Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 8:9 - ಕನ್ನಡ ಸತ್ಯವೇದವು C.L. Bible (BSI)

9 ಒಡೆಯರಾದ ಸರ್ವೇಶ್ವರ ಇಂತೆನ್ನುತ್ತಾರೆ: “ಆ ದಿನದಂದು ನಡುಮಧ್ಯಾಹ್ನದಲ್ಲಿ ಸೂರ್ಯನನ್ನು ಮುಳುಗಿಸುವೆನು. ಹಾಡುಹಗಲಲ್ಲೇ ಭೂಮಿಯನ್ನು ಕತ್ತಲಾಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ದಿನದಲ್ಲಿ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ಸೂರ್ಯನನ್ನು ಮಧ್ಯಾಹ್ನಕ್ಕೆ ಮುಣುಗಿಸುವೆನು, ಭೂಮಿಯನ್ನು ಹಗಲಿನಲ್ಲೇ ಕತ್ತಲು ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ಸೂರ್ಯನನ್ನು ಮಧ್ಯಾಹ್ನಕ್ಕೆ ಮುಣುಗಿಸುವೆನು, ಭೂವಿುಯನ್ನು ಹಗಲಿನಲ್ಲೇ ಮೊಬ್ಬುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನು ಹೀಗೆನ್ನುತ್ತಾನೆ, “ಆ ದಿವಸಗಳಲ್ಲಿ ನಡುಮಧ್ಯಾಹ್ನದಲ್ಲಿಯೇ ಸೂರ್ಯನನ್ನು ಮುಳುಗುವಂತೆ ಮಾಡುವೆನು. ಶುಭ್ರವಾದ ಹಗಲಿನಲ್ಲಿ ಕತ್ತಲು ಉಂಟಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ, “ಆ ದಿನದಲ್ಲಿ,” ನಾನು ಸೂರ್ಯನನ್ನು ಮಧ್ಯಾಹ್ನದಲ್ಲಿ ಮುಳುಗುವಂತೆ ಮಾಡುತ್ತೇನೆ. ಭೂಮಿಯನ್ನು ಹಗಲಲ್ಲೇ ಕತ್ತಲಾಗುವಂತೆ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 8:9
18 ತಿಳಿವುಗಳ ಹೋಲಿಕೆ  

ಆಗ ನಡುಮಧ್ಯಾಹ್ನ. ಆ ಹೊತ್ತಿನಿಂದ ಮೂರು ಗಂಟೆಯವರೆಗೂ ನಾಡಿನಲ್ಲೆಲ್ಲಾ ಕತ್ತಲೆ ಕವಿಯಿತು.


ಆಗ ನಡುಮಧ್ಯಾಹ್ನ. ಆಗಿನಿಂದ ಮೂರು ಗಂಟೆಯವರೆಗೂ ನಾಡಿನಲ್ಲೆಲ್ಲಾ ಕತ್ತಲೆ ಕವಿಯಿತು.


ಆಗ ಸುಮಾರು ನಡುಮಧ್ಯಾಹ್ನ. ಆಗಿನಿಂದ ಮೂರು ಗಂಟೆಯವರೆಗೂ ಸೂರ್ಯನು ಕಾಂತಿಹೀನನಾದನು; ನಾಡಿನಲ್ಲೆಲ್ಲಾ ಕತ್ತಲೆ ಕವಿಯಿತು.


ಏಳು ಮಕ್ಕಳನ್ನು ಕಳೆದುಕೊಂಡ ತಾಯಿ ಪ್ರಾಣಬಿಟ್ಟಂತಿದ್ದಾಳೆ ದುಃಖದಿಂದ ಬಳಲಿ ಅವಳ ಪಾಲಿಗೆ ಸೂರ್ಯ ಮುಳುಗಿದ್ದಾನೆ ಹಾಡುಹಗಲಲ್ಲೆ. ಆಶಾಭಂಗಪಟ್ಟಿದ್ದಾಳೆ, ಅವಮಾನಕ್ಕೆ ಈಡಾಗಿದ್ದಾಳೆ. ಖಡ್ಗಕ್ಕೆ ಗುರಿಮಾಡುವೆ ಅವಳ ಉಳಿದ ಸಂತಾನವನ್ನು ಶತ್ರುಗಳ ಕಣ್ಣೆದುರಿಗೆ. ಇದು ಸರ್ವೇಶ್ವರನಾದ ನನ್ನ ನುಡಿ.”


“ಆ ದಿನಗಳ ಸಂಕಷ್ಟಗಳು ಮುಗಿದ ಕೂಡಲೇ ಸೂರ್ಯನು ಅಂಧಕಾರಮಯನಾಗುವನು; ಚಂದ್ರನು ಕಾಂತಿಹೀನನಾಗುವನು; ಅಂತರಿಕ್ಷದಿಂದ ನಕ್ಷತ್ರಗಳು ಕಳಚಿ ಬೀಳುವುವು; ಗ್ರಹಶಕ್ತಿಗಳು ಕಂಪಿಸುವುವು.


ಅಂಥ ಪ್ರವಾದಿಗಳಿಗೆ ಸರ್ವೇಶ್ವರ: “ಅಂಧಕಾರ ನಿಮ್ಮನ್ನು ಆವರಿಸುವುದು. ದಿವ್ಯದರ್ಶನ ನಿಮಗೆ ದೊರಕದು. ನಿಮಗೆ ಕತ್ತಲು ಕವಿದಂತಾಗಿ ಕಣಿಹೇಳಲು ಸಾಧ್ಯವಾಗದು. ಸೂರ್ಯ ನಿಮ್ಮ ಪಾಲಿಗೆ ಮುಳುಗಿದಂತೆಯೇ, ಹಗಲು ನಿಮಗೆ ಕಾರ್ಗತ್ತಲೆಯಂತೆಯೆ.”


ಕೃತ್ತಿಕೆ, ಮೃಗಶಿರ, ನಕ್ಷತ್ರಪುಂಜಗಳನು ಸೃಜಿಸಿದಾತನು ಕತ್ತಲನು ಬೆಳಕಾಗಿ, ಹಗಲನು ಇರುಳಾಗಿ ಮಾಡುವವನು, ಕಡಲಿನ ಜಲವನು ಮೇಲೆತ್ತಿ, ಧರೆಗೆ ಮಳೆಗರೆವಾತನು,


ಆಕಾಶದ ತಾರೆಗಳು, ನಕ್ಷತ್ರಗಳು ಬೆಳಗವು, ಸೂರ್ಯನು ಅಂಧಕಾರಮಯನಾಗುವನು, ಚಂದ್ರನು ಕಾಂತಿಹೀನನಾಗುವನು.


ಕತ್ತಲು ಅಂಥವರನು ಸುತ್ತುವರೆದಿರುತ್ತದೆ ಹಾಡುಹಗಲಲ್ಲೆ ರಾತ್ರಿಯಲ್ಲೋ ಎಂಬಂತೆ ತಡಕಾಡುತ್ತಾರೆ ಅವರು ನಡುಹಗಲಲ್ಲೇ.


ಬೆಟ್ಟಗುಡ್ಡಗಳನ್ನು ರೂಪಿಸಿದಾತ ದೇವನೇ ಗಾಳಿಬಿರುಗಾಳಿಯನು ಸೃಜಿಸಿದಾತ ಆತನೇ ತನ್ನಾಲೋಚನೆಯನ್ನು ನರರಿಗರುಹಿಸಿದವ ದೇವನೇ ಹಗಲನ್ನು ಇರುಳನ್ನಾಗಿಸುವವನು ಆತನೇ ಪೊಡವಿಯ ಉನ್ನತ ಸ್ಥಾನದಲ್ಲಿ ನಡೆದಾಡುವವನಾತನೇ ಆತನ ನಾಮಧೇಯ - ಸೇನಾಧೀಶ್ವರ ದೇವರಾದ ಸರ್ವೇಶ್ವರನೇ.


ನಾಲ್ಕನೆಯ ದೇವದೂತನು ತುತೂರಿಯನ್ನು ಊದಿದನು. ಸೂರ್ಯಚಂದ್ರ ನಕ್ಷತ್ರಗಳಲ್ಲಿ ಮೂರನೆಯ ಒಂದು ಭಾಗಕ್ಕೆ ಧಕ್ಕೆ ಉಂಟಾಯಿತು. ಅವುಗಳ ಮೂರನೆಯ ಒಂದು ಭಾಗ ಕಾಂತಿಹೀನವಾಯಿತು. ಇದರಿಂದಾಗಿ ಹಗಲಿನಲ್ಲೂ ರಾತ್ರಿಯಲ್ಲೂ ಮೂರನೆಯ ಒಂದು ಭಾಗದಷ್ಟು ಬೆಳಕು ಕಡಿಮೆಯಾಯಿತು.


ಆ ಯಜ್ಞದ ಕುರಿಮರಿ ಆರನೆಯ ಮುದ್ರೆಯನ್ನು ಒಡೆದಾಗ, ದೊಡ್ಡ ಭೂಕಂಪವಾಯಿತು. ಸೂರ್ಯನು ಕರಿಕಂಬಳಿಯಂತೆ ಕಪ್ಪಾದನು. ಪೂರ್ಣಚಂದ್ರನು ರಕ್ತದಂತೆ ಕೆಂಪಾದನು.


ನಿಮ್ಮ ದೇವರಾದ ಸರ್ವೇಶ್ವರನಿಗೆ ಸಲ್ಲಿಸಿ ಗೌರವವನ್ನು ಇಲ್ಲವಾದರೆ ಆತ ಬರಮಾಡುವನು ಸ್ವಲ್ಪಕಾಲದಲ್ಲೇ ಕತ್ತಲನ್ನು. ನಿಮ್ಮ ಕಾಲುಗಳು ಮುಗ್ಗರಿಸುವುವು ಮಬ್ಬಿನ ಗುಡ್ಡಗಳ ನಡುವೆ.


ನಿನ್ನ ಬೆಳಕನು ನಾ ನಂದಿಸಿ ಕತ್ತಲಾಗಿಸುವಾಗ, ಮುಚ್ಚುವೆನು ಸೂರ್ಯಚಂದ್ರ ನಕ್ಷತ್ರಗಳನು ಮೋಡಮುಸುಕಿನಿಂದ.


ಹಗಲಿರುಳು ಎನ್ನದೆ ನಿರಂತರವೂ ಬೆಳಕಾಗುವುದು. ಸಂಜೆಯು ಸಹ ಪ್ರಾಕಾಶಮಯವಾಗಿರುವುದು. ಆದರೆ ಇದು ಯಾವಾಗ ಸಂಭವಿಸುವುದೆಂಬುದು ಸರ್ವೇಶ್ವರಸ್ವಾಮಿಗೆ ಮಾತ್ರ ತಿಳಿದಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು