Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 7:6 - ಕನ್ನಡ ಸತ್ಯವೇದವು C.L. Bible (BSI)

6 ಒಡೆಯರಾದ ಸರ್ವೇಶ್ವರ ಇದನ್ನು ಕೇಳಿ ಮನಮರುಗಿ: “ಈ ದರ್ಶನ ನೆರವೇರುವುದಿಲ್ಲ” ಎಂದು ಅಭಯವಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕರ್ತನಾದ ಯೆಹೋವನು ಮನಮರುಗಿ, “ಈ ದರ್ಶನವು ನೆರವೇರುವುದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಕರ್ತನಾದ ಯೆಹೋವನು ಮನಮರುಗಿ ಈ ದರ್ಶನವೂ ನೆರವೇರದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಗ ದೇವರಾದ ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿ, “ಇದು ಕೂಡಾ ನೆರವೇರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಸಾರ್ವಭೌಮ ಯೆಹೋವ ದೇವರು ಇದನ್ನು ಕುರಿತು ಮನಮರುಗಿ, “ಈ ದರ್ಶನ ನೆರವೇರುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 7:6
16 ತಿಳಿವುಗಳ ಹೋಲಿಕೆ  

ಆಗ ಅವನು ಹೀಗೆಂದು ಮೊರೆಯಿಟ್ಟನು: “ಸ್ವಾಮೀ, ಈ ರೀತಿ ಸಂಭವಿಸುವುದೆಂದು ನಾನು ಸ್ವದೇಶವನ್ನು ಬಿಡುವ ಮುನ್ನವೇ ನಿಮಗೆ ಹೇಳಿದ್ದೆನಲ್ಲವೆ? ಈ ಕಾರಣದಿಂದಲೇ ಅಲ್ಲವೆ ನಾನು ತಾರ್ಷಿಷಿಗೆ ಓಡಿಹೋಗಲು ಪ್ರತ್ನಿಸಿದ್ದು? ನೀವು ಪ್ರೀತಿಸ್ವರೂಪಿ, ಕರುಣಾಮಯಿ, ಸಹನಾಶೀಲರಾದ ದೇವರು, ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ಹಿಂತೆಗೆದುಕೊಳ್ಳುವ ದೇವರು - ಎಂದು ಆಗಲೇ ನನಗೆ ತಿಳಿದಿತ್ತು.


ಆ ಜನರು ಮಾಡಿದುದೆಲ್ಲವನ್ನು ದೇವರು ಗಮನಿಸಿದರು. ತಮ್ಮ ದುರ್ನಡತೆಯನ್ನು ಜನರು ಕೈಬಿಟ್ಟದ್ದನ್ನು ಕಂಡು, ಮನಮರುಗಿ ಅವರಿಗೆ ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ತಡೆಹಿಡಿದರು.


ಇದನ್ನು ಕೇಳಿ ಸರ್ವೇಶ್ವರ ಮನಮರುಗಿದರು. “ಈ ದರ್ಶನ ನೆರವೇರುವುದಿಲ್ಲ” ಎಂದು ಅಭಯವಿತ್ತರು.


ಆಗ ಜುದೇಯದ ಅರಸ ಹಿಜ್ಕೀಯನು ಮತ್ತು ಯೆಹೂದ್ಯರೆಲ್ಲರು, “ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಬದಲಿಗೆ ಆ ಅರಸ ಭಯಭಕ್ತಿಯಿಂದ ಸರ್ವೇಶ್ವರನ ದಯೆಯನ್ನು ಬೇಡಿಕೊಂಡ. ಆಗ ಸರ್ವೇಶ್ವರ ವಿಧಿಸಬೇಕೆಂದಿದ್ದ ದಂಡನೆಯನ್ನು ವಿಧಿಸದೆ ಮನಸ್ಸನ್ನು ಬದಲಾಯಿಸಿಕೊಂಡರಲ್ಲವೆ? ಇವನನ್ನು ಕೊಂದುಹಾಕುವುದರಿಂದ ನಾವು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿಕೊಳ್ಳುತ್ತೇವೆ,” ಎಂದರು.


ದೊರಕಿಸುವನು ಪ್ರಭು ನ್ಯಾಯವನು ತನ್ನ ಪ್ರಜೆಗೆ I ತೋರುವನು ಅನುಕಂಪವನು ತನ್ನ ಭಕ್ತಾದಿಗಳಿಗೆ II


ಪ್ರಭು, ತಿರುಗಿ ಬಾ, ಕೋಪವೆಷ್ಟರ ತನಕ? I ನಿನ್ನೀ ಸೇವಕರ ಮೇಲಿರಲಿ ಮರುಕ II


ಆಗ ಇಸ್ರಯೇಲರ ಸಂಕಟದ ನಿಮಿತ್ತ ಸರ್ವೇಶ್ವರ ಬಹಳವಾಗಿ ನೊಂದುಕೊಂಡರು.


ವೈರಿಗಳ ಹಿಂಸೆಯನ್ನು ತಾಳಲಾರದೆ ಇಸ್ರಯೇಲರು ಗೋಳು ಇಟ್ಟರು. ಸರ್ವೇಶ್ವರ ಅದನ್ನು ಕೇಳಿ ಕನಿಕರಪಟ್ಟು ನ್ಯಾಯಾಧಿಪತಿಗಳನ್ನು ಕಳುಹಿಸಿಕೊಟ್ಟರು; ಜೀವಮಾನವೆಲ್ಲ ಅವರ ಸಂಗಡವೇ ಇದ್ದು ಅವರ ಮುಖಾಂತರ ಇಸ್ರಯೇಲರನ್ನು ಶತ್ರುಗಳಿಂದ ಬಿಡಿಸಿದರು. ತಮ್ಮನ್ನು ಹಿಂಸಿಸುತ್ತಿದ್ದವರ ಕಾಟವನ್ನು ತಾಳದೆ ಮೊರೆಯಿಡುವುದನ್ನು ಸರ್ವೇಶ್ವರ ಕೇಳಿ ಮನಮರುಗಿದರು.


“ನಾನು ಸೃಷ್ಟಿಸಿದ ಮಾನವರನ್ನು ಈ ಜಗದಿಂದ ಅಳಿಸಿಬಿಡುತ್ತೇನೆ, ಅವರೊಂದಿಗೆ ಪ್ರಾಣಿಪಕ್ಷಿಗಳನ್ನು, ಕ್ರಿಮಿಕೀಟಗಳನ್ನು ಅಳಿಸಿಹಾಕುತ್ತೇನೆ. ಅವುಗಳನ್ನು ಉಂಟುಮಾಡಿದ್ದಕ್ಕಾಗಿ ನನಗೆ ದುಃಖವಾಗುತ್ತಿದೆ,” ಎಂದುಕೊಂಡರು.


ನೆನಪಿಗೆ ತಂದುಕೊಂಡನು ತನ್ನೊಡಂಬಡಿಕೆಯನು I ದಯಾಳುತನದಿಂದ ತೋರಿದನವರಿಗೆ ಕರುಣೆಯನು I ಬಂಧಿಸಿದವರಿಂದಲೂ ದಯೆಯನು ದೊರಕಿಸಿದನು II


‘ನೀವು ಈ ನಾಡಿನಲ್ಲಿ ನೆಲೆಗೊಂಡಿದ್ದರೆ ನಾನು ನಿಮ್ಮನ್ನು ಕಟ್ಟುವೆನು, ಕೆಡುವುದಿಲ್ಲ, ನೆಡುವೆನು, ಕೀಳುವುದಿಲ್ಲ, ನಾನು ನಿಮಗೆ ಮಾಡಿದ ಕೇಡಿಗಾಗಿ ವಿಷಾದಿಸುತ್ತೇನೆ.


ನಿಮ್ಮ ಉಡುಪುಗಳನ್ನು ಅಲ್ಲ, ಹೃದಯಗಳನ್ನು ಸೀಳಿರಿ: ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯ ಕಡೆಗೆ ತಿರುಗಿಕೊಳ್ಳಿ; ಅವರು ದಯಾವಂತರು, ಕರುಣಾಮೂರ್ತಿ, ಸಹನಶೀಲ, ಪ್ರೀತಿಮಯ, ವಿಧಿಸಬೇಕಾಗಿದ್ದ ದಂಡನೆಗಾಗಿ ಮನನೊಂದುಕೊಳ್ಳುವಂಥವರು.


ಆ ಸ್ವಾಮಿಯಿಂದ ನನಗೆ ಮತ್ತೊಂದು ದರ್ಶನವಾಯಿತು. ಸ್ವಾಮಿ ನೂಲು ಮಟ್ಟದ ಗೋಡೆಯ ಮೇಲೆ ನಿಂತಿದ್ದರು. ಅವರ ಕೈಯಲ್ಲಿ ನೂಲುಗುಂಡೊಂದು ಇತ್ತು.


ಆಗ ಸರ್ವೇಶ್ವರ ತಮ್ಮ ಪ್ರಜೆಗಳಿಗೆ ಮಾಡುವೆನೆಂದು ಹೇಳಿದ ಕೇಡಿನ ಬಗ್ಗೆ ಮನಸ್ಸನ್ನು ಮಾರ್ಪಡಿಸಿಕೊಂಡರು.


ದೇವರು ಜೆರುಸಲೇಮನ್ನು ಸಹ ಸಂಹರಿಸಬೇಕೆಂದು ದೂತನನ್ನು ಕಳುಹಿಸಿದರು. ಆದರೆ ಆ ದೂತನು ಸಂಹರಿಸುವುದಕ್ಕಿದ್ದಾಗ ಸರ್ವೇಶ್ವರ ಅದನ್ನು ಕಂಡು, ಆ ಕೇಡಿನ ವಿಷಯದಲ್ಲಿ ದುಃಖಪಟ್ಟರು. ಸಂಹಾರಕ ದೂತನಿಗೆ, “ಸಾಕು, ನಿನ್ನ ಕೈಯನ್ನು ಹಿಂದೆಗೆ,” ಎಂದು ಆಜ್ಞಾಪಿಸಿದರು. ಆಗ ಸರ್ವೇಶ್ವರನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತನು.


ಆದರೂ ಕ್ಷಮಿಸಿದನವರನು ಆ ದಯಾಳು, ನಾಶಮಾಡದೆ I ಕೋಪವ ತಾಳಿಕೊಂಡನು ಹಲವು ವೇಳೆ, ಉದ್ರೇಕಗೊಳ್ಳದೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು