Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 7:7 - ಕನ್ನಡ ಸತ್ಯವೇದವು C.L. Bible (BSI)

7 ಆ ಸ್ವಾಮಿಯಿಂದ ನನಗೆ ಮತ್ತೊಂದು ದರ್ಶನವಾಯಿತು. ಸ್ವಾಮಿ ನೂಲು ಮಟ್ಟದ ಗೋಡೆಯ ಮೇಲೆ ನಿಂತಿದ್ದರು. ಅವರ ಕೈಯಲ್ಲಿ ನೂಲುಗುಂಡೊಂದು ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಕರ್ತನು ಮತ್ತೊಂದು ದರ್ಶನವನ್ನು ನನಗೆ ತೋರಿಸಿದನು. ಇಗೋ, ಯೆಹೋವನು ನೂಲುಮಟ್ಟದ ನೆಟ್ಟಗಿರುವ ಗೋಡೆಯ ಮೇಲೆ ನಿಂತಿದ್ದನು. ಆತನ ಕೈಯಲ್ಲಿ ನೂಲುಗುಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕರ್ತನು ಮತ್ತೊಂದನ್ನು ನನಗೆ ತೋರಿಸಿದನು - ಇಗೋ, ಆತನು ನೂಲುಮಟ್ಟದ ಗೋಡೆಯ ಮೇಲೆ ನಿಂತಿದ್ದನು; ಆತನ ಕೈಯಲ್ಲಿ ನೂಲುಗುಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನು ಈ ದರ್ಶನವನ್ನು ನನಗೆ ದಯಪಾಲಿಸಿದನು. ಕೈಯಲ್ಲಿ ತೂಗುಗುಂಡನ್ನು ಹಿಡಿದುಕೊಂಡು ಗೋಡೆಯ ಬದಿಯಲ್ಲಿ ನಿಂತಿದ್ದನು. ಆ ಗೋಡೆಯು ನೂಲಿನಿಂದ ಗುರುತು ಮಾಡಲ್ಪಟ್ಟಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆತನು ನನಗೆ ಹೀಗೆ ತೋರಿಸಿದನು. ಯೆಹೋವ ದೇವರು ನೂಲುಮಟ್ಟದ ನೆಟ್ಟಗಿರುವ ಗೋಡೆಯ ಮೇಲೆ ನಿಂತಿದ್ದರು. ಆತನ ಕೈಯಲ್ಲಿ ನೂಲುಗುಂಡು ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 7:7
13 ತಿಳಿವುಗಳ ಹೋಲಿಕೆ  

ನೂಲು, ಮಟ್ಟಗೋಲು ಇವುಗಳಿಂದಲೋ ಎಂಬಂತೆ ಸಮಾರಿಯವನ್ನೂ ಅಹಾಬನ ಮನೆಯನ್ನೂ ನೆಲಸಮ ಮಾಡಿಬಿಟ್ಟೆನಲ್ಲವೆ? ಜೆರುಸಲೇಮನ್ನೂ ಅವುಗಳಂತೆಯೇ ಮಾಡುವೆನು. ಒಬ್ಬನು ಪಾತ್ರೆಯನ್ನು ಉಜ್ಜಿ ತಲೆ ಕೆಳಗಾಗಿ ಇಡುವಂತೆ ನಾನು ಜೆರುಸಲೇಮನ್ನು ಉಜ್ಜಿ ತಲೆ ಕೆಳಗಾಗಿ ಮಾಡುವೆನು.


ನನ್ನೊಡನೆ ಮಾತನಾಡುತ್ತಿದ್ದ ದೇವದೂತನು ಆ ನಗರವನ್ನೂ ಅದರ ಹೆಬ್ಬಾಗಿಲುಗಳನ್ನೂ ಕೋಟೆಗಳನ್ನೂ ಅಳತೆಮಾಡುವುದಕ್ಕಾಗಿ ಒಂದು ಚಿನ್ನದ ಅಳತೆಗೋಲನ್ನು ಹಿಡಿದಿದ್ದನು.


ಇದಾದ ನಂತರ ಅಳತೆಗೋಲಿನಂಥ ಒಂದು ಕೋಲನ್ನು ನನಗೆ ಕೊಟ್ಟು ಹೀಗೆ ತಿಳಿಸಲಾಯಿತು : “ನೀನೆದ್ದು ದೇವರ ಆಲಯವನ್ನೂ ಬಲಿಪೀಠವನ್ನೂ ಅಳತೆಮಾಡು. ಆಲಯದಲ್ಲಿ ಆರಾಧಿಸುತ್ತಿರುವವರನ್ನು ಲೆಕ್ಕಮಾಡು.


ಅವರು ನನ್ನನ್ನು ಅಲ್ಲಿಗೆ ತರಲು, ಇಗೋ, ತಾಮ್ರದಂತೆ ಹೊಳೆಯುವ ಒಬ್ಬ ಪುರುಷನು ನಾರಿನ ಹುರಿಯನ್ನೂ ಅಳತೆ ಕೋಲನ್ನೂ ಕೈಯಲ್ಲಿ ಹಿಡಿದುಕೊಂಡು ಬಾಗಿಲಲ್ಲಿ ನಿಂತಿದ್ದನು.


ಸಿಯೋನ್ ನಗರಿಯ ಕೋಟೆಯನ್ನು ನಾಶಪಡಿಸಲೆಂದು ಎಳೆದಿರುವನಲ್ಲಾ ಸರ್ವೇಶ್ವರ ಅಳತೆನೂಲನ್ನು ! ಹಾಳುಮಾಡುವ ತನ್ನ ಕೈಯನ್ನು ಹಿಂದೆಗೆಯದೆ ಬಿರುಕುಗೊಳಿಸಿದ್ದಾನೆ ಪೌಳಿಗೋಡೆಯನ್ನೇ, ಕೋಟೆಯನ್ನೇ, ಅವುಗಳೆರಡೂ, ಕುಸಿದು ಬಿದ್ದುಹೋಗಿವೆ.


ಅದು ಹದ್ದುಗಳ, ಮುಳ್ಳುಹಂದಿಗಳ ಸ್ವಾಧೀನವಾಗುವುದು. ಕಾಗೆಗೂಗೆಗಳಿಗೆ ಅದು ಗೂಡಾಗುವುದು. ಸರ್ವೇಶ್ವರ ಹಾಳುಪಾಳನ್ನೇ ಅದರ ಅಳತೆಗೋಲನ್ನಾಗಿಯೂ ಅಸ್ತವ್ಯಸ್ತತೆಯನ್ನೇ ಅದರ ಮಟ್ಟಗೋಲನ್ನಾಗಿಯೂ ಮಾಡುವರು.


ನ್ಯಾಯನೀತಿಯನ್ನು ಅದರ ಅಳತೆಗೋಲನ್ನಾಗಿಯೂ ಸತ್ಯಸಂಧತೆಯನ್ನು ಅದರ ಮಟ್ಟಗೋಲನ್ನಾಗಿಯೂ ಮಾಡುತ್ತೇನೆ. ನಿಮ್ಮ ಅಸತ್ಯದಆಶ್ರಯವನ್ನು ಕಲ್ಮಳೆ ಕೊಚ್ಚಿಕೊಂಡು ಹೋಗುವುದು. ಜಲಪ್ರವಾಹವು ನಿಮ್ಮ ಮೋಸದ ಆಸರೆಯನ್ನು ಮುಳುಗಿಸುವುದು.


ಆಮೇಲೆ ಮೋವಾಬ್ಯರನ್ನು ಸೋಲಿಸಿದನು. ಸೆರೆಯಾಳುಗಳನ್ನು ನೆಲದಮೇಲೆ ಮಲಗಿಸಿ ಹಗ್ಗದಿಂದ ಅಳತೆಮಾಡಿಸಿ, ಎರಡು ಪಾಲು ಜನರನ್ನು ಕೊಲ್ಲಿಸಿ ಒಂದು ಪಾಲನ್ನು ಉಳಿಸಿದನು. ಮೋವಾಬ್ಯರು ದಾವೀದನಿಗೆ ಅಧೀನರಾಗಿ ಅವನಿಗೆ ಕಪ್ಪಕೊಡಬೇಕಾಯಿತು.


ಇದಲ್ಲದೆ, ಸರ್ವೇಶ್ವರಸ್ವಾಮಿ ಅವನ ಬಳಿಯಲ್ಲೇ ನಿಂತು, “ನಿನ್ನ ತಂದೆಯೂ ಅಬ್ರಹಾಮನ ದೇವರೂ ಇಸಾಕನ ದೇವರೂ ಆಗಿರುವ ಸರ್ವೇಶ್ವರ ನಾನೇ. ನೀನು ಮಲಗಿಕೊಂಡಿರುವ ಈ ನಾಡನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ಒಡೆಯರಾದ ಸರ್ವೇಶ್ವರ ಇದನ್ನು ಕೇಳಿ ಮನಮರುಗಿ: “ಈ ದರ್ಶನ ನೆರವೇರುವುದಿಲ್ಲ” ಎಂದು ಅಭಯವಿತ್ತರು.


ಅವರು ನನಗೆ: “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಿದರು. ನಾನು “ಒಂದು ನೂಲುಗುಂಡು,” ಎಂದು ಉತ್ತರಕೊಟ್ಟೆ. ಆಗ ಸ್ವಾಮಿ, “ಇಗೋ,ನನ್ನ ಜನರಾದ ಇಸ್ರಯೇಲಿನ ಮಧ್ಯೆ ನೂಲುಗುಂಡನ್ನು ಹಿಡಿದು ಅವರ ನಡತೆ-ಗೋಡೆ ನೆಟ್ಟಗಿಲ್ಲವೆಂದು ತೋರಿಸುವೆನು. ಅವರನ್ನು ಕಂಡೂ ಕಾಣದಂತಿರದೆ, ದಂಡಿಸಿಯೇ ತೀರುವೆನು.


ಆಗ ದೂತನು, “ಈ ಸ್ತಂಭದಲ್ಲಿರುವ ಏಳು ದೀಪಗಳು ಭೂಲೋಕದ ಎಲ್ಲಾ ಭಾಗಗಳನ್ನು ವೀಕ್ಷಿಸುವ ಸರ್ವೇಶ್ವರಸ್ವಾಮಿಯ ಏಳು ಕಣ್ಣುಗಳನ್ನು ಸೂಚಿಸುತ್ತವೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು