Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 4:1 - ಕನ್ನಡ ಸತ್ಯವೇದವು C.L. Bible (BSI)

1 ಸಮಾರ್ಯದ ಗುಡ್ಡಗಳ ಮೇಲೆ ಮೇದು, ಬಾಷಾನಿನ ಕೊಬ್ಬಿನ ಕಾಮಧೇನುಗಳಂತಿರುವ ಮಹಿಳೆಯರೇ, ಕೇಳಿ: ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಶೋಷಿಸಿ, ನಿಮ್ಮ ಪತಿರಾಯರಿಗೆ, “ಮದ್ಯ ತರಿಸಿರಿ, ಕುಡಿಯೋಣ” ಎಂದು ಹೇಳುವವರೇ, ಇದನ್ನು ಕೇಳಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಮಾರ್ಯ ಬೆಟ್ಟದಲ್ಲಿನ, ಬಾಷಾನಿನ ಕೊಬ್ಬಿದ ಹಸುಗಳಂತಿರುವ ಸ್ತ್ರೀಯರೇ, ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಜಜ್ಜಿ, ನೀವು ನಿಮ್ಮ ಪತಿಗಳಿಗೆ, “ಪಾನಗಳನ್ನು ತರಿಸಿ, ಕುಡಿಯೋಣ” ಎಂದು ಹೇಳುವವರೇ, ಈ ಮಾತನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸಮಾರ್ಯಬೆಟ್ಟದಲ್ಲಿನ ಬಾಷಾನಿನ ಆಕಳುಗಳೇ, ಬಡವರನ್ನು ಹಿಂಸಿಸಿ ದಿಕ್ಕಿಲ್ಲದವರನ್ನು ಜಜ್ಜಿ ನಿಮ್ಮ ಪತಿಗಳಿಗೆ - ಪಾನವನ್ನು ತರಿಸಿರಿ, ಕುಡಿಯೋಣ ಎಂದು ಹೇಳುವವರೇ, ಈ ಮಾತನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಮಾರ್ಯದ ಪರ್ವತಗಳಲ್ಲಿರುವ ಬಾಷಾನಿನ ದನಗಳೇ, ನನ್ನ ಮಾತಿಗೆ ಕಿವಿಗೊಡಿರಿ. ನೀವು ಬಡ ಜನರನ್ನು ಹಿಂಸಿಸಿ ಜಜ್ಜುತ್ತೀರಿ. ನಿಮ್ಮ ಗಂಡಂದಿರ ಹತ್ತಿರ, “ನಮಗೆ ಕುಡಿಯಲಿಕ್ಕೆ ತಂದುಕೊಡು” ಎಂದು ಹೇಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸಮಾರ್ಯ ಬೆಟ್ಟದಲ್ಲಿರುವ ಬಾಷಾನಿನ ಹಸುಗಳಂತಿರುವ ಮಹಿಳೆಯರೇ, ನೀವು ಬಡವರನ್ನು ಹಿಂಸಾಚಾರ ಮಾಡಿ, ದರಿದ್ರರನ್ನು ಜಜ್ಜಿ, ನಿಮ್ಮ ಪತಿಗಳಿಗೆ, “ಪಾನವನ್ನು ತರಿಸಿರಿ, ಕುಡಿಯೋಣ,” ಎಂದು ಹೇಳುವವರೇ, ಈ ವಾಕ್ಯವನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 4:1
49 ತಿಳಿವುಗಳ ಹೋಲಿಕೆ  

ಸುತ್ತಿಕೊಂಡಿವೆಯೆನ್ನನು ಬಲವಂತ ಹೋರಿಗಳು I ಮುತ್ತಿಕೊಂಡಿವೆ ಬಾಷಾನಿನ ಹಲವು ಗೂಳಿಗಳು II


ಇಸ್ರಯೇಲಿನ ಜನರು ನಿಮ್ಮ ಸಹಾಯ ಕೋರಿ ನಿಮ್ಮನ್ನು ಹುಡುಕಿಕೊಂಡು ಬರುವಷ್ಟು ಪ್ರತಿಭಾವಂತರಾಗಿರುವವರೇ, ನಿಮಗೆ ಧಿಕ್ಕಾರ!


ಬಡಬಗ್ಗರನ್ನು ತುಳಿಯುತ್ತೀರಿ; ಅವರ ದವಸಧಾನ್ಯಗಳನ್ನು ಕಸಿದುಕೊಳ್ಳುತ್ತೀರಿ. ಆದ್ದರಿಂದ ನೀವು ಕಟ್ಟಿರುವ ಕೆತ್ತನೆಯ ಕಲ್ಲುಮನೆಗಳಲ್ಲಿ ವಾಸಮಾಡಲಾರಿರಿ. ನೀವು ನೆಟ್ಟಿರುವ ಫಲಭರಿತ ದ್ರಾಕ್ಷಾಬಳ್ಳಿಗಳಿಂದ ರಸವನ್ನು ಕುಡಿಯಲಾರಿರಿ.


ಟಗರು, ಕುರಿ, ಹೋತ, ಹೋರಿ, ಅಂತು ಬಾಷಾನಿನ ಕೊಬ್ಬಿದ ಪಶುಗಳು, ಅಂದರೆ ಬಲಿಷ್ಠರು, ಭೂಪತಿಗಳು ಇವರ ಮಾಂಸ ಹಾಗೂ ರಕ್ತ ನಿಮಗೆ ಸಿಕ್ಕುವುವು.


ಇದಾದ ಮೇಲೆ ಈ ಜಗದಲ್ಲಿ ಎಲ್ಲಾ ತರದ ಚಿತ್ರಹಿಂಸೆಗಳನ್ನು ಕುರಿತು ಯೋಚಿಸಿದೆ. ಅಯ್ಯೋ, ಹಿಂಸೆಗೆ ಈಡಾದವರ ಕಣ್ಣೀರನ್ನು ಕುರಿತು ಏನೆಂದು ಹೇಳಲಿ? ಅವರನ್ನು ಸಂತೈಸುವವರು ಯಾರೂ ಇಲ್ಲ. ಹಿಂಸಾಚಾರಿಗಳು ಶಕ್ತಿಸಾಮರ್ಥ್ಯ ಉಳ್ಳವರು. ಸಂತೈಸುವವರಾದರೋ ಒಬ್ಬರೂ ಇರಲಿಲ್ಲ.


“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ನನ್ನ ಜನರಿಗಾಗಿ ಚೀಟುಹಾಕಿದ್ದಾರೆ. ವೇಶ್ಯಾಚಾರಕ್ಕಾಗಿ, ಮದ್ಯಪಾನಕ್ಕಾಗಿ, ಗಂಡುಮಕ್ಕಳನ್ನೂ ಹೆಣ್ಣುಮಕ್ಕಳನ್ನೂ ಮಾರಾಟ ಮಾಡಿದ್ದಾರೆ.


ಜನಸಾಮಾನ್ಯರೂ ಹಿಂಸಿಸಿ ಸೂರೆಮಾಡಿದ್ದಾರೆ, ದೀನದರಿದ್ರರನ್ನು ಬಾಧಿಸಿದ್ದಾರೆ, ವಿದೇಶಿಗಳನ್ನು ಅನ್ಯಾಯವಾಗಿ ನಸುಕಿಬಿಟ್ಟಿದ್ದಾರೆ.


ಅಲ್ಲಿನ ಪ್ರಮುಖರು ಸುಲಿಗೆಗಾಗಿ ರಕ್ತ ಸುರಿಸಿ, ನರಪ್ರಾಣಿಗಳನ್ನು ಕಬಳಿಸುವ, ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.


“ನಿನ್ನವರು ರಕ್ತ ಸುರಿಸುವುದಕ್ಕೆ ಲಂಚಪಡೆದಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು, ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ಸುಲಿಗೆಮಾಡಿ, ನನ್ನನ್ನು ಮರೆತೇಬಿಟ್ಟಿದ್ದಾರೆ; ಇದು ಸರ್ವೇಶ್ವರನಾದ ದೇವರ ನುಡಿ.


ನಿನ್ನವರು ತಾಯಿತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿದೇಶಿಯರನ್ನು ಬಾದಿಸಿದ್ದಾರೆ, ನಿನ್ನವರು ಅನಾಥರನ್ನೂ ವಿಧವೆಯರನ್ನೂ ಹಿಂಸಿಸಿದ್ದಾರೆ.


ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನು ನನ್ನನ್ನು ಮುರಿದು ತಿಂದುಬಿಟ್ಟ ನನ್ನನ್ನು ಕುಡಿದು ಬಿಸಾಡಿದ ಪಾತ್ರೆಯನ್ನಾಗಿಸಿಬಿಟ್ಟ. ಘಟಸರ್ಪದ ಹಾಗೆ ನನ್ನನ್ನು ನುಂಗಿದ ನನ್ನ ರುಚಿಪದಾರ್ಥಗಳಿಂದ ಹೊಟ್ಟೆ ತುಂಬಿಸಿಕೊಂಡ ಮಿಕ್ಕಿದುದನ್ನೆಲ್ಲ ತೊಳೆದು ಎಸೆದುಬಿಟ್ಟ.


ಅದರ ಗೂಳಿಗಳನ್ನೆಲ್ಲ ಕೊಲ್ಲಿರಿ. ಹೋಗಲಿ ಅವು ವಧ್ಯಸ್ಥಾನಕ್ಕೆ. ಅವುಗಳಿಗೆ ಧಿಕ್ಕಾರ. ಅವುಗಳಿಗೆ ಬಂದಿದೆ ವಿಪತ್ಕಾಲ! ಸಮೀಪಿಸಿದೆ ದಂಡನೆಯ ದಿನ!


ಅನ್ಯರನ್ನಾಗಲಿ, ಅನಾಥರನ್ನಾಗಲಿ, ವಿಧವೆಯರನ್ನೇ ಆಗಲಿ ಶೋಷಣೆಗೆ ಗುರಿಪಡಿಸಬೇಡಿ! ಇಲ್ಲೆಲ್ಲೂ ನಿರ್ದೋಷಿಗಳ ರಕ್ತವನ್ನು ಸುರಿಸಬೇಡಿ. ನಿಮಗೆ ಹಾನಿಕರವಾದ ಅನ್ಯದೇವತಾ ಭಕ್ತಿಯನ್ನು ಬಿಟ್ಟುಬಿಡಿ.


ಸರ್ವಶಕ್ತನಾದ ಸರ್ವೇಶ್ವರ ಸ್ವಾಮಿ ಹೀಗೆ ಎನ್ನುತ್ತಾರೆ : “ಸಿಯೋನ್ ಸುತ್ತಣ ಮರಗಳನ್ನು ಕಡಿದುಬಿಡಿ. ಜೆರುಸಲೇಮ್ ಎದುರಿಗೆ ದಿಬ್ಬಗಳನ್ನು ಎಬ್ಬಿಸಿರಿ. ನೀವು ದಂಡಿಸಬೇಕಾದ ನಗರ ಇದುವೆ. ದರೋಡೆ ದಬ್ಬಾಳಿಕೆಗಳಿಂದ ಅದು ತುಂಬಿದೆ.


“ನಾನು ಹೇಳುವುದನ್ನು ಕೇಳಿ : ಅನ್ಯಾಯದ ಬಂಧನಗಳನ್ನು ಬಿಚ್ಚುವುದು, ಭಾರವಾದ ನೊಗದ ಕಣಿಗಳನ್ನು ಕಳಚುವುದು, ಜರ್ಜರಿತರಾದವರನ್ನು ಬಿಡುಗಡೆಮಾಡುವುದು,


ಮನೆಯ ಮೇಲೆ ಮನೆಯನ್ನು, ಹೊಲದ ಮೇಲೆ ಹೊಲವನ್ನು ಕೂಡಿಹಾಕಿಸುತ್ತಾ ಇರುವವರಿಗೆ ಧಿಕ್ಕಾರ ! ಇತರರಿಗೆ ಕಿಂಚಿತ್ತನ್ನೂ ಬಿಡದೆ ನಾಡಿನ ನಡುವೆ ತಾವೇ ಗೌಡರಾಗಿ ವಾಸಿಸುವ ಇವರಿಗೆ ಧಿಕ್ಕಾರ !


ನಾಡಿನಲ್ಲಿ ಬಡವರ ಶೋಷಣೆಯನ್ನೂ ನ್ಯಾಯನೀತಿಯ ಉಲ್ಲಂಘನೆಯನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬ ಅಧಿಕಾರಿ ಉಸ್ತುವಾರಿ ನಡೆಸುತ್ತಾನೆ. ಆ ಇಬ್ಬರು ಅಧಿಕಾರಿಗಳ ಮೇಲೆ ಇನ್ನೂ ಉನ್ನತ ಅಧಿಕಾರಿಗಳು ಇದ್ದಾರೆ.


ಪ್ರಭು ನೀ ದೀನದಲಿತರ ವಕೀಲನೆಂದು ನಾ ಬಲ್ಲೆ I ಬಡವರಿಗೆ ನ್ಯಾಯ ದೊರಕಿಸುವವ ನೀ ಅಲ್ಲವೆ? II


ಬಡವರ ಬವಣೆ ತಿಳಿಯಿತೆನಗೆ; ದಲಿತರ ನರಳಾಟ ಕೇಳಿಸಿತೆನಗೆ I ಎದ್ದು ಬರುವೆ, ಹಗೆಗಳಿಂದವರನು ಉದ್ಧರಿಸುವೆ” ಇದು ಪ್ರಭುವಿನ ಹೇಳಿಕೆ II


ಏಕೆಂದರೆ ಬಡವರನು ತುಳಿದು ತೊರೆದುಬಿಟ್ಟ ತಾನು ಕಟ್ಟದ ಮನೆಯನು ಕಿತ್ತುಕೊಂಡುಬಿಟ್ಟ.


ಅನಂತರ ಶೆಮೆರ್ ಎಂಬವನಿಗೆ ಆರು ಸಾವಿರ ಬೆಳ್ಳಿನಾಣ್ಯಗಳನ್ನು ಕೊಟ್ಟು ಅವನಿಂದ ಸಮಾರಿಯ ಎಂಬ ಗುಡ್ಡವನ್ನು ಕೊಂಡುಕೊಂಡನು. ಅದರ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ ಅದಕ್ಕೆ ಆ ಭೂಮಿಯ ಒಡೆಯನಾಗಿದ್ದ ಶೆಮೆರಿನ ಜ್ಞಾಪಕಾರ್ಥವಾಗಿ ಸಮಾರಿಯ ಎಂಬ ಹೆಸರಿಟ್ಟನು.


ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ನಾಡಿನ ಬೆಳೆಯನ್ನೂ ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು. ನೀವಾದರೋ ನಿರಂತರ ಹಿಂಸೆಗೂ ಬಲಾತ್ಕಾರಕ್ಕೂ ಗುರಿಯಾಗುವಿರಿ.


“ನನ್ನ ಸೊತ್ತಾದವರನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುತ್ತಿದ್ದೀರಿ! ಕಣ ತುಳಿಯುವ ಕಡಸಿನ ಹಾಗೆ ಕುಣಿದಾಡುತ್ತಿದ್ದೀರಿ. ಕೊಬ್ಬಿದ ಕುದುರೆಗಳಂತೆ ಕೆನೆಯುತ್ತಿದ್ದೀರಿ.


“ಸ್ವದೇಶದವರಲ್ಲೇ ಆಗಲಿ, ನಿಮ್ಮಲ್ಲಿ ಇರುವ ಅನ್ಯದೇಶದವರಲ್ಲೇ ಆಗಲಿ ಗತಿಯಿಲ್ಲದ ಬಡ ಕೂಲಿಯವನಿಗೆ ನೀವು ಏನೂ ಅನ್ಯಾಯ ಮಾಡಬಾರದು;


ದೀನದಲಿತರನ್ನು ಹಿಂಸಿಸಿ, ಜನರ ಸೊತ್ತನ್ನು ಅಪಹರಿಸಿ, ಸಾಲಗಾರನ ಒತ್ತೆಯನ್ನು ಬಿಗಿಹಿಡಿದು, ವಿಗ್ರಹಗಳ ಕಡೆಗೆ ಕಣ್ಣೆತ್ತಿ,


ಬೋಗುಣಿಬಟ್ಟಲುಗಳಲ್ಲಿ ದ್ರಾಕ್ಷಾರಸವನ್ನು ಕುಡಿಯುವವರೇ, ಅತ್ಯುತ್ತಮ ಸುಗಂಧತೈಲಗಳನ್ನು ಲೇಪಿಸಿಕೊಳ್ಳುವವರೇ, ನಿಮಗೆ ಧಿಕ್ಕಾರ! ಏಕೆಂದರೆ ನೀವು ಜೋಸೆಫನ ವಂಶದವರ ವಿನಾಶದ ಬಗ್ಗೆ ನಿಶ್ಚಿಂತರಾಗಿದ್ದೀರಿ.


ಇಸ್ರಯೇಲರು ಹಿಂದಿರುಗಿ ಬಾಷಾನಿನ ಮಾರ್ಗವಾಗಿ ಪ್ರಯಾಣ ಮಾಡಿದರು. ಬಾಷಾನಿನ ಅರಸ ಓಗನು ತನ್ನ ಜನರೆಲ್ಲರೊಡನೆ ಅವರಿಗೆ ವಿರುದ್ಧ ಯುದ್ಧಮಾಡಲು ಎದ್ರೈವೂರಿಗೆ ಹೊರಟುಬಂದನು.


ದಿಕ್ಕಿಲ್ಲದವರನು ದಾರಿತಪ್ಪಿಸುತ್ತಾರೆ ನಾಡಿನ ಬಡವರನು ಅಡಗಿಸಿಬಿಡುತ್ತಾರೆ.


ಬಲ್ಲಿದನು ಬಡವನಿಗೆ ಒಡೆಯ; ಸಾಲಗಾರನು ಸಾಲಕೊಟ್ಟವನಿಗೆ ಸೇವಕ.


ಕುಡುಕರಿಂದ ಕೂಡಿದ ಎಫ್ರಯಿಮಿನ ಕಿರೀಟದಂತಿರುವ ನಗರಕ್ಕೆ ಧಿಕ್ಕಾರ ! ಒಮ್ಮೆ ಕುಡಿತಕ್ಕೆ ಸೋತು ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಈಗ ಬಾಡಿಹೋಗುತ್ತಿರುವ ಆ ಹೂವಿಗೆ ಧಿಕ್ಕಾರ !


ಅಲ್ಲದೆ, ‘ಬನ್ನಿ, ಮಧುಪಾನವನ್ನು ತರಿಸುತ್ತೇನೆ. ಅಮಲೇರಿಸುವ ಮದ್ಯವನ್ನು ಬೇಕಾದಷ್ಟು ಕುಡಿಯೋಣ; ಆಗ ಇನ್ನೂ ಸಂಭ್ರಮವಾಗಿರುವುದು!’ ಎಂದು ಹರಟಿಕೊಳ್ಳುವರು.”


“ತಪ್ಪಿಸಿಕೊಂಡಿದ್ದನ್ನು ಹುಡುಕುವೆನು, ದಾರಿತಪ್ಪಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದುದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿನ ಕುರಿಗಳನ್ನಾದರೋ ಧ್ವಂಸಮಾಡುವೆನು; ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.”


ಇಸ್ರಯೇಲಿನ ಜನರೇ, ಕಿವಿಗೊಡಿ. ಈಜಿಪ್ಟ್ ದೇಶದಿಂದ ನಿಮ್ಮನ್ನು ಬಿಡುಗಡೆಮಾಡಿ ಕರೆತಂದ ಸರ್ವೆಶ್ವರ ನಿಮ್ಮ ವಿರುದ್ಧವಾಗಿ ನುಡಿಯುವ ಮಾತುಗಳನ್ನು ಆಲಿಸಿರಿ:


ಗೊತ್ತುಗುರಿಯಿಲ್ಲದೆ ಯಾರಾದರಿಬ್ಬರು ಜೊತೆಯಾಗಿ ಪ್ರಯಾಣಮಾಡುವುದುಂಟೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು