Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 7:14 - ಕನ್ನಡ ಸತ್ಯವೇದವು C.L. Bible (BSI)

14 ಅದಕ್ಕೆ ಆಮೋಸನು ಪ್ರತ್ಯುತ್ತರವಾಗಿ: “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ನಾನೊಬ್ಬ ಗೊಲ್ಲ, ಅತ್ತಿಹಣ್ಣನ್ನು ಕೀಳುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ, “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ಆದರೆ ನಾನು ಕುರುಬನು, ಅತ್ತಿಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ - ನಾನು ಪ್ರವಾದಿಯಲ್ಲ, ಪ್ರವಾದಿ ಮಂಡಲಿಗೆ ಸೇರಿದವನೂ ಅಲ್ಲ, ನಾನು ಗೊಲ್ಲನು, ಅತ್ತಿಹಣ್ಣು ಕೀಳುವವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅದಕ್ಕೆ ಅಮೋಸನು ಅಮಚ್ಯನಿಗೆ, “ಪ್ರವಾದಿಸುವದು ನನ್ನ ಕೆಲಸವಲ್ಲ. ಅಲ್ಲದೆ ನಾನು ಪ್ರವಾದಿಗಳ ಕುಟುಂಬಕ್ಕೂ ಸೇರಿದವನಲ್ಲ. ನಾನು ದನ ಮೇಯಿಸುವವನೂ, ಅತ್ತಿ ಮರಗಳನ್ನು ಹತ್ತಿ ಹಣ್ಣು ಕೀಳುವವನೂ ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಆಮೋಸನು ಅಮಚ್ಯನಿಗೆ ಉತ್ತರವಾಗಿ, “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ಆದರೆ ನಾನು ಕುರುಬನೂ ಅತ್ತಿಹಣ್ಣುಗಳನ್ನು ಕೂಡಿಸುವವನೂ ಆಗಿದ್ದೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 7:14
17 ತಿಳಿವುಗಳ ಹೋಲಿಕೆ  

ಜುದೇಯದಲ್ಲಿ ಮಹಾ ಭೂಕಂಪ ಆಗುವುದಕ್ಕೆ ಎರಡು ವರ್ಷಗಳ ಮುಂಚೆ, ತೆಕೋವದ ಕುರುಬರಲ್ಲೊಬ್ಬನಾದ ಆಮೋಸನಿಗೆ ಇಸ್ರಯೇಲಿನ ವಿಷಯವಾಗಿ ದೇವರಿಂದ ಬಂದ ಪ್ರಕಟನೆಗಳು ಇವು. ಆಗ ಜುದೇಯ ನಾಡನ್ನು ಉಜ್ಜೀಯನೆಂಬ ಅರಸನು ಆಳುತ್ತಿದ್ದ ಕಾಲ. ಅಂತೆಯೇ, ಯೋವಾಷನ ಮಗನಾದ ಯಾರೊಬ್ಬಾಮನು ಇಸ್ರಯೇಲನ್ನು ಆಳುತ್ತಿದ್ದ ಕಾಲ.


ಬದಲಿಗೆ, ತಾನು ಪ್ರವಾದಿಯಲ್ಲ, ಹೊಲದಲ್ಲಿ ಕೆಲಸಮಾಡುವವನು, ಚಿಕ್ಕಂದಿನಿಂದ ನಾನು ಕೂಲಿಯಾಳು ಎಂದುಕೊಳ್ಳುವನು.


ಎಲೀಷನು ಪುನಃ ಗಿಲ್ಗಾಲಿಗೆ ಹೋದನು. ಆಗ ನಾಡಿನಲ್ಲಿ ಬರವಿತ್ತು. ಪ್ರವಾದಿಮಂಡಲಿಯವರು ತನ್ನ ಮುಂದೆ ಕೂಡಿಬರಲು ಅವನು ತನ್ನ ಸೇವಕನಿಗೆ, “ದೊಡ್ಡ ಹಂಡೆಯನ್ನು ತೆಗೆದುಕೊಂಡು ಇವರಿಗೆ ಅಡಿಗೆಮಾಡು,” ಎಂದು ಆಜ್ಞಾಪಿಸಿದನು.


ಅಲ್ಲಿನ ಪ್ರವಾದಿಮಂಡಲಿಯವರು ಎಲೀಷನನ್ನು ಭೇಟಿಯಾಗಿ, “ಸರ್ವೇಶ್ವರ ಈ ದಿನ ನಿಮ್ಮ ಗುರುವನ್ನು ನಿಮ್ಮ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವರು ಎಂಬುದು ನಿಮಗೆ ತಿಳಿದಿದೆಯೊ?” ಎಂದು ಕೇಳಿದರು. ಅದಕ್ಕೆ ಅವನು, “ತಿಳಿದಿದೆ; ಆದರೆ ನೀವು ಸುಮ್ಮನಿರಿ,” ಎಂದು ಉತ್ತರಿಸಿದನು.


ಅವನು ಜೆರುಸಲೇಮಿಗೆ ಬಂದಾಗ ಹನಾನೀಯನ ಮಗ ಯೇಹೂ ಎಂಬ ದರ್ಶಿಯು ಅವನನ್ನು ಎದುರುಗೊಂಡು, “ನೀವು ಕೆಟ್ಟವನಿಗೆ ಸಹಾಯಮಾಡಬಹುದೇ? ಸರ್ವೇಶ್ವರನ ಹಗೆಗಾರರನ್ನು ಪ್ರೀತಿಸಬಹುದೇ? ನೀವು ಹೀಗೆ ಮಾಡಿದ್ದರಿಂದ ಸರ್ವೇಶ್ವರನ ಕೋಪ ನಿಮ್ಮ ಮೇಲಿರುತ್ತದೆ.


ಬೇತೇಲಿನ ಪ್ರವಾದಿಮಂಡಲಿಯವರು ಎಲೀಷನನ್ನು ಭೇಟಿಯಾದರು. “ಸರ್ವೇಶ್ವರ ಈ ದಿನ ನಿಮ್ಮ ಗುರುವನ್ನು ನಿಮ್ಮ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವರೆಂಬುದು ನಿಮಗೆ ಗೊತ್ತೇ?” ಎಂದು ಕೇಳಿದರು. ಅದಕ್ಕೆ ಎಲೀಷನು, “ನನಗೆ ಗೊತ್ತಿದೆ; ಆದರೆ ನೀವು ಸುಮ್ಮನಿರಿ,” ಎಂದನು.


ಜ್ಞಾನಿಗಳನ್ನು ನಾಚಿಕೆಗೀಡುಮಾಡಲು ದೇವರು ಲೋಕದ ದೃಷ್ಟಿಯಲ್ಲಿ ಮೂರ್ಖರನ್ನು ಆರಿಸಿಕೊಂಡರು; ಅಂತೆಯೇ ಬಲಿಷ್ಠರನ್ನು ಲಜ್ಜೆಗೀಡುಮಾಡಲು ಲೋಕದ ದೃಷ್ಟಿಯಲ್ಲಿ ಬಲಹೀನರನ್ನು ಆರಿಸಿಕೊಂಡರು.


ಯೆಹೋಷಾಫಾಟನ ಉಳಿದ ಪೂರ್ವೋತ್ತರ ಚರಿತ್ರೆ ಇಸ್ರಯೇಲ್ ರಾಜರ ಗ್ರಂಥದಲ್ಲಿ ಹನಾನೀಯನ ಮಗ ಯೇಹುವಿನ ವೃತ್ತಾಂತದಲ್ಲಿ ದಾಖಲಾಗಿದೆ.


ಆ ಕಾಲದಲ್ಲಿ ದರ್ಶಿಯಾದ ಹನಾನಿಯು ಯೆಹೂದ್ಯರ ಅರಸ ಆಸನ ಬಳಿಗೆ ಬಂದು, “ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಆಶ್ರಯಿಸಿಕೊಳ್ಳದೆ ಸಿರಿಯಾದ ಅರಸನನ್ನು ಆಶ್ರಯಿಸಿಕೊಂಡದ್ದರಿಂದ ಸಿರಿಯಾ ರಾಜನ ಸೈನ್ಯವು ನಿಮ್ಮ ಕೈಗೆ ಬೀಳದಂತೆ ನುಣಿಚಿಕೊಂಡಿತು.


ಒಂದು ಸಾರಿ ಪ್ರವಾದಿಮಂಡಲಿಯವರು ಎಲೀಷನಿಗೆ, “ನಾವು ನಿನ್ನ ಜೊತೆಯಲ್ಲಿ ವಾಸಿಸುತ್ತಿರುವ ಈ ಸ್ಥಳ ಬಹಳ ಇಕ್ಕಟ್ಟಾಗಿದೆ.


ಪ್ರವಾದಿಮಂಡಲಿಯವರಲ್ಲಿ ಐವತ್ತುಮಂದಿ ಇವರ ಹಿಂದಿನಿಂದಲೇ ಬಂದು ಸ್ವಲ್ಪ ದೂರದಲ್ಲಿ ನಿಂತುಕೊಂಡರು.


ಪ್ರವಾದಿಮಂಡಲಿಯವರಲ್ಲಿ ಒಬ್ಬನು, ಸರ್ವೇಶ್ವರನಿಂದ ಪ್ರೇರಿತನಾಗಿ ತನ್ನ ಜೊತೆಗಾರನೊಬ್ಬನಿಗೆ, “ನನ್ನನ್ನು ಹೊಡೆ,” ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ.


ಅವನು ಪರವಶನಾಗಿ ಮಾತಾಡುವುದನ್ನು ಪರಿಚಿತರು ಕಂಡು ತಮ್ಮತಮ್ಮೊಳಗೆ, “ಕೀಷನ ಮಗನಿಗೆ ಏನಾಯಿತು? ಸೌಲನೂ ಪ್ರವಾದಿಗಳಲ್ಲಿ ಒಬ್ಬನೆ?” ಎಂದು ಮಾತಾಡಿಕೊಳ್ಳುತ್ತಿದ್ದರು.


ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವುದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆಯ ಜೋಡಿಯಿಂದ ತಾನಾಗಿ ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.


ದೂರದಲ್ಲಿ ನಿಂತಿದ್ದ ಜೆರಿಕೋವಿನ ಪ್ರವಾದಿಮಂಡಲಿಯವರು ಇದನ್ನು ಕಂಡು, “ಎಲೀಯನಿಗಿದ್ದ ಆತ್ಮಶಕ್ತಿ ಎಲೀಷನ ಮೇಲೆ ಬಂದು ನೆಲಸಿದೆ,” ಎಂದು ತಿಳಿದುಕೊಂಡರು. ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು.


ಚಕ್ಕೋತ ಸೊಪ್ಪುಗಳನ್ನು ಪೊದೆಗಳಿಂದ ಕಿತ್ತು ತಿನ್ನುತ್ತಿದ್ದರು ಜಾಲಿಯ ಬೇರೇ ಅವರಿಗೆ ಆಹಾರವಾಗಿತ್ತು.


ಸಿಂಹದ ಗರ್ಜನೆಯನ್ನು ಕೇಳಿ ಹೆದರದಿರುವವರು ಯಾರು? ಸ್ವಾಮಿ ಸರ್ವೇಶ್ವರನ ನುಡಿಯನ್ನು ಕೇಳಿ ಪ್ರವಾದನೆಮಾಡದಿರುವವರು ಯಾರು?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು