Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 3:13 - ಕನ್ನಡ ಸತ್ಯವೇದವು C.L. Bible (BSI)

13 ಈಗ ಕೇಳಿ, ಯಕೋಬನ ವಂಶದವರಿಗೆ ಎಚ್ಚರಿಕೆ ನೀಡಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸೇನಾಧೀಶ್ವರ ದೇವನಾದ ಯೆಹೋವನು ಇಂತೆನ್ನುತ್ತಾನೆ; ಕೇಳಿರಿ, ಯಾಕೋಬ ವಂಶದವರಿಗೆ ವಿರುದ್ಧವಾಗಿ ಸಾಕ್ಷಿಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸೇನಾಧೀಶ್ವರ ದೇವನಾದ ಯೆಹೋವನು ಇಂತೆನ್ನುತ್ತಾನೆ - ಕೇಳಿರಿ, ಯಾಕೋಬ ವಂಶದವರಿಗೆ ಎಚ್ಚರ ಹೇಳಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಸರ್ವಶಕ್ತನೂ ನನ್ನ ಒಡೆಯನೂ ಆಗಿರುವ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, “ಯಾಕೋಬನ ಕುಟುಂಬದವರಿಗೆ ಈ ವಿಷಯವನ್ನು ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸರ್ವಶಕ್ತ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: “ನೀವು ಕೇಳಿ, ಯಾಕೋಬಿನ ಮನೆತನದವರಿಗೆ ವಿರುದ್ಧವಾಗಿ ಸಾಕ್ಷಿ ಕೊಡಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 3:13
15 ತಿಳಿವುಗಳ ಹೋಲಿಕೆ  

ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಅತಿಕ್ರಮಿಸದಿರಲಿ. ಹೀಗೆ ವರ್ತಿಸುವವರು ಪ್ರಭುವಿನ ಪ್ರತೀಕಾರಕ್ಕೆ ಒಳಗಾಗುವರೆಂದು ನಾವು ನಿಮಗೆ ಮುನ್ನೆಚ್ಚರಿಕೆ ಕೊಟ್ಟಿದ್ದೇವೆ.


ಪ್ರಭುವಿನ ಹೆಸರಿನಲ್ಲಿ ನಾನು ನಿಮಗೆ ಒತ್ತಿ ಹೇಳುತ್ತೇನೆ: ಇನ್ನು ಮುಂದೆ ನೀವು ಅನ್ಯಜನರಂತೆ ಜೀವಿಸುವುದನ್ನು ತ್ಯಜಿಸಿರಿ. ಅವರ ಆಲೋಚನೆಗಳು ಹುರುಳಿಲ್ಲದವು.


ಪಾಪಕ್ಕೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಬೇಕು, ನಮ್ಮ ಪ್ರಭು ಯೇಸುವಿನಲ್ಲಿ ವಿಶ್ವಾಸವಿಡಬೇಕು, ಎಂದು ಯೆಹೂದ್ಯರಿಗೂ ಗ್ರೀಕರಿಗೂ ಸ್ಪಷ್ಟವಾದ ಎಚ್ಚರಿಕೆಯನ್ನು ಕೊಟ್ಟಿದ್ದೇನೆ.


ಪೇತ್ರನು ಅವರಿಗೆ ಹಲವಾರು ವಿಧದಲ್ಲಿ ಮನವಿಮಾಡಿದನು. ‘ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿ,’ ಎಂದು ಎಚ್ಚರಿಸಿದನು.


ಏಕೆಂದರೆ ನಾನು ನಿಮ್ಮನ್ನು ದಮಸ್ಕದಿಂದ ಆಚೆ ತಳ್ಳಿ, ಸೆರೆಯಾಳುಗಳನ್ನಾಗಿ ಕಳುಹಿಸುವೆನು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಅವರು ಕೇಳಲಿ ಅಥವಾ ಬಿಡಲಿ ನೀನು ನನ್ನ ವಾಕ್ಯವನ್ನು ಅವರಿಗೆ ನುಡಿಯಲೇಬೇಕು. ಅವರು ದ್ರೋಹಿಗಳೇ ಸರಿ.


ಇಂತಿರಲು ಒಡೆಯರು, ಸೇನಾಧೀಶ್ವರರು, ಇಸ್ರಯೇಲರ ಪರಾಕ್ರಮಿಯು ಆದ ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ ನನ್ನ ಶತ್ರುಗಳಾದ ನಿಮ್ಮ ಮೇಲೆ ಸೇಡು ತೀರಿಸುವೆನು. ನನ್ನ ವಿರೋಧಿಗಳಾದ ನಿಮ್ಮನ್ನು ಸದೆಬಡಿದು ಶಾಂತನಾಗಿರುವೆನು.


ಸರ್ವೇಶ್ವರ ಅವರನ್ನು ತಮ್ಮ ಕಡೆಗೆ ತಿರುಗಿಸಿಕೊಳ್ಳುವುದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿದರು. ಇವರ ಮುಖಾಂತರ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ.


ಸರ್ವೇಶ್ವರ ತಮ್ಮ ಪೂರ್ವಜರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ ತಮಗೆ ಹೇಳಿಸಿದ ಬುದ್ಧಿವಾಕ್ಯಗಳನ್ನೂ ತಿರಸ್ಕರಿಸಿ, ಮಿಥ್ಯಾದೇವತೆಗಳನ್ನು ಪೂಜಿಸಿ ನಿಸ್ಸಾರ್ಥಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಸರ್ವೇಶ್ವರ ಆಜ್ಞಾಪಿಸಿದ್ದರೂ ಕೇಳದೆ ಆ ಜನಾಂಗಗಳನ್ನೇ ಅನುಸರಿಸಿದರು.


ದರ್ಶಿನಿಗಳೆನಿಸಿಕೊಂಡ ತಮ್ಮ ಪ್ರವಾದಿಗಳ ಮುಖಾಂತರ ಇಸ್ರಯೇಲ ಯೆಹೂದ್ಯರಿಗೆ, “ನೀವು ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪೂರ್ವಜರಿಗೂ ನನ್ನ ದಾಸರಾದ ಪ್ರವಾದಿಗಳ ಮುಖಾಂತರ ನಿಮಗೂ ಕೊಟ್ಟಂಥ ನನ್ನ ಎಲ್ಲಾ ಆಜ್ಞಾವಿಧಿನಿಯಮಗಳನ್ನು ಕೈಕೊಂಡು ನಡೆಯಿರಿ,” ಎಂದು ಖಂಡಿತವಾಗಿ ಹೇಳಿದರು.


“ದೇವಾಧಿದೇವರಾದ ಸರ್ವೇಶ್ವರ ಇದಕ್ಕೆ ಸಾಕ್ಷಿ; ಆ ದೇವಾಧಿದೇವ ಸರ್ವೇಶ್ವರಸ್ವಾಮಿಗೆ ಇದು ಗೊತ್ತಿದೆ. ಇಸ್ರಯೇಲರಿಗೂ ಗೊತ್ತಾಗುವುದು. ನಾವು ದ್ರೋಹಿಗಳು, ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದವರು ಆಗಿದ್ದರೆ ಆ ಸ್ವಾಮಿ ನಮ್ಮನ್ನು ಇಂದೇ ಜೀವದಿಂದುಳಿಸದಿರಲಿ.


ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಮರೆತು, ಇತರ ದೇವರುಗಳನ್ನು ಅವಲಂಬಿಸಿ, ಪೂಜಿಸಿದರೆ ನೀವು ತಪ್ಪದೆ ನಾಶವಾಗಿಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ.


ಇಸ್ರಯೇಲರ ಪಾಪಕೃತ್ಯಗಳಿಗಾಗಿ ಅವರನ್ನು ದಂಡಿಸುವೆನು. ಬೇತೇಲಿನ ಯಜ್ಞವೇದಿಗಳನ್ನು ಚೂರುಚೂರು ಮಾಡುವೆನು. ಆ ಯಜ್ಞವೇದಿಯ ಮೂಲೆಕೊಂಬುಗಳನ್ನು ಕತ್ತರಿಸಿ ಬೀದಿಪಾಲಾಗಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು