Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 3:1 - ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲಿನ ಜನರೇ, ಕಿವಿಗೊಡಿ. ಈಜಿಪ್ಟ್ ದೇಶದಿಂದ ನಿಮ್ಮನ್ನು ಬಿಡುಗಡೆಮಾಡಿ ಕರೆತಂದ ಸರ್ವೆಶ್ವರ ನಿಮ್ಮ ವಿರುದ್ಧವಾಗಿ ನುಡಿಯುವ ಮಾತುಗಳನ್ನು ಆಲಿಸಿರಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲರೇ ಯೆಹೋವನು ನಿಮಗೆ ವಿರುದ್ಧವಾಗಿ, ತಾನು ಐಗುಪ್ತ ದೇಶದೊಳಗಿಂದ ಪಾರು ಮಾಡಿದ ಪೂರ್ಣಕುಲಕ್ಕೆ ವಿರುದ್ಧವಾಗಿ ನುಡಿದಿರುವ ಈ ಮಾತನ್ನು ಕೇಳಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲ್ಯರೇ, ಯೆಹೋವನು ನಿಮಗೆ ವಿರುದ್ಧವಾಗಿ, ಅಂದರೆ ತಾನು ಐಗುಪ್ತದೇಶದೊಳಗಿಂದ ಪಾರುಮಾಡಿದ ಪೂರ್ಣಕುಲಕ್ಕೆ ವಿರುದ್ಧವಾಗಿ ನುಡಿದಿರುವ ಈ ಮಾತನ್ನು ಕೇಳಿರಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸ್ರೇಲಿನ ಜನರೇ, ಈ ಸಂದೇಶಕ್ಕೆ ಕಿವಿಗೊಡಿರಿ! ನಿಮ್ಮ ವಿಷಯವಾಗಿ ಯೆಹೋವನು ಹೀಗೆ ಹೇಳಿದ್ದಾನೆ. ಇಸ್ರೇಲೇ, ಇದು ನಾನು ಈಜಿಪ್ಟ್‌ನಿಂದ ಬಿಡಿಸಿಕೊಂಡು ಬಂದ ಎಲ್ಲಾ ಕುಟುಂಬಗಳವರ (ಇಸ್ರೇಲ್) ವಿಷಯವಾದ ಸಂದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲರೇ, ಯೆಹೋವ ದೇವರು ನಿಮಗೆ ವಿರೋಧವಾಗಿ ಹೇಳುವ ವಾಕ್ಯವನ್ನು ಕೇಳಿರಿ. ನಾನು ಈಜಿಪ್ಟ್ ದೇಶದೊಳಗಿಂದ ಕರೆದುತಂದ ಸಮಸ್ತ ಕುಟುಂಬಕ್ಕೆ ಹೇಳುವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 3:1
18 ತಿಳಿವುಗಳ ಹೋಲಿಕೆ  

ಈಜಿಪ್ಟಿನಿಂದ ನಿಮ್ಮನ್ನು ಹೊರತಂದವನು ನಾನೇ. ನಲವತ್ತು ವರ್ಷಗಳ ಕಾಲ ಅರಣ್ಯದ ಮಾರ್ಗವಾಗಿ ನಿಮ್ಮನ್ನು ನಡೆಸಿ ಕರೆತಂದು, ಅಮೋರ್ಯದವರ ನಾಡನ್ನು ನಿಮಗೆ ದೊರಕಿಸಿಕೊಟ್ಟವನು ನಾನೇ.


ಆಗ ನಾನು ಇಂತೆಂದೆನು: “ಯಕೋಬ ವಂಶದ ಮುಖಂಡರೇ, ಇಸ್ರಯೇಲ್ ವಂಶದ ಅಧಿಪತಿಗಳೇ, ಕಿವಿಗೊಟ್ಟು ಕೇಳಿರಿ. ನ್ಯಾಯನೀತಿ ಪಾಲನೆ ನಿಮ್ಮ ಕರ್ತವ್ಯವಲ್ಲವೆ?


ಈ ಕೆಟ್ಟ ವಂಶದವರನ್ನು ನಾನು ಯಾವಾವ ಸ್ಥಳಗಳಿಗೆ ಅಟ್ಟಿಬಿಡುವೆನೋ, ಅಲ್ಲೆಲ್ಲಾ ಇವರಲ್ಲಿ ಅಳಿದುಳಿದವರು ಜೀವಿಸುವುದಕ್ಕಿಂತ ಸಾವೇ ಲೇಸೆಂದು ಬಯಸುವರು. ಇದು ಸರ್ವೇಶ್ವರನಾದ ನನ್ನ ನುಡಿ.”


ಇಸ್ರಯೇಲಿನವರೇ, ಸರ್ವೇಶ್ವರಸ್ವಾಮಿಯ ವಾಕ್ಯವನ್ನು ಆಲಿಸಿರಿ: “ಈ ದೇಶದಲ್ಲಿ ಸತ್ಯ, ಪ್ರೀತಿ, ಭಕ್ತಿ ಎಂಬುದೇ ಇಲ್ಲ. ಇಲ್ಲಿನ ನಿವಾಸಿಗಳ ಮೇಲೆ ಸರ್ವೇಶ್ವರ ಆಪಾದನೆ ಹೊರಿಸಿದ್ದಾರೆ.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ಕಾಲ ಬರಲಿದೆ, ಆಗ ಇಸ್ರಯೇಲಿನ ಸಕಲ ಗೋತ್ರಗಳಿಗೆ ನಾನೇ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು.


“ಯಕೋಬೆ, ನಾ ಕರೆದ ಇಸ್ರಯೇಲೆ ನನಗೆ ಕಿವಿಗೊಡು, ಪರಮಾತ್ಮ ನಾನೆ ಆದಿಯು ನಾನೆ, ಅಂತ್ಯವು ನಾನೆ.


ಅವನು , “ಜುದೇಯದ ಹಾಗು ಜೆರುಸಲೇಮಿನ ಎಲ್ಲ ಜನರೇ, ಅರಸ ಯೆಹೋಷಾಫಾಟನೇ, ಸರ್ವೇಶ್ವರ ಸ್ವಾಮಿ ಹೇಳುವುದನ್ನು ಕೇಳಿರಿ: ಈ ಮಹಾಸೈನ್ಯಸಮೂಹದ ನಿಮಿತ್ತ ಕಳವಳಗೊಳ್ಳಬೇಡಿ; ಹೆದರಬೇಡಿ. ಈ ಯುದ್ಧ ನಿಮ್ಮದಲ್ಲ, ದೇವರದೇ.


“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.”


“ಯಾಜಕರೇ, ಕೇಳಿ: ಇಸ್ರಯೇಲ್ ಮನೆತನದವರೇ, ಗಮನಿಸಿ. ರಾಜವಂಶದವರೇ ಕಿವಿಗೊಡಿ.


“ಕಿವಿಗೊಡು, ಓ ಯಕೋಬ ಮನೆತನವೆ, ಅಳಿದುಳಿದಾ ಇಸ್ರಯೇಲಿನ ಮನೆತನವೆ, ಹೊರುತ್ತಿರುವೆ ನಿಮ್ಮನು ಗರ್ಭದಿಂದ ಸಾಕಿ ಸಲಹುತ್ತಿರುವೆ ಹುಟ್ಟಿದಂದಿನಿಂದ.


ಇಸ್ರಯೇಲ್ ವಂಶವೆಲ್ಲವು ಹಾಗು ಜುದೇಯ ವಂಶವೆಲ್ಲವು ನನಗೆ ಪ್ರಜೆಯಾಗಿರಲಿ; ನನಗೆ ಕೀರ್ತಿ, ಗೌರವ ತರಲಿ, ನನಗೆ ಆಭರಣವಾಗಿರಲಿ ಎಂದುಕೊಂಡೆ. ನಡುಕ್ಟಟನ್ನು ಸೊಂಟಕ್ಕೆ ಬಿಗಿದುಕೊಳ್ಳುವಂತೆ ಇವರನ್ನು ಬಿಗಿದುಕೊಂಡಿದ್ದೆ. ಆದರೂ ಇವರು ನನಗೆ ಕಿವಿಗೊಡದೆಹೋದರು. ಇದು ಸರ್ವೇಶ್ವರನಾದ ನನ್ನ ನುಡಿ.”


ಆದುದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: “ಈ ಪೀಳಿಗೆಯ ಮೇಲೆ ನಾನೇ ವಿನಾಶವನ್ನು ಬರಮಾಡುತ್ತೇನೆ. ಆ ಕೇಡಿನಿಂದ ನೀವು ತಲೆತಪ್ಪಿಸಿಕೊಳ್ಳಲಾರಿರಿ. ತಲೆಯೆತ್ತಿ ನಡೆಯಲು ನಿಮಗೆ ಸಾಧ್ಯವಾಗದು. ಕಾಲವು ಅಷ್ಟು ಹದಗೆಟ್ಟಿರುವುದು.


ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನರೇ, ನಿಮಗೆ ಧಿಕ್ಕಾರ! ಫಿಲಿಷ್ಟಿಯರ ನಾಡಾದ ಕಾನಾನೇ, ನಿನಗೆ ಧಿಕ್ಕಾರ! ಸರ್ವೇಶ್ವರನ ನ್ಯಾಯತೀರ್ಪು ನಿನಗೆ ವಿರುದ್ಧವಾಗಿದೆ; ನಿನ್ನಲ್ಲಿ ಯಾರೂ ಉಳಿಯದಂತೆ ಅಳಿಸಿಬಿಡುವರು.


ನೆನೆಯಿರಿ ಆತನ ಅದ್ಭುತಗಳನು, ಮಹತ್ಕಾರ್ಯಗಳನು I ಆತನ ವದನ ವಿಧಿಸಿದ ನ್ಯಾಯನಿರ್ಣಯಗಳನು II


ಸಮಾರ್ಯದ ಗುಡ್ಡಗಳ ಮೇಲೆ ಮೇದು, ಬಾಷಾನಿನ ಕೊಬ್ಬಿನ ಕಾಮಧೇನುಗಳಂತಿರುವ ಮಹಿಳೆಯರೇ, ಕೇಳಿ: ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಶೋಷಿಸಿ, ನಿಮ್ಮ ಪತಿರಾಯರಿಗೆ, “ಮದ್ಯ ತರಿಸಿರಿ, ಕುಡಿಯೋಣ” ಎಂದು ಹೇಳುವವರೇ, ಇದನ್ನು ಕೇಳಿ:


ಇಸ್ರಯೇಲಿನ ಜನರೇ, ನಿಮ್ಮನ್ನು ಕುರಿತು ನಾನು ಹಾಡುವ ಈ ಶೋಕಗೀತೆಯನ್ನು ಕೇಳಿ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು