ಸೌಧಗಳನ್ನು ಸೂರೆಮಾಡುವರು.”


ಚಳಿಗಾಲ, ಬೇಸಿಗೆಕಾಲಗಳ ವಿಹಾರಗೃಹಗಳನ್ನು ವಿನಾಶಮಾಡುವೆನು. ದಂತನಿರ್ಮಿತ ಮಂದಿರಗಳು ಧ್ವಂಸವಾಗುವುವು. ಮಹಾಸೌಧಗಳು ನೆಲಸಮವಾಗುವುವು. ಸರ್ವೇಶ್ವರಸ್ವಾಮಿಯ ನುಡಿಯಿದು.”


ಒಡೆಯರಾದ ಸರ್ವೇಶ್ವರ ನನಗೆ ಇನ್ನೊಂದು ದರ್ಶನವನ್ನು ತೋರಿಸಿದರು. ಅವರು ತನ್ನ ಜನರನ್ನು ದಂಡಿಸುವುದಕ್ಕಾಗಿ ಬೆಂಕಿಯನ್ನು ಬರಮಾಡಿದರು. ಅದು ಆಳವಾದ ಮಹಾಸಾಗರವನ್ನೂ ಇಡೀ ನಾಡನ್ನೂ ಕಬಳಿಸುವುದರಲ್ಲಿತ್ತು.


ನಾನು ಹಜಾಯೇಲನ ಅರಮನೆಯ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಬೆನ್‍ಹದದನ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು