Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 9:4 - ಕನ್ನಡ ಸತ್ಯವೇದವು C.L. Bible (BSI)

4 ಶತ್ರುವಶವಾಗಿ ಸೆರೆಗೆ ಹೋಗಿದ್ದರೂ ಅಲ್ಲಿಯೂ ಖಡ್ಗವು ನನ್ನ ಆಜ್ಞಾನುಸಾರ ಅವರನ್ನು ಕೊಲ್ಲುವುದು; ಅವರ ಮೇಲಿಗಾಗಿ ಅಲ್ಲ, ಕೇಡಿಗಾಗಿಯೇ ಅವರ ಮೇಲೆ ಕಣ್ಣಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ತಮ್ಮ ಶತ್ರುಗಳ ವಶವಾಗಿ ಸೆರೆಗೆ ಹೋದರೂ, ಖಡ್ಗವು ನನ್ನ ಆಜ್ಞಾನುಸಾರ ಅಲ್ಲಿಯೂ ಅವರನ್ನು ಹತಿಸುವುದು. ಮೇಲಿಗಲ್ಲ, ಕೇಡಿಗಾಗಿಯೇ ಅವರ ಮೇಲೆ ದೃಷ್ಟಿಯಿಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಶತ್ರುವಶವಾಗಿ ಸೆರೆಗೆ ಹೋದರೂ ಖಡ್ಗವು ನನ್ನ ಆಜ್ಞಾನುಸಾರ ಅಲ್ಲಿಯೂ ಅವರನ್ನು ಹತಿಸುವದು; ಮೇಲಿಗಲ್ಲ, ಕೇಡಿಗಾಗಿಯೇ ಅವರ ಮೇಲೆ ದೃಷ್ಟಿಯಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಶತ್ರುಗಳು ಅವರನ್ನು ಸೆರೆಹಿಡಿದರೆ ನಾನು ಅವರನ್ನು ಕೊಂದುಹಾಕಲು ಕತ್ತಿಗೆ ಆಜ್ಞಾಪಿಸುವೆನು. ಹೌದು ನಾನು ಅವರನ್ನು ಗಮನಿಸುತ್ತಾ ಕಾಯುವೆನು. ಅವರಿಗೆ ಒಳ್ಳೆಯದು ಮಾಡುವುದಕ್ಕಾಗಿ ಅಲ್ಲ. ಅವರಿಗೆ ಸಂಕಟ ಕೊಡುವುದಕ್ಕಾಗಿ ಅವರನ್ನು ಕಾಯುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋಗಿದ್ದರೂ, ಖಡ್ಗವು ನನ್ನ ಆಜ್ಞಾನುಸಾರ ಅಲ್ಲಿಯೂ ಅವರನ್ನು ಕೊಲ್ಲುವುದು. “ಅವರ ಮೇಲಿಗಾಗಿ ಅಲ್ಲ, ಕೇಡಿಗಾಗಿ ಅವರ ಮೇಲೆ ನನ್ನ ದೃಷ್ಟಿಯಿಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 9:4
20 ತಿಳಿವುಗಳ ಹೋಲಿಕೆ  

ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿ ನಿಮ್ಮ ಹಿಂದೆ ಕತ್ತಿಬೀಸುವೆನು. ನಿಮ್ಮ ನಾಡು ನಾಶವಾಗುವುದು. ಪಟ್ಟಣಗಳು ಪಾಳುಬೀಳುವುವು.


“ಆದಕಾರಣ ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೇಳುವುದನ್ನು ಕೇಳಿರಿ: ‘ಜುದೇಯವನ್ನೆಲ್ಲ ನಿರ್ಮೂಲ ಮಾಡುವೆನು. ಕೇಡಿಗಾಗಿಯೇ ನಿಮ್ಮ ಮೇಲೆ ಕಣ್ಣಿಡುವೆನು.


ಈ ನಗರಕ್ಕೆ ಒಳಿತನ್ನು ಅಲ್ಲ, ಕೆಡುಕನ್ನು ಮಾಡಲೆಂದೆ ಇದರ ಮೇಲೆ ಕಣ್ಣಿಟ್ಟಿದ್ದೇನೆ. ಇದು ಬಾಬಿಲೋನಿಯಾದ ಅರಸನ ಕೈವಶವಾಗುವುದು. ಅವನು ಇದನ್ನು ಸುಟ್ಟು ಭಸ್ಮಮಾಡುವನು. ಇದು ಸರ್ವೇಶ್ವರನಾದ ನನ್ನ ನುಡಿ.’


ನಿನ್ನಲ್ಲಿನ ಮೂರನೆಯ ಒಂದು ಭಾಗದ ಜನರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲೆ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲು ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.


“ಅಷ್ಟುಮಾತ್ರವಲ್ಲ, ಇಸ್ರಯೇಲರಲ್ಲಾಗಲಿ, ಅವರ ನಡುವೆ ವಾಸಿಸುವ ಅನ್ಯದೇಶದವರಲ್ಲಾಗಲಿ ಯಾರಾದರು ರಕ್ತಭೋಜನ ಮಾಡಿದರೆ ಸರ್ವೇಶ್ವರ ಅಂಥ ವ್ಯಕ್ತಿಯ ವಿರುದ್ಧ ಉಗ್ರಕೋಪಗೊಳ್ಳುವರು; ಅವನನ್ನು ತನ್ನ ಪ್ರಜೆಯಿಂದ ತೆಗೆದುಹಾಕುವರು.


ಮುತ್ತಿಗೆಯ ದಿನಗಳು ಮುಗಿದ ಕೂಡಲೆ ಕೂದಲಿನ ಒಂದು ಭಾಗವನ್ನು ಪಟ್ಟಣದ ಮಧ್ಯೆ ಬೆಂಕಿಯಲ್ಲಿ ಸುಡು; ಇನ್ನೊಂದು ಭಾಗವನ್ನು ತೆಗೆದುಕೊಂಡು ಪಟ್ಟಣದ ಸುತ್ತಲು ಖಡ್ಗದಿಂದ ಕಡಿ; ಮತ್ತೊಂದು ಭಾಗವನ್ನು ಗಾಳಿಗೆ ತೂರಿಬಿಡು; (ಈ ಪ್ರಕಾರ ನಾನು ನನ್ನ ಜನರ ಹಿಂದೆ ಕತ್ತಿಯನ್ನು ಬೀಸುವೆನು).


ನೀನು ಹೋಗಿ ಸುಡಾನಿನ ಎಬೆದ್ಮೆಲೆಕನಿಗೆ ಹೀಗೆ ತಿಳಿಸು: “ಈ ಇಸ್ರಯೇಲರ ದೇವರೂ ಸೇನಾಧೀಶ್ವರನೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ - ನಾನು ನುಡಿದ ಮೇಲನ್ನು ಅಲ್ಲ, ಕೇಡನ್ನೇ ಈ ನಗರದ ಮೇಲೆ ಬರಮಾಡುವೆನು. ಅದು ನಿನ್ನ ಕಣ್ಣೆದುರಿಗೇ ಆ ದಿನದಂದು ನಡೆಯುವುದು.


ಅವರ ಮೇಲೆ ಕನಿಕರ ತೋರಿ ಕಟಾಕ್ಷಿಸಿ ಈ ನಾಡಿಗೆ ಮರಳಿ ಬರಮಾಡುವೆನು. ಅವರನ್ನು ಕಟ್ಟುವೆನು, ಕೆಡುವುದಿಲ್ಲ; ನೆಡುವೆನು, ಕೀಳುವುದಿಲ್ಲ.


ಸರ್ವೇಶ್ವರ ಭೂಲೋಕದ ಎಲ್ಲಾ ಕಡೆ ದೃಷ್ಟಿಹರಿಸುತ್ತಾ ತಮ್ಮ ಕಡೆಗೆ ಯಥಾರ್ಥ ಮನಸ್ಸುಳ್ಳವರ ರಕ್ಷಣೆಗಾಗಿ ತಮ್ಮ ಪ್ರತಾಪವನ್ನು ತೋರ್ಪಡಿಸುತ್ತಾರೆ. ನೀವು ಈ ಕಾರ್ಯದಲ್ಲಿ ಬುದ್ಧಿಹೀನರಾಗಿ ನಡೆದುಕೊಂಡಿದ್ದೀರಿ; ಇಂದಿನಿಂದ ನಿಮಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದು ಹೇಳಿದನು.


ನಾಡಿನ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಕೊಳ್ಳೆಗಾರರು ಕಾಡುಗುಡ್ಡೆಗಳ ಮೇಲೆಲ್ಲ ಕಂಡುಬಂದಿದ್ದಾರೆ. ಕಬಳಿಸಿಬಿಡುವುದು ನನ್ನ ಖಡ್ಗ ಯಾರಿಗು ನೆಮ್ಮದಿಯಿಲ್ಲದ ಹಾಗೆ.


ಒಡೆಯ ಸರ್ವೇಶ್ವರನಾದ ನಾನು ಈ ಪಾಪಮಯ ರಾಜ್ಯದ ಮೇಲೆ ಕಣ್ಣಿಟ್ಟಿದ್ದೇನೆ ಎಂಬುದನ್ನು ಗಮನಿಸಿರಿ. ಇದನ್ನು ಭೂಮಂಡಲದಿಂದ ನಾಶಮಾಡುವೆನು. ಆದರೆ ಯಕೋಬ ಮನೆತನವನ್ನು ಸಂಪೂರ್ಣವಾಗಿ ನಾಶಮಾಡೆನು.” ಇದು ಸರ್ವೇಶ್ವರಸ್ವಾಮಿಯ ನುಡಿ.


ಆ ಕಾಲಕ್ಕೆ ಹಿಂದೆ ಆಳುಗಳಿಗೆ ಕೂಲಿ ಕೊಡುವುದಕ್ಕಾಗಲೀ ಎತ್ತುಗಾಡಿಗಳಿಗೆ ಬಾಡಿಗೆ ಕೊಡುವುದಕ್ಕಾಗಲೀ ಯಾರಿಗೂ ಶಕ್ತಿ ಇರಲಿಲ್ಲ. ನಾಡಿನಿಂದ ಹೋಗುವವರಿಗಾಗಲೀ ನಾಡಿನೊಳಗೆ ಪ್ರವೇಶಿಸುವವರಿಗಾಗಲಿ ಶತ್ರುಗಳ ಕಾಟದಿಂದ ರಕ್ಷಣೆ ಇರಲಿಲ್ಲ. ಒಬ್ಬರಿಗೊಬ್ಬರು ಹಗೆಗಳಾಗಿರುವಂತೆ ಮಾಡಿದ್ದೆ.


ಅದಕ್ಕೆ ತಾವು ಸೇವಕರಾದ ನಮಗೆ, “ನಾನು ಆ ಹುಡುಗನನ್ನು ನೋಡಬೇಕು, ಅವನನ್ನು ನನ್ನ ಬಳಿಗೆ ಕರೆದು ತನ್ನಿ,’ ಎಂದು ಅಪ್ಪಣೆಕೊಟ್ಟಿರಿ.


ಬೆಳಗಿನ ಜಾವದಲ್ಲಿ ಸರ್ವೇಶ್ವರ ಆ ಅಗ್ನಿಸ್ತಂಭದಿಂದ ಈಜಿಪ್ಟಿನವರ ದಂಡಿನ ಕಡೆಗೆ ನೋಡಿ ಅದನ್ನು ಗಲಿಬಿಲಿ ಮಾಡಿದರು.


ಕಿವಿಗೊಡುವನು ಪ್ರಭು ಸಜ್ಜನರ ಮೊರೆಗೆ I ನೆರವೀವನವರ ಕಷ್ಟನಿವಾರಣೆಗೆ II


“ಇವನನ್ನು ಕರೆದುಕೊಂಡುಹೋಗಿ ಚೆನ್ನಾಗಿ ನೋಡಿಕೊ. ಯಾವ ಹಾನಿಯನ್ನು ಮಾಡಕೂಡದು. ಬೇಡುವುದನ್ನೆಲ್ಲ ಕೊಡು,” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು