Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 8:2 - ಕನ್ನಡ ಸತ್ಯವೇದವು C.L. Bible (BSI)

2 ಅವರು ನನಗೆ: “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಿದರು. “ಮಾಗಿದ ಹಣ್ಣಿನ ಒಂದು ಬುಟ್ಟಿ” ಎಂದು ಉತ್ತರಿಸಿದೆ. ಆಗ ಸರ್ವೇಶ್ವರ ನನಗೆ ಹೀಗೆಂದರು: “ಇಸ್ರಯೇಲರಾದ ನನ್ನ ಜನರಿಗೆ ಕಡೆಗಾಲ ಮಾಗುತ್ತಾ ಬಂದಿದೆ. ಇನ್ನು ಅವರನ್ನು ಕಂಡೂ ಕಾಣದಂತೆ ಇರಲಾರೆ. ಅವರನ್ನು ದಂಡಿಸಿಯೇ ತೀರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನು ನನಗೆ, “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಲು, ನಾನು ಅದಕ್ಕೆ, “ಮಾಗಿದ ಹಣ್ಣಿನ ಪುಟ್ಟಿ” ಎಂದೆನು. ಆಗ ಯೆಹೋವನು ನನಗೆ ಹೀಗೆ ಹೇಳಿದನು, “ಇಸ್ರಾಯೇಲೆಂಬ ನನ್ನ ಜನರಿಗೆ ಕಡೆಗಾಲವು ಮಾಗುತ್ತಾ ಬಂದಿದೆ. ಇನ್ನು ಮೇಲೆ ನಾನು ಅವರನ್ನು ಉಳಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆತನು ನನ್ನನ್ನು - ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವದೇನು ಎಂದು ಕೇಳಲು ಮಾಗಿದ ಹಣ್ಣಿನ ಪುಟ್ಟಿ ಅಂದೆನು. ಆಗ ಯೆಹೋವನು ನನಗೆ ಹೀಗೆ ಹೇಳಿದನು - ಇಸ್ರಾಯೇಲೆಂಬ ನನ್ನ ಜನರಿಗೆ ಕಡೆಗಾಲವು ಮಾಗುತ್ತಾ ಬಂದಿದೆ; ಇನ್ನು ಅವರನ್ನು ಕಂಡುಕಾಣದ ಹಾಗಿರೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನು ನನಗೆ, “ಆಮೋಸನೇ, ನೀನು ಏನನ್ನು ನೋಡುತ್ತೀ?” ಎಂದು ಕೇಳಿದನು. ಅದಕ್ಕೆ ನಾನು, “ಒಂದು ಪುಟ್ಟಿ ಬೇಸಿಗೆಯ ಹಣ್ಣುಗಳು” ಎಂದು ಹೇಳಿದೆನು. ಆಗ ಯೆಹೋವನು ನನಗೆ, “ನನ್ನ ಜನರಾದ ಇಸ್ರೇಲರಿಗೆ ಅಂತ್ಯಕಾಲವು ಬಂದಿದೆ. ಇನ್ನು ಮೇಲೆ ನಾನು ಅವರನ್ನು ಸುಮ್ಮನೆ ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ, “ಆಮೋಸನೇ, ಏನು ನೋಡುತ್ತಿರುವೆ?” ಎಂದು ಕೇಳಿದರು. ನಾನು, “ಮಾಗಿದ ಹಣ್ಣುಗಳ ಬುಟ್ಟಿ,” ಎಂದೆನು. ಆಗ ಯೆಹೋವ ದೇವರು ನನಗೆ, “ನನ್ನ ಜನರಾದ ಇಸ್ರಾಯೇಲರ ಸಮಯವು ಮಾಗುತ್ತಾ ಬಂತು. ನಾನು ಇನ್ನು ಮೇಲೆ ಅವರನ್ನು ಉಳಿಸುವುದಿಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 8:2
25 ತಿಳಿವುಗಳ ಹೋಲಿಕೆ  

ಅವರು ನನಗೆ: “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಿದರು. ನಾನು “ಒಂದು ನೂಲುಗುಂಡು,” ಎಂದು ಉತ್ತರಕೊಟ್ಟೆ. ಆಗ ಸ್ವಾಮಿ, “ಇಗೋ,ನನ್ನ ಜನರಾದ ಇಸ್ರಯೇಲಿನ ಮಧ್ಯೆ ನೂಲುಗುಂಡನ್ನು ಹಿಡಿದು ಅವರ ನಡತೆ-ಗೋಡೆ ನೆಟ್ಟಗಿಲ್ಲವೆಂದು ತೋರಿಸುವೆನು. ಅವರನ್ನು ಕಂಡೂ ಕಾಣದಂತಿರದೆ, ದಂಡಿಸಿಯೇ ತೀರುವೆನು.


ಶತ್ರು ನಮ್ಮನ್ನು ಹೆಜ್ಜೆಹೆಜ್ಜೆಗೂ ಹುಡುಕುತ್ತಿದ್ದುದರಿಂದ ಹಾದಿಬೀದಿಗಳಲ್ಲಿ ಸಂಚಾರಮಾಡಲೂ ಆಗುತ್ತಿರಲಿಲ್ಲ. ನಮಗೆ ಕಾಲವು ತೀರಿತು, ಅಂತ್ಯವು ಸಮೀಪಿಸಿತು; ಹೌದು, ನಮ್ಮ ಅಂತ್ಯವು ಬಂದೇಬಿಟ್ಟಿತು!


ಅಯ್ಯೋ, ನನ್ನ ಗತಿ ಏನೆಂದು ಹೇಳಲಿ? ಬೇಸಿಗೆಯಲ್ಲಿ ಬೆಳೆಯನ್ನು ಕೊಯ್ಯಲು ಬಂದವನಂತೆ ಇದ್ದೇನೆ. ಹಕ್ಕಲನ್ನು ಆಯ್ದ ಮೇಲೆ ದ್ರಾಕ್ಷಿಹಣ್ಣನ್ನು ಕೊಯ್ಯಲು ಬಂದವನಂತೆ ಇದ್ದೇನೆ. ತಿನ್ನುವುದಕ್ಕೆ ಒಂದು ಗೊಂಚಲು ಸಹ ಉಳಿದಿಲ್ಲ. ನನಗೆ ಇಷ್ಟವಾದ ದೋರೆ ಅಂಜೂರ ಕೂಡ ಸಿಕ್ಕುತ್ತಿಲ್ಲ.


ದೂತನು ನನ್ನನ್ನು, “ನಿನಗೆ ಏನು ಕಾಣಿಸುತ್ತಿದೆ?” ಎಂದು ಕೇಳಿದನು. ಅದಕ್ಕೆ ನಾನು “ಹಾರುತ್ತಿರುವ ಪತ್ರದ ಸುರುಳಿ ಕಾಣಿಸುತ್ತಿದೆ. ಅದರ ಉದ್ದ ಒಂಬತ್ತು ಮೀಟರ್, ಅಗಲ ನಾಲ್ಕುವರೆ ಮೀಟರ್,” ಎಂದು ಉತ್ತರಕೊಟ್ಟೆ.


ಅವರಿಗೆ ಹೀಗೆ ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾನು ಈ ಗಾದೆಯನ್ನು ನಿಲ್ಲಿಸಿಬಿಡುವೆನು; ಅದು ಇಸ್ರಯೇಲಿನಲ್ಲಿ ಇನ್ನು ಸಲ್ಲದು; ನಾನು ನುಡಿಯುವ ಆ ಮಾತನ್ನು ಕೇಳಿರಿ: ಕ್ಲುಪ್ತಕಾಲ ಹತ್ತಿರಬಂದಿದೆ. ದಿವ್ಯದರ್ಶನಗಳೆಲ್ಲಾ ಸಾರ್ಥಕವಾಗುವ ಕಾಲ ಸಮೀಪಿಸಿದೆ.


ಆಗ ದೇವರು ನನಗೆ, “ನರಪುತ್ರನೇ, ನೋಡಿದೆಯಾ? ಯೆಹೂದವಂಶದವರು ತಾವು ಇಲ್ಲಿ ನಡೆಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿದ್ದಾರೋ? ನಾಡನ್ನು ಹಿಂಸಾಕೃತ್ಯಗಳಿಂದ ತುಂಬಿಸಿದ್ದಲ್ಲದೆ ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಪತ್ರೆಯನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ.


ಆಗ ದೇವರು ನನಗೆ, “ನರಪುತ್ರನೇ, ಇಸ್ರಯೇಲ್ ವಂಶದ ಹಿರಿಯರೆಲ್ಲರು ನಾನಾ ರೂಪಗಳಿಂದ ಚಿತ್ರಿತವಾದ ತಮ್ಮ ತಮ್ಮ ಕೊಠಡಿಗಳೊಳಗೆ, ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಸರ್ವೇಶ್ವರ ನಮ್ಮನ್ನು ನೋಡನು, ಸರ್ವೇಶ್ವರ ನಾಡನ್ನು ತೊರೆದುಬಿಟ್ಟಿದ್ದಾನೆ,’ ಎಂದು ಮಾತಾಡಿಕೊಳ್ಳುತ್ತಾರಷ್ಟೆ,” ಎಂಬುದಾಗಿ ಹೇಳಿದರು.


ಆಗ ಅವರು ನನಗೆ, “ನರಪುತ್ರನೇ, ಇವರು ಮಾಡುವುದನ್ನು ನೋಡಿದೆಯಾ? ಇಸ್ರಯೇಲ್ ವಂಶದವರು ಇಲ್ಲಿ ನಡೆಸುವ ಅಧಿಕ ದುರಾಚಾರಗಳನ್ನೆಲ್ಲ ಕಂಡೆಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವೆ,” ಎಂದು ಹೇಳಿದರು.


ಪ್ರಳಯ ಬಂದಿತು, ಪೂರ್ಣಪ್ರಳಯ ಬಂದಿತು, ನಿನ್ನನ್ನು ಚಚ್ಚುವುದಕ್ಕೆ ಚಚ್ಚರಗೊಂಡಿದೆ, ಇಗೋ ಬಂದೇ ಬಂತು;


ಇದಲ್ಲದೆ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ನಾನು ನಿನಗೆ ನುಡಿಯುವ, ಮಾತುಗಳನ್ನೆಲ್ಲಾ ಕಿವಿಯಿಂದ ಕೇಳಿ ಮನಸ್ಸಿನಲ್ಲಿಟ್ಟುಕೋ.


ಇಸ್ರಯೇಲ್ ವಂಶದವರೋ ನಿನಗೆ ಕಿವಿಗೊಡಲು ಸಿದ್ಧರಿಲ್ಲ; ನನಗೂ ಕಿವಿಗೊಡಲು ಸಿದ್ಧರಿಲ್ಲ; ಅವರೆಲ್ಲರು ಗರ್ವಿಗಳು ಹಾಗೂ ಹಟಮಾರಿಗಳು.


ನಾನಂತು ಮಿಚ್ಪದಲ್ಲಿ ವಾಸವಾಗಿರುವೆನು. ನಮ್ಮ ಬಳಿಗೆ ಬರುವ ಬಾಬಿಲೋನಿಯರ ಮುಂದೆ ನಿಮ್ಮ ಪ್ರತಿನಿಧಿಯಾಗಿರುವೆನು. ನೀವು ಹೋಗಿ ದ್ರಾಕ್ಷಾರಸ, ಹಣ್ಣು, ಎಣ್ಣೆ ಮುಂತಾದವುಗಳನ್ನು ಸಂಗ್ರಹಿಸಿ ನಿಮ್ಮ ಉಗ್ರಾಣಗಳಲ್ಲಿ ತುಂಬಿಸಿಡಿ. ನೀವು ಹಿಡಿದಿರುವ ಪಟ್ಟಣಗಳಲ್ಲೆ ವಾಸವಾಗಿರಿ,” ಎಂದು ಶಪಥಮಾಡಿ ಹೇಳಿದನು.


ಪ್ರವಾದಿಗಳೇ ಸುಳ್ಳು ಪ್ರವಾದನೆಮಾಡುತ್ತಾರೆ. ಯಾಜಕರು ಅಂಥವರಿಂದ ಅಧಿಕಾರ ಪಡೆದು ದೊರೆತನಮಾಡುತ್ತಾರೆ. ನನ್ನ ಜನರಿಗೆ ಚೆನ್ನಾಗಿ ಹಿಡಿಸುವುದು ಇಂಥದ್ದೇ. ಆದರೆ ಅಂತ್ಯ ಬಂದಾಗ ಏನು ಮಾಡುವರು?”


ಫಲವತ್ತಾದ ಕಣಿವೆಗೆ ಶ್ರೇಷ್ಠಶಿರೋಭೂಷಣವಾಗಿದ್ದು, ಈಗ ಬಾಡುತ್ತಿರುವ ಆ ನಗರ, ಹೂ ಕಾಲಕ್ಕೆ ಮುಂಚೆ ಮಾಗಿದ ಅಂಜೂರಕ್ಕೆ ಸಮಾನವಾಗುವುದು. ಆ ಹಣ್ಣನ್ನು ಕಂಡವರು ಕಿತ್ತ ಕೂಡಲೆ ತಿಂದುಬಿಡುವರು.


ಹೀಗಿರಲು, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಗೋ, ನಾನು ನಿನ್ನ ಮೇಲೆ ಖಡ್ಗವನ್ನು ಬರಮಾಡಿ ಜನರನ್ನೂ ಜಾನುವಾರುಗಳನ್ನೂ ನಿನ್ನಿಂದ ನಿರ್ಮೂಲಮಾಡುವೆನು.


ಜಗವಿಡೀ ಕೆಟ್ಟುಹೋಗಿರುವುದನ್ನು ಕಂಡ ದೇವರು, ನೋಹನಿಗೆ, “ನರಮಾನವರೆಲ್ಲರಿಗೆ ಸರ್ವನಾಶವನ್ನು ತೀರ್ಮಾನಿಸಿದ್ದೇನೆ. ಜಗವೆಲ್ಲವು ಹಿಂಸಾಚಾರದಿಂದ ತುಂಬಿಹೋಗಿದೆ. ನಾನು ಅವರನ್ನೂ ಜಗದಲ್ಲಿರುವುದೆಲ್ಲವನ್ನೂ ಅಳಿಸಿಬಿಡುತ್ತೇನೆ.


ಒಡೆಯರಾದ ಸರ್ವೇಶ್ವರ ನನಗೆ ಈ ದರ್ಶನವನ್ನು ತೋರಿಸಿದರು: ಮಾಗಿದ ಹಣ್ಣಿನ ಬುಟ್ಟಿಯೊಂದು ಕಾಣಿಸಿತು.


ಇಗೋ, ದಂಡನೆಯ ದಿನಗಳು ಸಮೀಪಿಸಿವೆ; ಮುಯ್ಯಿ ತೀರಿಸುವ ದಿನಗಳು ಬಂದಿವೆ. ಇಸ್ರಯೇಲರಿಗೆ ಇದು ತಿಳಿದಿರಲಿ. “ಪ್ರವಾದಿಯು ಹುಚ್ಚನು; ದೇವರಾತ್ಮಪ್ರೇರಿತನು ಮೂರ್ಖನು,” ಎಂದು ಹೇಳಿಕೊಳ್ಳುತ್ತೀರಿ. ಅತ್ಯಧಿಕವಾಗಿರುವ ನಿಮ್ಮ ಅಧರ್ಮ, ಮಿತಿಮೀರಿರುವ ನಿಮ್ಮ ದ್ವೇಷ ಇದಕ್ಕೆ ಕಾರಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು