Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 8:14 - ಕನ್ನಡ ಸತ್ಯವೇದವು C.L. Bible (BSI)

14 ದಾನೇ, ನಿನ್ನ ದೇವರ ಜೀವದಾಣೆ’ ಎಂದೂ, ‘ಬೇರ್ಷೆಬಾ ಯಾತ್ರೆಯ ಜೀವದಾಣೆ’ ಎಂದೂ ಸಮಾ‍ರ್ಯದ ವಿಗ್ರಹಗಳ ಮೇಲೆ ಪ್ರಮಾಣ ಮಾಡುವವರು ಮತ್ತೆ ಏಳದಂತೆ ಬಿದ್ದುಹೋಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ‘ದಾನೇ, ನಿನ್ನ ದೇವರ ಜೀವದಾಣೆ’ ಎಂದೂ ‘ಮತ್ತು ಬೇರ್ಷೆಬದ ಮಾರ್ಗದ ಜೀವದಾಣೆ’” ಎಂದೂ ಹೇಳುವರು. ಅವರು ಸಮಾರ್ಯದ ಪಾಪದ ಮೇಲೆ ಪ್ರಮಾಣಮಾಡಿಕೊಂಡು, ಅವರು ಬಿದ್ದು ಮತ್ತೆ ಮೇಲೆ ಏಳಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ದಾನೇ, ನಿನ್ನ ದೇವರ ಜೀವದಾಣೆ ಎಂತಲೂ ಬೇರ್ಷೆಬ ಮಾರ್ಗದ ಜೀವದಾಣೆ ಎಂತಲೂ ಸಮಾರ್ಯದ ಪಾಪಮೂರ್ತಿಯ ಮೇಲೆ ಪ್ರಮಾಣಮಾಡುವವರು ಬಿದ್ದುಹೋಗುವರು, ಮತ್ತೆ ಏಳರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆ ಜನರು ಸಮಾರ್ಯದ ಪಾಪದ ಮೇಲೆ ಆಣೆಯಿಡುವರು, ‘ದಾನೇ, ನಿನ್ನ ದೇವರಾಣೆ ….’ ‘ಬೇರ್ಷೆಬದ ದೇವರಾಣೆ ….’ ಎಂಬುದಾಗಿ ಹೇಳುವರು. ಆದರೆ ಆ ಜನರು ಬಿದ್ದುಹೋಗುವರು. ಅಲ್ಲಿಂದ ತಿರುಗಿ ಏಳುವದೇ ಇಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವರು ಸಮಾರ್ಯದ ಪಾಪದ ಮೇಲೆ ಆಣೆ ಇಟ್ಟುಕೊಂಡು, ದಾನೇ, ನಿನ್ನ ದೇವರ ಜೀವದಾಣೆ ಎಂದೂ, ಬೇರ್ಷೆಬದ ಮಾರ್ಗದ ಜೀವದಾಣೆ ಎಂದೂ ಹೇಳುವರು. ಅವರು ಬಿದ್ದು ಮತ್ತೆ ಮೇಲೆ ಏಳಲಾರರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 8:14
32 ತಿಳಿವುಗಳ ಹೋಲಿಕೆ  

ಬೇತೇಲಿಗೆ ಹೋಗಬೇಡಿ, ಗಿಲ್ಗಾಲಿಗೆ ಸೇರಬೇಡಿ. ಬೆರ್ಷೆಬಾಗೆ ಯಾತ್ರೆ ಹೋಗಬೇಡಿ. ಗಿಲ್ಗಾಲ್ ಗಡೀಪಾರಾಗುವುದು. ಬೇತೇಲ್ ಬಯಲಾಗುವುದು.”


ಮತ್ತು ನಿಮ್ಮ ಪಾಪಕ್ಕೆ ಕಾರಣವಾದ ಆ ಹೋರಿಕರುವನ್ನು ನಾನು ತೆಗೆದುಕೊಂಡು, ಬೆಂಕಿಯಿಂದ ಸುಟ್ಟು, ಒಡೆದು, ಅರೆದು, ಧೂಳುಮಾಡಿ ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬಿಸಾಡಿಬಿಟ್ಟೆ.


ಈ ಹೊಸ ಮಾರ್ಗವನ್ನು ಅವಲಂಬಿಸುವವರು ಹೆಂಗಸರೇ ಆಗಿರಲಿ, ಗಂಡಸರೇ ಆಗಿರಲಿ, ದಮಸ್ಕಸಿನಲ್ಲಿದ್ದರೆ ಅವರನ್ನು ಬಂಧಿಸಿ ಜೆರುಸಲೇಮಿಗೆ ಎಳೆದು ತರಬೇಕೆಂದಿದ್ದನು. ಇದಕ್ಕೆ ಬೇಕಾದ ಪತ್ರಗಳನ್ನು ಕೇಳುವುದಕ್ಕಾಗಿ ಪ್ರಧಾನಯಾಜಕನ ಬಳಿಗೆ ಹೋದನು. ದಮಸ್ಕಸಿನಲ್ಲಿರುವ ಪ್ರಾರ್ಥನಾಮಂದಿರದ ಅಧಿಕಾರಿಗಳಿಗೆ ತೋರಿಸಲು ಆ ಪತ್ರಗಳನ್ನು ಪಡೆದನು.


ಇಷ್ಟನ್ನು ಮಾತ್ರ ನಾನು ಒಪ್ಪಿಕೊಳ್ಳುತ್ತೇನೆ: ಇವರು ಕುಪ್ರಸಿದ್ಧವೆಂದು ನಿಂದಿಸುವ ಮಾರ್ಗವನ್ನು ಅನುಸರಿಸುವವನು ನಾನು. ಆ ಮಾರ್ಗದ ಪ್ರಕಾರ ನಮ್ಮ ಪೂರ್ವಜರ ದೇವರನ್ನು ಆರಾಧಿಸುತ್ತೇನೆ. ಧರ್ಮಶಾಸ್ತ್ರದಲ್ಲೂ ಪ್ರವಾದಿಗಳ ಗ್ರಂಥದಲ್ಲೂ ಬರೆದಿರುವುದನ್ನೆಲ್ಲ ನಂಬುತ್ತೇನೆ.


ಅದೇ ಸಮಯಕ್ಕೆ ಎಫೆಸದಲ್ಲಿ ಕ್ರಿಸ್ತಮಾರ್ಗ ಅನ್ವೇಷಣೆಯ ನಿಮಿತ್ತ ತೀವ್ರಗಲಭೆ ಉಂಟಾಯಿತು.


ಆದರೆ ಅವರಲ್ಲಿ ಕೆಲವರು ಹಠಮಾರಿಗಳು; ಅವರು ವಿಶ್ವಾಸವನ್ನು ನಿರಾಕರಿಸಿದ್ದೂ ಅಲ್ಲದೆ ಈ ಹೊಸಮಾರ್ಗವನ್ನು ಸಭೆಯ ಮುಂದೆ ದೂಷಿಸತೊಡಗಿದರು. ಈ ಕಾರಣ ಪೌಲನು ಅವರನ್ನು ಬಿಟ್ಟು ಶಿಷ್ಯರನ್ನು ಕರೆದುಕೊಂಡು ತುರಾನ್ನ ಎಂಬವನ ತರ್ಕಶಾಲೆಯಲ್ಲಿ ಪ್ರತಿದಿನವೂ ಚರ್ಚೆ ನಡೆಸುತ್ತಾ ಬಂದನು.


ಪ್ರಭುವಿನ ಮಾರ್ಗದ ಬಗ್ಗೆ ಅವನಿಗೆ ಉಪದೇಶಮಾಡಲಾಗಿತ್ತು. ಸ್ನಾನಿಕ ಯೊವಾನ್ನನ ಸ್ನಾನದೀಕ್ಷೆ ಒಂದನ್ನೇ ಅವನು ಬಲ್ಲವನಾಗಿದ್ದನು. ಆದರೂ ಯೇಸುಸ್ವಾಮಿಯ ಬಗ್ಗೆ ಉತ್ಸಾಹಭರಿತನಾಗಿ ಉಪದೇಶಮಾಡಿ ಚ್ಯುತಿಯಿಲ್ಲದೆ ಬೋಧಿಸುತ್ತಾ ಬಂದನು.


ಮಾಳಿಗೆಗಳ ಮೇಲೆ ನಿಂತು ಆಕಾಶದ ಸೂರ್ಯ, ಚಂದ್ರ, ನಕ್ಷತ್ರಗಳನ್ನು ಆರಾಧಿಸುವವರನ್ನು ನಾಶಗೊಳಿಸುವೆನು; ಅಂತೆಯೇ ಸರ್ವೇಶ್ವರನ ಆರಾಧಕರೆಂದು ಪ್ರಮಾಣಮಾಡಿ, ಮಲ್ಕಾಮನ ಮೇಲೂ ಪ್ರಮಾಣ ಮಾಡುವವರನ್ನು ವಿನಾಶಗೊಳಿಸುವೆನು.


“ಕನ್ಯೆ ಇಸ್ರಯೇಲಳು ಬಿದ್ದಿಹಳು ಕೆಳಗೆ ಅಶಕ್ತಳು ಆಕೆ ಮರಳಿ ಏಳಲು ಮೇಲಕೆ ದಿಕ್ಕಿಲ್ಲದೆ ಒರಗಿಹಳು ಧರೆಯ ಮೇಲೆ ಮೇಲೆತ್ತಲು ಯಾರೂ ಗತಿಯಿಲ್ಲದ ಅಬಲೆ.”


ಸಮಾರ್ಯವು ತನ್ನ ದೇವರಿಗೆ ವಿರುದ್ಧ ದಂಗೆ ಎದ್ದಿದೆ. ಅದಕ್ಕೆ ತಕ್ಕ ಪ್ರತಿಫಲವನ್ನು ಅನುಭವಿಸಲೇಬೇಕು. ಅದರ ಜನರು ಖಡ್ಗದಿಂದ ಹತರಾಗುವರು; ಶತ್ರುಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳಿಹಾಕುವರು.”


ಈಗ ಎಫ್ರಯಿಮರ ಪಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅವರು ಬೆಳ್ಳಿಬಂಗಾರವನ್ನು ಕರಗಿಸಿ ಇಷ್ಟಬಂದಂತೆ ಬೊಂಬೆಗಳನ್ನು ಮಾಡಿಕೊಂಡಿದ್ದಾರೆ. ಅವೆಲ್ಲವು ಶಿಲ್ಪಿಗಳ ಕೈಕೆಲಸವೇ ಹೊರತು ಮತ್ತೇನು ಅಲ್ಲ. ಇಂಥ ವಿಗ್ರಹಗಳನ್ನು ಪೂಜೆಗಾಗಿ ಪ್ರತಿಷ್ಠಾಪನೆಮಾಡುತ್ತಾರೆ. ಬುದ್ಧಿಜೀವಿಗಳಾದ ಇವರು ಬಸವನಿಗೆ ಮುದ್ದಿಡುತ್ತಾರೆ.


ಬೇತಾವೆನಿನ ಬಸವನಿಗೆ ಸಮಾರ್ಯದ ನಿವಾಸಿಗಳು ದಿಗಿಲುಗೊಳ್ಳುವರು; ಅದನ್ನು ಕಾಣದುದಕ್ಕಾಗಿ ಭಕ್ತಜನರು ಎದೆಬಡಿದುಕೊಳ್ಳುವರು. ಅದರ ಮಹಿಮೆ ನಂದಿಹೋಯಿತು ಎಂದು ಪೂಜಾರಿಗಳು ಗೋಳಾಡುವರು.


“ಓ ಇಸ್ರಯೇಲ್ ನೀನು ವೇಶ್ಯೆಯಾಗಿ ನಡೆದರೂ ಜುದೇಯ ನಾಡು ಆ ದೋಷಕ್ಕೆ ಒಳಗಾಗದಿರಲಿ. ಯೆಹೂದ್ಯರೇ, ಗಿಲ್ಗಾಲಿಗೆ ಬರಬೇಡಿ. ಬೇತಾವೆನಿಗೆ ಯಾತ್ರೆ ಹೋಗಬೇಡಿ. ‘ಜೀವಸ್ವರೂಪನಾದ ಸರ್ವೇಶ್ವರನಾಣೆ’ ಎಂದು ಪ್ರಮಾಣಮಾಡಬೇಡಿ.


ಆಮೇಲೆ, ‘ಸರ್ವೇಶ್ವರ ಸ್ವಾಮಿ ಬಾಬಿಲೋನಿಗೆ ಬರಮಾಡುವ ವಿಪತ್ತಿನಿಂದ ಈ ನಗರ ಹೀಗೆಯೇ ಮುಳುಗುವುದು, ಮತ್ತೆ ಏಳದು,’ ಎಂದು ಹೇಳು.” ಇಲ್ಲಿಗೆ ಯೆರೆಮೀಯನ ಪ್ರವಾದನೆ ಮುಗಿಯಿತು.


ಸರ್ವೇಶ್ವರಾ: “ನೀನು ಅವರಿಗೆ ಹೀಗೆಂದು ಹೇಳು: ‘ಇಸ್ರಯೇಲಿನ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರ ಹೇಳಿದ್ದಾರೆ - ನೀವು ಕುಡಿಯಬೇಕು, ಕುಡಿದು ಕಕ್ಕಬೇಕು. ನಾನು ಕಳಿಸುವ ಖಡ್ಗಕ್ಕೆ ತುತ್ತಾಗಿ ಬೀಳಬೇಕು, ಬಿದ್ದು ಏಳಬಾರದು.’


ಅಶ್ವರಥಭಟಸೈನ್ಯಗಳನ್ನು ಹೊರಡಿಸಿದವನಾರೋ, ಅವು ಬಿದ್ದು ಏಳಲಾಗದೆ, ಬತ್ತಿಕರಗಿಹೋಗುವಂತೆ ಮಾಡಿದವನಾರೋ, ಆ ಸ್ವಾಮಿ ಸರ್ವೇಶ್ವರ ನುಡಿದ ಮಾತಿದೋ;


ಎಷ್ಟು ಗದರಿಸಿದರೂ ತಗ್ಗದ ಹಟಮಾರಿ ಫಕ್ಕನೆ ಬೀಳುವನು, ಮತ್ತೆ ಏಳನು.


ಸುರಿಯಲಿ ಆ ಜನರ ಮೇಲೆ ಉರಿಉರಿವ ಬೆಂಕಿಕೆಂಡ I ಅವರೇಳದಂತೆ ಸೇರಲಿ ಪಾತಾಳದ ಅಗ್ನಿಕುಂಡ II


ಕೇಡು ಮಾಡಿದವರಿದೋ ಕೆಳಗೆ ಬಿದ್ದಿಹರು I ಮರಳಿ ಏಳಲಾಗದೆ ಮಡಿದು ಬಿದ್ದಿಹರು II


ಆದರೂ ಅವರು ದೇವಸಂದೇಶಕರನ್ನು ಗೇಲಿಮಾಡಿದರು. ದೇವರ ಮಾತುಗಳನ್ನು ತುಚ್ಛೀಕರಿಸಿ ಅವರ ಪ್ರವಾದಿಗಳನ್ನು ಹೀಯಾಳಿಸಿದರು. ಆದ್ದರಿಂದ ದೇವಕೋಪಾಗ್ನಿ ಅವರ ಪ್ರಜೆಯ ಮೇಲೆ ಉರಿಯತೊಡಗಿತು. ಅದರ ತಾಪ ಆರಿಹೋಗಲೇ ಇಲ್ಲ.


ಆದರೂ ಅವನು ಇಸ್ರಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗ ಯಾರೊಬ್ಬಾಮನ ಮಾರ್ಗವನ್ನು ಕೈಬಿಡದೆ, ಬೇತೇಲ್, ದಾನ್ ಎಂಬ ಊರುಗಳಲ್ಲಿದ್ದ ಚಿನ್ನದ ಹೋರಿಕರುಗಳನ್ನು ಪೂಜಿಸುತ್ತಿದ್ದನು.


ಅನಂತರ ಶೆಮೆರ್ ಎಂಬವನಿಗೆ ಆರು ಸಾವಿರ ಬೆಳ್ಳಿನಾಣ್ಯಗಳನ್ನು ಕೊಟ್ಟು ಅವನಿಂದ ಸಮಾರಿಯ ಎಂಬ ಗುಡ್ಡವನ್ನು ಕೊಂಡುಕೊಂಡನು. ಅದರ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ ಅದಕ್ಕೆ ಆ ಭೂಮಿಯ ಒಡೆಯನಾಗಿದ್ದ ಶೆಮೆರಿನ ಜ್ಞಾಪಕಾರ್ಥವಾಗಿ ಸಮಾರಿಯ ಎಂಬ ಹೆಸರಿಟ್ಟನು.


ಯಾರೊಬ್ಬಾಮನ ಪಾಪಗಳ ನಿಮಿತ್ತ ಹಾಗು ಅವನ ಪ್ರೇರಣೆಯಿಂದ ಇಸ್ರಯೇಲರು ಮಾಡಿದ ಪಾಪಗಳ ನಿಮಿತ್ತ ಸರ್ವೇಶ್ವರ ಅವರನ್ನು ಶತ್ರುಗಳಿಗೆ ಒಪ್ಪಿಸುವರು,” ಎಂದು ಆಕೆಗೆ ಹೇಳಿದನು.


ಅವನು ಎಂಟನೆಯ ತಿಂಗಳ ಹದಿನೈದನೆಯ ದಿವಸ, ನಾಡಿನ ಜಾತ್ರೆಗೆ ಸಮನಾದ ಜಾತ್ರೆ ಬೇತೇಲಿನಲ್ಲಿ ನಡೆಯಬೇಕೆಂದು ಅಪ್ಪಣೆ ಮಾಡಿದನು. ತಾನೂ ಅಲ್ಲಿಗೆ ಹೋಗಿ ಅಲ್ಲಿ ನಿಲ್ಲಿಸಿದ್ದ ಹೋರಿಕರುಗಳ ಮೂರ್ತಿಗಳಿಗೆ, ಪೀಠದ ಮೇಲೆ ಬಲಿ ಅರ್ಪಿಸಿದನು. ತಾನು ಏರ್ಪಡಿಸಿದ ಪೂಜಾಸ್ಥಳಗಳ ಯಾಜಕರನ್ನು ಬೇತೇಲಿನ ದೇವಸ್ಥಾನದ ಸೇವೆಗೆ ನೇಮಿಸಿದನು.


ಸರ್ವೇಶ್ವರಾ, ವೃದ್ಧಿಪಡಿಸು ಇವನ ಆಸ್ತಿಯನು ಸಮರ್ಪಕವಾಗಿರಲಿ ನಿನಗೆ ಇವನ ಸೇವೆಯು ಇವನ ಶತ್ರುಗಳ ನಡುವನ್ನು ಮುರಿ ಮರಲಿ ಏಳದಂತೆ ಮಾಡು ಇವನ ವೈರಿ.”


ಓಲಾಡುವುದು ಭೂಮಿ ಅಮಲೇರಿದವನಂತೆ, ತೂಗಾಡುವುದು ಬಿರುಗಾಳಿಗೆ ಸಿಕ್ಕಿದ ಗುಡಿಸಲಂತೆ, ಕುಸಿದು ಬೀಳುವುದು ದ್ರೋಹದ ಭಾರಕೆ, ಮರಳಿ ಏಳದಂತೆ.


ಇದಕ್ಕೆಲ್ಲಾ ಕಾರಣ ಯಕೋಬನ ದ್ರೋಹ. ಇಸ್ರಯೇಲ್ ಮನೆತನದ ಪಾಪ. ಯಕೋಬನ ದ್ರೋಹಕ್ಕೆ ಕಾರಣ ಯಾವುದು? ಸಮಾರ್ಯ ಅಲ್ಲವೆ? ಜುದೇಯದ ವಿಗ್ರಹಾರಾಧನೆಯ ಸ್ಥಳ ಯಾವುದು? ಜೆರುಸಲೇಮ್ ಅಲ್ಲವೆ?


ನೀತಿವಂತನು ಏಳುಸಾರಿ ಬಿದ್ದರೂ ಮತ್ತೆ ಏಳುವನು; ದುಷ್ಟನು ಕೇಡುಬಂದಾಗಲೆ ಕುಸಿದು ಬೀಳುವನು.


ಇಸ್ರಯೇಲಿನ ಜನರೇ, ನಿಮ್ಮನ್ನು ಕುರಿತು ನಾನು ಹಾಡುವ ಈ ಶೋಕಗೀತೆಯನ್ನು ಕೇಳಿ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು