Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 9:13 - ಕನ್ನಡ ಸತ್ಯವೇದವು C.L. Bible (BSI)

13 ಕಾಲ ಬರುವುದು: ಆಗ - ಹೊಸ ಬಿತ್ತನೆಯಾಗುವುದು ಕೊಯ್ಯುವವನ ಹಿಂದೆಯೆ; ಹೊಸ ಫಸಲು ಸಿದ್ಧವಾಗುವುದು ದ್ರಾಕ್ಷೆ ತುಳಿಯುವವನ ಮುಂದೆಯೆ. ಸುರಿಸುವುವು ದ್ರಾಕ್ಷಾರಸವನು ಬೆಟ್ಟಗಳು ಕರಗುವಂತಿರುವುವು ಅದರಿಂದ ಎಲ್ಲ ಗುಡ್ಡಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನು ಇಂತೆನ್ನುತ್ತಾನೆ, “ಇಗೋ, ದಿನಗಳು ಬರುವವು, ಆ ಕಾಲದಲ್ಲಿ ಉಳುವವನು ಕೊಯ್ಯುವವನನ್ನೂ, ದ್ರಾಕ್ಷಿಯನ್ನು ತುಳಿಯುವವನು ಬಿತ್ತುವವನನ್ನೂ ಹಿಂದಟ್ಟುವರು. ಆಗ ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಸುವವು, ಎಲ್ಲಾ ಗುಡ್ಡಗಳು ಕರಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನು ಇಂತೆನ್ನುತ್ತಾನೆ - ಆಹಾ, ಮುಂದಿನ ಕಾಲದಲ್ಲಿ ಉಳುವವನು ಕೊಯ್ಯುವವನ ಹಿಂದೆ, ದ್ರಾಕ್ಷೆತುಳಿಯುವವನು ಬಿತ್ತುವವನ ಹಿಂದೆ ಒತ್ತಿಕೊಂಡು ಹೋಗುವರು; ಬೆಟ್ಟಗಳು ದ್ರಾಕ್ಷಾರಸವನ್ನು ಸುರಿಸುವವು, ಎಲ್ಲಾ ಗುಡ್ಡಗಳು ಕರಗುತ್ತವೋ ಎಂಬಂತಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನು ಹೇಳುವುದೇನೆಂದರೆ, “ಒಂದು ಸಮಯವು ಬರುವುದು, ಆಗ ಉಳುವವನು ಕೊಯ್ಯುವವನನ್ನೇ ಮೀರಿಸಿ ಮುಂದೆ ಹೋಗುವನು. ದ್ರಾಕ್ಷಿನೆಡುವವನು ದ್ರಾಕ್ಷಿಯನ್ನು ಕೊಯ್ಯುವನನ್ನೇ ಮೀರಿಸಿ ಮುಂದೆ ಹೋಗುವನು. ಬೆಟ್ಟಗಳಿಂದಲೂ ಪರ್ವತಗಳಿಂದಲೂ ಸಿಹಿ ದ್ರಾಕ್ಷಾರಸವು ಹರಿದುಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರು ಹೇಳುವುದೇನೆಂದರೆ: “ದಿನಗಳು ಬರುವುವು,” “ಆಗ ಉಳುವವನು ಕೊಯ್ಯುವವನನ್ನೂ, ದ್ರಾಕ್ಷಿ ಮಾರುವವನು ಬೀಜ ಹಾಕುವವನನ್ನೂ ಹಿಂದಟ್ಟುವರು. ಆಗ ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಯುವುವು, ಗುಡ್ಡಗಳೆಲ್ಲಾ ಕರಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 9:13
15 ತಿಳಿವುಗಳ ಹೋಲಿಕೆ  

ಆ ದಿನಗಳಲ್ಲಿ ಬೆಟ್ಟಗುಡ್ಡಗಳಿಂದ ದ್ರಾಕ್ಷಾರಸ ಮತ್ತು ಹಾಲುತುಪ್ಪ ಹರಿಯುವುದು. ಜುದೇಯ ನಾಡಿನ ಹಳ್ಳಕೊಳ್ಳಗಳು ನೀರಿನಿಂದ ತುಂಬಿರುವುವು. ದೇವಾಲಯದಿಂದ ನೀರು ಚಿಮ್ಮಿಬಂದು ಆಕಾಚಿಯದ ಹಳ್ಳವನ್ನು ತಂಪಾಗಿಸುವುದು.


ಇನ್ನು ನಾಲ್ಕು ತಿಂಗಳು ಆದ ಮೇಲೆ ಸುಗ್ಗಿ ಬರುತ್ತದೆ ಎಂದು ನೀವು ಹೇಳುವುದಿಲ್ಲವೆ? ಇಗೋ, ಕಣ್ಣುಹಾಯಿಸಿ ನೋಡಿ; ಬಲಿತು ಕೊಯ್ಲಿಗೆ ಬಂದಿರುವ ಹೊಲಗಳನ್ನು ನೋಡಿ.


ಬೆಳೆಯುವುದು ಮುಳ್ಳಿಗೆ ಬದಲಾಗಿ ದೇವದಾರು, ದತ್ತೂರಿಗೆ ಪ್ರತಿಯಾಗಿ ಸುಗಂಧದ ಮರವು. ಉಳಿದಿರುತ್ತದೆ ಆ ವನವು ಶಾಶ್ವತ ಗುರುತಾಗಿ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆಗಾಗಿ.”


ಕಣತುಳಿಸುವ ಕೆಲಸ ದ್ರಾಕ್ಷಿ ಬೆಳೆಯ ಪರ್ಯಂತರವೂ ದ್ರಾಕ್ಷೀ ಬೆಳೆಯನ್ನು ಕೂಡಿಸುವ ಕೆಲಸ ಬಿತ್ತನೆಯ ಕಾಲದ ಪರ್ಯಂತರವೂ ನಡೆಯುವುವು. ಸಮೃದ್ಧಿಯಾಗಿ ಊಟಮಾಡುವಿರಿ, ನಾಡಿನಲ್ಲಿ ನಿರ್ಭಯವಾಗಿ ವಾಸಮಾಡುವಿರಿ.


ಆಗ ಜನರು, ‘ಕಾಡಾಗಿದ್ದ ಈ ನಾಡು ಏದೆನ ಉದ್ಯಾನದಂತೆ ಕಂಗೊಳಿಸುತ್ತದೆ; ಬಿದ್ದುಹೋಗಿ ಹಾಳುಪಾಳಾದ ಪಟ್ಟಣಗಳು ಕೋಟೆಕೊತ್ತಲಗಳಿಂದ ಕೂಡಿ ಜನಭರಿತವಾಗಿವೆಯಲ್ಲಾ!’ ಎಂದು ಹೇಳುವರು.


ಹತರಾದವರು ನಿರ್ದೋಷಿಗಳೆಂದು ನಿರ್ಣಯಿಸುವೆನು. ಕೊಲೆಪಾತಕರನ್ನು ದಂಡಿಸಿಯೇ ತೀರುವೆನು.


ಸಾರ್ವಭೌಮನಾದ ಪ್ರಭುವಿನ ಮುಂದೆ I ಕರಗುತ್ತವೆ ಬೆಟ್ಟಗುಡ್ಡಗಳು ಮೇಣದಂತೆ II


ಕರಗಿಹೋದವು ಬೆಟ್ಟಗುಡ್ಡಗಳು ಆ ಸರ್ವೇಶ್ವರನ ಮುಂದೆ ನೀರಾಗಿ ಹೋಯಿತು ಸೀನಾಯಿ ಪರ್ವತವು ಇಸ್ರಯೇಲರ ದೇವನೆದುರಿಗೆ.


ಸೇನಾಧಿಶ್ವರ ದೇವರಾದ ಸರ್ವೇಶ್ವರ ಮುಟ್ಟಿದ ಮಾತ್ರಕ್ಕೆ ಕರಗುವುದು ಭೂಮಿ. ಗೋಳಿಡುವುದು ಸಕಲ ಜನತೆ ಉಬ್ಬುವುದು ನಾಡೆಲ್ಲ ನೈಲ್ ನದಿಯಂತೆ ಕುಗ್ಗಿ ಕರಗುವುದು ಈಜಿಪ್ಟಿನ ನದಿಯಂತೆ


ಕಟ್ಟುವನು ತನ್ನ ವಾಹನಪಶುವನು ದ್ರಾಕ್ಷಾಲತೆಗೆ ಬಿಗಿಯುವನು ತನ್ನ ಹೇಸರಕತ್ತೆಯನು ರಾಜದ್ರಾಕ್ಷೆಗೆ ಒಗೆಯುವನು ತನ್ನ ಬಟ್ಟೆಯನು ದ್ರಾಕ್ಷಾರಸದಲಿ ತೊಳೆವನು ಮೇಲಂಗಿಯನು ಆ ರಕ್ತಗೆಂಪು ರಸದಲಿ.


ತೊಲಗಿದೆ ಹೊಲಗಳಿಂದ ಹರ್ಷಾನಂದ, ಇಲ್ಲವಾಗಿದೆ ತೋಟಗಳಲಿ ಜಯಕಾರದ ನಾದ, ದ್ರಾಕ್ಷಾರಸವನು ತೆಗೆವವರಿಲ್ಲ ಅರಮನೆಗಳಿಂದ, ಎಂತಲೆ ನಿಂತುಹೋಗಿಹುದಲ್ಲಿ ಸುಗ್ಗಿಯ ಗೀತ.


ಅಲ್ಲಿ ನಿರ್ಭಯವಾಗಿರುವರು; ಮನೆಗಳನ್ನು ಕಟ್ಟಿಕೊಂಡು, ತೋಟಗಳನ್ನು ಮಾಡಿಕೊಂಡು, ಸುಖವಾಗಿ ವಾಸಿಸುವರು; ಅವರನ್ನು ಹೀನೈಸುವ ನೆರೆಹೊರೆಯವರನ್ನು ನಾನು ದಂಡಿಸಿದ ಮೇಲೆ ನಾನೇ ತಮ್ಮ ದೇವರಾದ ಸರ್ವೇಶ್ವರ ಎಂದು ಅವರಿಗೆ ನಿಶ್ಚಯವಾಗುವುದು.”


ಕಣಗಳಲ್ಲಿ ಗೋದಿ ರಾಶಿರಾಶಿಯಾಗಿರುವುದು. ತೊಟ್ಟಿಗಳಲ್ಲಿ ದ್ರಾಕ್ಷಾರಸ, ತೈಲಗಳು ತುಂಬಿರುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು